AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಸಿಗ್ನಲ್​ ಬ್ಯಾಟರಿ ಕಳವು ಮಾಡಿ ಗುಜರಿಗೆ ಮಾರಾಟ, ಬಂದ ಹಣದಲ್ಲಿ ಮೋಜುಮಸ್ತಿ; ಇಬ್ಬರು ಅರೆಸ್ಟ್

ಬೆಂಗಳೂರು ನಗರದಲ್ಲಿ ಸಿಗ್ನಲ್​ಗಳ ಬ್ಯಾಟರಿಗಳನ್ನು ಕಳ್ಳತನ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಹೈಗ್ರೌಂಡ್ಸ್ ಠಾಣಾ ಪೊಲೀಸರು ಬಂಧಿಸಿ ಕಳವು ಮಾಡಿದ್ದ 80 ಬ್ಯಾಟರಿಗಳನ್ನು ಜಪ್ತಿ ಮಾಡಿದ್ದಾರೆ. ಕಳೆದ ಆರೇಳು ತಿಂಗಳಿನಿಂದ ನಗರದ ಹಲವು ಜಂಕ್ಷನ್​ಗಳಲ್ಲಿ ಸಿಗ್ನಲ್​ಗಳಿಗೆ ಅಳವಡಿಸಿದ್ದ ಬ್ಯಾಟರಿಗಳು ಕಳ್ಳತನವಾಗುತ್ತಿದ್ದವು.

ಬೆಂಗಳೂರು: ಸಿಗ್ನಲ್​ ಬ್ಯಾಟರಿ ಕಳವು ಮಾಡಿ ಗುಜರಿಗೆ ಮಾರಾಟ, ಬಂದ ಹಣದಲ್ಲಿ ಮೋಜುಮಸ್ತಿ; ಇಬ್ಬರು ಅರೆಸ್ಟ್
ಬೆಂಗಳೂರು ಟ್ರಾಫಿಕ್ ಸಿಗ್ನಲ್​ಗಳಿಗೆ ಅಳವಡಿಸಿದ್ದ ಬ್ಯಾಟಿಗಳನ್ನು ಕಳ್ಳತನ ಮಾಡುತ್ತಿದ್ದ ಆರೋಪಿಗಳ ಬಂಧನ (ಸಾಂದರ್ಭಿಕ ಚಿತ್ರ)
Jagadisha B
| Edited By: |

Updated on:Nov 26, 2023 | 7:03 AM

Share

ಬೆಂಗಳೂರು, ನ.26: ನಗರದಲ್ಲಿ ಸಿಗ್ನಲ್​ಗಳ ಬ್ಯಾಟರಿಗಳನ್ನು ಕಳ್ಳತನ (Theft) ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಹೈಗ್ರೌಂಡ್ಸ್ ಠಾಣಾ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬನಶಂಕರಿ ಮೂಲದ ಸೈಫ್ ಪಾಷಾ ಮತ್ತು ಸಲ್ಮಾನ್ ಖಾನ್ ಬಂಧಿತ ಆರೋಪಿಗಳಾಗಿದ್ದು, ಇವರಿಂದ ಒಟ್ಟು ಐದು ಲಕ್ಷ ಮೌಲ್ಯದ 80 ಬ್ಯಾಟರಿಗಳನ್ನು ವಶಕ್ಕೆ ಪಡೆಯಲಾಗಿದೆ.

ಕಳೆದ ಆರೇಳು ತಿಂಗಳಿಂದ ನಗರದ ಹಲವು ಜಂಕ್ಷನ್​ಗಳಲ್ಲಿ ಸಿಗ್ನಲ್​ಗಳಿಗೆ ಅಳವಡಿಸಿದ್ದ ಬ್ಯಾಟರಿಗಳು ಕಳ್ಳತನವಾಗಿದ್ದವು. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದ ಹೈಗ್ರೌಂಡ್ಸ್ ಠಾಣಾ ಪೊಲೀಸರು, ಬರೋಬ್ಬರಿ 120 ಸಿಸಿಟಿವಿಗಳನ್ನು ಪರಿಶೀಲಿಸಿದಾಗ ಆರೋಪಿಗಳ ಚಲನವಲನಗಳು ಪತ್ತೆಯಾಗಿವೆ.

ಇದನ್ನೂ ಓದಿ: ಸಿಂಗಟಾಲೂರು ಏತ ನೀರಾವರಿ ಯೋಜನೆಗೆ ಕಂಟಕ: ನೀರು ಬರುವ ಮುನ್ನವೇ ಪೈಪ್​ಗಳ ಕಳ್ಳತನ

ಅದರಂತೆ, ಆರೋಪಿಗಳ ಗುರುತು ಪತ್ತೆಹಚ್ಚಿದ ಹೈಗ್ರೌಂಡ್ಸ್ ಪೊಲೀಸರು, ಆರೋಪಿಗಳಾದ ಸೈಫ್ ಪಾಷಾ ಮತ್ತು ಸಲ್ಮಾನ್ ಖಾನ್ ಎಂಬವರನ್ನು ಬಂಧಿಸಿ ಕಳ್ಳತನ ಮಾಡಿದ್ದ 80 ಬ್ಯಾಟರಿಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಬ್ಯಾಟರಿ ಕಳ್ಳತನ ಮಾಡಿದ ನಂತರ ಅದನ್ನು ಗುಜರಿಗಳಲ್ಲಿ ಮಾರಾಟ ಮಾಡುತ್ತಿದ್ದರು ಮತ್ತು ಬಂದ ಹಣದಿಂದ ಮೋಜು ಮಸ್ತಿ ಮಾಡುತ್ತಿದ್ದ ಎಂದು ತನಿಖೆ ವೇಳೆ ತಿಳಿದುಬಂದಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:02 am, Sun, 26 November 23

ಹಿಮಾಚಲ ಪ್ರದೇಶದಲ್ಲಿ ಭಾರೀ ಬಸ್ ಅಪಘಾತ; 9 ಜನ ಸಾವು, 40 ಮಂದಿಗೆ ಗಾಯ
ಹಿಮಾಚಲ ಪ್ರದೇಶದಲ್ಲಿ ಭಾರೀ ಬಸ್ ಅಪಘಾತ; 9 ಜನ ಸಾವು, 40 ಮಂದಿಗೆ ಗಾಯ
ಕಾಡು ಹಂದಿಗೆ ಹಾಕಿದ್ದ ಉರುಳಿಗೆ ಚಿರತೆ ಬಲಿ
ಕಾಡು ಹಂದಿಗೆ ಹಾಕಿದ್ದ ಉರುಳಿಗೆ ಚಿರತೆ ಬಲಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