AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರ: ಬಾಕ್ಸ್​ಗಳಲ್ಲಿ ಕಂತೆ-ಕಂತೆ ಹಣ ಪತ್ತೆ: ಬಿಲ್ಡರ್​, ಚಿನ್ನದ ವ್ಯಾಪಾರಿ, ಗುತ್ತಿಗೆದಾರರಿಂದ ಇಷ್ಟೊಂದು ಹಣ ಸಂಗ್ರಹಿಸಿದ್ಯಾಕೆ? ಇಲ್ಲಿದೆ ಇನ್ ಸೈಡ್​ ಮಾಹಿತಿ

ಬೆಂಗಳೂರಿನ ಆರ್​ ಟಿ ನಗರದಲ್ಲಿರುವ ಮಾಜಿ ಕಾರ್ಪೊರೇಟರ್​​​​ ​​​ಅಶ್ವತ್ಥಮ್ಮ, ಪತಿ ಆರ್​.ಅಂಬಿಕಾಪತಿ ಮತ್ತು ​ಅಶ್ವತ್ಥಮ್ಮ ಅವರ ಬಾಮೈದ ಪ್ರದೀಪ್​​ ಫ್ಯ್ಲಾಟ್​​​​​​ ಮೇಲೆ ಐಟಿ ಅಧಿಕಾರಿಗಳು ದಾಳಿ ಮಾಡಿದ್ದು, ಪರಿಶೀಲನೆ ವೇಳೆ 40 ಕೋಟಿಗೂ ಅಧಿಕ ಹಣ ಪತ್ತೆಯಾಗಿದೆ. ಇಷ್ಟು ಹಣವನ್ನು ಎಲ್ಲಿಂದ ಸಂಗ್ರಹಿಸಲಾಗಿದೆ, ಯಾಕೆ ಸಂಗ್ರಹಿಸಲಾಗಿದೆ ಎಂಬ ಇನ್​ ಸೈಡ್​ ಮಾಹಿತಿ ಟಿವಿ9 ಡಿಜಿಟಲ್​​​ಗೆ ಲಭ್ಯವಾಗಿದೆ.

ಬೆಂಗಳೂರ: ಬಾಕ್ಸ್​ಗಳಲ್ಲಿ ಕಂತೆ-ಕಂತೆ ಹಣ ಪತ್ತೆ: ಬಿಲ್ಡರ್​, ಚಿನ್ನದ ವ್ಯಾಪಾರಿ, ಗುತ್ತಿಗೆದಾರರಿಂದ ಇಷ್ಟೊಂದು ಹಣ ಸಂಗ್ರಹಿಸಿದ್ಯಾಕೆ? ಇಲ್ಲಿದೆ ಇನ್ ಸೈಡ್​ ಮಾಹಿತಿ
ಹಣ
ಕಿರಣ್​ ಹನಿಯಡ್ಕ
| Edited By: ವಿವೇಕ ಬಿರಾದಾರ|

Updated on: Oct 13, 2023 | 10:45 AM

Share

ಬೆಂಗಳೂರು ಅ.11: ಆದಾಯ ತೆರಿಗೆ ಇಲಾಖೆ (IT) ಅಧಿಕಾರಿಗಳು ಮಧ್ಯರಾತ್ರಿ ಬೆಂಗಳೂರಿನ ಆರ್​​. ಟಿ.ನಗರದ ಮಾಜಿ ಕಾರ್ಪೊರೇಟರ್ (Former Corporator)​​​​ ​​​ಅಶ್ವತ್ಥಮ್ಮ, ಪತಿ ಆರ್​.ಅಂಬಿಕಾಪತಿ ಮತ್ತು ​ಅಶ್ವತ್ಥಮ್ಮ ಅವರ ಬಾಮೈದ ಪ್ರದೀಪ್​​ ಫ್ಯ್ಲಾಟ್​​​​​​ ಮೇಲೆ ದಾಳಿ ಮಾಡಿದ್ದರು. ಪರಿಶೀಲನೆ ವೇಳೆ ಬೆಡ್​​ ರೂಮ್​ನ ಮಂಚದ ಕೆಳಗೆ 23 ಬಾಕ್ಸ್​​ನಲ್ಲಿ 500 ರೂ. ಮುಖಬೆಲೆಯ 40 ಕೋಟಿ ರೂ.ಗೂ ಅಧಿಕ ಕಂತೆ ಕಂತೆ ಹಣ ಪತ್ತೆಯಾಗಿದೆ. ಹಾಗಿದ್ದರೆ ಈ ಹಣ ಯಾರಿಗೆ ಸೇರಿದ್ದು, ಯಾಕೆ ಸಂಗ್ರಹಿಸಲಾಗಿತ್ತು, ಎಲ್ಲಿಗೆ ಕಳುಹಿಸಲು ಪ್ಲಾನ್​ ಮಾಡಿಕೊಂಡಿದ್ದರು ಎಂಬ ಇನ್​​ ಸೈಡ್ ಮಾಹಿತಿ ಟಿವಿ9 ಡಿಜಿಟಲ್​​ಗೆ ಲಭ್ಯವಾಗಿದೆ.

