AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಂತ್ರಜ್ಞಾನ, ಆವಿಷ್ಕಾರಗಳಿಗೆ ಬೆಂಗಳೂರು ಬೇಕು, ಆದ್ರೆ ಮೂಲ ಸೌಕರ್ಯ ಕೊಡುವಲ್ಲಿ ಸರ್ಕಾರ ಸೋತಿದೆ: ಅಶ್ವತ್ಥನಾರಾಯಣ

ತಂತ್ರಜ್ಞಾನ(Technology) ಮತ್ತು ಆವಿಷ್ಕಾರಗಳಿಗೆ ಎಲ್ಲರಿಗೂ ಬೆಂಗಳೂರು ಬೇಕು, ಆದರೆ ಮೂಲ ಸೌಕರ್ಯ ಒದಗಿಸುವಲ್ಲಿ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಸಿಎನ್ ಅಶ್ವತ್ಥನಾರಾಯಣ(CN Ashwath Narayan) ಹೇಳಿದ್ದಾರೆ. ಉದ್ಯಮಿ ಮೋಹನ್​ದಾಸ್ ಪೈ ಎಕ್ಸ್​ನಲ್ಲಿ ಮಾಡಿರುವ ಪೋಸ್ಟ್​ ಕುರಿತು ಮಾತನಾಡಿದ ಅವರು, ಕರ್ನಾಟಕದಲ್ಲಿ ಭ್ರಷ್ಟಾಚಾರ ಸಹಿಸಲಾಗದ ಮಟ್ಟಿಗಿದೆ. ಬಿಲ್ಡರ್​ಗಳು ಇಂದು ಕಟ್ಟಡಗಳನ್ನು ಕಟ್ಟಲು ಸಿದ್ಧರಿಲ್ಲ. ಹೀಗಾಗಿ ಎಲ್ಲರಿಗೂ ಹೈದರಾಬಾದ್ ಆಕರ್ಷಣೀಯವಾಗಿದೆ ಎಂದರು.

ತಂತ್ರಜ್ಞಾನ, ಆವಿಷ್ಕಾರಗಳಿಗೆ ಬೆಂಗಳೂರು ಬೇಕು, ಆದ್ರೆ ಮೂಲ ಸೌಕರ್ಯ ಕೊಡುವಲ್ಲಿ ಸರ್ಕಾರ ಸೋತಿದೆ: ಅಶ್ವತ್ಥನಾರಾಯಣ
ಅಶ್ವತ್ಥನಾರಾಯಣ
Follow us
ಕಿರಣ್​ ಹನಿಯಡ್ಕ
| Updated By: ನಯನಾ ರಾಜೀವ್

Updated on: Nov 29, 2023 | 12:41 PM

ತಂತ್ರಜ್ಞಾನ(Technology) ಮತ್ತು ಆವಿಷ್ಕಾರಗಳಿಗೆ ಎಲ್ಲರಿಗೂ ಬೆಂಗಳೂರು ಬೇಕು, ಆದರೆ ಮೂಲ ಸೌಕರ್ಯ ಒದಗಿಸುವಲ್ಲಿ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಸಿಎನ್ ಅಶ್ವತ್ಥನಾರಾಯಣ(CN Ashwath Narayan) ಹೇಳಿದ್ದಾರೆ. ಉದ್ಯಮಿ ಮೋಹನ್​ದಾಸ್ ಪೈ ಎಕ್ಸ್​ನಲ್ಲಿ ಮಾಡಿರುವ ಪೋಸ್ಟ್​ ಕುರಿತು ಮಾತನಾಡಿದ ಅವರು, ಕರ್ನಾಟಕದಲ್ಲಿ ಭ್ರಷ್ಟಾಚಾರ ಸಹಿಸಲಾಗದ ಮಟ್ಟಿಗಿದೆ. ಬಿಲ್ಡರ್​ಗಳು ಇಂದು ಕಟ್ಟಡಗಳನ್ನು ಕಟ್ಟಲು ಸಿದ್ಧರಿಲ್ಲ. ಹೀಗಾಗಿ ಎಲ್ಲರಿಗೂ ಹೈದರಾಬಾದ್ ಆಕರ್ಷಣೀಯವಾಗಿದೆ ಎಂದರು.

