AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ವ್ಲಾಗ್ ಮಾಡುವಾಗ ಎದೆ ಸ್ಪರ್ಶಿಸಿ ಓಡಿ ಹೋದ ಬಾಲಕ, ಕಣ್ಣೀರಿಟ್ಟ ಯುವತಿ

ಬೆಂಗಳೂರು ಸುರಕ್ಷಿತವಾಗಿಲ್ಲ ಎಂದು ಮಹಿಳಾ ಇನ್​ಫ್ಲುಯೆನ್ಸರ್​ ಕಣ್ಣೀರು ಹಾಕಿದ್ದಾರೆ. ಅವರು ಬಿಟಿಎಂ ಲೇಔಟ್​ನಲ್ಲಿ ರಸ್ತೆಯಲ್ಲಿ ವ್ಲಾಗ್ ಮಾಡುತ್ತಾ ಹೋಗುತ್ತಿರುವಾಗ ಬಾಲಕನೊಬ್ಬ ಆಕೆಯ ಎದೆಯನ್ನು ಸ್ಪರ್ಶಿಸಿ ಓಡಿ ಹೋಗಿರುವ ಘಟನೆಯನ್ನು ಆಕೆ ವಿವರಿಸಿದ್ದಾಳೆ.

ಬೆಂಗಳೂರು: ವ್ಲಾಗ್ ಮಾಡುವಾಗ ಎದೆ ಸ್ಪರ್ಶಿಸಿ ಓಡಿ ಹೋದ ಬಾಲಕ, ಕಣ್ಣೀರಿಟ್ಟ ಯುವತಿ
ಯುವತಿ
ನಯನಾ ರಾಜೀವ್
|

Updated on: Nov 07, 2024 | 10:24 AM

Share

ಬೆಂಗಳೂರು ಸುರಕ್ಷಿತವಾಗಿಲ್ಲ ಎಂದು ಮಹಿಳಾ ಇನ್​ಫ್ಲುಯೆನ್ಸರ್​ ಕಣ್ಣೀರು ಹಾಕಿದ್ದಾರೆ. ಅವರು ಬಿಟಿಎಂ ಲೇಔಟ್​ನಲ್ಲಿ ರಸ್ತೆಯಲ್ಲಿ ವ್ಲಾಗ್ ಮಾಡುತ್ತಾ ಹೋಗುತ್ತಿರುವಾಗ ಬಾಲಕನೊಬ್ಬ ಆಕೆಯ ಎದೆಯನ್ನು ಸ್ಪರ್ಶಿಸಿ ಓಡಿ ಹೋಗಿರುವ ಘಟನೆಯನ್ನು ಆಕೆ ವಿವರಿಸಿದ್ದಾರೆ.

ನೇಹಾ ಬಿಸ್ವಾಲ್ ಕೆಲಸದಿಂದ ಹಿಂದಿರುಗುತ್ತಿದ್ದಾಗ ಮತ್ತು ವೀಡಿಯೊ ಬ್ಲಾಗ್ ಅನ್ನು ರೆಕಾರ್ಡ್ ಮಾಡುತ್ತಿದ್ದಾಗ ಎದುರು ದಿಕ್ಕಿನಿಂದ ಸೈಕಲ್​ನಲ್ಲಿ ಬಂದ 10 ವರ್ಷದ ಬಾಲಕ ಆಕೆಯ ಎದೆ ಸ್ಪರ್ಶಿಸಿ ಓಡಿ ಹೋಗಿದ್ದಾನೆ ಈ ಘಟನೆ ಕ್ಯಾಮರಾದಲ್ಲಿ ಸೆರೆಯಾಗಿದೆ.

ಇಂಥಾ ಘಟನೆ ನನ್ನ ಜೀವನದಲ್ಲಿ ಎಂದೂ ನಡೆದಿರಲಿಲ್ಲ ಎಂದು ಕಣ್ಣೀರು ಹಾಕಿದ್ದಾರೆ. ನಾನು ನಡೆಯುವಾಗ ವಿಡಿಯೋ ಮಾಡುತ್ತಾ ಹೋಗುತ್ತಿದ್ದೆ, ಆ ಹುಡುಗ ಆರಂಭದಲ್ಲಿ ನಾನು ಹೋಗುತ್ತಿದ್ದ ದಿಕ್ಕಿನಲ್ಲೇ ಹೋಗುತ್ತಿದ್ದ, ನಂತರ ಮುಂದೆ ಹೋದವನು ನನ್ನ ನೋಡಿ ಯೂ-ಟರ್ನ್ ತೆಗೆದುಕೊಂಡು ಬಂದು ನಾನು ಹೇಗೆ ಮಾತನಾಡುತ್ತಿದ್ದೆ ಅದೇ ರೀತಿ ಮಾತನಾಡಿ ಗೇಲಿ ಮಾಡಿದ, ಬಳಿಕ ಕಿರುಕುಳ ನೀಡಿದ್ದಾನೆ ಎಂದು ವಿವರಿಸಿದ್ದಾರೆ.

