AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪರಪ್ಪನ ಅಗ್ರಹಾರ ಜೈಲಿನಲ್ಲಿ ನವ ಸಂಕಲ್ಪ ಬೇಕರಿ ಆರಂಭ: ಸಾರ್ವಜನಿಕ ಸ್ಥಳಗಳಲ್ಲಿ ಉತ್ವನ್ನಗಳ ಮಾರಾಕ್ಕೆ ನಿರ್ಧಾರ

ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳ ಪುನರ್ವಸತಿ ಹಾಗೂ ಕೌಶಲ್ಯಾಭಿವೃದ್ಧಿಗಾಗಿ 'ನವ ಸಂಕಲ್ಪ ಬೇಕರಿ' ಮತ್ತು 'ಬೇಕರಿ ಆನ್ ವೀಲ್ಸ್' ಸೇವೆಗೆ ಕಾರಾಗೃಹ ಡಿಜಿಪಿ ಅಲೋಕ್ ಕುಮಾರ್ ಚಾಲನೆ ನೀಡಿದ್ದಾರೆ. ಬೆಂಗಳೂರು ವಿವಿಧ ನ್ಯಾಯಾಲಯಗಳ ಆವರಣ, ಬಸ್ ನಿಲ್ದಾಣಗಳಲ್ಲಿ ಬೇಕರಿ ಆನ್ ವೀಲ್ಸ್ ಮೂಲಕ ಬೇಕರಿ ಉತ್ಪನ್ನಗಳ ಮಾರಾಟಕ್ಕೆ ನಿರ್ಧರಿಸಲಾಗಿದ್ದು, ಆ ಮೂಲಕ ಆದಾಯ ಹೆಚ್ಚಿಸುವ ಉದ್ದೇಶ ಹೊಂದಲಾಗಿದೆ.

ಪರಪ್ಪನ ಅಗ್ರಹಾರ ಜೈಲಿನಲ್ಲಿ ನವ ಸಂಕಲ್ಪ ಬೇಕರಿ ಆರಂಭ: ಸಾರ್ವಜನಿಕ ಸ್ಥಳಗಳಲ್ಲಿ ಉತ್ವನ್ನಗಳ ಮಾರಾಕ್ಕೆ ನಿರ್ಧಾರ
ಪರಪ್ಪನ ಅಗ್ರಹಾರ ಜೈಲಿನಲ್ಲಿ ನವ ಸಂಕಲ್ಪ ಬೇಕರಿ ಆರಂಭImage Credit source: Alok Kumar X Account
ಪ್ರಜ್ವಲ್​ ಕುಮಾರ್ ಎನ್​ ವೈ
| Edited By: |

Updated on: Sep 18, 2026 | 1:45 PM

Share

ಬೆಂಗಳೂರು, ಸೆಪ್ಟೆಂಬರ್​​ 18: ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಕೈದಿಗಳ ಪುನರ್ವಸತಿ ಮತ್ತು ಕೌಶಲ್ಯಾಭಿವೃದ್ಧಿಗಾಗಿ ಕರ್ನಾಟಕ ಕಾರಾಗೃಹ ಇಲಾಖೆಯು ಪರಪ್ಪನ ಅಗ್ರಹಾರ ಜೈಲಿನಲ್ಲಿ ನವ ಸಂಕಲ್ಪ ಬೇಕರಿ ಆರಂಭಿಸಿದ್ದು, ಕಾರಾಗೃಹ ಡಿಜಿಪಿ ಅಲೋಕ್ ಕುಮಾರ್​​ ಇದರ ಲೋಕಾರ್ಪಣೆ ನೆರವೇರಿಸಿದ್ದಾರೆ. ಇದೇ ವೇಳೆ ನವ ಸಂಕಲ್ಪ ಬೇಕರಿ ಆನ್ ವೀಲ್ಸ್​ಗೂ ಚಾಲನೆ ನೀಡಲಾಗಿದೆ. ಹೊಸ ಸಜಾ ಬಂಧಿಗಳಿಗೆ ಬೇಕರಿ ಉತ್ಪನ್ನ ತಯಾರಿಕೆ ತರಬೇತಿ ನೀಡಲಾಗಿದ್ದು, ತರಬೇತಿ ಪೂರ್ಣಗೊಳಿಸಿದ ಬಂಧಿಗಳಿಗೆ ಪ್ರಮಾಣ ಪತ್ರ ವಿತರಣೆ ಕಾರ್ಯಕ್ರಮವೂ ನಡೆದಿದೆ.