ಬೆಂಗಳೂರಿನಲ್ಲಿ ಬಿಲ್ಡರ್ಸ್​​​, ಚಿನ್ನದ ವ್ಯಾಪಾರಿಗಳು ಹಾಗೂ ಗುತ್ತಿಗೆದಾರರಿಂದ ಈ ಹಣ ಸಂಗ್ರಹಿಸಲಾಗಿದೆ. ಹೀಗೆ ಸಂಗ್ರಹಿಸಲಾದ ಹಣವನ್ನು ಬೆಂಗಳೂರಿನಿಂದ-ಚೆನ್ನೈಗೆ, ಚೆನ್ನೈಯಿಂದ-ಹೈದ್ರಬಾದ್​ಗೆ ವಾರ್ಗವಣೆ ಮಾಡಲು ಸಿದ್ಧತೆ ಮಾಡಿಕೊಳ್ಳಲಾಗಿತ್ತು. ತೆಲೆಂಗಾಣ ರಾಜ್ಯ ವಿಧಾನಸಭೆಗೆ ಚುನಾವಣೆ ದಿನಾಂಕ ಘೋಷಣೆಯಾದ ಹಿನ್ನೆಲೆಯಲ್ಲಿ ಇಲ್ಲಿ ಹಣ ಸಂಗ್ರಹಿಸಿ ಅಲ್ಲಿಗೆ ಕಳುಹಿಸಲು ಮುಂದಾಗಿದ್ದರು ಎಂಬ ಮಾಹಿತಿ ದೊರೆತಿದೆ. ಚುನಾವಣೆ ಹಿನ್ನೆಲೆಯಲ್ಲಿ ಐಟಿ ಅಧಿಕಾರಿಗಳು ಅಲರ್ಟ್​​​ ಆಗಿದ್ದು ಕಳೆದ ಮೂರು ದಿನಗಳಿಂದ ರೇಡ್​​​ ಮಾಡುತ್ತಿದ್ದಾರೆ.

ಇದನ್ನೂ ಓದಿ: ಬೆಂಗಳೂರಿನ ಫ್ಲಾಟ್​ ಒಂದರ ಮೇಲೆ ಐಟಿ ದಾಳಿ, ಮಂಚದಡಿ ಕಂತೆ ಕಂತೆ ನೋಟುಗಳು ಪತ್ತೆ

ಯಾರು ಈ ಅಶ್ಚತಮ್ಮ ಮತ್ತು ಅಂಬಿಕಾಪತಿ

ಆರ್​.ಟಿ ನಗರದ ಆನಂದ ಕೊಲೋನಿ ನಿವಾಸಿಯಾಗಿರುವ ಅಶ್ವತಮ್ಮ ಕಾಂಗ್ರೆಸ್​ ಮಾಜಿ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಅಕ್ಕ. 2001ರಲ್ಲಿ ಕಾವಲ್ ಬೈರಸಂದ್ರ (ವಾರ್ಡ್​​ ನಂ 95)ರ ಕಾರ್ಪೊರೇಟರ್​​ ಆಗಿದ್ದರು. ಇವರ ಪತಿ ಆರ್.ಅಂಬಿಕಾಪತಿ ಕಾಂಟ್ರಾಕ್ಟರ್ ಆಗಿದ್ದಾರೆ. ಕೆಂಪಣ್ಣ ಅವರ ಕಾಂಟ್ರಾಕ್ಟರ್ ಸಂಘದಲ್ಲಿ ಗುರುತಿಸಿಕೊಂಡಿದ್ದಾರೆ. ಇವರು ಹಿಂದಿನ ಬಿಜೆಪಿ ಸರ್ಕಾರದ ಮೇಲೆ ರಾಜ್ಯದಲ್ಲಿ ನಡೆಯುವ ಕಾಮಗಾರಿಗೆ ಶೇ.40 ನೀಡಬೇಕು, ಬಿಬಿಎಂಪಿಯಲ್ಲಿ 50 ಪರ್ಸೆಂಟ್ ನೀಡಬೇಕು ಎಂದು ಆರೋಪ ಮಾಡಿದ್ದರು. ಕೆಲವು ರಾಜಕೀಯ ವ್ಯಕ್ತಿಗಳ ವಿರುದ್ಧ ಆರೋಪ ಮಾಡಿದ್ದರು.

ತನ್ನ ವಿರುದ್ಧ ಕಮಿಷನ್ ಆರೋಪ ಮಾಡಿದ ಬಿಜೆಪಿ ಶಾಸಕ ಮುನಿರತ್ನ ಅವರು ಅಂಬಿಕಾಪತಿ ವಿರುದ್ಧ ಮಾನನಷ್ಟ ಮೊಕದ್ದಮ್ಮೆ ಹೂಡಿದ್ದರು. ಈ ಪ್ರಕರಣದಲ್ಲಿ ಅಂಬಿಕಾಪತಿ ವೈಯ್ಯಾಲಿಕಾವಲ್ ಠಾಣೆ ಪೊಲೀಸರಿಂದ ಬಂಧನಕ್ಕೊಳಗಾಗಿ ಬಳಿಕ ಜಾಮೀನು ಮೇಲೆ ಬಿಡುಗಡೆಯಾಗಿದ್ದರು.

ಅಂಬಿಕಾಪತಿ ಮೆನ ಮೇಲೂ ಐಟಿ ದಾಳಿ

ಆರ್​​ಟಿ ನಗರದ ವೈಟ್​ ಗೌಸ್​ನಲ್ಲಿರುವ ಅಂಬಿಕಾಪತಿ ಮಗಳ ಮನೆ ಮೇಲೂ ಐಟಿ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಮಾನ್ಯತಾ ಟೆಕ್ ಪಾರ್ಕ್ ಬಳಿ ಇರುವ ಒಂದು ಮನೆ ಮತ್ತು ಆರ್​ಟಿ ನಗರದ ಸುಲ್ತಾನ್ ಪಾಳ್ಯದಲ್ಲಿ ಎರಡು ಕಡೆ ದಾಳಿ ಮಾಡಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
ಇಂದು ಈ ರಾಶಿಯವರಿಗೆ ಧನಯೋಗ!
ಇಂದು ಈ ರಾಶಿಯವರಿಗೆ ಧನಯೋಗ!
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