Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ವ್ಲಾಗ್ ಮಾಡುವಾಗ ಎದೆ ಸ್ಪರ್ಶಿಸಿ ಓಡಿ ಹೋದ ಬಾಲಕ, ಕಣ್ಣೀರಿಟ್ಟ ಯುವತಿ

ಬೆಂಗಳೂರು ಸುರಕ್ಷಿತವಾಗಿಲ್ಲ ಎಂದು ಮಹಿಳಾ ಇನ್​ಫ್ಲುಯೆನ್ಸರ್​ ಕಣ್ಣೀರು ಹಾಕಿದ್ದಾರೆ. ಅವರು ಬಿಟಿಎಂ ಲೇಔಟ್​ನಲ್ಲಿ ರಸ್ತೆಯಲ್ಲಿ ವ್ಲಾಗ್ ಮಾಡುತ್ತಾ ಹೋಗುತ್ತಿರುವಾಗ ಬಾಲಕನೊಬ್ಬ ಆಕೆಯ ಎದೆಯನ್ನು ಸ್ಪರ್ಶಿಸಿ ಓಡಿ ಹೋಗಿರುವ ಘಟನೆಯನ್ನು ಆಕೆ ವಿವರಿಸಿದ್ದಾಳೆ.

ಬೆಂಗಳೂರು: ವ್ಲಾಗ್ ಮಾಡುವಾಗ ಎದೆ ಸ್ಪರ್ಶಿಸಿ ಓಡಿ ಹೋದ ಬಾಲಕ, ಕಣ್ಣೀರಿಟ್ಟ ಯುವತಿ
ಯುವತಿ
Follow us
ನಯನಾ ರಾಜೀವ್
|

Updated on: Nov 07, 2024 | 10:24 AM

ಬೆಂಗಳೂರು ಸುರಕ್ಷಿತವಾಗಿಲ್ಲ ಎಂದು ಮಹಿಳಾ ಇನ್​ಫ್ಲುಯೆನ್ಸರ್​ ಕಣ್ಣೀರು ಹಾಕಿದ್ದಾರೆ. ಅವರು ಬಿಟಿಎಂ ಲೇಔಟ್​ನಲ್ಲಿ ರಸ್ತೆಯಲ್ಲಿ ವ್ಲಾಗ್ ಮಾಡುತ್ತಾ ಹೋಗುತ್ತಿರುವಾಗ ಬಾಲಕನೊಬ್ಬ ಆಕೆಯ ಎದೆಯನ್ನು ಸ್ಪರ್ಶಿಸಿ ಓಡಿ ಹೋಗಿರುವ ಘಟನೆಯನ್ನು ಆಕೆ ವಿವರಿಸಿದ್ದಾರೆ.

ನೇಹಾ ಬಿಸ್ವಾಲ್ ಕೆಲಸದಿಂದ ಹಿಂದಿರುಗುತ್ತಿದ್ದಾಗ ಮತ್ತು ವೀಡಿಯೊ ಬ್ಲಾಗ್ ಅನ್ನು ರೆಕಾರ್ಡ್ ಮಾಡುತ್ತಿದ್ದಾಗ ಎದುರು ದಿಕ್ಕಿನಿಂದ ಸೈಕಲ್​ನಲ್ಲಿ ಬಂದ 10 ವರ್ಷದ ಬಾಲಕ ಆಕೆಯ ಎದೆ ಸ್ಪರ್ಶಿಸಿ ಓಡಿ ಹೋಗಿದ್ದಾನೆ ಈ ಘಟನೆ ಕ್ಯಾಮರಾದಲ್ಲಿ ಸೆರೆಯಾಗಿದೆ.

