AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೈಲುಗಳಲ್ಲಿ ಡ್ರಗ್ಸ್ ನೆಟ್​ವರ್ಕ್​ ಬ್ರೇಕ್ ಹಾಕಲು ಡಿಜಿಪಿ ಪ್ಲಾನ್; ರಾಜ್ಯದ ಎಲ್ಲಾ ಜೈಲುಗಳ ಕೈದಿಗಳಿಗೆ ಡ್ರಗ್ಸ್ ಟೆಸ್ಟ್!

ರಾಜ್ಯದ ಜೈಲುಗಳಲ್ಲಿ ಮಾದಕ ವಸ್ತುಗಳ ಸೇವನೆ ತಡೆಯಲು ಕಾರಾಗೃಹ ಇಲಾಖೆ ಮಹತ್ವದ ಕ್ರಮ ಕೈಗೊಂಡಿದೆ. ಸಿಬ್ಬಂದಿಯಿಂದಲೂ ಮಾದಕ ವಸ್ತುಗಳು ಜೈಲಿಗೆ ಸಾಗಣೆಯಾದ ಘಟನೆಗಳ ಹಿನ್ನೆಲೆಯಲ್ಲಿ, ನಿಮ್ಹಾನ್ಸ್ ಸಹಯೋಗದೊಂದಿಗೆ ಕೈದಿಗಳಿಗೆ ಡ್ರಗ್ ಪರೀಕ್ಷೆಗಳನ್ನು ನಡೆಸಲಾಗುತ್ತಿದೆ. ಸಕಾರಾತ್ಮಕ ಫಲಿತಾಂಶ ಬಂದ ಕೈದಿಗಳಿಗೆ ಸದ್ಯ ಕ್ರಿಮಿನಲ್ ಪ್ರಕರಣಗಳಿಲ್ಲದೆ ಕೌನ್ಸೆಲಿಂಗ್ ಮತ್ತು ಚಿಕಿತ್ಸೆ ನೀಡಿ ಡ್ರಗ್ಸ್ ಮುಕ್ತ ಜೀವನಕ್ಕೆ ಪ್ರೇರೇಪಿಸುವುದು ಈ ಯೋಜನೆಯ ಮುಖ್ಯ ಉದ್ದೇಶ ಎನ್ನಲಾಗಿದೆ.

ಜೈಲುಗಳಲ್ಲಿ ಡ್ರಗ್ಸ್ ನೆಟ್​ವರ್ಕ್​ ಬ್ರೇಕ್ ಹಾಕಲು ಡಿಜಿಪಿ ಪ್ಲಾನ್; ರಾಜ್ಯದ ಎಲ್ಲಾ ಜೈಲುಗಳ ಕೈದಿಗಳಿಗೆ ಡ್ರಗ್ಸ್ ಟೆಸ್ಟ್!
ಜೈಲುಗಳಲ್ಲಿ ಡ್ರಗ್ಸ್ ನೆಟ್​ವರ್ಕ್​ ಬ್ರೇಕ್ ಹಾಕಲು ಡಿಜಿಪಿ ಪ್ಲಾನ್; ರಾಜ್ಯದ ಎಲ್ಲಾ ಜೈಲುಗಳ ಕೈದಿಗಳಿಗೆ ಡ್ರಗ್ಸ್ ಟೆಸ್ಟ್!
ಪ್ರದೀಪ್​ ಚಿಕ್ಕಾಟಿ
| Edited By: |

Updated on: Mar 14, 2026 | 10:54 AM

Share

ಬೆಂಗಳೂರು, ಮಾರ್ಚ್ 14: ರಾಜ್ಯದ ಜೈಲುಗಳಲ್ಲಿ ಮಾದಕ ವಸ್ತುಗಳ ಬಳಕೆಯನ್ನು ಸಂಪೂರ್ಣವಾಗಿ ತಡೆಯಲು ಕಾರಾಗೃಹ ಇಲಾಖೆ ಮಹತ್ವದ ಕ್ರಮ ಕೈಗೊಂಡಿದೆ. ಕಾರಾಗೃಹ ಇಲಾಖೆ ಡಿಜಿಪಿ ಅಲೋಕ್ ಕುಮಾರ್ (Alok Kumar) ಅವರ ಸೂಚನೆಯಂತೆ ರಾಜ್ಯದ ಎಲ್ಲಾ ಜೈಲುಗಳಲ್ಲಿ ಕೈದಿಗಳನ್ನು ಮಾದಕ ವಸ್ತು ಪರೀಕ್ಷೆಗೆ ಒಳಪಡಿಸಲಾಗುತ್ತಿದೆ.

