ಬೆಂಗಳೂರು: ಸ್ವಾತಂತ್ರ್ಯ ಸಮಾರಂಭಕ್ಕೆ ಹೇಗಿರಲಿದೆ ಭದ್ರತೆ? ಪೊಲೀಸ್ ಆಯುಕ್ತರಿಂದ ಬಿಗ್ ಅಪ್​ಡೇಟ್

ಸ್ವಾತಂತ್ರ್ಯ ದಿನಾಚರಣೆಗೆ ದಿನಗಣನೆ ಆರಂಭವಾಗಿದೆ. ಬೆಂಗಳೂರು ನಗರದಲ್ಲಿಯೂ ಸ್ವಾತಂತ್ರ್ಯೋತ್ಸವ ಆಚರಣೆಗೆ ಭರದಿಂದ ಸಿದ್ಧತೆ ನಡೆಯುತ್ತಿದೆ. ಈ ಮಧ್ಯೆ, ಸ್ವಾತಂತ್ರ್ಯೋತ್ಸವ ಆಚರಣೆ ಸಂಬಂಧ ಸಿಲಿಕಾನ್ ಸಿಟಿಯಲ್ಲಿ ಬಿಗಿ ಭದ್ರತೆ ಕಲ್ಪಿಸಲಾಗಿದೆ. ಬೆಂಗಳೂರಿನಲ್ಲಿ ಕೈಗೊಳ್ಳಲಾಗಿರುವ ಭದ್ರತಾ ಕ್ರಮಗಳ ಬಗ್ಗೆ ನಗರ ಪೊಲೀಸ್ ಆಯುಕ್ತ ಬಿ ದಯಾನಂದ್ ಮಾಹಿತಿ ನೀಡಿದ್ದಾರೆ.

ಬೆಂಗಳೂರು: ಸ್ವಾತಂತ್ರ್ಯ ಸಮಾರಂಭಕ್ಕೆ ಹೇಗಿರಲಿದೆ ಭದ್ರತೆ? ಪೊಲೀಸ್ ಆಯುಕ್ತರಿಂದ ಬಿಗ್ ಅಪ್​ಡೇಟ್
ಬೆಂಗಳೂರು: ಸ್ವಾತಂತ್ರ್ಯ ಸಮಾರಂಭಕ್ಕೆ ಬಿಗಿ ಭದ್ರತೆ
Updated By: Ganapathi Sharma

Updated on: Aug 13, 2024 | 11:36 AM

ಬೆಂಗಳೂರು, ಆಗಸ್ಟ್ 13: ಸ್ವಾತಂತ್ರ್ಯೋತ್ಸವ ಸಮಾರಂಭ ಆಚರಣೆಗೆ ಬೆಂಗಳೂರು ನಗರದಲ್ಲಿ ಸಕಲ ಸಿದ್ಧತೆ ನಡೆಯುತ್ತಿದೆ. ಭದ್ರತೆ ಸಂಬಂಧಿಸಿ ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ ದಯಾನಂದ ಮಹತ್ವದ ಮಾಹಿತಿ ನೀಡಿದ್ದಾರೆ. ಸಿದ್ಧತೆ ಮತ್ತು ಭದ್ರತೆಗೆ ಸಂಬಂಧಿಸಿದ ಮಾಹಿತಿ ನೀಡಿದ ಅವರು, ಮಾಣೆಕ್​ ಷಾ ಪರೇಡ್ ಗ್ರೌಂಡ್​​ನಲ್ಲಿ ನಡೆಯಲಿರುವ ಕಾರ್ಯಕ್ರಮಕ್ಕೆ ಎಲ್ಲಾ ಸಿದ್ಧತೆ ಮಾಡಿಕೊಳ್ಳಲಾಗಿದೆ. ರಿಹರ್ಸಲ್‌ ಕಾರ್ಯಕ್ರಮ ಮಾಡಲಾಗಿದೆ. ಕಾರ್ಯಕ್ರಮ ಹಿನ್ನೆಲೆ 15ದಿನಗಳಿಂದ ಕಟ್ಟೆಚ್ಚರವಹಿಸಲಾಗಿದೆ ಎಂದರು.

