AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Love U ಚಿನ್ನಿ: ಲವ್ ಮಾಡುವಂತೆ ಇನ್ಸ್​ಪೆಕ್ಟರ್ ಹಿಂದೆ ಬಿದ್ದ ಕಾಂಗ್ರೆಸ್ ಕಾರ್ಯಕರ್ತೆ, ಆಮೇಲೇನಾಯ್ತು?

ಬೆಂಗಳೂರಿನ ರಾಮಮೂರ್ತಿ ನಗರ ಪೊಲೀಸ್ ಠಾಣೆಯ ಇನ್ಸ್​ಪೆಪೆಕ್ಟರ್‌ಗೆ ಮಹಿಳೆಯೊಬ್ಬರ ಅತಿರೇಕದ ಪ್ರೇಮ ಕಾಟ ದೊಡ್ಡ ತಲೆನೋವಾಗಿದೆ. ‘‘Chinni Love u...’’ ಎಂದು ಬೆದರಿಕೆ ಹಾಕಿದ್ದಲ್ಲದೆ, ಆತ್ಮಹತ್ಯೆ ಬೆದರಿಕೆ ಹಾಗೂ ರಕ್ತದಲ್ಲಿ ಪತ್ರ ಬರೆದು ಕಳುಹಿಸಿದ್ದಾಳೆ. ಕರ್ತವ್ಯಕ್ಕೆ ಅಡ್ಡಿಪಡಿಸಿದ ಮತ್ತು ಆತ್ಮಹತ್ಯೆ ಬೆದರಿಕೆಯ ಆರೋಪದಡಿ ಕೊನೆಗೆ ಇನ್ಸ್​​ಪೆಕ್ಟರ್ ಎಫ್‌ಐಆರ್ ದಾಖಲಿಸಿದ್ದಾರೆ.

Love U ಚಿನ್ನಿ: ಲವ್ ಮಾಡುವಂತೆ ಇನ್ಸ್​ಪೆಕ್ಟರ್ ಹಿಂದೆ ಬಿದ್ದ ಕಾಂಗ್ರೆಸ್ ಕಾರ್ಯಕರ್ತೆ, ಆಮೇಲೇನಾಯ್ತು?
ಸಾಂದರ್ಭಿಕ ಚಿತ್ರ
ಗಣಪತಿ ಶರ್ಮಾ
|

Updated on:Dec 17, 2025 | 9:51 AM

Share

ಬೆಂಗಳೂರು, ಡಿಸೆಂಬರ್ 17: ಬೆಂಗಳೂರಿನ (Bangalore) ರಾಮಮೂರ್ತಿ ನಗರ ಪೊಲೀಸ್ ಠಾಣೆಯ ಇನ್ಸ್​ಪೆಕ್ಟರ್ ಸತೀಶ್ ಅವರಿಗೆ ಮಹಿಳೆಯೊಬ್ಬರ ಅತಿರೇಕದ ಪ್ರೇಮ ಕಾಟ ದೊಡ್ಡ ತಲೆನೋವಾಗಿ ಪರಿಣಮಿಸಿದೆ. ‘‘Chinni Love u… u must love me’’ ಎಂದು ಪ್ರೀತಿ ನಿವೇದನೆ ಮಾಡುತ್ತಾ ಮಹಿಳೆ ನಿರಂತರವಾಗಿ ಇನ್ಸ್​ಪೆಕ್ಟರ್ ಹಿಂದೆ ಬಿದ್ದಿದ್ದಳು ಎಂಬ ಆರೋಪ ಕೇಳಿಬಂದಿದೆ. ಪ್ರೀತಿಸದಿದ್ದರೆ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಕೆ ಹಾಕುತ್ತಿದ್ದ ಮಹಿಳೆ, ತಾನು ಕಾಂಗ್ರೆಸ್ ಕಾರ್ಯಕರ್ತೆ. ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಗಳು ತನಗೆ ಪರಿಚಯ ಎಂದು ಹೇಳಿಕೊಂಡಿದ್ದಾಳೆ. ಮೋಟಮ್ಮ ಹಾಗೂ ಲಕ್ಷ್ಮಿ ಹೆಬ್ಬಾಳ್ಕರ್ ಅವರೊಂದಿಗೆ ಇರುವ ಫೋಟೋಗಳನ್ನು ಕಳುಹಿಸಿ, ಪ್ರೀತಿಸಲೇಬೇಕು ಎಂದು ಇನ್ಸ್​ಪೆಕ್ಟರ್ ಮೇಲೆ ಒತ್ತಡ ಹೇರಿದ್ದಾಳೆ ಎಂದು ದೂರಲಾಗಿದೆ.

