ವಿದ್ಯುತ್​​ ದರ ಇಳಿಸುವಂತೆ ಕೋರಿ ಇಂಧನ ಸಚಿವರಿಗೆ ಪತ್ರ ಬರೆದ ಬೆಂಗಳೂರು ಹೋಟೆಲ್​ ಮಾಲೀಕರ ಸಂಘ

ವಿದ್ಯುತ್ ದರ ಹೆಚ್ಚಳ ಹಿನ್ನಲೆ ಬೃಹತ್ ಬೆಂಗಳೂರು ಹೋಟೆಲ್​ ಮಾಲೀಕರ ಸಂಘದಿಂದ ವಿದ್ಯುತ್​​ ದರ ಇಳಿಸುವಂತೆ ಕೋರಿ ಇಂಧನ ಸಚಿವ ಕೆ.ಜೆ ಜಾರ್ಜ್​ಗೆ ಪತ್ರ ಬರೆಯುವ ಮೂಲಕ ಮನವಿ ಮಾಡಿದ್ದು, ಪ್ರಮುಖ 6 ಅಂಶಗಳ ವಿಚಾರ ಸರ್ಕಾರದ ಗಮನಕ್ಕೆ ತಂದಿದ್ದಾರೆ.

ವಿದ್ಯುತ್​​ ದರ ಇಳಿಸುವಂತೆ ಕೋರಿ ಇಂಧನ ಸಚಿವರಿಗೆ ಪತ್ರ ಬರೆದ ಬೆಂಗಳೂರು ಹೋಟೆಲ್​ ಮಾಲೀಕರ ಸಂಘ
ಪ್ರಾತಿನಿಧಿಕ ಚಿತ್ರ
Follow us
|

Updated on: Jun 17, 2023 | 8:47 AM

ಬೆಂಗಳೂರು: ರಾಜ್ಯದಲ್ಲಿ ಗೃಹ ಲಕ್ಷ್ಮಿ ಯೋಜನೆ ಜಾರಿಯಾದ ಬೆನ್ನಲ್ಲೇ ರಾಜ್ಯ ವಿದ್ಯುತ್ ನಿಯಂತ್ರಣ ಆಯೋಗವು (KERC) ವಿದ್ಯುತ್ ಬಳಕೆ ಶುಲ್ಕವನ್ನು ಪ್ರತಿ ಯೂನಿಟ್ ಗೆ 70 ಪೈಸೆಯಂತೆ ಹೆಚ್ಚಳ ಮಾಡಿ ಆದೇಶ ಹೊರಡಿಸಿದ್ದು, ಅದರಂತೆ ವಿದ್ಯುತ್ ದರ ಹೆಚ್ಚಳ(Electricity Bill Hike) ಹಿನ್ನಲೆ ಬೃಹತ್ ಬೆಂಗಳೂರು ಹೋಟೆಲ್​ ಮಾಲೀಕರ ಸಂಘದಿಂದ ವಿದ್ಯುತ್​​ ದರ ಇಳಿಸುವಂತೆ ಕೋರಿ ಇಂಧನ ಸಚಿವ ಕೆ.ಜೆ ಜಾರ್ಜ್​ಗೆ ಪತ್ರ ಬರೆಯುವ ಮೂಲಕ ಮನವಿ ಮಾಡಿದ್ದಾರೆ.

ಪ್ರಮುಖ 6 ಅಂಶಗಳ ವಿಚಾರ ಸರ್ಕಾರದ ಗಮನಕ್ಕೆ ತಂದ ಬೆಂಗಳೂರು ಹೋಟೆಲ್ ಮಾಲೀಕರ ಸಂಘ

ಇನ್ನು ವಿದ್ಯುತ್ ದರ ಇಳಿಕೆಗೆ ಸಂಬಂಧಿಸಿ 6 ಅಂಶಗಳ ಬಗ್ಗೆ ಪತ್ರದಲ್ಲಿ ಉಲ್ಲೇಖ ಮಾಡಲಾಗಿದ್ದು, ಈ ಕೆಳಗಿನಂತಿದೆ.