ವ್ಯಾಪಾರಕ್ಕೆ, ವ್ಯವಹಾರಕ್ಕೆ ಹೈದರಾಬಾದ್ ಉತ್ತಮ ಸ್ಥಳವೆಂಬಂತಾಗಿದೆ. ಬೆಂಗಳೂರಿನಲ್ಲಿ 100 ಸ್ಕ್ವೇರ್​ಫೀಟ್​ ನಿರ್ಮಾಣವಾದರೆ ಹೈದರಾಬಾದ್​ನಲ್ಲಿ 1000 ಸ್ಕ್ವೇರ್​ಫೀಟ್​ ನಿರ್ಮಾಣವಾಗುತ್ತಿದೆ.

ಇಲ್ಲಿ ಒಂದು ಪಟ್ಟು ಕಟ್ಟಡ ನಿರ್ಮಾಣವಾದರೆ ಅಲ್ಲಿ ಹತ್ತು ಪಟ್ಟು ಕಟ್ಟಡಗಳು ಏಳುತ್ತಿವೆ, ಸರ್ಕಾರದ ನಿರ್ಲಕ್ಷ್ಯದಿಂದ ಬೆಂಗಳೂರು ನಗರಕ್ಕೆ ಕಂಟಕವಾಗಿದೆ.

ಮತ್ತಷ್ಟು ಓದಿ: Bengaluru: ಅತ್ಯುತ್ತಮ ಜಾಗತಿಕ ತಂತ್ರಜ್ಞಾನ ಆವಿಷ್ಕಾರ ಕೇಂದ್ರಗಳಲ್ಲಿ ಬೆಂಗಳೂರಿಗೆ ಎಂಟನೇ ಸ್ಥಾನದ ಗರಿ

ಏನೇ ಮಾಡಿದರೂ ಇವರೆಲ್ಲಾ ಬೆಂಗಳೂರಿಗೆ ಬಂದೇ ಬರುತ್ತಾರೆ ಎಂಬ ಮನಸ್ಥಿತಿಯನ್ನು ಬಿಡುಬೇಕು. ಸಿದ್ದರಾಮಯ್ಯ ಹಾಗೂ ಅವರ ಸಚಿವ ಸಂಪುಟ ಎಚ್ಚೆತ್ತುಕೊಳ್ಳಬೇಕು, ಉದ್ಯಮಿ ಮೋಹನ್​ ದಾಸ್ ಪೈ ಅವರ ಅಭಿಪ್ರಾಯ ಸೂಕ್ತವಾಗಿದೆ. ದೇಶಕ್ಕೆ ಭರವಸೆದಾಯಕವಾದ ನಗರ ಬೆಂಗಳೂರು, ಇದನ್ನು ಉಳಿಸುವ ಕೆಲಸವನ್ನು ಸರ್ಕಾರ ಮಾಡಬೇಕು ಎಂದು ಅಶ್ವತ್ಥನಾರಾಯಣ ಹೇಳಿದ್ದಾರೆ.

