AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಬೆಂಗಳೂರು ಸದ್ದಿಲ್ಲದೆ ನಮ್ಮ ಉಳಿತಾಯವನ್ನು ತಿನ್ನುತ್ತಿದೆ’: ಸ್ಟಾರ್ಟ್-ಅಪ್​ ಉದ್ಯಮಿಯ ಪೋಸ್ಟ್ ವೈರಲ್

ಕರ್ನಾಟಕದಲ್ಲಿ ಹಾಲು, ವಿದ್ಯುತ್, ಪೆಟ್ರೋಲ್ ಮತ್ತು ಡಿಸೇಲ್​ ಬೆಲೆ ಏರಿಕೆಯಾಗಿದೆ. ಇದರಿಂದ ಜನರು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ. ಓರ್ವ ಸ್ಟಾರ್ಟ್‌ಅಪ್ ಉದ್ಯಮಿ ಈ ಬಗ್ಗೆ ಲಿಂಕ್ಡ್‌ಇನ್​ನಲ್ಲಿ ಪೋಸ್ಟ್‌ ಹಾಕಿದ್ದು, ಸಾಕಷ್ಟು ವೈರಲ್​ ಆಗಿದೆ. ಬೆಲೆ ಏರಿಕೆ ಮತ್ತು ವೆಚ್ಚ ಹೆಚ್ಚಳದಿಂದಾಗಿ ಬೆಂಗಳೂರು ಜನರಿಗೆ ಕೈಗೆಟುಕದ ನಗರವಾಗುತ್ತಿದೆ ಎಂದು ಉದ್ಯಮಿ ಹೇಳಿದ್ದಾರೆ.

'ಬೆಂಗಳೂರು ಸದ್ದಿಲ್ಲದೆ ನಮ್ಮ ಉಳಿತಾಯವನ್ನು ತಿನ್ನುತ್ತಿದೆ’: ಸ್ಟಾರ್ಟ್-ಅಪ್​ ಉದ್ಯಮಿಯ ಪೋಸ್ಟ್ ವೈರಲ್
ಪ್ರಾತಿನಿಧಿಕ ಚಿತ್ರ
ಗಂಗಾಧರ​ ಬ. ಸಾಬೋಜಿ
|

Updated on:Apr 11, 2025 | 3:25 PM

Share

ಬೆಂಗಳೂರು, ಏಪ್ರಿಲ್ 11: ಕರ್ನಾಟಕದಲ್ಲಿ ಒಂದಾದ ಮೇಲೊಂದರಂತೆ ದಿನಬಳಕೆಯ ವಸ್ತುಗಳು ಸೇರಿದಂತೆ ಸಾರ್ವಜನಿಕ ಸೇವೆಗಳ ದರ (price hike) ಕೂಡ ಏರಿಕೆ ಮಾಡಲಾಗುತ್ತಿದೆ. ಈಗಾಗಲೇ ನಂದಿನಿ ಹಾಲು ಮೆಟ್ರೋ, ವಿದ್ಯುತ್, ಪೆಟ್ರೋಲ್ ಮತ್ತು ಡಿಸೇಲ್​​ ಬೆಲೆ ಏರಿಕೆ ಮಾಡಲಾಗಿದೆ. ಈ ರೀತಿ ಬೆಲೆ ಏರಿಕೆಯಿಂದ ಜೀವನ ನಡೆಸುವುದಾದರೂ ಹೇಗೆ ಎಂದು ಸಾರ್ವಜನಿಕರು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದು, ಕೆಲವೆಡೆ ಪ್ರತಿಭಟನೆ ಕೂಡ ಮಾಡಲಾಗಿದೆ. ಹೀಗಿರುವಾಗಲೇ ಬೆಂಗಳೂರಿನ ಸ್ಟಾರ್ಟ್-ಅಪ್​ ಕಂಪನಿ ಉದ್ಯಮಿ (businessman) ಒಬ್ಬರ ಲಿಂಕ್ಡ್ಇನ್ ಪೋಸ್ಟ್ ಸಾಕಷ್ಟು ವೈರಲ್ ಆಗಿದ್ದು, ಚರ್ಚೆಗೆ ಗ್ರಾಸವಾಗಿದೆ.

ಉದ್ಯಮಿಯ ಲಿಂಕ್ಡ್ಇನ್​ನಲ್ಲಿ ಪೋಸ್ಟ್​ನಲ್ಲಿ ಏನಿದೆ?

