AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ವ್ಲಾಗ್ ಮಾಡುವಾಗ ಎದೆ ಸ್ಪರ್ಶಿಸಿ ಓಡಿ ಹೋದ ಬಾಲಕ, ಕಣ್ಣೀರಿಟ್ಟ ಯುವತಿ

ಬೆಂಗಳೂರು ಸುರಕ್ಷಿತವಾಗಿಲ್ಲ ಎಂದು ಮಹಿಳಾ ಇನ್​ಫ್ಲುಯೆನ್ಸರ್​ ಕಣ್ಣೀರು ಹಾಕಿದ್ದಾರೆ. ಅವರು ಬಿಟಿಎಂ ಲೇಔಟ್​ನಲ್ಲಿ ರಸ್ತೆಯಲ್ಲಿ ವ್ಲಾಗ್ ಮಾಡುತ್ತಾ ಹೋಗುತ್ತಿರುವಾಗ ಬಾಲಕನೊಬ್ಬ ಆಕೆಯ ಎದೆಯನ್ನು ಸ್ಪರ್ಶಿಸಿ ಓಡಿ ಹೋಗಿರುವ ಘಟನೆಯನ್ನು ಆಕೆ ವಿವರಿಸಿದ್ದಾಳೆ.

ಬೆಂಗಳೂರು: ವ್ಲಾಗ್ ಮಾಡುವಾಗ ಎದೆ ಸ್ಪರ್ಶಿಸಿ ಓಡಿ ಹೋದ ಬಾಲಕ, ಕಣ್ಣೀರಿಟ್ಟ ಯುವತಿ
ಯುವತಿ
Follow us
ನಯನಾ ರಾಜೀವ್
|

Updated on: Nov 07, 2024 | 10:24 AM

ಬೆಂಗಳೂರು ಸುರಕ್ಷಿತವಾಗಿಲ್ಲ ಎಂದು ಮಹಿಳಾ ಇನ್​ಫ್ಲುಯೆನ್ಸರ್​ ಕಣ್ಣೀರು ಹಾಕಿದ್ದಾರೆ. ಅವರು ಬಿಟಿಎಂ ಲೇಔಟ್​ನಲ್ಲಿ ರಸ್ತೆಯಲ್ಲಿ ವ್ಲಾಗ್ ಮಾಡುತ್ತಾ ಹೋಗುತ್ತಿರುವಾಗ ಬಾಲಕನೊಬ್ಬ ಆಕೆಯ ಎದೆಯನ್ನು ಸ್ಪರ್ಶಿಸಿ ಓಡಿ ಹೋಗಿರುವ ಘಟನೆಯನ್ನು ಆಕೆ ವಿವರಿಸಿದ್ದಾರೆ.

ನೇಹಾ ಬಿಸ್ವಾಲ್ ಕೆಲಸದಿಂದ ಹಿಂದಿರುಗುತ್ತಿದ್ದಾಗ ಮತ್ತು ವೀಡಿಯೊ ಬ್ಲಾಗ್ ಅನ್ನು ರೆಕಾರ್ಡ್ ಮಾಡುತ್ತಿದ್ದಾಗ ಎದುರು ದಿಕ್ಕಿನಿಂದ ಸೈಕಲ್​ನಲ್ಲಿ ಬಂದ 10 ವರ್ಷದ ಬಾಲಕ ಆಕೆಯ ಎದೆ ಸ್ಪರ್ಶಿಸಿ ಓಡಿ ಹೋಗಿದ್ದಾನೆ ಈ ಘಟನೆ ಕ್ಯಾಮರಾದಲ್ಲಿ ಸೆರೆಯಾಗಿದೆ.