ಈಗಾಗಲೇ ರಾಜ್ಯದ ಶೇ10 ಕೈದಿಗಳಿಗೆ ಟೆಸ್ಟ್

ಪರಪ್ಪನ ಅಗ್ರಹಾರದಲ್ಲಿ ಮಾರ್ಚ್ 9 ರಂದು ಸಿಬ್ಬಂದಿಯೇ ತನ್ನ ಒಳುಡುಪಿನಲ್ಲಿ ಮಾದಕ ವಸ್ತುಗಳನ್ನು ಜೈಲಿನೊಳಗೆ ತಂದ ಘಟನೆ ನಡೆದಿತ್ತು. ಇದೊಂದೇ ಅಲ್ಲದೆ ಹಲವು ಬಾರಿ ರಾಜ್ಯದ ಜೈಲುಗಳಲ್ಲಿ ಈ ರೀತಿಯ ಅಕ್ರಮಗಳು ಬೆಳಕಿಗೆ ಬಂದಿವೆ. ಈ ಹಿನ್ನೆಲೆ ನಿಮ್ಹಾನ್ಸ್ ಆಸ್ಪತ್ರೆಯ ಸಹಯೋಗದೊಂದಿಗೆ ಡ್ರಗ್ಸ್ ಮುಕ್ತ ಕಾರಾಗೃಹ ನಿರ್ಮಾಣ ಮಾಡುವ ಗುರಿಯಿಂದ ಕೈದಿಗಳನ್ನು ಪರೀಕ್ಷೆಗೆ ಒಳಪಡಿಸಲಾಗುತ್ತಿದೆ.

ಈ ಯೋಜನೆಯಡಿ ರಾಜ್ಯದ ಜೈಲುಗಳಲ್ಲಿ ಕೈದಿಗಳಿಗೆ ಗಾಂಜಾ, ಹೆರೊಯಿನ್, ಕೊಕೈನ್ ಸೇರಿದಂತೆ ವಿವಿಧ ಮಾದಕ ವಸ್ತುಗಳ ಪರೀಕ್ಷೆಗಳನ್ನು ನಡೆಸಲಾಗುತ್ತಿದೆ. ಸದ್ಯ ಮೊದಲ ಹಂತದಲ್ಲಿ ಎಲ್ಲಾ ಜೈಲುಗಳಲ್ಲಿ ಸುಮಾರು ಶೇ10ರಷ್ಟು ಕೈದಿಗಳಿಗೆ ಪರೀಕ್ಷೆ ನಡೆಸಲಾಗುತ್ತಿದೆ. ಕಾರಾಗೃಹ ಇಲಾಖೆ ನೀಡಿರುವ ವಿಶೇಷ ಕಿಟ್‌ಗಳ ಮೂಲಕ ಜೈಲು ವೈದ್ಯಾಧಿಕಾರಿಗಳು ಈ ಪರೀಕ್ಷೆಗಳನ್ನು ಮಾಡುತ್ತಿದ್ದಾರೆ.

ಇದನ್ನೂ ಓದಿ ಒಳ ಉಡುಪಿನಲ್ಲಿ ಗಾಂಜಾ ತಂದು ಕೈದಿಗಳಿಗೆ ಸಪ್ಲೈ! ಪರಪ್ಪನ ಅಗ್ರಹಾರದಲ್ಲಿ ವಾರ್ಡನ್​ನಿಂದಲೇ ಕಳ್ಳಾಟ

