AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ವ್ಲಾಗ್ ಮಾಡುವಾಗ ಎದೆ ಸ್ಪರ್ಶಿಸಿ ಓಡಿ ಹೋದ ಬಾಲಕ, ಕಣ್ಣೀರಿಟ್ಟ ಯುವತಿ

ಬೆಂಗಳೂರು ಸುರಕ್ಷಿತವಾಗಿಲ್ಲ ಎಂದು ಮಹಿಳಾ ಇನ್​ಫ್ಲುಯೆನ್ಸರ್​ ಕಣ್ಣೀರು ಹಾಕಿದ್ದಾರೆ. ಅವರು ಬಿಟಿಎಂ ಲೇಔಟ್​ನಲ್ಲಿ ರಸ್ತೆಯಲ್ಲಿ ವ್ಲಾಗ್ ಮಾಡುತ್ತಾ ಹೋಗುತ್ತಿರುವಾಗ ಬಾಲಕನೊಬ್ಬ ಆಕೆಯ ಎದೆಯನ್ನು ಸ್ಪರ್ಶಿಸಿ ಓಡಿ ಹೋಗಿರುವ ಘಟನೆಯನ್ನು ಆಕೆ ವಿವರಿಸಿದ್ದಾಳೆ.

ಬೆಂಗಳೂರು: ವ್ಲಾಗ್ ಮಾಡುವಾಗ ಎದೆ ಸ್ಪರ್ಶಿಸಿ ಓಡಿ ಹೋದ ಬಾಲಕ, ಕಣ್ಣೀರಿಟ್ಟ ಯುವತಿ
ಯುವತಿ
ನಯನಾ ರಾಜೀವ್
|

Updated on: Nov 07, 2024 | 10:24 AM

Share

ಬೆಂಗಳೂರು ಸುರಕ್ಷಿತವಾಗಿಲ್ಲ ಎಂದು ಮಹಿಳಾ ಇನ್​ಫ್ಲುಯೆನ್ಸರ್​ ಕಣ್ಣೀರು ಹಾಕಿದ್ದಾರೆ. ಅವರು ಬಿಟಿಎಂ ಲೇಔಟ್​ನಲ್ಲಿ ರಸ್ತೆಯಲ್ಲಿ ವ್ಲಾಗ್ ಮಾಡುತ್ತಾ ಹೋಗುತ್ತಿರುವಾಗ ಬಾಲಕನೊಬ್ಬ ಆಕೆಯ ಎದೆಯನ್ನು ಸ್ಪರ್ಶಿಸಿ ಓಡಿ ಹೋಗಿರುವ ಘಟನೆಯನ್ನು ಆಕೆ ವಿವರಿಸಿದ್ದಾರೆ.

ನೇಹಾ ಬಿಸ್ವಾಲ್ ಕೆಲಸದಿಂದ ಹಿಂದಿರುಗುತ್ತಿದ್ದಾಗ ಮತ್ತು ವೀಡಿಯೊ ಬ್ಲಾಗ್ ಅನ್ನು ರೆಕಾರ್ಡ್ ಮಾಡುತ್ತಿದ್ದಾಗ ಎದುರು ದಿಕ್ಕಿನಿಂದ ಸೈಕಲ್​ನಲ್ಲಿ ಬಂದ 10 ವರ್ಷದ ಬಾಲಕ ಆಕೆಯ ಎದೆ ಸ್ಪರ್ಶಿಸಿ ಓಡಿ ಹೋಗಿದ್ದಾನೆ ಈ ಘಟನೆ ಕ್ಯಾಮರಾದಲ್ಲಿ ಸೆರೆಯಾಗಿದೆ.

ಇಂಥಾ ಘಟನೆ ನನ್ನ ಜೀವನದಲ್ಲಿ ಎಂದೂ ನಡೆದಿರಲಿಲ್ಲ ಎಂದು ಕಣ್ಣೀರು ಹಾಕಿದ್ದಾರೆ. ನಾನು ನಡೆಯುವಾಗ ವಿಡಿಯೋ ಮಾಡುತ್ತಾ ಹೋಗುತ್ತಿದ್ದೆ, ಆ ಹುಡುಗ ಆರಂಭದಲ್ಲಿ ನಾನು ಹೋಗುತ್ತಿದ್ದ ದಿಕ್ಕಿನಲ್ಲೇ ಹೋಗುತ್ತಿದ್ದ, ನಂತರ ಮುಂದೆ ಹೋದವನು ನನ್ನ ನೋಡಿ ಯೂ-ಟರ್ನ್ ತೆಗೆದುಕೊಂಡು ಬಂದು ನಾನು ಹೇಗೆ ಮಾತನಾಡುತ್ತಿದ್ದೆ ಅದೇ ರೀತಿ ಮಾತನಾಡಿ ಗೇಲಿ ಮಾಡಿದ, ಬಳಿಕ ಕಿರುಕುಳ ನೀಡಿದ್ದಾನೆ ಎಂದು ವಿವರಿಸಿದ್ದಾರೆ.

ಮತ್ತಷ್ಟು ಓದಿ: ಮುಂಬೈ ರೈಲಿನಲ್ಲಿ ನೇತಾಡುತ್ತಾ ಯುವಕನ ನೃತ್ಯ; ಮಿಸ್ ಮಾಡದೆ ನೋಡಿ

ಕಿರುಕುಳ ನೀಡಿ ಓಡಿ ಹೋಗಲು ಪ್ರಯತ್ನಿಸಿದ್ದ ಕೂಡಲೇ ಸ್ಥಳೀಯರು ಆತನನ್ನು ಹಿಡಿದಿದ್ದಾರೆ. ಆತ ಇನ್ನೂ ಚಿಕ್ಕವನು ಇದೊಂದು ಬಾರಿ ಕ್ಷಮಿಸುವಂತೆ ಜನರು ಕೇಳಿಕೊಂಡರು, ಸಿಕ್ಕಿಬಿದ್ದ ಬಳಿಕ ಆತ ನಾನು ಸೈಕಲ್​ನಲ್ಲಿ ಸಮತೋಲನ ಕಳೆದುಕೊಂಡು ಬೀಳುಬಂತಾದೆ ಆಗ ಆಕೆಯನ್ನು ಆಕಸ್ಮಿಕವಾಗಿ ತಳ್ಳಿದ್ದೇನೆ ಎಂದು ಆರೋಪಿ ಹೇಳಿದ್ದಾರೆ. ಅವನು ಮಾಡಿದ್ದನ್ನು ಸ್ಪಷ್ಟವಾಗಿ ತೋರಿಸುವ ವೀಡಿಯೊವನ್ನು ನಾನು ಪ್ಲೇ ಮಾಡಿದ ನಂತರವೇ ಜನರು ನನ್ನನ್ನು ನಂಬುತ್ತಾರೆ ಎಂದು ಅವರು ಹೇಳಿದರು.

ಆತ ಇನ್ನೂ ಚಿಕ್ಕವನಾಗಿರುವ ಕಾರಣ ನಾನು ಯಾವುದೇ ಎಫ್​ಐಆರ್ ದಾಖಲಿಸಿಲ್ಲ, ಆತನ ಭವಿಷ್ಯವನ್ನು ಹಾಳು ಮಾಡುವ ಮನಸ್ಸಿಲ್ಲ ಎಂದರು. ಆದರೆ ನಡೆದ ಘಟನೆಯಿಂದ ಇನ್ನೂ ಮಾನಸಿಕವಾಗಿ ವಿಚಲಿತನಾಗಿದ್ದೇನೆ ಎಂದಿದ್ದಾರೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