ಪರೇಡ್ ಮೈದಾನದ ಸುತ್ತ ಕಟ್ಟೆಚ್ಚರ: ನೂರಾರು ಸಿಬ್ಬಂದಿ ಕಣ್ಗಾವಲು

15ನೇ ತಾರೀಖಿನಂದು ನಡೆಯಲಿರುವ ಕಾರ್ಯಕ್ರಮಕ್ಕೆ ಬಿಗಿ ಭದ್ರತೆ ವಹಿಸಲಾಗಿದೆ. 10 ಡಿಸಿಪಿ, 17 ಎಸಿಪಿ, 42 ಇನ್ಸ್​​​ಪೆಕ್ಟರ್, 112 ಪಿಎಸ್ಐ, 62 ಎಎಸ್ಐ, 511 ಕಾನ್ಸ್​​​ಟೇಬಲ್​​ಗಳು, 72 ಮಹಿಳಾ ಸಿಬ್ಬಂದಿ ನೇಮಕ ಮಾಡಲಾಗಿದೆ. 129 ಮಂದಿ ಮಫ್ತಿಯಲ್ಲಿ ಕಾರ್ಯನಿರ್ವಹಿಸಲಿದ್ದಾರೆ ಎಂದು ಬಿ ದಯಾನಂದ ಮಾಹಿತಿ ನೀಡಿದ್ದಾರೆ.

ಸಿಸಿಟಿವಿ ಪರಿಶೀಲನೆ ಮಾಡುವುದಕ್ಕೆಂದೇ 27 ಸಿಬ್ಬಂದಿಯ ನೇಮಕ ಮಾಡಲಾಗಿದೆ. ಹೆಚ್ಚುವರಿಯಾಗಿ ಹತ್ತು ಕೆಎಸ್ಆರ್​ಪಿ ತುಕಡಿ ನಿಯೋಜನೆ‌ ಮಾಡಲಾಗಿದೆ. ಸಂಚಾರ ನಿರ್ವಹಣೆ ವಿಚಾರವಾಗಿಯೂ ಪೊಲೀಸ್ ಅಧಿಕಾರಿಗಳ‌ ನೇಮಕ ಮಾಡಲಾಗಿದೆ ಎಂದು ಅವರು ಹೇಳಿದರು.

ಇದನ್ನೂ ಓದಿ: ಹೆಬ್ಬಾಳ ಫ್ಲೈಓವರ್​ ಮೇಲೆ ಸರಣಿ ಅಪಘಾತ; ಬಿಎಂಟಿಸಿ ಬಸ್​ ಚಾಲಕನ ಯಡವಟ್ಟಿನಿಂದ ಘೋರ ದುರಂತ, ವಿಡಿಯೋ ನೋಡಿ

3 ಜನ ಡಿಸಿಪಿ, 6 ಜನ ಎಸಿಪಿ, 19 ಜನ ಇನ್ಸ್​ಪೆಕ್ಟರ್, 32 ಪಿಎಸ್ಐ, 111 ಎಎಸ್ಐ ಹಾಗೂ 430 ಕಾನ್ಸಟೇಬಲ್​​​ಗಳು ಸೇರಿದಂತೆ ನೂರಾರು ಸಿಬ್ಬಂದಿ‌ಯನ್ನು ಮೈದಾನದ ಸುತ್ತಮುತ್ತ ಟ್ರಾಫಿಕ್ ಕಂಟ್ರೋಲ್‌ಗೆ ನೇಮಕ‌ ಮಾಡಲಾಗಿದೆ. ಪ್ರತಿ ಗೇಟ್​​ನಲ್ಲೂ ಪೊಲೀಸ್ ಅಧಿಕಾರಿಗಳು ತಪಾಸಣೆ ನಡೆಸುತ್ತಾರೆ. ಅನುಮಾನ ಬಂದರೆ ಅಂತಹ ವ್ಯಕ್ತಿಗಳನ್ನು ವಶಪಡೆಯಲಾಗುತ್ತದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಯಾವೆಲ್ಲ ವಸ್ತುಗಳಿಗೆ ನಿಷೇಧ?

ಸಿಗರೇಟ್, ಬೆಂಕಿಪೊಟ್ಟಣ, ಕಪ್ಪು ಕರ ವಸ್ತುಗಳು, ಚೂಪಾದ ವಸ್ತುಗಳು, ಕ್ಯಾಮರಾಗಳಿಗೆ ಅವಕಾಶ ಇಲ್ಲ. ಮೈದಾನದ ಒಳಗೆ ಬಿಡುವ ಮುನ್ನ ಎಲ್ಲವನ್ನೂ ಪರಿಶೀಲನೆ ಮಾಡಲಾಗುತ್ತದೆ ಎಂದು ದಯಾನಂದ ಹೇಳಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