ಬೆಂಗಳೂರಿಗರಿಗೆ ಸಿಹಿ ಸುದ್ದಿ ನೀಡಿದ ಕೇಂದ್ರ ಸರ್ಕಾರ: ಶೇ. 50ರಷ್ಟು ಸಿಗಲಿದೆ ಮನೆ ಬಾಡಿಗೆ ಭತ್ಯೆ

ಬೆಂಗಳೂರು ಈಗ 'ಮೆಟ್ರೋ ನಗರ' ಪಟ್ಟಿಗೆ ಸೇರ್ಪಡೆಗೊಂಡಿದೆ, ಇದರಿಂದ HRA ವಿನಾಯಿತಿ ಶೇ. 40 ರಿಂದ ಶೇ. 50 ಕ್ಕೆ ಹೆಚ್ಚಲಿದೆ. ಸಂಸದ ತೇಜಸ್ವಿ ಸೂರ್ಯರ ಪ್ರಯತ್ನದ ಫಲವಾಗಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಲಕ್ಷಾಂತರ ವೇತನದಾರರಿಗೆ ತೆರಿಗೆ ಹೊರೆ ಕಡಿಮೆಯಾಗಿ ಕೈಗೆ ಸಿಗುವ ಆದಾಯ ಹೆಚ್ಚಲಿದೆ. ಇದು 2026-27 ಆರ್ಥಿಕ ವರ್ಷದಿಂದ ಜಾರಿಗೆ ಬರುವ ಸಾಧ್ಯತೆಯಿದೆ.

ಬೆಂಗಳೂರಿಗರಿಗೆ ಸಿಹಿ ಸುದ್ದಿ ನೀಡಿದ ಕೇಂದ್ರ ಸರ್ಕಾರ: ಶೇ. 50ರಷ್ಟು ಸಿಗಲಿದೆ ಮನೆ ಬಾಡಿಗೆ ಭತ್ಯೆ
ಸಾಂದರ್ಭಿಕ ಚಿತ್ರ
ಮಹೇಶ್ ಇ, ಭೂಮನಹಳ್ಳಿ Edited By:

Updated on: Feb 10, 2026 | 4:38 PM

ಬೆಂಗಳೂರು, ಫೆ.10: ಬೆಂಗಳೂರಿಗರಿಗೆ ಕೇಂದ್ರ ಸರ್ಕಾರ ಹೊಸ ಸಿಹಿ ಸುದ್ದಿ ನೀಡಿದೆ. ಈ ಬಗ್ಗೆ ನವದೆಹಲಿಯಲ್ಲಿ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಹೇಳಿಕೆ ನೀಡಿದ್ದಾರೆ. ಇಷ್ಟು ದಿನ ಆದಾಯ ತೆರಿಗೆ ನಿಯಮಗಳ ಪ್ರಕಾರ, ದೆಹಲಿ, ಮುಂಬೈ, ಕೋಲ್ಕತ್ತಾ ಮತ್ತು ಚೆನ್ನೈ ನಗರಗಳನ್ನು ಮಾತ್ರ ‘ಮೆಟ್ರೋ ನಗರಗಳು’ ಎಂದು ಪರಿಗಣಿಸಿ ಶೇ. 50 ರಷ್ಟು HRA (ಮನೆ ಬಾಡಿಗೆ ಭತ್ಯೆ) ವಿನಾಯಿತಿ ನೀಡಲಾಗುತ್ತಿತ್ತು. ಬೆಂಗಳೂರು ವಿಶ್ವಮಟ್ಟದ ನಗರವಾಗಿದ್ದರೂ ತಾಂತ್ರಿಕವಾಗಿ ಇದನ್ನು ‘ಬಾಕಿ ನಗರಗಳ’ ಪಟ್ಟಿಯಲ್ಲಿ ಇರಿಸಲಾಗಿತ್ತು, ಹೀಗಾಗಿ ಇಲ್ಲಿನವರಿಗೆ ಕೇವಲ ಶೇ. 40 ರಷ್ಟು ಮಾತ್ರ ವಿನಾಯಿತಿ ಸಿಗುತ್ತಿತ್ತು. ಆದರೆ ಇದೀಗ ಬೆಂಗಳೂರನ್ನು ಮೆಟ್ರೋ ನಗರಗಳ ಪಟ್ಟಿಯಲ್ಲಿ ಸೇರಿಸಲಾಗಿದೆ. ಈ ಮೂಲಕ ಶೇ. 50 ರಷ್ಟು HRA (ಮನೆ ಬಾಡಿಗೆ ಭತ್ಯೆ) ವಿನಾಯಿತಿ ನೀಡಲಾಗುವುದು.

ಸಂಸದ ತೇಜಸ್ವಿ ಸೂರ್ಯ ಅವರು ಎರಡು ವರ್ಷಗಳ ಹಿಂದೆಯೇ ಸಂಸತ್ತಿನಲ್ಲಿ ಮತ್ತು ಹಣಕಾಸು ಸಚಿವರ ಬಳಿ ಬೆಂಗಳೂರಿನ ಜೀವನ ವೆಚ್ಚ (Cost of Living) ದೆಹಲಿ-ಮುಂಬೈಗೆ ಸಮಾನವಾಗಿದೆ, ಆದ್ದರಿಂದ ಬೆಂಗಳೂರನ್ನು ಮೆಟ್ರೋ ಪಟ್ಟಿಗೆ ಸೇರಿಸಲೇಬೇಕು ಎಂದು ಒತ್ತಾಯಿಸಿದ್ದರು. ಆ ಬೇಡಿಕೆ ಈಗ ಈಡೇರಿದಂತಾಗಿದೆ. ಈ ಮೂಲಕ ಬೆಂಗಳೂರಿಗೆ ಮೆಟ್ರೋ ನಗರಗಳ ಪಟ್ಟಿಯಲ್ಲಿ ಸೇರುವ ಭಾಗ್ಯ ಸಿಕ್ಕಿದೆ.