ಇಂಥಾ ಘಟನೆ ನನ್ನ ಜೀವನದಲ್ಲಿ ಎಂದೂ ನಡೆದಿರಲಿಲ್ಲ ಎಂದು ಕಣ್ಣೀರು ಹಾಕಿದ್ದಾರೆ. ನಾನು ನಡೆಯುವಾಗ ವಿಡಿಯೋ ಮಾಡುತ್ತಾ ಹೋಗುತ್ತಿದ್ದೆ, ಆ ಹುಡುಗ ಆರಂಭದಲ್ಲಿ ನಾನು ಹೋಗುತ್ತಿದ್ದ ದಿಕ್ಕಿನಲ್ಲೇ ಹೋಗುತ್ತಿದ್ದ, ನಂತರ ಮುಂದೆ ಹೋದವನು ನನ್ನ ನೋಡಿ ಯೂ-ಟರ್ನ್ ತೆಗೆದುಕೊಂಡು ಬಂದು ನಾನು ಹೇಗೆ ಮಾತನಾಡುತ್ತಿದ್ದೆ ಅದೇ ರೀತಿ ಮಾತನಾಡಿ ಗೇಲಿ ಮಾಡಿದ, ಬಳಿಕ ಕಿರುಕುಳ ನೀಡಿದ್ದಾನೆ ಎಂದು ವಿವರಿಸಿದ್ದಾರೆ.

ಮತ್ತಷ್ಟು ಓದಿ: ಮುಂಬೈ ರೈಲಿನಲ್ಲಿ ನೇತಾಡುತ್ತಾ ಯುವಕನ ನೃತ್ಯ; ಮಿಸ್ ಮಾಡದೆ ನೋಡಿ

ಕಿರುಕುಳ ನೀಡಿ ಓಡಿ ಹೋಗಲು ಪ್ರಯತ್ನಿಸಿದ್ದ ಕೂಡಲೇ ಸ್ಥಳೀಯರು ಆತನನ್ನು ಹಿಡಿದಿದ್ದಾರೆ. ಆತ ಇನ್ನೂ ಚಿಕ್ಕವನು ಇದೊಂದು ಬಾರಿ ಕ್ಷಮಿಸುವಂತೆ ಜನರು ಕೇಳಿಕೊಂಡರು, ಸಿಕ್ಕಿಬಿದ್ದ ಬಳಿಕ ಆತ ನಾನು ಸೈಕಲ್​ನಲ್ಲಿ ಸಮತೋಲನ ಕಳೆದುಕೊಂಡು ಬೀಳುಬಂತಾದೆ ಆಗ ಆಕೆಯನ್ನು ಆಕಸ್ಮಿಕವಾಗಿ ತಳ್ಳಿದ್ದೇನೆ ಎಂದು ಆರೋಪಿ ಹೇಳಿದ್ದಾರೆ. ಅವನು ಮಾಡಿದ್ದನ್ನು ಸ್ಪಷ್ಟವಾಗಿ ತೋರಿಸುವ ವೀಡಿಯೊವನ್ನು ನಾನು ಪ್ಲೇ ಮಾಡಿದ ನಂತರವೇ ಜನರು ನನ್ನನ್ನು ನಂಬುತ್ತಾರೆ ಎಂದು ಅವರು ಹೇಳಿದರು.