ಬೆಂಗಳೂರು ವಿವಿಧ ನ್ಯಾಯಾಲಯಗಳ ಆವರಣ, ಬಸ್ ನಿಲ್ದಾಣಗಳಲ್ಲಿ ಬೇಕರಿ ಆನ್ ವೀಲ್ಸ್ ಮೂಲಕ ಬೇಕರಿ ಉತ್ಪನ್ನಗಳ ಮಾರಾಟಕ್ಕೆ ನಿರ್ಧರಿಸಲಾಗಿದ್ದು, ಆ ಮೂಲಕ ಆದಾಯ ಹೆಚ್ಚಿಸುವ ಉದ್ದೇಶ ಹೊಂದಲಾಗಿದೆ. ಜೈಲಿನಿಂದ ರಿಲೀಸ್ ಬಳಿಕವೂ ಬಂಧಿಗಳು ಸ್ವಾವಲಂಬಿ ಜೀವನ ನಡೆಸಲು ಇದು ಸಹಾಯ ಆಗಲಿದೆ. 2026ರ ಗಣರಾಜ್ಯೋತ್ಸವದ ಅಂಗವಾಗಿ ಬೆಂಗಳೂರಿನ ಮಾಣಿಕ್ ಶಾ ಪರೇಡ್ ಮೈದಾನದಲ್ಲಿ ನಡೆದ ಮುಖ್ಯ ಸಮಾರಂಭದಲ್ಲಿ, ರಾಜ್ಯಪಾಲರು ಸೇರಿದಂತೆ ಹಲವು ಗಣ್ಯರಿಗೆ ಕೈದಿಗಳು ತಯಾರಿಸಿದ ತಿಂಡಿ-ತಿನಿಸುಗಳನ್ನು ಉಪಹಾರವಾಗಿ ಉಣಬಡಿಸಲಾಗಿತ್ತು.

ಇದನ್ನೂ ಓದಿ: ಪರಪ್ಪನ ಅಗ್ರಹಾರ ಜೈಲಿನಲ್ಲೇ ಮಾರಾಟವಾಗುತ್ತಿತ್ತು ಫೋನ್! 1 ಮೊಬೈಲ್ 1 ಲಕ್ಷ ರೂ.ಗೆ ಸೇಲ್

‘ಇನ್ನೂ ಬಹಳ ದೂರ ಸಾಗಬೇಕಿದೆ’