1) ವಿದ್ಯುತ್ ದರ ಹೆಚ್ಚಳ ಮುಂದಿನ ಒಂದು ವರ್ಷಕ್ಕೆ ಮುಂದೂಡಬೇಕು.

2) ಸದ್ಯಕ್ಕೆ ಇರುವ ವಿದ್ಯುತ್ ತೆರಿಗೆಯನ್ನು 9 ಪರ್ಸೆಂಟ್ ರಿಂದ 3 ಪರ್ಸೆಂಟ್ ಇಳಿಕೆ ಮಾಡಬೇಕು.

3) ಟ್ರಾನ್ಸ್ ಮಿಷನ್ ಮತ್ತು ಡಿಸ್ಟ್ರಿಬ್ಯುಷನ್ ಗಳಲ್ಲಿ ಆಗುವ ಲಾಸ್ ಕಡಿಮೆ ಮಾಡಿ.

4) ರಾಜ್ಯ ಹಾಗೂ ಕೇಂದ್ರ ಸರ್ಕಾರದ ಇಲಾಖೆಗಳು ಪಾವತಿಸಬೇಕಾದ ಬಾಕಿ ಮೊತ್ತ ಬಡ್ಡಿ ಸಹಿತ ಸಂಗ್ರಹಿಸಬೇಕು.

5) ಪ್ರಿಪೈಡ್ ಮೀಟರ್ ಅಳವಡಿಕೆ ಮಾಡಿ ಗ್ರಾಹಕರ ಠೇವಣಿ ಹಣ ಹಿಂದಿರುಗಿಸಬೇಕು.

6) ಅನಗತ್ಯ ಅಡ್ಮಿನಿಸ್ಟ್ರೇಷನ್ ಖರ್ಚು ವೆಚ್ಚಗಳನ್ನು ಹತೋಟಿಗೆ ತರುವುದು.

ಇವೆಲ್ಲವನ್ನೂ ಪರಿಗಣಿಸಿದ್ದಲ್ಲಿ ಉದ್ಯಮಿಗಳಾದ ನಮಗೂ ವಿದ್ಯುತ್ ಇಲಾಖೆಗೂ ಅನೂಕುಲವಾಗಲಿದೆ. ಇಲ್ಲದಿದ್ದಲ್ಲಿ ಹೊಟೇಲ್ ಉದ್ಯಮಕ್ಕೆ ಗಾಯದ ಮೇಲೆ ಬರೆ ಎಳೆದಂತಾಗುತ್ತದೆ ಎಂದು ಇಂಧನ ಸಚಿವ ಕೆಜೆ ಜಾರ್ಜ್ ಗೆ ಪತ್ರದ ಮೂಲಕ ಹೋಟೆಲ್ ಅಸೋಸಿಯೇಶನ್ ಅವರು ಮನವಿ ಸಲ್ಲಿಸಿದ್ದಾರೆ.

