AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಮತ್ತೊಂದು ಐಟಿ ದಾಳಿ; ಬಿಲ್ಡರ್ ಸಂತೋಷ್​ ನಿವಾಸದಲ್ಲಿ 40 ಕೋಟಿ ಪತ್ತೆ, ಮಾಜಿ ಎಂಎಲ್​ಸಿ ಹೆಸರು ತಳುಕು

Bengaluru IT Raid: ಬಿಲ್ಡರ್ ಸಂತೋಷ್ ಮನೆಯಲ್ಲಿ ಹಣ ಪತ್ತೆಯಾದ ಬಗ್ಗೆ ವಿಚಾರಣೆ ನಡೆಸಿದಾಗ ಸಂತೋಷ್ ಮಾಜಿ MLC ಹೆಸರನ್ನು ಪ್ರಸ್ತಾಪಿಸಿದ್ದಾರೆ. ಹೀಗಾಗಿ ಐಟಿ ಅಧಿಕಾರಿಗಳು ಪತ್ತೆಯಾದ ಹಣದ ಮೂಲ ಕಂಡು ಹಿಡಿಯಲು ಮಾಜಿ ಎಂಎಲ್​ಸಿ ಸಹೋದರರನ್ನು ಫ್ಲ್ಯಾಟ್​ಗೆ ಕರೆಸಿಕೊಂಡು ವಿಚಾರಣೆ ನಡೆಸಿದ್ದಾರೆ.

TV9 Web
| Edited By: ಆಯೇಷಾ ಬಾನು|

Updated on:Oct 15, 2023 | 8:13 AM

Share

ಬೆಂಗಳೂರು, ಅ.15: ಬೆಂಗಳೂರಿನಲ್ಲಿ ಐಟಿ ಅಧಿಕಾರಿಗಳು (IT Raid) ಮತ್ತೊಂದು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಅಮಾವಾಸ್ಯೆ ದಿನದಂದು ಕಾರ್ಯಾಚರಣೆ ನಡೆಸಿ ಕೋಟಿ ಕೋಟಿ ಹಣ ಪತ್ತೆ ಮಾಡಿದ್ದಾರೆ. ರಾಜಾಜಿನಗರದ ಕೇತಮಾರನಹಳ್ಳಿ ಅಪಾರ್ಟ್​ಮೆಂಟ್​ ಮೇಲೆ ಐಟಿ ಅಧಿಕಾರಿಗಳು ದಾಳಿ ಮಾಡಿದ್ದು ಈ ವೇಳೆ 40 ಕೋಟಿಗೂ ಹೆಚ್ಚು ಹಣ ಪತ್ತೆಯಾಗಿದೆ. ನಿನ್ನೆ (ಅ.14) ಬೆಳಗ್ಗೆ ಬಿಲ್ಡರ್ ಸಂತೋಷ್​ ನಿವಾಸದ ಮೇಲೆ ಐಟಿ ತಂಡ ದಾಳಿ ನಡೆಸಿತ್ತು. ಬೆಳಗ್ಗೆ 6ರಿಂದ ಇಡೀ ದಿನ ಅಪಾರ್ಟ್​ಮೆಂಟ್​ನ 5ನೇ ಮಹಡಿಯ ಫ್ಲ್ಯಾಟ್​ನಲ್ಲಿ ದಾಖಲೆ ಪರಿಶೀಲನೆ ನಡೆಸಿತ್ತು. ದಾಳಿ ವೇಳೆ ಕೋಟಿ ಕೋಟಿ ಹಣ ಪತ್ತೆಯಾಗಿದ್ದು ಆ ಹಣ ಮಾಜಿ ಎಂಎಲ್​ಸಿಗೆ ಸೇರಿದ್ದು ಎನ್ನಲಾಗಿದೆ.