ಮತ್ತಷ್ಟು ಓದಿ: ಮುಂಬೈ ರೈಲಿನಲ್ಲಿ ನೇತಾಡುತ್ತಾ ಯುವಕನ ನೃತ್ಯ; ಮಿಸ್ ಮಾಡದೆ ನೋಡಿ

ಕಿರುಕುಳ ನೀಡಿ ಓಡಿ ಹೋಗಲು ಪ್ರಯತ್ನಿಸಿದ್ದ ಕೂಡಲೇ ಸ್ಥಳೀಯರು ಆತನನ್ನು ಹಿಡಿದಿದ್ದಾರೆ. ಆತ ಇನ್ನೂ ಚಿಕ್ಕವನು ಇದೊಂದು ಬಾರಿ ಕ್ಷಮಿಸುವಂತೆ ಜನರು ಕೇಳಿಕೊಂಡರು, ಸಿಕ್ಕಿಬಿದ್ದ ಬಳಿಕ ಆತ ನಾನು ಸೈಕಲ್​ನಲ್ಲಿ ಸಮತೋಲನ ಕಳೆದುಕೊಂಡು ಬೀಳುಬಂತಾದೆ ಆಗ ಆಕೆಯನ್ನು ಆಕಸ್ಮಿಕವಾಗಿ ತಳ್ಳಿದ್ದೇನೆ ಎಂದು ಆರೋಪಿ ಹೇಳಿದ್ದಾರೆ. ಅವನು ಮಾಡಿದ್ದನ್ನು ಸ್ಪಷ್ಟವಾಗಿ ತೋರಿಸುವ ವೀಡಿಯೊವನ್ನು ನಾನು ಪ್ಲೇ ಮಾಡಿದ ನಂತರವೇ ಜನರು ನನ್ನನ್ನು ನಂಬುತ್ತಾರೆ ಎಂದು ಅವರು ಹೇಳಿದರು.

ಆತ ಇನ್ನೂ ಚಿಕ್ಕವನಾಗಿರುವ ಕಾರಣ ನಾನು ಯಾವುದೇ ಎಫ್​ಐಆರ್ ದಾಖಲಿಸಿಲ್ಲ, ಆತನ ಭವಿಷ್ಯವನ್ನು ಹಾಳು ಮಾಡುವ ಮನಸ್ಸಿಲ್ಲ ಎಂದರು. ಆದರೆ ನಡೆದ ಘಟನೆಯಿಂದ ಇನ್ನೂ ಮಾನಸಿಕವಾಗಿ ವಿಚಲಿತನಾಗಿದ್ದೇನೆ ಎಂದಿದ್ದಾರೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ನಯನಾ ರಾಜೀವ್
ನಯನಾ ರಾಜೀವ್

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ಖಾಸಗಿ ಜೆಟ್​​ನಲ್ಲಿ ಕುಟುಂಬದ ಜೊತೆ ಕ್ರಿಕೆಟ್ ಆಡಿದ ಸಚಿನ್ ತೆಂಡೂಲ್ಕರ್
ಖಾಸಗಿ ಜೆಟ್​​ನಲ್ಲಿ ಕುಟುಂಬದ ಜೊತೆ ಕ್ರಿಕೆಟ್ ಆಡಿದ ಸಚಿನ್ ತೆಂಡೂಲ್ಕರ್
ರಾಷ್ಟ್ರಪತಿ, ಉಪರಾಷ್ಟ್ರಪತಿಗಳನ್ನು ಭೇಟಿಯಾದ ಸಿಎಂ ಡಿಕೆಶಿ
ರಾಷ್ಟ್ರಪತಿ, ಉಪರಾಷ್ಟ್ರಪತಿಗಳನ್ನು ಭೇಟಿಯಾದ ಸಿಎಂ ಡಿಕೆಶಿ
ಪ್ರಕಾಶ್ ರಾಜ್ ವಿರುದ್ಧ ಚಿನ್ನಯ್ಯ ಆರೋಪಕ್ಕೆ ಗೃಹ ಸಚಿವರು ಹೇಳಿದ್ದೇನು ನೋಡಿ
ಪ್ರಕಾಶ್ ರಾಜ್ ವಿರುದ್ಧ ಚಿನ್ನಯ್ಯ ಆರೋಪಕ್ಕೆ ಗೃಹ ಸಚಿವರು ಹೇಳಿದ್ದೇನು ನೋಡಿ
ಊಟದಲ್ಲಿ ಹುಳ ಕಂಡು ಹೌಹಾರಿದ ಯುವತಿಯರು: ಪಿಜಿ ವಿರುದ್ಧ ಪ್ರತಿಭಟನೆ
ಊಟದಲ್ಲಿ ಹುಳ ಕಂಡು ಹೌಹಾರಿದ ಯುವತಿಯರು: ಪಿಜಿ ವಿರುದ್ಧ ಪ್ರತಿಭಟನೆ
ಕೊಲ್ಲೂರಿಗೆ ತಮಿಳುನಾಡು ಸಿಎಂ: ಅರ್ಚಕ ನಿತ್ಯಾನಂದ ಅಡಿಗ ಮಹತ್ವದ ಮಾಹಿತಿ
ಕೊಲ್ಲೂರಿಗೆ ತಮಿಳುನಾಡು ಸಿಎಂ: ಅರ್ಚಕ ನಿತ್ಯಾನಂದ ಅಡಿಗ ಮಹತ್ವದ ಮಾಹಿತಿ
ಕಬಿನಿ ಡ್ಯಾಂ ನೀರಿನಮಟ್ಟ ಭಾರೀ ಕುಸಿತ: ಭೀಕರ ಬರಗಾಲದ ಮುನ್ಸೂಚನೆಯಾ?
ಕಬಿನಿ ಡ್ಯಾಂ ನೀರಿನಮಟ್ಟ ಭಾರೀ ಕುಸಿತ: ಭೀಕರ ಬರಗಾಲದ ಮುನ್ಸೂಚನೆಯಾ?
ತುಂಗಭದ್ರಾ ಒಡಲು ಖಾಲಿ ಖಾಲಿ! ಜಲಾಶಯಲ್ಲಿ ಕೇವಲ 9 TMC ನೀರು ಸಂಗ್ರಹ
ತುಂಗಭದ್ರಾ ಒಡಲು ಖಾಲಿ ಖಾಲಿ! ಜಲಾಶಯಲ್ಲಿ ಕೇವಲ 9 TMC ನೀರು ಸಂಗ್ರಹ
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!