ಪೊಲೀಸ್ ಠಾಣೆಗೇ ಕಜ್ಜಾಯ ಡಬ್ಬಿ, ಹೂಗುಚ್ಛ!

ಮಹಿಳೆಯ ಕಾಟ ಎಷ್ಟರ ಮಟ್ಟಿಗೆ ಹೋಗಿತ್ತು ಎಂದರೆ, ಇನ್ಸ್​​ಪೆಕ್ಟರ್ ಠಾಣೆಯಲ್ಲಿ ಇಲ್ಲದ ವೇಳೆ ಕಜ್ಜಾಯದ ಡಬ್ಬಿ, ಹೂಗುಚ್ಛ ತಂದು ಠಾಣೆಯಲ್ಲೇ ಇಟ್ಟಿದ್ದಾಳೆ ಎಂದು ಪೊಲೀಸರು ಹೇಳಿದ್ದಾರೆ. ಒಂದೇ ಅಲ್ಲ, ಬರೋಬ್ಬರಿ 11 ವಿಭಿನ್ನ ಮೊಬೈಲ್ ಸಂಖ್ಯೆಗಳ ಮೂಲಕ ಇನ್ಸ್​​ಪೆಕ್ಟರ್‌ಗೆ ಕರೆ ಮಾಡಿ ಪ್ರೀತಿ ನಿವೇದನೆ ಮಾಡುತ್ತಿದ್ದಳು. ಈ ಕಾರಣಕ್ಕೆ ಇನ್ಸ್​​ಪೆಕ್ಟರ್‌ ಎಲ್ಲಾ 11 ಸಂಖ್ಯೆಗಳನ್ನೂ ಬ್ಲಾಕ್ ಮಾಡಿದ್ದರು.

ರಕ್ತದಲ್ಲಿ ಪತ್ರ, ಆತ್ಮಹತ್ಯೆಯ ಬೆದರಿಕೆ!

ಅಷ್ಟಕ್ಕೂ ನಿಲ್ಲದ ಮಹಿಳೆ, ಲವ್ ಲೆಟರ್ ಜೊತೆಗೆ ‘Nexito Plus’ ಎಂಬ ಮಾತ್ರೆಯನ್ನು ಕೂಡ ಕಳುಹಿಸಿದ್ದಳು. ‘ನನ್ನ ಪ್ರೀತಿಯನ್ನು ನೀವು ಒಪ್ಪಿಕೊಳ್ಳುತ್ತಿಲ್ಲ, ನಿಮಗೆ ತೊಂದರೆ ಕೊಡಲು ನನಗೆ ಇಷ್ಟವಿಲ್ಲ. ನಾನು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ, ನನ್ನ ಸಾವಿಗೆ ನೀವೇ ಕಾರಣ’ ಎಂದು ಬರೆದು, ಹೃದಯದ ಚಿತ್ರವನ್ನೂ ಬಿಡಿಸಿ, ‘‘Chinni love u, u love m’’ ಎಂದು ರಕ್ತದಲ್ಲಿ ಬರೆದ ಪತ್ರವನ್ನು ಪೋಸ್ಟ್ ಮೂಲಕ ಠಾಣೆಗೆ ಕಳುಹಿಸಿದ್ದಾಳೆ ಎಂಬುದು ಮತ್ತೊಂದು ಗಂಭೀರ ಆರೋಪವಾಗಿದೆ.