ಇಂಥಾ ಘಟನೆ ನನ್ನ ಜೀವನದಲ್ಲಿ ಎಂದೂ ನಡೆದಿರಲಿಲ್ಲ ಎಂದು ಕಣ್ಣೀರು ಹಾಕಿದ್ದಾರೆ. ನಾನು ನಡೆಯುವಾಗ ವಿಡಿಯೋ ಮಾಡುತ್ತಾ ಹೋಗುತ್ತಿದ್ದೆ, ಆ ಹುಡುಗ ಆರಂಭದಲ್ಲಿ ನಾನು ಹೋಗುತ್ತಿದ್ದ ದಿಕ್ಕಿನಲ್ಲೇ ಹೋಗುತ್ತಿದ್ದ, ನಂತರ ಮುಂದೆ ಹೋದವನು ನನ್ನ ನೋಡಿ ಯೂ-ಟರ್ನ್ ತೆಗೆದುಕೊಂಡು ಬಂದು ನಾನು ಹೇಗೆ ಮಾತನಾಡುತ್ತಿದ್ದೆ ಅದೇ ರೀತಿ ಮಾತನಾಡಿ ಗೇಲಿ ಮಾಡಿದ, ಬಳಿಕ ಕಿರುಕುಳ ನೀಡಿದ್ದಾನೆ ಎಂದು ವಿವರಿಸಿದ್ದಾರೆ.

ಮತ್ತಷ್ಟು ಓದಿ: ಮುಂಬೈ ರೈಲಿನಲ್ಲಿ ನೇತಾಡುತ್ತಾ ಯುವಕನ ನೃತ್ಯ; ಮಿಸ್ ಮಾಡದೆ ನೋಡಿ

ಕಿರುಕುಳ ನೀಡಿ ಓಡಿ ಹೋಗಲು ಪ್ರಯತ್ನಿಸಿದ್ದ ಕೂಡಲೇ ಸ್ಥಳೀಯರು ಆತನನ್ನು ಹಿಡಿದಿದ್ದಾರೆ. ಆತ ಇನ್ನೂ ಚಿಕ್ಕವನು ಇದೊಂದು ಬಾರಿ ಕ್ಷಮಿಸುವಂತೆ ಜನರು ಕೇಳಿಕೊಂಡರು, ಸಿಕ್ಕಿಬಿದ್ದ ಬಳಿಕ ಆತ ನಾನು ಸೈಕಲ್​ನಲ್ಲಿ ಸಮತೋಲನ ಕಳೆದುಕೊಂಡು ಬೀಳುಬಂತಾದೆ ಆಗ ಆಕೆಯನ್ನು ಆಕಸ್ಮಿಕವಾಗಿ ತಳ್ಳಿದ್ದೇನೆ ಎಂದು ಆರೋಪಿ ಹೇಳಿದ್ದಾರೆ. ಅವನು ಮಾಡಿದ್ದನ್ನು ಸ್ಪಷ್ಟವಾಗಿ ತೋರಿಸುವ ವೀಡಿಯೊವನ್ನು ನಾನು ಪ್ಲೇ ಮಾಡಿದ ನಂತರವೇ ಜನರು ನನ್ನನ್ನು ನಂಬುತ್ತಾರೆ ಎಂದು ಅವರು ಹೇಳಿದರು.