ನವ ಸಂಕಲ್ಪ ಬೇಕರಿ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಸಂದೇಶ ಹಂಚಿಕೊಂಡಿರುವ ಕಾರಾಗೃಹ ಡಿಜಿಪಿ ಅಲೋಕ್ ಕುಮಾರ್​, ಬೆಂಗಳೂರು ಕೇಂದ್ರ ಕಾರಾಗೃಹದಲ್ಲಿ ಹೊಸ ಬೇಕರಿ ಘಟಕ ಹಾಗೂ ‘ಬೇಕರಿ ಆನ್ ವೀಲ್ಸ್’ ಸೇವೆಗೆ ಚಾಲನೆ ನೀಡಲಾಗಿದೆ. ಇದಕ್ಕೆ ಅಗತ್ಯ ಸಹಕಾರ ನೀಡಿದ HCL ಇ-ಹಾಟ್ಗೆ ಧನ್ಯವಾದಗಳು. ಐಪಿಎಸ್ ಅಧಿಕಾರಿ ಅನುಶ್ ಕುಮಾರ್ ಹಾಗೂ ಬೆಂಗಳೂರು ಕೇಂದ್ರ ಕಾರಾಗೃಹದ ಇಡೀ ತಂಡಕ್ಕೆ ಅಭಿನಂದನೆಗಳು. ಇನ್ನೂ ಬಹಳ ದೂರ ಸಾಗಬೇಕಿದೆ ಎಂದಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Follow Us
ಗಗ್ಗರ ಮನರಂಜನೆ ವಸ್ತುವಲ್ಲ, ಚಪ್ಪಲಿ ಹಾಕಿ ವೀಕ್ಷಣೆ ಸಲ್ಲ: ಬಿಜೆಪಿ ಕಿಡಿ
ಗಗ್ಗರ ಮನರಂಜನೆ ವಸ್ತುವಲ್ಲ, ಚಪ್ಪಲಿ ಹಾಕಿ ವೀಕ್ಷಣೆ ಸಲ್ಲ: ಬಿಜೆಪಿ ಕಿಡಿ
ಶಿಷ್ಟಾಚಾರ ಉಲ್ಲಂಘನೆ: ಬೀದರ್ ಡಿಹೆಚ್ಒ, ಬಸವಕಲ್ಯಾಣ ಟಿಹೆಚ್ಒ ಅಮಾನತು
ಶಿಷ್ಟಾಚಾರ ಉಲ್ಲಂಘನೆ: ಬೀದರ್ ಡಿಹೆಚ್ಒ, ಬಸವಕಲ್ಯಾಣ ಟಿಹೆಚ್ಒ ಅಮಾನತು
ಹುಲಿ ವೇಷದ ತಾಸೆಯ ಪೆಟ್ಟಿಗೆ ಬಸನಗೌಡ ಪಾಟೀಲ್ ಭರ್ಜರಿ ಸ್ಟೆಪ್ಸ್
ಹುಲಿ ವೇಷದ ತಾಸೆಯ ಪೆಟ್ಟಿಗೆ ಬಸನಗೌಡ ಪಾಟೀಲ್ ಭರ್ಜರಿ ಸ್ಟೆಪ್ಸ್
ಮತ್ತೆ ಶಾಸ್ತ್ರಿ ಕಿರಿಕ್; ಆಸಿಯಾ ತಾಳ್ಮೆ ಕಟ್ಟೆ ಒಡೆದೇಹೋಯ್ತು
ಮತ್ತೆ ಶಾಸ್ತ್ರಿ ಕಿರಿಕ್; ಆಸಿಯಾ ತಾಳ್ಮೆ ಕಟ್ಟೆ ಒಡೆದೇಹೋಯ್ತು
ಕೋಲಾರ ಜಿಲ್ಲಾ ಆಸ್ಪತ್ರೆಗೆ ಮಳೆ ನೀರು ನುಗ್ಗಿ ಅವಾಂತರ
ಕೋಲಾರ ಜಿಲ್ಲಾ ಆಸ್ಪತ್ರೆಗೆ ಮಳೆ ನೀರು ನುಗ್ಗಿ ಅವಾಂತರ
ಸಿದ್ದರಾಮಯ್ಯ ವೀಕ್ ಆದ್ರೆ ಕಾಂಗ್ರೆಸ್ ಸಹ ವೀಕ್: ಕೆಎನ್ ರಾಜಣ್ಣ
ಸಿದ್ದರಾಮಯ್ಯ ವೀಕ್ ಆದ್ರೆ ಕಾಂಗ್ರೆಸ್ ಸಹ ವೀಕ್: ಕೆಎನ್ ರಾಜಣ್ಣ
ಕರ್ಕಾಟಕ ರಾಶಿಗೆ ಕುಜ ಗ್ರಹ ಪ್ರವೇಶ ಇಂದು: ದ್ವಾದಶ ರಾಶಿಗಳ ದಿನ ಭವಿಷ್ಯ
ಕರ್ಕಾಟಕ ರಾಶಿಗೆ ಕುಜ ಗ್ರಹ ಪ್ರವೇಶ ಇಂದು: ದ್ವಾದಶ ರಾಶಿಗಳ ದಿನ ಭವಿಷ್ಯ
ಪ್ರಧಾನಿ ಮೋದಿ ಜನ್ಮದಿನಕ್ಕೆ ಸಿಎಂ ಧಾಮಿಯಿಂದ ಯಮುನಾ ಆರತಿ
ಪ್ರಧಾನಿ ಮೋದಿ ಜನ್ಮದಿನಕ್ಕೆ ಸಿಎಂ ಧಾಮಿಯಿಂದ ಯಮುನಾ ಆರತಿ
ಶಿಪ್ರಾ ನದಿ ದಂಡೆಯಲ್ಲಿ ದೀಪಗಳಿಂದಲೇ ಮೂಡಿದ ಪ್ರಧಾನಿ ಮೋದಿಯವರ ಬೃ
ಶಿಪ್ರಾ ನದಿ ದಂಡೆಯಲ್ಲಿ ದೀಪಗಳಿಂದಲೇ ಮೂಡಿದ ಪ್ರಧಾನಿ ಮೋದಿಯವರ ಬೃ
ಪ್ರಧಾನಿ ಮೋದಿ ಹುಟ್ಟುಹಬ್ಬ ಅಂಗವಾಗಿ ರಕ್ತದಾನ ಮಾಡಿದ ಪ್ರಲ್ಹಾದ್​​ ಜೋಶಿ
ಪ್ರಧಾನಿ ಮೋದಿ ಹುಟ್ಟುಹಬ್ಬ ಅಂಗವಾಗಿ ರಕ್ತದಾನ ಮಾಡಿದ ಪ್ರಲ್ಹಾದ್​​ ಜೋಶಿ