ಈ ಮಧ್ಯೆ, ಮಹಿಳೆ ದೂರು ನೀಡಲು ಬಂದಿದ್ದು ಅದನ್ನು ಸ್ವೀಕರಿಸುವಂತೆ ಗೃಹ ಸಚಿವರ ಕಚೇರಿಯಿಂದಲೂ ಕರೆ ಬಂದಿತ್ತು ಎನ್ನಲಾಗಿದೆ. ಆದರೆ, ಮಹಿಳೆ ಯಾವುದೇ ಅಧಿಕೃತ ದೂರು ನೀಡಿಲ್ಲ ಎಂದು ಇನ್​ಸ್ಪೆಕ್ಟರ್ ಸ್ಪಷ್ಟಪಡಿಸಿದ್ದರು.

ಪ್ರೀತಿಯ ಕಾಟ ತಾಳಲಾರದೆ ‘ಕೈ’ ಕಾರ್ಯಕರ್ತೆ ವಿರುದ್ಧ ಎಫ್​ಐಆರ್

ಕೊನೆಗೆ ಮಹಿಳೆಯ ನಿರಂತರ ಕಾಟದಿಂದ ಬೇಸತ್ತ ಇನ್ಸ್​ಪೆಕ್ಟರ್ ಸತೀಶ್ ಕಾನೂನು ಕ್ರಮದ ಮೊರೆ ಹೋಗಿದ್ದು, ಕರ್ತವ್ಯಕ್ಕೆ ಅಡ್ಡಿಪಡಿಸಿದ ಹಾಗೂ ಆತ್ಮಹತ್ಯೆ ಬೆದರಿಕೆ ಆರೋಪದಡಿ ರಾಮಮೂರ್ತಿ ನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಿದ್ದಾರೆ.

ಇದನ್ನೂ ಓದಿ: ಯುವತಿ ಮೇಲೆ ಪೊಲೀಸರಿಂದ ಹಲ್ಲೆ ಆರೋಪ: ಉಡುಪಿಯಲ್ಲಿ ಸಿಡಿದೆದ್ದ ಬಿಲ್ಲವ ಸಮುದಾಯ, ಏನಿದು ಕೇಸ್?

ಪ್ರಕರಣ ಇದೀಗ ಪೊಲೀಸ್ ತನಿಖೆಯಲ್ಲಿದ್ದು, ಮಹಿಳೆಯ ವರ್ತನೆಯ ಹಿಂದಿನ ನಿಜಾಂಶಗಳನ್ನು ಅಧಿಕಾರಿಗಳು ಪರಿಶೀಲಿಸುತ್ತಿದ್ದಾರೆ.