ಬಿಲ್ಡರ್ ಸಂತೋಷ್ ಮನೆಯಲ್ಲಿ ಹಣ ಪತ್ತೆಯಾದ ಬಗ್ಗೆ ವಿಚಾರಣೆ ನಡೆಸಿದಾಗ ಸಂತೋಷ್ ಮಾಜಿ MLC ಹೆಸರನ್ನು ಪ್ರಸ್ತಾಪಿಸಿದ್ದಾರೆ. ಹೀಗಾಗಿ ಐಟಿ ಅಧಿಕಾರಿಗಳು ಪತ್ತೆಯಾದ ಹಣದ ಮೂಲ ಕಂಡು ಹಿಡಿಯಲು ಮಾಜಿ ಎಂಎಲ್​ಸಿ ಸಹೋದರರನ್ನು ಫ್ಲ್ಯಾಟ್​ಗೆ ಕರೆಸಿಕೊಂಡು ವಿಚಾರಣೆ ನಡೆಸಿದ್ದಾರೆ. ಹಣ ಪತ್ತೆಯಾಗುತ್ತಿದ್ದಂತೆ 6ಕ್ಕೂ ಹೆಚ್ಚು ಕಾರುಗಳಲ್ಲಿ 10ಕ್ಕೂ ಹೆಚ್ಚು ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ: ಸತತ 42 ಗಂಟೆಗಳ ಬಳಿಕ ಗುತ್ತಿಗೆದಾರ ಅಂಬಿಕಾಪತಿ ನಿವಾಸದಲ್ಲಿ ಐಟಿ ದಾಳಿ ಅಂತ್ಯ: ವಿಚಾರಣೆಗೆ ಹಾಜರಾಗುವಂತೆ ನೋಟಿಸ್​​

ದಾಖಲೆಗಳನ್ನು ವಶಕ್ಕೆ ಪಡೆದ ಐಟಿ ಅಧಿಕಾರಿಗಳು

3ಟ್ರಂಕ್, 3ಬ್ಯಾಗ್, 1ಸೂಟ್ಕೇಸ್​ನ​ಷ್ಟು ವಸ್ತು​ ವಶಕ್ಕೆ ಪಡೆಯಲಾಗಿದೆ. ಅಧಿಕಾರಿಗಳು ವಶಕ್ಕೆ ಪಡೆದ ವಸ್ತುಗಳನ್ನು 2 ಕಾರುಗಳಲ್ಲಿ ತೆಗೆದುಕೊಂಡು ಹೋಗಿದ್ದಾರೆ. ಸತತ 18 ಗಂಟೆಗಳ ಕಾಲ ಐಟಿ ಅಧಿಕಾರಿಗಳಿಂದ ಪರಿಶೀಲನೆ ನಡೆಯಿತು. ಕೊನೆಗೆ ವಿಚಾರಣೆ ಮುಗಿಸಿ ಸಂತೋಷ್​ಗೆ ನೋಟಿಸ್ ನೀಡಿ ಐಟಿ ತಂಡ ತೆರಳಿದೆ. ಪತ್ತೆಯಾದ ಹಣದ ಬಗ್ಗೆ ಮತ್ತಷ್ಟು ಮಾಹಿತಿ ನೀಡುವಂತೆ ನೋಟಿಸ್ ನೀಡಲಾಗಿದೆ.

ಬಿಲ್ಡರ್​ ಸಂತೋಷ್​ಗೂ ನನಗೂ ಯಾವುದೇ ಸಂಬಂಧವಿಲ್ಲ

ಇನ್ನು ಬಿಲ್ಡರ್​ ಸಂತೋಷ್​ ವಿಚಾರಣೆ ವೇಳೆ ಕಾಂಗ್ರೆಸ್ ಮುಖಂಡ ಬೆಮೆಲ್ ಕಾಂತರಾಜು ಅವರ ಹೆಸರು ಕೇಳಿ ಬಂದಿದ್ದು ಈ ಬಗ್ಗೆ ಕಾಂತರಾಜು ಪ್ರತಿಕ್ರಿಯೆ ನೀಡಿದ್ದಾರೆ. ಬಿಲ್ಡರ್​ ಸಂತೋಷ್​ಗೂ ನನಗೂ ಯಾವುದೇ ಸಂಬಂಧವಿಲ್ಲ. ಸಂತೋಷ್ ಮನೆಯಲ್ಲಿ ಪತ್ತೆಯಾದ ಹಣಕ್ಕೂ ನನಗೂ ಸಂಬಂಧವಿಲ್ಲ. ಕೇತಮಾರನಹಳ್ಳಿ ಅಪಾರ್ಟ್​ಮೆಂಟ್ ಮೇಲೆ ಐಟಿ ದಾಳಿ ಬಗ್ಗೆ ಗೊತ್ತಿಲ್ಲ. ಪ್ರಕರಣದಲ್ಲಿ ನನ್ನ ಹೆಸರು ಯಾಕೆ ತಳುಕು ಹಾಕ್ತಿದ್ದಾರೋ ಗೊತ್ತಿಲ್ಲ. ಬಿಲ್ಡರ್​ ಸಂತೋಷ್​ರನ್ನು ನಾನು ನೋಡೇ ಇಲ್ಲ ಎಂದ ಕಾಂತರಾಜು ಟಿವಿ9ಗೆ ತಿಳಿಸಿದ್ದಾರೆ.

ಬೆಂಗಳೂರಿಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 8:10 am, Sun, 15 October 23

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು