AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಮಗ ಕಾಣೆಯಾಗಿದ್ದಾನೆಂದು ಸುಳ್ಳು ಕೇಸ್ ಹಾಕಿದ್ದ ತಾಯಿಗೆ 2 ಲಕ್ಷ ರೂ ದಂಡ ವಿಧಿಸಿದ ಹೈಕೋರ್ಟ್ 

ಬೆಂಗಳೂರಿನ ಇಂದಿರಾನಗರ ನಿವಾಸಿಯ ಓರ್ವ ಮಹಿಳೆ ತಮ್ಮ ಮಗ ಕಾಣೆಯಾಗಿದ್ದಾನೆ ಎಂದು ಸುಳ್ಳು ಕೇಸ್ ಹಾಕಿದ್ದಕ್ಕೆ ಹೈಕೋರ್ಟ್ ಅವರಿಗೆ 2 ಲಕ್ಷ ದಂಡ ವಿಧಿಸಿದೆ. ಅಷ್ಟೇ ಅಲ್ಲದೆ ಎರಡು ವಾರದಲ್ಲಿ ದಂಡ ಕಟ್ಟದಿದ್ದರೆ ನ್ಯಾಯಾಂಗ ನಿಂದನೆ ಕೇಸ್ ಹಾಕುವುದಾಗಿ ಎಚ್ಚರಿಕೆ ನೀಡಲಾಗಿದೆ.

ಬೆಂಗಳೂರು: ಮಗ ಕಾಣೆಯಾಗಿದ್ದಾನೆಂದು ಸುಳ್ಳು ಕೇಸ್ ಹಾಕಿದ್ದ ತಾಯಿಗೆ 2 ಲಕ್ಷ ರೂ ದಂಡ ವಿಧಿಸಿದ ಹೈಕೋರ್ಟ್ 
ಹೈಕೋರ್ಟ್, ಮಗ ಕೃಪಲಾನಿ
ಗಂಗಾಧರ​ ಬ. ಸಾಬೋಜಿ
|

Updated on: Sep 07, 2025 | 10:39 AM

Share

ಬೆಂಗಳೂರು, ಸೆಪ್ಟೆಂಬರ್ 07: ಮಗ ಕಾಣೆಯಾಗಿದ್ದಾನೆ (Missing) ಎಂದು ಸುಳ್ಳು ಕೇಸ್ ಹಾಕಿದ್ದ ತಾಯಿಗೆ ಹೈಕೋರ್ಟ್ (High Court) 2 ಲಕ್ಷ ರೂ. ದಂಡ ವಿಧಿಸಿದೆ. ಎರಡು ವಾರದಲ್ಲಿ ದಂಡ ಕಟ್ಟದಿದ್ದರೆ ನ್ಯಾಯಾಂಗ ನಿಂದನೆ ಕೇಸ್ ಹಾಕುವುದಾಗಿ ಎಚ್ಚರಿಕೆ ನೀಡಲಾಗಿದೆ. ಪೊಲೀಸರ ಮೇಲಿನ ಕೋಪಕ್ಕೆ ಬೆಂಗಳೂರಿನ ಇಂದಿರಾನಗರ ನಿವಾಸಿ ತಾಯಿ ಮಹೇಶ್ವರಿ ಎಂಬುವವರು ಮಗ ಕೃಪಲಾನಿ ಕಾಣೆಯಾಗಿದ್ದಾನೆ ಎಂದು ಸುಳ್ಳು ಕೇಸ್ ಹಾಕಿದ್ದರು.

ನಡೆದದ್ದೇನು?

ಪಕ್ಕದ ಮನೆಯವರು ರಾತ್ರಿ ಗಲಾಟೆ ಮಾಡುತ್ತಾರೆ, ಗಾಂಜಾ ಮಾರುತ್ತಾರೆಂದು ಕೃಪಲಾನಿ ದೂರು ನೀಡಿದ್ದ. ಈ ಬಗ್ಗೆ ಎನ್​​​ಸಿಆರ್ ದಾಖಲಿಸಿಕೊಂಡಿದ್ದ ಇಂದಿರಾನಗರ ಪೊಲೀಸರು ತನಿಖೆ ನಡೆಸಿದಾಗ ಸುಳ್ಳು ಕೇಸ್ ಎಂದು ಗೊತ್ತಾಗಿತ್ತು.

ಇದನ್ನೂ ಓದಿ: ಮೆಟ್ರೋ ಎಲಿವೇಟೆಡ್ ಕಾರಿಡಾರ್​​ ಗೆ ಒಪ್ಪಿಗೆ: 37 KM ಉದ್ದದ ಡಬಲ್ ಡೆಕ್ಕರ್, ಏನಿದು ಪ್ಲಾನ್? ಎಲ್ಲಿಂದ ಎಲ್ಲಿಗೆ?