ವರದಿ: ವಿಕಾಸ್, ಟಿವಿ9 ಬೆಂಗಳೂರು

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:35 am, Wed, 17 December 25

Follow Us
ಹನೂರು ಪ್ರಕರಣ: ಗೃಹ ಪ್ರವೇಶದ ಸಂಭ್ರಮ ತುಂಬಿರಬೇಕಿದ್ದ ಮನೆಯಲ್ಲೀಗ ಸೂತಕ!
ಹನೂರು ಪ್ರಕರಣ: ಗೃಹ ಪ್ರವೇಶದ ಸಂಭ್ರಮ ತುಂಬಿರಬೇಕಿದ್ದ ಮನೆಯಲ್ಲೀಗ ಸೂತಕ!
ನಿಮ್ಮ ಕನಸಿನ ಮನೆ ಅಥವಾ ಆಸ್ತಿಯನ್ನು ಖರೀದಿಸುವ ಸುವರ್ಣಾವಕಾಶ ಈಗ ನಿಮ್ಮದು
ನಿಮ್ಮ ಕನಸಿನ ಮನೆ ಅಥವಾ ಆಸ್ತಿಯನ್ನು ಖರೀದಿಸುವ ಸುವರ್ಣಾವಕಾಶ ಈಗ ನಿಮ್ಮದು
ಬೆಂಗಳೂರಿನಲ್ಲಿ ಕಾರಿನಲ್ಲಿ ಸಾಗಿಸುತ್ತಿದ್ದ 9 ಕೋಟಿ ರೂ. ನಗದು ಜಪ್ತಿ
ಬೆಂಗಳೂರಿನಲ್ಲಿ ಕಾರಿನಲ್ಲಿ ಸಾಗಿಸುತ್ತಿದ್ದ 9 ಕೋಟಿ ರೂ. ನಗದು ಜಪ್ತಿ
ಶ್ರೀರಂಗಪಟ್ಟಣದ ಚಾಮುಂಡೇಶ್ವರಿಗೆ 3 ಲಕ್ಷ ರೂಪಾಯಿ ನೋಟುಗಳ ವಿಶೇಷ ಅಲಂಕಾರ
ಶ್ರೀರಂಗಪಟ್ಟಣದ ಚಾಮುಂಡೇಶ್ವರಿಗೆ 3 ಲಕ್ಷ ರೂಪಾಯಿ ನೋಟುಗಳ ವಿಶೇಷ ಅಲಂಕಾರ
ಹುಬ್ಬಳ್ಳಿ ಲಕ್ಷ್ಮೀ ದೇವಸ್ಥಾನದಲ್ಲಿ ಭಕ್ತರ ದಂಡು, ವಿಶೇಷ ಅಲಂಕಾರ
ಹುಬ್ಬಳ್ಳಿ ಲಕ್ಷ್ಮೀ ದೇವಸ್ಥಾನದಲ್ಲಿ ಭಕ್ತರ ದಂಡು, ವಿಶೇಷ ಅಲಂಕಾರ
ಶೇಷಾದ್ರಿಪುರಂ ಮಹಾಲಕ್ಷ್ಮೀ ದೇವಾಲಯದಲ್ಲಿ ಸಡಗರದ ಪೂಜೆ
ಶೇಷಾದ್ರಿಪುರಂ ಮಹಾಲಕ್ಷ್ಮೀ ದೇವಾಲಯದಲ್ಲಿ ಸಡಗರದ ಪೂಜೆ
ಗೊರವನಹಳ್ಳಿ ಮಹಾಲಕ್ಷ್ಮೀ ದೇವಾಲಯದಲ್ಲಿ ವರಮಹಾಲಕ್ಷ್ಮೀ ಹಬ್ಬದ ಸಂಭ್ರಮ
ಗೊರವನಹಳ್ಳಿ ಮಹಾಲಕ್ಷ್ಮೀ ದೇವಾಲಯದಲ್ಲಿ ವರಮಹಾಲಕ್ಷ್ಮೀ ಹಬ್ಬದ ಸಂಭ್ರಮ
ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ; ಜನರಿಂದ ತುಂಬಿ ಹೋಯ್ತು ಕೆ.ಆರ್ ಮಾರ್ಕೆಟ್!
ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ; ಜನರಿಂದ ತುಂಬಿ ಹೋಯ್ತು ಕೆ.ಆರ್ ಮಾರ್ಕೆಟ್!
ಶಿಗ್ಗಾಂವಿ ದೇವಾಲಯದ ಆವರಣದಲ್ಲಿ ಮೂತ್ರ ವಿಸರ್ಜನೆ ಮಾಡಿದ ಯುವಕ
ಶಿಗ್ಗಾಂವಿ ದೇವಾಲಯದ ಆವರಣದಲ್ಲಿ ಮೂತ್ರ ವಿಸರ್ಜನೆ ಮಾಡಿದ ಯುವಕ
ಇಂದು ವರಮಹಾಲಕ್ಷ್ಮೀ ಹಬ್ಬದ ಶುಭದಿನ
ಇಂದು ವರಮಹಾಲಕ್ಷ್ಮೀ ಹಬ್ಬದ ಶುಭದಿನ