ಆತ ಇನ್ನೂ ಚಿಕ್ಕವನಾಗಿರುವ ಕಾರಣ ನಾನು ಯಾವುದೇ ಎಫ್​ಐಆರ್ ದಾಖಲಿಸಿಲ್ಲ, ಆತನ ಭವಿಷ್ಯವನ್ನು ಹಾಳು ಮಾಡುವ ಮನಸ್ಸಿಲ್ಲ ಎಂದರು. ಆದರೆ ನಡೆದ ಘಟನೆಯಿಂದ ಇನ್ನೂ ಮಾನಸಿಕವಾಗಿ ವಿಚಲಿತನಾಗಿದ್ದೇನೆ ಎಂದಿದ್ದಾರೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Daily Devotional: ಅಸಹಾಯಕರ ಶಾಪ ಹೇಗೆ ಪರಿಣಾಮ ಬೀರುತ್ತೆ ಗೊತ್ತಾ?
Daily Devotional: ಅಸಹಾಯಕರ ಶಾಪ ಹೇಗೆ ಪರಿಣಾಮ ಬೀರುತ್ತೆ ಗೊತ್ತಾ?
ಈ ರಾಶಿಯವರಿಗೆ ಕೆಲಸ ಕಾರ್ಯಗಳಲ್ಲಿ ಯಶಸ್ಸು, ಆರ್ಥಿಕ ಲಾಭ, ಸಂತೋಷ
ಈ ರಾಶಿಯವರಿಗೆ ಕೆಲಸ ಕಾರ್ಯಗಳಲ್ಲಿ ಯಶಸ್ಸು, ಆರ್ಥಿಕ ಲಾಭ, ಸಂತೋಷ
ಇದು ಆತ್ಮದ ಹಾಡು; ‘ಶಿವಂ ಶಿವಂ ಸನಾತನಂ’ ಬಗ್ಗೆ ವಿಜಯ್ ಪ್ರಕಾಶ್ ಮಾತು
ಇದು ಆತ್ಮದ ಹಾಡು; ‘ಶಿವಂ ಶಿವಂ ಸನಾತನಂ’ ಬಗ್ಗೆ ವಿಜಯ್ ಪ್ರಕಾಶ್ ಮಾತು
ಲೈಂಗಿಕ ದೌರ್ಜನ್ಯ ನಡೆಸಿ ವಿಡಿಯೋ ಮಾಡಿದ್ದಾನೆ: ಮಡೆನೂರು ಮನು ಮೇಲೆ ಆರೋಪ
ಲೈಂಗಿಕ ದೌರ್ಜನ್ಯ ನಡೆಸಿ ವಿಡಿಯೋ ಮಾಡಿದ್ದಾನೆ: ಮಡೆನೂರು ಮನು ಮೇಲೆ ಆರೋಪ
ಕೆಣಕ್ಕಿದ ಸಿರಾಜ್​ಗೆ ಪೂರನ್ ನೀಡಿದ ಉತ್ತರ ಹೇಗಿತ್ತು ಗೊತ್ತಾ?
ಕೆಣಕ್ಕಿದ ಸಿರಾಜ್​ಗೆ ಪೂರನ್ ನೀಡಿದ ಉತ್ತರ ಹೇಗಿತ್ತು ಗೊತ್ತಾ?
ಗುಜರಾತ್ ವಿರುದ್ಧ ಸಿಡಿಲಬ್ಬರದ ಶತಕ ಸಿಡಿಸಿದ ಮಿಚೆಲ್ ಮಾರ್ಷ್
ಗುಜರಾತ್ ವಿರುದ್ಧ ಸಿಡಿಲಬ್ಬರದ ಶತಕ ಸಿಡಿಸಿದ ಮಿಚೆಲ್ ಮಾರ್ಷ್
ಭಾರತೀಯ ಸೇನೆ ಮಾಹಿತಿಯನ್ನು ಪಾಕಿಸ್ತಾನಕ್ಕೆ ಕಳಿಸುತ್ತಿದ್ದ ಇಬ್ಬರ ಬಂಧನ
ಭಾರತೀಯ ಸೇನೆ ಮಾಹಿತಿಯನ್ನು ಪಾಕಿಸ್ತಾನಕ್ಕೆ ಕಳಿಸುತ್ತಿದ್ದ ಇಬ್ಬರ ಬಂಧನ
ಇಲಿಗಳು ತಿಂದ ಆಹಾರವೇ ಈ ದೇವಸ್ಥಾನದ ಪ್ರಸಾದ: ಏನಿದರ ವಿಶೇಷತೆ?
ಇಲಿಗಳು ತಿಂದ ಆಹಾರವೇ ಈ ದೇವಸ್ಥಾನದ ಪ್ರಸಾದ: ಏನಿದರ ವಿಶೇಷತೆ?
ಬಿಜೆಪಿ ನಾಯಕರೆಲ್ಲ ಜೊತೆಗಿದ್ದೇವೆ, ನಮ್ಮ ಹೋರಾಟ ನಿಲ್ಲಲ್ಲ: ಚಲವಾದಿ
ಬಿಜೆಪಿ ನಾಯಕರೆಲ್ಲ ಜೊತೆಗಿದ್ದೇವೆ, ನಮ್ಮ ಹೋರಾಟ ನಿಲ್ಲಲ್ಲ: ಚಲವಾದಿ
ಗುಜರಾತ್​ನ ದಾಹೋದ್​ನಲ್ಲಿ 32 ವರ್ಷಗಳ ಬಳಿಕ ಹುಲಿ ಪ್ರತ್ಯಕ್ಷ
ಗುಜರಾತ್​ನ ದಾಹೋದ್​ನಲ್ಲಿ 32 ವರ್ಷಗಳ ಬಳಿಕ ಹುಲಿ ಪ್ರತ್ಯಕ್ಷ