ನಂತರ ಕೃಪಲಾನಿ ಇನ್ಸ್​ಪೆಕ್ಟರ್​ ವಿರುದ್ಧ ಹಿರಿಯ ಅಧಿಕಾರಿಗಳಿಗೆ ಕೃಪಲಾನಿ ದೂರು ನೀಡಿದ್ದ. ಅಲ್ಲದೇ ಇನ್ಸ್​ಪೆಕ್ಟರ್ ಮೇಲಿನ ಸಿಟ್ಟಿಗೆ ತಾಯಿ ಮಹೇಶ್ವರಿಯಿಂದ ನನ್ನ ಮಗ ಕಾಣೆಯಾಗಿದ್ದಾನೆಂದು ಹೈಕೋರ್ಟ್​ಗೆ ಹೆಬಿಯಸ್ ಕಾರ್ಪಸ್ ಹಾಕಿಸಿದ್ದ‌. ಪೊಲೀಸ್ ಠಾಣೆಗೆ ಹೋದವನು ವಾಪಸ್ ಬಂದಿಲ್ಲ ಎಂದು ತಾಯಿ ದೂರಿದ್ದರು.

ಇತ್ತ ಮಗ ಕೃಪಲಾನಿ ದೂರು ನೀಡಿ ಚೆನ್ನೈನ ಮ್ಯಾರಿಯೆಟ್ ಹೋಟೆಲ್​ನಲ್ಲಿದ್ದ. ಸಿಡಿಆರ್ ತೆಗೆಸಿದ ಪೊಲೀಸರಿಗೆ ತಾಯಿ ಜೊತೆ ಮಗ ಸಂಪರ್ಕದಲ್ಲಿರೋದು ಪತ್ತೆ ಆಗಿತ್ತು. ಬಳಿಕ ಪೊಲೀಸರು ಚೆನ್ನೈನಿಂದ ಕೃಪಲಾನಿ ಕರೆತಂದು ಕೋರ್ಟ್​ ಮುಂದೆ ಹಾಜರುಪಡಿಸಿದ್ದರು. ಇನ್ಸ್​ಪೆಕ್ಟರ್​ ಸಿಲುಕಿಸಲು ಸುಳ್ಳು ಕೇಸ್​ ಹಾಕಿಸಿದ್ದ ಬಗ್ಗೆ ಪೊಲೀಸರು ದಾಖಲೆ ಸಲ್ಲಿಸಿದ್ದರು.

ಇದನ್ನೂ ಓದಿ: ಕಸ ವಿಲೇವಾರಿ ಮರು ಟೆಂಡರ್​​ಗೆ ಹೈಕೋರ್ಟ್ ತಡೆಯಾಜ್ಞೆ, ಪ್ರತಿಕ್ರಿಯೆ ನೀಡಿದ ಡಿಸಿಎಂ ಶಿವಕುಮಾರ್

ಹೀಗಾಗಿ ದೂರು ನೀಡಿದ್ದ ಮಹೇಶ್ವರಿಗೆ ಹೈಕೋರ್ಟ್ 2 ಲಕ್ಷ ರೂ. ದಂಡ ವಿಧಿಸಿದೆ. 2 ಲಕ್ಷ ರೂ ಪೈಕಿ 1 ಲಕ್ಷ ರೂ ಕಾನೂನು ಸೇವಾ ಪ್ರಾಧಿಕಾರಕ್ಕೆ ಹಾಗೂ 1 ಲಕ್ಷ ರೂ ಪೊಲೀಸ್ ಕಲ್ಯಾಣ ನಿಧಿಗೆ ನೀಡಲು ಹೈಕೋರ್ಟ್ ಸೂಚನೆ ನೀಡಿದೆ.

