AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ವ್ಲಾಗ್ ಮಾಡುವಾಗ ಎದೆ ಸ್ಪರ್ಶಿಸಿ ಓಡಿ ಹೋದ ಬಾಲಕ, ಕಣ್ಣೀರಿಟ್ಟ ಯುವತಿ

ಬೆಂಗಳೂರು ಸುರಕ್ಷಿತವಾಗಿಲ್ಲ ಎಂದು ಮಹಿಳಾ ಇನ್​ಫ್ಲುಯೆನ್ಸರ್​ ಕಣ್ಣೀರು ಹಾಕಿದ್ದಾರೆ. ಅವರು ಬಿಟಿಎಂ ಲೇಔಟ್​ನಲ್ಲಿ ರಸ್ತೆಯಲ್ಲಿ ವ್ಲಾಗ್ ಮಾಡುತ್ತಾ ಹೋಗುತ್ತಿರುವಾಗ ಬಾಲಕನೊಬ್ಬ ಆಕೆಯ ಎದೆಯನ್ನು ಸ್ಪರ್ಶಿಸಿ ಓಡಿ ಹೋಗಿರುವ ಘಟನೆಯನ್ನು ಆಕೆ ವಿವರಿಸಿದ್ದಾಳೆ.

ಬೆಂಗಳೂರು: ವ್ಲಾಗ್ ಮಾಡುವಾಗ ಎದೆ ಸ್ಪರ್ಶಿಸಿ ಓಡಿ ಹೋದ ಬಾಲಕ, ಕಣ್ಣೀರಿಟ್ಟ ಯುವತಿ
ಯುವತಿ
ನಯನಾ ರಾಜೀವ್
|

Updated on: Nov 07, 2024 | 10:24 AM

Share

ಬೆಂಗಳೂರು ಸುರಕ್ಷಿತವಾಗಿಲ್ಲ ಎಂದು ಮಹಿಳಾ ಇನ್​ಫ್ಲುಯೆನ್ಸರ್​ ಕಣ್ಣೀರು ಹಾಕಿದ್ದಾರೆ. ಅವರು ಬಿಟಿಎಂ ಲೇಔಟ್​ನಲ್ಲಿ ರಸ್ತೆಯಲ್ಲಿ ವ್ಲಾಗ್ ಮಾಡುತ್ತಾ ಹೋಗುತ್ತಿರುವಾಗ ಬಾಲಕನೊಬ್ಬ ಆಕೆಯ ಎದೆಯನ್ನು ಸ್ಪರ್ಶಿಸಿ ಓಡಿ ಹೋಗಿರುವ ಘಟನೆಯನ್ನು ಆಕೆ ವಿವರಿಸಿದ್ದಾರೆ.

ನೇಹಾ ಬಿಸ್ವಾಲ್ ಕೆಲಸದಿಂದ ಹಿಂದಿರುಗುತ್ತಿದ್ದಾಗ ಮತ್ತು ವೀಡಿಯೊ ಬ್ಲಾಗ್ ಅನ್ನು ರೆಕಾರ್ಡ್ ಮಾಡುತ್ತಿದ್ದಾಗ ಎದುರು ದಿಕ್ಕಿನಿಂದ ಸೈಕಲ್​ನಲ್ಲಿ ಬಂದ 10 ವರ್ಷದ ಬಾಲಕ ಆಕೆಯ ಎದೆ ಸ್ಪರ್ಶಿಸಿ ಓಡಿ ಹೋಗಿದ್ದಾನೆ ಈ ಘಟನೆ ಕ್ಯಾಮರಾದಲ್ಲಿ ಸೆರೆಯಾಗಿದೆ.

ಇಂಥಾ ಘಟನೆ ನನ್ನ ಜೀವನದಲ್ಲಿ ಎಂದೂ ನಡೆದಿರಲಿಲ್ಲ ಎಂದು ಕಣ್ಣೀರು ಹಾಕಿದ್ದಾರೆ. ನಾನು ನಡೆಯುವಾಗ ವಿಡಿಯೋ ಮಾಡುತ್ತಾ ಹೋಗುತ್ತಿದ್ದೆ, ಆ ಹುಡುಗ ಆರಂಭದಲ್ಲಿ ನಾನು ಹೋಗುತ್ತಿದ್ದ ದಿಕ್ಕಿನಲ್ಲೇ ಹೋಗುತ್ತಿದ್ದ, ನಂತರ ಮುಂದೆ ಹೋದವನು ನನ್ನ ನೋಡಿ ಯೂ-ಟರ್ನ್ ತೆಗೆದುಕೊಂಡು ಬಂದು ನಾನು ಹೇಗೆ ಮಾತನಾಡುತ್ತಿದ್ದೆ ಅದೇ ರೀತಿ ಮಾತನಾಡಿ ಗೇಲಿ ಮಾಡಿದ, ಬಳಿಕ ಕಿರುಕುಳ ನೀಡಿದ್ದಾನೆ ಎಂದು ವಿವರಿಸಿದ್ದಾರೆ.

ಮತ್ತಷ್ಟು ಓದಿ: ಮುಂಬೈ ರೈಲಿನಲ್ಲಿ ನೇತಾಡುತ್ತಾ ಯುವಕನ ನೃತ್ಯ; ಮಿಸ್ ಮಾಡದೆ ನೋಡಿ

ಕಿರುಕುಳ ನೀಡಿ ಓಡಿ ಹೋಗಲು ಪ್ರಯತ್ನಿಸಿದ್ದ ಕೂಡಲೇ ಸ್ಥಳೀಯರು ಆತನನ್ನು ಹಿಡಿದಿದ್ದಾರೆ. ಆತ ಇನ್ನೂ ಚಿಕ್ಕವನು ಇದೊಂದು ಬಾರಿ ಕ್ಷಮಿಸುವಂತೆ ಜನರು ಕೇಳಿಕೊಂಡರು, ಸಿಕ್ಕಿಬಿದ್ದ ಬಳಿಕ ಆತ ನಾನು ಸೈಕಲ್​ನಲ್ಲಿ ಸಮತೋಲನ ಕಳೆದುಕೊಂಡು ಬೀಳುಬಂತಾದೆ ಆಗ ಆಕೆಯನ್ನು ಆಕಸ್ಮಿಕವಾಗಿ ತಳ್ಳಿದ್ದೇನೆ ಎಂದು ಆರೋಪಿ ಹೇಳಿದ್ದಾರೆ. ಅವನು ಮಾಡಿದ್ದನ್ನು ಸ್ಪಷ್ಟವಾಗಿ ತೋರಿಸುವ ವೀಡಿಯೊವನ್ನು ನಾನು ಪ್ಲೇ ಮಾಡಿದ ನಂತರವೇ ಜನರು ನನ್ನನ್ನು ನಂಬುತ್ತಾರೆ ಎಂದು ಅವರು ಹೇಳಿದರು.

ಆತ ಇನ್ನೂ ಚಿಕ್ಕವನಾಗಿರುವ ಕಾರಣ ನಾನು ಯಾವುದೇ ಎಫ್​ಐಆರ್ ದಾಖಲಿಸಿಲ್ಲ, ಆತನ ಭವಿಷ್ಯವನ್ನು ಹಾಳು ಮಾಡುವ ಮನಸ್ಸಿಲ್ಲ ಎಂದರು. ಆದರೆ ನಡೆದ ಘಟನೆಯಿಂದ ಇನ್ನೂ ಮಾನಸಿಕವಾಗಿ ವಿಚಲಿತನಾಗಿದ್ದೇನೆ ಎಂದಿದ್ದಾರೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್