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

‘ಮಾತಾಡೋದು ಕಲಿಯುತ್ತಿದ್ದೇನೆ’: ಚೈತ್ರಾ ಹೇಳಿದ್ದು ಕೇಳಿ ಕಂಗಾಲಾದ ಸುದೀಪ್​
‘ಮಾತಾಡೋದು ಕಲಿಯುತ್ತಿದ್ದೇನೆ’: ಚೈತ್ರಾ ಹೇಳಿದ್ದು ಕೇಳಿ ಕಂಗಾಲಾದ ಸುದೀಪ್​
ಮಾರ್ಟಿನ್​ ಸಿನಿಮಾದ ಅದ್ದೂರಿ ಪ್ರೀ-ರಿಲೀಸ್​ ಕಾರ್ಯಕ್ರಮ; ಇಲ್ಲಿದೆ ಲೈವ್
ಮಾರ್ಟಿನ್​ ಸಿನಿಮಾದ ಅದ್ದೂರಿ ಪ್ರೀ-ರಿಲೀಸ್​ ಕಾರ್ಯಕ್ರಮ; ಇಲ್ಲಿದೆ ಲೈವ್
ಉಡುಪಿಯ ಹೆಬ್ರಿಯಲ್ಲಿ ಮೇಘಸ್ಫೋಟ; ಭೀಕರ ಪ್ರವಾಹ ಸೃಷ್ಟಿ
ಉಡುಪಿಯ ಹೆಬ್ರಿಯಲ್ಲಿ ಮೇಘಸ್ಫೋಟ; ಭೀಕರ ಪ್ರವಾಹ ಸೃಷ್ಟಿ
‘ಡೆವಿಲ್​’ ಎದುರು ‘ಕರ್ನಾಟಕದ ಅಳಿಯ’ ಸಿನಿಮಾ ಬರೋದು ಫಿಕ್ಸ್: ಪ್ರಥಮ್
‘ಡೆವಿಲ್​’ ಎದುರು ‘ಕರ್ನಾಟಕದ ಅಳಿಯ’ ಸಿನಿಮಾ ಬರೋದು ಫಿಕ್ಸ್: ಪ್ರಥಮ್
ಉತ್ತರ ಕನ್ನಡ: ಮುರುಡೇಶ್ವರ ಕಡಲತೀರಕ್ಕೆ ಪ್ರವಾಸಿಗರಿಗೆ ನಿರ್ಬಂಧ
ಉತ್ತರ ಕನ್ನಡ: ಮುರುಡೇಶ್ವರ ಕಡಲತೀರಕ್ಕೆ ಪ್ರವಾಸಿಗರಿಗೆ ನಿರ್ಬಂಧ
ಬಿಗ್​ಬಾಸ್​ನಲ್ಲಿ ಮನೆಯಲ್ಲಿ ಯಾರು ಹಿಟ್? ಫ್ಲಾಪ್ ಆಗಿದ್ದು ಯಾರು?
ಬಿಗ್​ಬಾಸ್​ನಲ್ಲಿ ಮನೆಯಲ್ಲಿ ಯಾರು ಹಿಟ್? ಫ್ಲಾಪ್ ಆಗಿದ್ದು ಯಾರು?
ಮುಡಾ ಹಗರಣದ ಬಗ್ಗೆ ಪದೇ ಪದೆ ಮಾತಾಡೋದು ಬೇಡ: ಸಚಿವ ವಿ ಸೋಮಣ್ಣ
ಮುಡಾ ಹಗರಣದ ಬಗ್ಗೆ ಪದೇ ಪದೆ ಮಾತಾಡೋದು ಬೇಡ: ಸಚಿವ ವಿ ಸೋಮಣ್ಣ
ಅವರೇ ಹಾರೆ ಹಿಡಿದು ಗುಂಡಿ ಮುಚ್ಚಲು ಹೋಗಿದ್ದರಲ್ಲ ಈಗೇನಾಯ್ತು: ಹೆಚ್​ಡಿಕೆ
ಅವರೇ ಹಾರೆ ಹಿಡಿದು ಗುಂಡಿ ಮುಚ್ಚಲು ಹೋಗಿದ್ದರಲ್ಲ ಈಗೇನಾಯ್ತು: ಹೆಚ್​ಡಿಕೆ
ರಾಮಲೀಲಾ ನಾಟಕ ಪ್ರದರ್ಶನದ ವೇಳೆ ರಾಮ ಪಾತ್ರಧಾರಿ ಹೃದಯಾಘಾತದಿಂದ ಸಾವು
ರಾಮಲೀಲಾ ನಾಟಕ ಪ್ರದರ್ಶನದ ವೇಳೆ ರಾಮ ಪಾತ್ರಧಾರಿ ಹೃದಯಾಘಾತದಿಂದ ಸಾವು
‘ಬಿಗ್​ಬಾಸ್ ಏನು ಅಂಗಡಿಯಲ್ಲಿ ಸಿಗುವ ಒಳ ಉಡುಪಾ ಖರೀದಿ ಮಾಡೋಕೆ’
‘ಬಿಗ್​ಬಾಸ್ ಏನು ಅಂಗಡಿಯಲ್ಲಿ ಸಿಗುವ ಒಳ ಉಡುಪಾ ಖರೀದಿ ಮಾಡೋಕೆ’