ಮಾದಕ ವಸ್ತು ಸೇವನೆ ಪತ್ತೆಯಾದರೆ ಕೌನ್ಸೆಲಿಂಗ್

ಪರೀಕ್ಷೆಯಲ್ಲಿ ಕೈದಿಗಳು ಮಾದಕ ವಸ್ತು ಸೇವಿಸಿರುವುದು ಪತ್ತೆಯಾದರೆ ತಕ್ಷಣವೇ ಅವರಿಗೆ ಕೌನ್ಸೆಲಿಂಗ್ ನೀಡಲಾಗುತ್ತದೆ. ಹೆಚ್ಚು ಅಡಿಕ್ಟ್ ಆಗಿರುವ ಕೈದಿಗಳನ್ನು ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡುವ ವ್ಯವಸ್ಥೆಯೂ ಮಾಡಲಾಗಿದೆ. ಆದರೆ ಈ ಪರೀಕ್ಷೆಯಲ್ಲಿ ಮಾದಕ ವಸ್ತು ಸೇವನೆ ಪತ್ತೆಯಾದ ಕೈದಿಗಳ ಮೇಲೆ ಸದ್ಯಕ್ಕೆ ಯಾವುದೇ ಕ್ರಿಮಿನಲ್ ಪ್ರಕರಣ ದಾಖಲಿಸಲಾಗುವುದಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬದಲಿಗೆ ಕೌನ್ಸೆಲಿಂಗ್ ಮತ್ತು ಚಿಕಿತ್ಸೆಯ ಮೂಲಕ ಕೈದಿಗಳನ್ನು ಸರಿಯಾದ ದಾರಿಗೆ ತರಲು ಕಾರಾಗೃಹ ಇಲಾಖೆ ಮುಂದಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಇಂದು ಈ ರಾಶಿಯವರಿಗೆ ಸ್ವಲ್ಪ ಖರ್ಚು ಹೆಚ್ಚಾಗುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಸ್ವಲ್ಪ ಖರ್ಚು ಹೆಚ್ಚಾಗುವ ಸಾಧ್ಯತೆ
ಮುಂಬೈನಲ್ಲಿ ವರುಣನ ಆರ್ಭಟಕ್ಕೆ ಕೆರೆಯಂತಾದ ರಸ್ತೆಗಳು
ಮುಂಬೈನಲ್ಲಿ ವರುಣನ ಆರ್ಭಟಕ್ಕೆ ಕೆರೆಯಂತಾದ ರಸ್ತೆಗಳು
ಮೆಟ್ರೋ ನಿಲ್ದಾಣಗಳಲ್ಲಿ ಪ್ರಥಮ ಚಿಕಿತ್ಸಾ ಕೇಂದ್ರ ತೆರೆಯಲು ಆದೇಶ
ಮೆಟ್ರೋ ನಿಲ್ದಾಣಗಳಲ್ಲಿ ಪ್ರಥಮ ಚಿಕಿತ್ಸಾ ಕೇಂದ್ರ ತೆರೆಯಲು ಆದೇಶ
ಗಾಯಕಿಯಾದ ಪತ್ನಿ ಶಿಲ್ಪಾ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಗಣೇಶ್ ಕಾಮಿಡಿ ಮಾತು
ಗಾಯಕಿಯಾದ ಪತ್ನಿ ಶಿಲ್ಪಾ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಗಣೇಶ್ ಕಾಮಿಡಿ ಮಾತು
ಭೂ ಪರಿಹಾರ ನೀಡದಿದ್ದಕ್ಕೆ ಡಿಸಿ ಆವರಣದಲ್ಲಿರುವ ಸರ್ಕಾರಿ ಕಚೇರಿಯೇ ಜಪ್ತಿ
ಭೂ ಪರಿಹಾರ ನೀಡದಿದ್ದಕ್ಕೆ ಡಿಸಿ ಆವರಣದಲ್ಲಿರುವ ಸರ್ಕಾರಿ ಕಚೇರಿಯೇ ಜಪ್ತಿ
ಬಿಜೆಪಿಯಲ್ಲಿ ಬಿರುಗಾಳಿ ಎಬ್ಬಿಸಿದ ಶಾಸಕರ ಅಡ್ಡಮತದಾನ
ಬಿಜೆಪಿಯಲ್ಲಿ ಬಿರುಗಾಳಿ ಎಬ್ಬಿಸಿದ ಶಾಸಕರ ಅಡ್ಡಮತದಾನ
ಕನ್ನಡದವರು ಬೆಳೆಸಲ್ಲ ಎಂದಿದ್ದ ಸೋನು, ಈಗ ಮತ್ತೆ ಕನ್ನಡ ಚಿತ್ರರಂಗಕ್ಕೆ
ಕನ್ನಡದವರು ಬೆಳೆಸಲ್ಲ ಎಂದಿದ್ದ ಸೋನು, ಈಗ ಮತ್ತೆ ಕನ್ನಡ ಚಿತ್ರರಂಗಕ್ಕೆ
ಸಿದ್ದರಾಮಯ್ಯರನ್ನು ಕಡೆಗಣಿಸಿದ್ರೆ ದೊಡ್ಡ ಬ್ಲಂಡರ್: ರಾಜಣ್ಣ ಎಚ್ಚರಿಕೆ
ಸಿದ್ದರಾಮಯ್ಯರನ್ನು ಕಡೆಗಣಿಸಿದ್ರೆ ದೊಡ್ಡ ಬ್ಲಂಡರ್: ರಾಜಣ್ಣ ಎಚ್ಚರಿಕೆ
ರಾಜ್ಯದ ಜನತೆಗೆ ಮತ್ತೊಂದು ಬೆಲೆ ಏರಿಕೆ ಶಾಕ್?
ರಾಜ್ಯದ ಜನತೆಗೆ ಮತ್ತೊಂದು ಬೆಲೆ ಏರಿಕೆ ಶಾಕ್?
ವಿದ್ಯುತ್ ಖಾಸಗೀಕರಣಗೊಳಿಸುವ ಬಗ್ಗೆ ಇಂಧನ ಸಚಿವ ಕೊಟ್ಟ ಸ್ಙಷ್ಟನೆ ಹೀಗಿದೆ
ವಿದ್ಯುತ್ ಖಾಸಗೀಕರಣಗೊಳಿಸುವ ಬಗ್ಗೆ ಇಂಧನ ಸಚಿವ ಕೊಟ್ಟ ಸ್ಙಷ್ಟನೆ ಹೀಗಿದೆ