ಬೆಂಗಳೂರು ಮೂಲದ ಸ್ಟಾರ್ಟ್ ಅಪ್​ ಕಂಪನಿ ಉದ್ಯಮಿ ಹರೀಶ್​ ಎನ್​ಎ ಎಂಬುವವರು ರಾಜ್ಯದಲ್ಲಿ ಹೆಚ್ಚುತ್ತಿರುವ ದರ ಏರಿಕೆ ಕುರಿತಾಗಿ ಲಿಂಕ್ಡ್ಇನ್​ನಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ. ಜನರು ಕಷ್ಟಪಟ್ಟು ಉಳಿತಾಯ ಮಾಡಿರುವ ತಮ್ಮ ಹಣ, ದೈನಂದಿನ ಖರ್ಚು ವೆಚ್ಚಗಳಿಗೆ ಸದ್ದಿಲ್ಲದೆ ಖಾಲಿಯಾಗುತ್ತಿರುವ ಬಗ್ಗೆ ಅವರು ವಿವರಿಸಿದ್ದಾರೆ.

Virak Post

ವೈರಲ್​ ಆದ ಉದ್ಯಮಿಯ ಪೋಸ್ಟ್​

ಸಿಲಿಕಾನ್​​ ಸಿಟಿ​ ಬೆಂಗಳೂರು ಕೈಗೆಟುಕುವಂತಿಲ್ಲ, ಜನರು ಕಷ್ಟಪಟ್ಟು ಸಂಪಾದಿಸಿದ ಹಣವನ್ನು ಸದ್ದಿಲ್ಲದೆ ತಿನ್ನುತ್ತಿದೆ. ಇದನ್ನು ನೀವು ಅನುಭವಿಸುತ್ತಿದ್ದೀರಾ ಎಂದು ಉದ್ಯಮಿ ಪ್ರಶ್ನೆ ಮಾಡಿದ್ದಾರೆ. ಮಾರ್ಚ್ 7ರಂದು ನಂದಿನಿ ಹಾಲಿನ ಬೆಲೆ ಲೀಟರ್‌ಗೆ 4 ರೂ ಏರಿಕೆಯಾಗಿದ್ದು, 47 ರೂ ತಲುಪಿದೆ. ಮಾರಾಟ ತೆರಿಗೆ ಹೆಚ್ಚಳದಿಂದಾಗಿ ಡೀಸೆಲ್ ಬೆಲೆ ಹೆಚ್ಚಳವಾಗಿದ್ದು, ಲೀಟರ್‌ಗೆ 2 ರೂ ಏರಿಕೆಯಾಗಿದೆ ಎಂದಿದ್ದಾರೆ.

ಇದನ್ನೂ ಓದಿ
Image
ಬೆಂಗಳೂರು ಪೊಲೀಸ್​ ಆಯುಕ್ತರನ್ನೇ ಬಿಡದ ಸೈಬರ್​ ಖದೀಮರು: ಫೇಕ್ ಅಕೌಂಟ್ ಓಪನ್
Image
ಹುಬ್ಬಳ್ಳಿ: ಕುಸಿದು ಬಿದ್ದ ಪೊಲೀಸ್ ಠಾಣೆ ಮೇಲ್ಚಾವಣಿ ಕಾಂಕ್ರೀಟ್!
Image
ಶಿವಮೊಗ್ಗ ಈದ್ಗಾ ಮೈದಾನ ವಿವಾದ ಕೊನೆಗೂ ಸುಖಾಂತ್ಯ: ನಿರ್ಬಂಧ ತೆರವು
Image
ಕರಾಳ ಗುರುವಾರ: ಕರ್ನಾಟಕದಾದ್ಯಂತ ಸರಣಿ ಅಪಘಾತಗಳಲ್ಲಿ 17 ಜನ ಸಾವು

ಇದನ್ನೂ ಓದಿ: ಬೆಂಗಳೂರು: ದೂರವಾಣಿ ಬಿಡಿಭಾಗ ಜೋಡಣೆಯಲ್ಲಿ ಮಗ್ನರಾದ ಮಹಿಳಾಮಣಿಗಳು, 1950ರ ಅಪರೂಪದ ಚಿತ್ರ ವೈರಲ್