ಇದನ್ನೂ ಓದಿ: GBA ಗುರುತಿಸಿದ ಕೇಂದ್ರಗಳಲ್ಲಿ ಮಾತ್ರ ಬೀದಿ ನಾಯಿಗಳಿಗೆ ಆಹಾರ ಹಾಕಬೇಕು: ಉಲ್ಲಂಘಿಸಿದರೆ ದಂಡ

ಇದರಿಂದ ಆಗುವ ನೇರ ಲಾಭವೇನು?

ಹೆಚ್ಚುವರಿ ತೆರಿಗೆ ಉಳಿತಾಯ: ಈಗ ನಿಮ್ಮ ಮೂಲ ವೇತನದ ಶೇ. 50 ರಷ್ಟು ಮೊತ್ತವನ್ನು HRA ವಿನಾಯಿತಿಯಾಗಿ ಪಡೆಯಬಹುದು. ಇದುವರೆಗೆ ಇದು ಶೇ. 40 ರಷ್ಟಿತ್ತು.

ವೇತನದಾರರಿಗೆ ನೆರವು: ಸಾಫ್ಟ್‌ವೇರ್ ಉದ್ಯೋಗಿಗಳು ಸೇರಿದಂತೆ ಖಾಸಗಿ ಮತ್ತು ಸರ್ಕಾರಿ ವಲಯದ ಲಕ್ಷಾಂತರ ಉದ್ಯೋಗಿಗಳ ಕೈಗೆ ಸಿಗುವ ವೇತನ ಹೆಚ್ಚಾಗಲಿದೆ.

ತೆರಿಗೆ ಹೊರೆ ಇಳಿಕೆ: ಒಟ್ಟು ತೆರಿಗೆ ವಿಧಿಸಬಹುದಾದ ಆದಾಯದಲ್ಲಿ (Taxable Income) ಹೆಚ್ಚಿನ ಕಡಿತ ಪಡೆಯಲು ಅವಕಾಶ ಸಿಗುವುದರಿಂದ ತೆರಿಗೆ ಪಾವತಿ ಕಡಿಮೆಯಾಗಲಿದೆ.

ಇಲ್ಲಿದೆ ನೋಡಿ ವಿಡಿಯೋ:

ಯಾವ ಆರ್ಥಿಕ ವರ್ಷದಿಂದ ಅನ್ವಯ?

ಸಂಸದ ತೇಜಸ್ವಿ ಸೂರ್ಯ ಅವರು ಪ್ರಸ್ತಾಪಿಸಿರುವ ಈ ಹೊಸ ಡ್ರಾಫ್ಟ್ ನಿಯಮವು, ಕೇಂದ್ರ ಸರ್ಕಾರದ ಮುಂದಿನ ಅಧಿಸೂಚನೆಯ ಪ್ರಕಾರ ಆರ್ಥಿಕ ವರ್ಷ 2026-27 ರಿಂದ ಜಾರಿಗೆ ಬರುವ ಸಾಧ್ಯತೆ ಇದೆ. ಒಂದು ವೇಳೆ ಸರ್ಕಾರವು ಇದನ್ನು ಪೂರ್ವಾನ್ವಯವಾಗಿ ಜಾರಿಗೊಳಿಸಿದರೆ, ಪ್ರಸಕ್ತ ವರ್ಷದ ತೆರಿಗೆ ರಿಟರ್ನ್ಸ್‌ನಲ್ಲೂ ಲಾಭ ಸಿಗುವ ಸಾಧ್ಯತೆ ಇರುತ್ತದೆ.

ಬೆಂಗಳೂರು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:11 pm, Tue, 10 February 26

Mahesha E

ಮಹೇಶ್ ಇ ಎಂಬ ನಾನು ಮೂಲತಃ ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರು ತಾಲೂಕಿನ ಭೂಮನಹಳ್ಳಿ ಗ್ರಾಮದ ನಿವಾಸಿ. ನಮ್ಮ ಹೆಮ್ಮೆಯ ಟಿವಿ9 ತುಮಕೂರು ಜಿಲ್ಲಾ ವರದಿಗಾರನಾಗಿ ಸತತ 9 ವರ್ಷಗಳಿಂದ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ನಡೆದಾಡುವ ದೇವರು ತ್ರಿವಿಧ ದಾಸೋಹಿ ಶಿವಕುಮಾರ್ ಶ್ರೀಗಳು ಲಿಂಗೈಕ್ಯರಾದಾಗ ಆ ಸುದ್ದಿ ಬಿತ್ತರ ಬಗ್ಗೆ ಹಾಗೂ ಕೊನೆ ಕ್ಷಣದಲ್ಲಿ ದೇವರ ಜೊತೆಯಿದ್ದ ಎಲ್ಲಾ ಕಾರ್ಯಕ್ರಮಗಳನ್ನ ನೋಡಿ ವರದಿ ಮಾಡಿದ್ದು ನನ್ನ ಭಾಗ್ಯ..ಬಡ ಕುಟುಂಬದಿಂದ ಬಂದಿರುವ ನನಗೆ ಟಿವಿ9 ಸಂಸ್ಥೆ ತುಮಕೂರು ಅಂತಾ ಅತಿದೊಡ್ಡ ಜಿಲ್ಲೆಯಲ್ಲಿ ಕೆಲಸ ಮಾಡಲು ಅವಕಾಶ ನೀಡಿದ್ದಕ್ಕೆ ಧನ್ಯವಾದ...

Follow Us