ವರದಿ: ಪ್ರದೀಪ್​ ಚಿಕ್ಕಾಟೆ

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ನಿವೃತ್ತಿ ಘೋಷಿಸಿದ ಬಳಿಕ ಅರಿಜಿತ್ ಸಿಂಗ್ ಮನವೊಲಿಸಲು ಆಮಿರ್ ಖಾನ್ ಪ್ರಯತ್ನ?
ನಿವೃತ್ತಿ ಘೋಷಿಸಿದ ಬಳಿಕ ಅರಿಜಿತ್ ಸಿಂಗ್ ಮನವೊಲಿಸಲು ಆಮಿರ್ ಖಾನ್ ಪ್ರಯತ್ನ?
ಈಗ ಕಾಲ ಬದಲಾಗಿದೆ: ‘ಜೋಗಿ’ ನಿರ್ಮಾಪಕರ ‘ಘಾರ್ಗಾ’ ಚಿತ್ರ ಬಿಡುಗಡೆಗೆ ರೆಡಿ
ಈಗ ಕಾಲ ಬದಲಾಗಿದೆ: ‘ಜೋಗಿ’ ನಿರ್ಮಾಪಕರ ‘ಘಾರ್ಗಾ’ ಚಿತ್ರ ಬಿಡುಗಡೆಗೆ ರೆಡಿ
ರೋಹಿತ್, ಕೊಹ್ಲಿ ಏಕದಿನ ವಿಶ್ವಕಪ್ ಆಡುವ ಬಗ್ಗೆ ಮೌನ ಮುರಿದ ಧೋನಿ
ರೋಹಿತ್, ಕೊಹ್ಲಿ ಏಕದಿನ ವಿಶ್ವಕಪ್ ಆಡುವ ಬಗ್ಗೆ ಮೌನ ಮುರಿದ ಧೋನಿ
ಬೆಂಗಳೂರಿನಲ್ಲಿ ದಿಢೀರ್ ಕುಸಿದು ಬಿದ್ದ ರಸ್ತೆ; ಫುಲ್ ಟ್ರಾಫಿಕ್ ಜಾಮ್!
ಬೆಂಗಳೂರಿನಲ್ಲಿ ದಿಢೀರ್ ಕುಸಿದು ಬಿದ್ದ ರಸ್ತೆ; ಫುಲ್ ಟ್ರಾಫಿಕ್ ಜಾಮ್!
ಘಾರ್ಗ ಸಿನಿಮಾನಲ್ಲಿ ದರ್ಶನ್ ಸಿನಿಮಾದ ಹಾಡು ಏಕೆ: ಉತ್ತರ ಇಲ್ಲಿದೆ
ಘಾರ್ಗ ಸಿನಿಮಾನಲ್ಲಿ ದರ್ಶನ್ ಸಿನಿಮಾದ ಹಾಡು ಏಕೆ: ಉತ್ತರ ಇಲ್ಲಿದೆ
ಮುಳುಗುತ್ತಿದ್ದ ಇಬ್ಬರು ಯುವಕರನ್ನು ಕಾಪಾಡಿದ ಮಹಿಳಾ ಟ್ರಾಫಿಕ್ ಪೊಲೀಸ್
ಮುಳುಗುತ್ತಿದ್ದ ಇಬ್ಬರು ಯುವಕರನ್ನು ಕಾಪಾಡಿದ ಮಹಿಳಾ ಟ್ರಾಫಿಕ್ ಪೊಲೀಸ್
ಆ ಮಾತಿಗೆ ರೊಚ್ಚಿಗೆದ್ದು ವಿಪಕ್ಷ ಶಾಸಕರಿಗೆ ಏಕವಚನದಲ್ಲಿ ಬೈದ ಕೈ ಶಾಸಕ
ಆ ಮಾತಿಗೆ ರೊಚ್ಚಿಗೆದ್ದು ವಿಪಕ್ಷ ಶಾಸಕರಿಗೆ ಏಕವಚನದಲ್ಲಿ ಬೈದ ಕೈ ಶಾಸಕ
ತಮ್ಮ‌ ರಕ್ಷಣೆಗೆ ಬೋಟ್ ಆಂಬ್ಯುಲೆನ್ಸ್ ನಿರ್ಮಾಣ, ಮೀನುಗಾರರ ಮಾದರಿ ಹೆಜ್ಜೆ
ತಮ್ಮ‌ ರಕ್ಷಣೆಗೆ ಬೋಟ್ ಆಂಬ್ಯುಲೆನ್ಸ್ ನಿರ್ಮಾಣ, ಮೀನುಗಾರರ ಮಾದರಿ ಹೆಜ್ಜೆ
ಸಿಖ್ಖರನ್ನು ಕೊಂದ ಕುಟುಂಬದ ಕುಡಿಯೊಂದಿಗೆ ಕೈಕುಲುಕುವುದಿಲ್ಲ;ರವನೀತ್ ಬಿಟ್ಟು
ಸಿಖ್ಖರನ್ನು ಕೊಂದ ಕುಟುಂಬದ ಕುಡಿಯೊಂದಿಗೆ ಕೈಕುಲುಕುವುದಿಲ್ಲ;ರವನೀತ್ ಬಿಟ್ಟು
ಮನಸೋ ಇಚ್ಛೆ ಲೈಸೆನ್ಸ್: ಅಬಕಾರಿ ಇಲಾಖೆಯ ಮತ್ತಷ್ಟು ಕಳ್ಳಾಟ ಬಯಲು
ಮನಸೋ ಇಚ್ಛೆ ಲೈಸೆನ್ಸ್: ಅಬಕಾರಿ ಇಲಾಖೆಯ ಮತ್ತಷ್ಟು ಕಳ್ಳಾಟ ಬಯಲು