ಫೆಬ್ರವರಿ 9ರಂದು ನಮ್ಮ ಮೆಟ್ರೋ ದರವನ್ನು ಗರಿಷ್ಠ ದರ 60 ರಿಂದ 90 ರೂ ಕ್ಕೆ ಏರಿಕೆ ಮಾಡಲಾಗಿದೆ. ಆ ಮೂಲಕ ಇದು ಭಾರತದ ಅತ್ಯಂತ ದುಬಾರಿ ಮೆಟ್ರೋ ಆಗಿದೆ. ಸಾರಿಗೆ, ವಿದ್ಯುತ್, ಕಸಕ್ಕೆ ತೆರಿಗೆ ಮತ್ತು ಕಾಫಿ ಪುಡಿಯ ಬೆಲೆ ಕೂಡ ಏರಿಕೆಯಾಗಿದೆ ಎಂದು ಹೇಳಿದ್ದಾರೆ.

ಇನ್ನು ವೈಟ್‌ಫೀಲ್ಡ್ ಅಥವಾ ಕೋರಮಂಗಲದಲ್ಲಿ 2ಬಿಹೆಚ್​ಕೆ ಮನೆಗೆ ತಿಂಗಳಿಗೆ 40 ಸಾವಿರ ರೂ ಬಾಡಿಗೆ ಇದ್ದು, ಒಂದು ವರ್ಷದ ಹಿಂದೆ ಕೇವಲ 25 ಸಾವಿರ ರೂ ಇತ್ತು. ಪೀಕ್​ ಅವರ್​ನಲ್ಲಿ ಎರಡು ಗಂಟೆಗಳಿಗಿಂತ ಹೆಚ್ಚು ಪ್ರಯಾಣ ಮಾಡಬೇಕಾಗುತ್ತದೆ. ಹೆಬ್ಬಾಳ ಸಂಚಾರ ದಟ್ಟಣೆಯ ತಾಣವಾಗಿದೆ ಎಂದಿದ್ದಾರೆ.

ನಿತ್ಯ ಒಂದಿಲ್ಲೊಂದು ದರ ಏರಿಕೆ ಆಗುತ್ತಿದ್ದರೂ, ಸಂಬಳ ಮಾತ್ರ ಹಾಗೇ ಇದೆ. ಐಟಿ ಕ್ಷೇತ್ರದಲ್ಲಿ ದರ ಏರಿಕೆ ಪ್ರಮಾಣ ಅಷ್ಟೇನೂ ಮೀರಿಸುವುದಿಲ್ಲ. ಆದರೆ ಎರಡನೇ ಅಥವಾ ಮೂರನೇ ಹಂತದ ನಗರಗಳಲ್ಲಿ ಕೆಲಸ ಮಾಡುವ ಹೊಸಬರಿಗೆ ಇದು ಹೊರೆಯಾಗಲಿದೆ. ಪಿಜಿ ಬಾಡಿಗೆ, ಆಹಾರ ಮತ್ತು ಪ್ರಯಾಣ ಸೇರಿದಂತೆ ಇತರೆ ವಿಚಾರಕ್ಕೆ ಹೊರೆಯಾಗಲಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಇನ್ಮುಂದೆ ರೆವಿನ್ಯೂ ಸ್ವತ್ತುಗಳಿಗೂ ದೊರೆಯಲಿದೆ ನಕ್ಷೆ ಮಂಜೂರಾತಿ ಭಾಗ್ಯ: ಇಲ್ಲಿದೆ ಮಾಹಿತಿ

ಹೆಚ್ಚುತ್ತಿರು ದರ ಒಂದು ಕರೆಯಾದರೆ, ಮತ್ತೊಂದೆಡೆ ಸಂಬಳ ಮಾತ್ರ ಅಷ್ಟೇ ಇದೆ. ಜೊತೆಗೆ ಹೆಚ್ಚುತ್ತಿರುವ ಜನದಟ್ಟಣೆಯಿಂದ ಬೆಂಗಳೂರು ಜನಸಾಮಾನ್ಯರಿಗೆ ಕೈಗೆಟುಕಲಾಗದ ನಗರವಾಗಿದೆ. ಹೀಗಾಗಿ ಅಧಿಕಾರಿಗಳು ಈ ಬಗ್ಗೆ ಗಮನವಹಿಸಬೇಕು ಎಂದಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 3:10 pm, Fri, 11 April 25

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