
ಬೆಂಗಳೂರು, ಸೆಪ್ಟೆಂಬರ್ 18: ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಕೈದಿಗಳ ಪುನರ್ವಸತಿ ಮತ್ತು ಕೌಶಲ್ಯಾಭಿವೃದ್ಧಿಗಾಗಿ ಕರ್ನಾಟಕ ಕಾರಾಗೃಹ ಇಲಾಖೆಯು ಪರಪ್ಪನ ಅಗ್ರಹಾರ ಜೈಲಿನಲ್ಲಿ ನವ ಸಂಕಲ್ಪ ಬೇಕರಿ ಆರಂಭಿಸಿದ್ದು, ಕಾರಾಗೃಹ ಡಿಜಿಪಿ ಅಲೋಕ್ ಕುಮಾರ್ ಇದರ ಲೋಕಾರ್ಪಣೆ ನೆರವೇರಿಸಿದ್ದಾರೆ. ಇದೇ ವೇಳೆ ನವ ಸಂಕಲ್ಪ ಬೇಕರಿ ಆನ್ ವೀಲ್ಸ್ಗೂ ಚಾಲನೆ ನೀಡಲಾಗಿದೆ. ಹೊಸ ಸಜಾ ಬಂಧಿಗಳಿಗೆ ಬೇಕರಿ ಉತ್ಪನ್ನ ತಯಾರಿಕೆ ತರಬೇತಿ ನೀಡಲಾಗಿದ್ದು, ತರಬೇತಿ ಪೂರ್ಣಗೊಳಿಸಿದ ಬಂಧಿಗಳಿಗೆ ಪ್ರಮಾಣ ಪತ್ರ ವಿತರಣೆ ಕಾರ್ಯಕ್ರಮವೂ ನಡೆದಿದೆ.
ಬೆಂಗಳೂರು ವಿವಿಧ ನ್ಯಾಯಾಲಯಗಳ ಆವರಣ, ಬಸ್ ನಿಲ್ದಾಣಗಳಲ್ಲಿ ಬೇಕರಿ ಆನ್ ವೀಲ್ಸ್ ಮೂಲಕ ಬೇಕರಿ ಉತ್ಪನ್ನಗಳ ಮಾರಾಟಕ್ಕೆ ನಿರ್ಧರಿಸಲಾಗಿದ್ದು, ಆ ಮೂಲಕ ಆದಾಯ ಹೆಚ್ಚಿಸುವ ಉದ್ದೇಶ ಹೊಂದಲಾಗಿದೆ. ಜೈಲಿನಿಂದ ರಿಲೀಸ್ ಬಳಿಕವೂ ಬಂಧಿಗಳು ಸ್ವಾವಲಂಬಿ ಜೀವನ ನಡೆಸಲು ಇದು ಸಹಾಯ ಆಗಲಿದೆ. 2026ರ ಗಣರಾಜ್ಯೋತ್ಸವದ ಅಂಗವಾಗಿ ಬೆಂಗಳೂರಿನ ಮಾಣಿಕ್ ಶಾ ಪರೇಡ್ ಮೈದಾನದಲ್ಲಿ ನಡೆದ ಮುಖ್ಯ ಸಮಾರಂಭದಲ್ಲಿ, ರಾಜ್ಯಪಾಲರು ಸೇರಿದಂತೆ ಹಲವು ಗಣ್ಯರಿಗೆ ಕೈದಿಗಳು ತಯಾರಿಸಿದ ತಿಂಡಿ-ತಿನಿಸುಗಳನ್ನು ಉಪಹಾರವಾಗಿ ಉಣಬಡಿಸಲಾಗಿತ್ತು.
ಇದನ್ನೂ ಓದಿ: ಪರಪ್ಪನ ಅಗ್ರಹಾರ ಜೈಲಿನಲ್ಲೇ ಮಾರಾಟವಾಗುತ್ತಿತ್ತು ಫೋನ್! 1 ಮೊಬೈಲ್ 1 ಲಕ್ಷ ರೂ.ಗೆ ಸೇಲ್
Rebuilding lives & giving hope for the future must be at the core of Prison & Correctional Administration
New Bakery unit and Bakery on wheels takes off at Bangalore Central Prison . Thnx for all assistance HCL E -Haat . Well done Team Anshu Kumar,IPS @ BCP
Still long way to go pic.twitter.com/dBonXheswZ— alok kumar (@alokkumar6994) September 18, 2026
ನವ ಸಂಕಲ್ಪ ಬೇಕರಿ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಸಂದೇಶ ಹಂಚಿಕೊಂಡಿರುವ ಕಾರಾಗೃಹ ಡಿಜಿಪಿ ಅಲೋಕ್ ಕುಮಾರ್, ಬೆಂಗಳೂರು ಕೇಂದ್ರ ಕಾರಾಗೃಹದಲ್ಲಿ ಹೊಸ ಬೇಕರಿ ಘಟಕ ಹಾಗೂ ‘ಬೇಕರಿ ಆನ್ ವೀಲ್ಸ್’ ಸೇವೆಗೆ ಚಾಲನೆ ನೀಡಲಾಗಿದೆ. ಇದಕ್ಕೆ ಅಗತ್ಯ ಸಹಕಾರ ನೀಡಿದ HCL ಇ-ಹಾಟ್ಗೆ ಧನ್ಯವಾದಗಳು. ಐಪಿಎಸ್ ಅಧಿಕಾರಿ ಅನುಶ್ ಕುಮಾರ್ ಹಾಗೂ ಬೆಂಗಳೂರು ಕೇಂದ್ರ ಕಾರಾಗೃಹದ ಇಡೀ ತಂಡಕ್ಕೆ ಅಭಿನಂದನೆಗಳು. ಇನ್ನೂ ಬಹಳ ದೂರ ಸಾಗಬೇಕಿದೆ ಎಂದಿದ್ದಾರೆ.
ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.