AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿದ್ಯುತ್​​ ದರ ಇಳಿಸುವಂತೆ ಕೋರಿ ಇಂಧನ ಸಚಿವರಿಗೆ ಪತ್ರ ಬರೆದ ಬೆಂಗಳೂರು ಹೋಟೆಲ್​ ಮಾಲೀಕರ ಸಂಘ

ವಿದ್ಯುತ್ ದರ ಹೆಚ್ಚಳ ಹಿನ್ನಲೆ ಬೃಹತ್ ಬೆಂಗಳೂರು ಹೋಟೆಲ್​ ಮಾಲೀಕರ ಸಂಘದಿಂದ ವಿದ್ಯುತ್​​ ದರ ಇಳಿಸುವಂತೆ ಕೋರಿ ಇಂಧನ ಸಚಿವ ಕೆ.ಜೆ ಜಾರ್ಜ್​ಗೆ ಪತ್ರ ಬರೆಯುವ ಮೂಲಕ ಮನವಿ ಮಾಡಿದ್ದು, ಪ್ರಮುಖ 6 ಅಂಶಗಳ ವಿಚಾರ ಸರ್ಕಾರದ ಗಮನಕ್ಕೆ ತಂದಿದ್ದಾರೆ.

ವಿದ್ಯುತ್​​ ದರ ಇಳಿಸುವಂತೆ ಕೋರಿ ಇಂಧನ ಸಚಿವರಿಗೆ ಪತ್ರ ಬರೆದ ಬೆಂಗಳೂರು ಹೋಟೆಲ್​ ಮಾಲೀಕರ ಸಂಘ
ಪ್ರಾತಿನಿಧಿಕ ಚಿತ್ರ
ಕಿರಣ್ ಹನುಮಂತ್​ ಮಾದಾರ್
|

Updated on: Jun 17, 2023 | 8:47 AM

Share

ಬೆಂಗಳೂರು: ರಾಜ್ಯದಲ್ಲಿ ಗೃಹ ಲಕ್ಷ್ಮಿ ಯೋಜನೆ ಜಾರಿಯಾದ ಬೆನ್ನಲ್ಲೇ ರಾಜ್ಯ ವಿದ್ಯುತ್ ನಿಯಂತ್ರಣ ಆಯೋಗವು (KERC) ವಿದ್ಯುತ್ ಬಳಕೆ ಶುಲ್ಕವನ್ನು ಪ್ರತಿ ಯೂನಿಟ್ ಗೆ 70 ಪೈಸೆಯಂತೆ ಹೆಚ್ಚಳ ಮಾಡಿ ಆದೇಶ ಹೊರಡಿಸಿದ್ದು, ಅದರಂತೆ ವಿದ್ಯುತ್ ದರ ಹೆಚ್ಚಳ(Electricity Bill Hike) ಹಿನ್ನಲೆ ಬೃಹತ್ ಬೆಂಗಳೂರು ಹೋಟೆಲ್​ ಮಾಲೀಕರ ಸಂಘದಿಂದ ವಿದ್ಯುತ್​​ ದರ ಇಳಿಸುವಂತೆ ಕೋರಿ ಇಂಧನ ಸಚಿವ ಕೆ.ಜೆ ಜಾರ್ಜ್​ಗೆ ಪತ್ರ ಬರೆಯುವ ಮೂಲಕ ಮನವಿ ಮಾಡಿದ್ದಾರೆ.

ಪ್ರಮುಖ 6 ಅಂಶಗಳ ವಿಚಾರ ಸರ್ಕಾರದ ಗಮನಕ್ಕೆ ತಂದ ಬೆಂಗಳೂರು ಹೋಟೆಲ್ ಮಾಲೀಕರ ಸಂಘ

ಇನ್ನು ವಿದ್ಯುತ್ ದರ ಇಳಿಕೆಗೆ ಸಂಬಂಧಿಸಿ 6 ಅಂಶಗಳ ಬಗ್ಗೆ ಪತ್ರದಲ್ಲಿ ಉಲ್ಲೇಖ ಮಾಡಲಾಗಿದ್ದು, ಈ ಕೆಳಗಿನಂತಿದೆ.

1) ವಿದ್ಯುತ್ ದರ ಹೆಚ್ಚಳ ಮುಂದಿನ ಒಂದು ವರ್ಷಕ್ಕೆ ಮುಂದೂಡಬೇಕು.

2) ಸದ್ಯಕ್ಕೆ ಇರುವ ವಿದ್ಯುತ್ ತೆರಿಗೆಯನ್ನು 9 ಪರ್ಸೆಂಟ್ ರಿಂದ 3 ಪರ್ಸೆಂಟ್ ಇಳಿಕೆ ಮಾಡಬೇಕು.

3) ಟ್ರಾನ್ಸ್ ಮಿಷನ್ ಮತ್ತು ಡಿಸ್ಟ್ರಿಬ್ಯುಷನ್ ಗಳಲ್ಲಿ ಆಗುವ ಲಾಸ್ ಕಡಿಮೆ ಮಾಡಿ.

4) ರಾಜ್ಯ ಹಾಗೂ ಕೇಂದ್ರ ಸರ್ಕಾರದ ಇಲಾಖೆಗಳು ಪಾವತಿಸಬೇಕಾದ ಬಾಕಿ ಮೊತ್ತ ಬಡ್ಡಿ ಸಹಿತ ಸಂಗ್ರಹಿಸಬೇಕು.

5) ಪ್ರಿಪೈಡ್ ಮೀಟರ್ ಅಳವಡಿಕೆ ಮಾಡಿ ಗ್ರಾಹಕರ ಠೇವಣಿ ಹಣ ಹಿಂದಿರುಗಿಸಬೇಕು.

6) ಅನಗತ್ಯ ಅಡ್ಮಿನಿಸ್ಟ್ರೇಷನ್ ಖರ್ಚು ವೆಚ್ಚಗಳನ್ನು ಹತೋಟಿಗೆ ತರುವುದು.

ಇವೆಲ್ಲವನ್ನೂ ಪರಿಗಣಿಸಿದ್ದಲ್ಲಿ ಉದ್ಯಮಿಗಳಾದ ನಮಗೂ ವಿದ್ಯುತ್ ಇಲಾಖೆಗೂ ಅನೂಕುಲವಾಗಲಿದೆ. ಇಲ್ಲದಿದ್ದಲ್ಲಿ ಹೊಟೇಲ್ ಉದ್ಯಮಕ್ಕೆ ಗಾಯದ ಮೇಲೆ ಬರೆ ಎಳೆದಂತಾಗುತ್ತದೆ ಎಂದು ಇಂಧನ ಸಚಿವ ಕೆಜೆ ಜಾರ್ಜ್ ಗೆ ಪತ್ರದ ಮೂಲಕ ಹೋಟೆಲ್ ಅಸೋಸಿಯೇಶನ್ ಅವರು ಮನವಿ ಸಲ್ಲಿಸಿದ್ದಾರೆ.

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್