ಮೋಹನ್​ದಾಸ್ ಪೈ ಎಕ್ಸ್ ಪೋಸ್ಟ್​ ಬೆಂಗಳೂರಿನ ಐಟಿ ಸ್ಥಾನಮಾನವನ್ನು ಹೈದರಾಬಾದ್ ಸಿಂಹಾಸನದಿಂದ ಕೆಳಗಿಳಿಸುತ್ತಿದೆ. ಕಳೆದ 10 ವರ್ಷಗಳಿಂದ ಬೆಂಗಳೂರನ್ನು ಕಡೆಗಾಣಿಸಲಾಗುತ್ತಿದೆ, ನಗರವನ್ನು ಸುಧಾರಿಸಲು ಮುಂದಾದರೂ ಹೆಚ್ಚಿನ ಆಸಕ್ತಿಯನ್ನು ಸರ್ಕಾರ ತೋರಿಸಲಿ ಎನ್ನುವುದು ನನ್ನ ಆಶಾಭಾವನೆ ಎಂದು ಹೇಳಿದ್ದಾರೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ದೃಷ್ಟಿಹೀನ ಮಕ್ಕಳು ಹುಟ್ಟುಹಬ್ಬದ ಶುಭಾಶಯ ಕೋರಿದಾಗ ಕಣ್ಣೀರಿಟ್ಟ ರಾಷ್ಟ್ರಪತಿ
ದೃಷ್ಟಿಹೀನ ಮಕ್ಕಳು ಹುಟ್ಟುಹಬ್ಬದ ಶುಭಾಶಯ ಕೋರಿದಾಗ ಕಣ್ಣೀರಿಟ್ಟ ರಾಷ್ಟ್ರಪತಿ
‘ಪಪ್ಪಿ’ ಸಿನಿಮಾಗೆ 50 ದಿನದ ಸಂಭ್ರಮ; ವೇದಿಕೆಯಲ್ಲಿ ಬಾಲ ನಟರ ಡೈಲಾಗ್
‘ಪಪ್ಪಿ’ ಸಿನಿಮಾಗೆ 50 ದಿನದ ಸಂಭ್ರಮ; ವೇದಿಕೆಯಲ್ಲಿ ಬಾಲ ನಟರ ಡೈಲಾಗ್
ಸಿಎಂ ಮತ್ತು ಡಿಸಿಎಂ ಜೊತೆ ಹಲವಾರು ಸಚಿವರು ನಾಳೆ ತುಮಕೂರು ಆಗಮನ
ಸಿಎಂ ಮತ್ತು ಡಿಸಿಎಂ ಜೊತೆ ಹಲವಾರು ಸಚಿವರು ನಾಳೆ ತುಮಕೂರು ಆಗಮನ
ಬೆನ್ನು ನೋವಿಗೆ ಕಾರಣವೇನು? ಯೋಗದ ಮೂಲಕ ಪರಿಹರಿಸಿಕೊಳ್ಳುವುದು ಹೇಗೆ?
ಬೆನ್ನು ನೋವಿಗೆ ಕಾರಣವೇನು? ಯೋಗದ ಮೂಲಕ ಪರಿಹರಿಸಿಕೊಳ್ಳುವುದು ಹೇಗೆ?
ಐದು ದಿನಗಳ ಕಾಲ ಸುಟ್ಟ ಗಾಯಗಳೊಂದಿಗೆ ಜೀವನ್ಮರಣ ಹೋರಾಟ ನಡೆಸಿದ ಬಾಲಕ
ಐದು ದಿನಗಳ ಕಾಲ ಸುಟ್ಟ ಗಾಯಗಳೊಂದಿಗೆ ಜೀವನ್ಮರಣ ಹೋರಾಟ ನಡೆಸಿದ ಬಾಲಕ
ವಿದ್ಯುತ್ ಚಿತಾಗಾರದ ಕರೆಂಟ್ ಬಿಲ್ ಬಾಕಿ: ಬಡವಾಯ್ತೇ ಬಿಟಿಡಿಎ
ವಿದ್ಯುತ್ ಚಿತಾಗಾರದ ಕರೆಂಟ್ ಬಿಲ್ ಬಾಕಿ: ಬಡವಾಯ್ತೇ ಬಿಟಿಡಿಎ
ದಿನಕ್ಕೆ 10 ಗಂಟೆ ಕೆಲಸದ ಅವಧಿ ಬಗ್ಗೆ ಸಚಿವ ಸಂತೋಷ್ ಲಾಡ್ ಹೇಳಿದ್ದಿಷ್ಟು!
ದಿನಕ್ಕೆ 10 ಗಂಟೆ ಕೆಲಸದ ಅವಧಿ ಬಗ್ಗೆ ಸಚಿವ ಸಂತೋಷ್ ಲಾಡ್ ಹೇಳಿದ್ದಿಷ್ಟು!
ತನ್ನ ಸಿಗ್ನೇಚರ್ ಸ್ಟೆಪ್​ ಹಾಕುತ್ತಾ ಕುಣಿದು ರಂಜಿಸಿದ ಲೆಜೆಂಡರಿ ಸ್ಟಾರ್
ತನ್ನ ಸಿಗ್ನೇಚರ್ ಸ್ಟೆಪ್​ ಹಾಕುತ್ತಾ ಕುಣಿದು ರಂಜಿಸಿದ ಲೆಜೆಂಡರಿ ಸ್ಟಾರ್
ಇಲ್ಲಿಂದ ಮೇಲೆತ್ತಿ ಎಂಬಂತೆ ಅಸಾಹಯಕತೆಯಿಂದ ಜನರತ್ತ ನೋಡುತ್ತಿರುವ ನಾಯಿ
ಇಲ್ಲಿಂದ ಮೇಲೆತ್ತಿ ಎಂಬಂತೆ ಅಸಾಹಯಕತೆಯಿಂದ ಜನರತ್ತ ನೋಡುತ್ತಿರುವ ನಾಯಿ
ಹಿಮಾಚಲ ಪ್ರದೇಶದಲ್ಲಿ ಭಾರೀ ಮಳೆಯಿಂದ ಭೂಕುಸಿತ; ಹಲವು ರಸ್ತೆಗಳು ಬಂದ್
ಹಿಮಾಚಲ ಪ್ರದೇಶದಲ್ಲಿ ಭಾರೀ ಮಳೆಯಿಂದ ಭೂಕುಸಿತ; ಹಲವು ರಸ್ತೆಗಳು ಬಂದ್