ಆತ ಇನ್ನೂ ಚಿಕ್ಕವನಾಗಿರುವ ಕಾರಣ ನಾನು ಯಾವುದೇ ಎಫ್​ಐಆರ್ ದಾಖಲಿಸಿಲ್ಲ, ಆತನ ಭವಿಷ್ಯವನ್ನು ಹಾಳು ಮಾಡುವ ಮನಸ್ಸಿಲ್ಲ ಎಂದರು. ಆದರೆ ನಡೆದ ಘಟನೆಯಿಂದ ಇನ್ನೂ ಮಾನಸಿಕವಾಗಿ ವಿಚಲಿತನಾಗಿದ್ದೇನೆ ಎಂದಿದ್ದಾರೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಪುನೀತ್​ ರಾಜ್​ಕುಮಾರ್​ಗೆ ವಿಶೇಷ ಗೌರವ ಸಲ್ಲಿಸಿದ ಆರ್​ಸಿಬಿ
ಪುನೀತ್​ ರಾಜ್​ಕುಮಾರ್​ಗೆ ವಿಶೇಷ ಗೌರವ ಸಲ್ಲಿಸಿದ ಆರ್​ಸಿಬಿ
ಗುರುದ್ವಾರ ರಕಬ್‌ಗಂಜ್‌ನಲ್ಲಿ ಪೂಜೆ ಸಲ್ಲಿಸಿದ ಮೋದಿ, ನ್ಯೂಜಿಲೆಂಡ್ ಪಿಎಂ
ಗುರುದ್ವಾರ ರಕಬ್‌ಗಂಜ್‌ನಲ್ಲಿ ಪೂಜೆ ಸಲ್ಲಿಸಿದ ಮೋದಿ, ನ್ಯೂಜಿಲೆಂಡ್ ಪಿಎಂ
ನೂತನ ನಾಯಕನಿಗಾಗಿ ಫ್ಯಾನ್ಸ್ ಬಳಿ ಕಿಂಗ್ ಕೊಹ್ಲಿ ಮನವಿ
ನೂತನ ನಾಯಕನಿಗಾಗಿ ಫ್ಯಾನ್ಸ್ ಬಳಿ ಕಿಂಗ್ ಕೊಹ್ಲಿ ಮನವಿ
ಬೇರೆಯವರನ್ನು ನಿಂದಿಸುವ ಹಕ್ಕು ಪ್ರದೀಪ್ ಈಶ್ವರ್​ಗಿಲ್ಲ: ಮುನಿಸ್ವಾಮಿ
ಬೇರೆಯವರನ್ನು ನಿಂದಿಸುವ ಹಕ್ಕು ಪ್ರದೀಪ್ ಈಶ್ವರ್​ಗಿಲ್ಲ: ಮುನಿಸ್ವಾಮಿ
ಇಫ್ತಾರ್ ಕೂಟದಲ್ಲಿ ಭಾಗವಹಿಸಿದ ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ
ಇಫ್ತಾರ್ ಕೂಟದಲ್ಲಿ ಭಾಗವಹಿಸಿದ ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ
ಅಮೆರಿಕದ ಗುಪ್ತಚರ ನಿರ್ದೇಶಕಿ ತುಳಸಿ ಗಬ್ಬಾರ್ಡ್​ಗೆ ಗಂಗಾಜಲ ನೀಡಿದ ಮೋದಿ
ಅಮೆರಿಕದ ಗುಪ್ತಚರ ನಿರ್ದೇಶಕಿ ತುಳಸಿ ಗಬ್ಬಾರ್ಡ್​ಗೆ ಗಂಗಾಜಲ ನೀಡಿದ ಮೋದಿ
ಹಂಗಾಮಿ ಸಭಾಧ್ಯಕ್ಷ ಶಿವಲಿಂಗೇಗೌಡರ ಮಾತು ಬೋರ್ಗಲ್ಲ ಮೇಲೆ ಮಳೆ ಸುರಿದಂತೆ!
ಹಂಗಾಮಿ ಸಭಾಧ್ಯಕ್ಷ ಶಿವಲಿಂಗೇಗೌಡರ ಮಾತು ಬೋರ್ಗಲ್ಲ ಮೇಲೆ ಮಳೆ ಸುರಿದಂತೆ!
ಪಿಎಂ ಇಂಟರ್ನ್‌ಶಿಪ್ ಯೋಜನೆ ಆ್ಯಪ್​ಗೆ ನಿರ್ಮಲಾ ಸೀತಾರಾಮನ್ ಚಾಲನೆ
ಪಿಎಂ ಇಂಟರ್ನ್‌ಶಿಪ್ ಯೋಜನೆ ಆ್ಯಪ್​ಗೆ ನಿರ್ಮಲಾ ಸೀತಾರಾಮನ್ ಚಾಲನೆ
ಕಣ್ಣೀರಿಡುತ್ತಲ್ಲೇ ರಾಜ್ಯ ಸರ್ಕಾರಕ್ಕೆ ಜೈನ ಮುನಿ ಎಚ್ಚರಿಕೆ
ಕಣ್ಣೀರಿಡುತ್ತಲ್ಲೇ ರಾಜ್ಯ ಸರ್ಕಾರಕ್ಕೆ ಜೈನ ಮುನಿ ಎಚ್ಚರಿಕೆ
ವೇದಿಕೆಯ ಗಾಂಭೀರ್ಯತೆಯನ್ನು ಶಾಸಕರು ಅರ್ಥಮಾಡಿಕೊಳ್ಳಬೇಕು: ಶಿವಕುಮಾರ್
ವೇದಿಕೆಯ ಗಾಂಭೀರ್ಯತೆಯನ್ನು ಶಾಸಕರು ಅರ್ಥಮಾಡಿಕೊಳ್ಳಬೇಕು: ಶಿವಕುಮಾರ್