AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಬೀದಿ ಬದಿ ಅಂಗಡಿಗಳ ತೆರವು; ಹೃದಯಾಘಾತದಿಂದ ವ್ಯಾಪಾರಿ ಸಾವು

ಜಯನಗರದಲ್ಲಿ ಬೀದಿ ಬದಿ ಅಂಗಡಿಗಳ ತೆರವು ಕಾರ್ಯಾಚರಣೆ ವೇಳೆ ಓರ್ವ ವ್ಯಾಪಾರಿ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ನಡೆದಿದೆ. ಕೃಷ್ಣ(49) ಮೃತ ವ್ಯಕ್ತಿ. ಜಯನಗರ (Jayanagara) ದಲ್ಲಿ ಕಳೆದ 25 ವರ್ಷಗಳಿಂದ ತಾಯಿ ರತ್ನಮ್ಮ ಜೊತೆ ಮೃತ ಕೃಷ್ಣ ವ್ಯಾಪಾರಕ್ಕೆ ಸಹಾಯ ಮಾಡುತ್ತಿದ್ದ.

ಬೆಂಗಳೂರು: ಬೀದಿ ಬದಿ ಅಂಗಡಿಗಳ ತೆರವು; ಹೃದಯಾಘಾತದಿಂದ ವ್ಯಾಪಾರಿ ಸಾವು
ಜಯನಗರ
Jagadisha B
| Edited By: |

Updated on:Nov 09, 2023 | 3:12 PM

Share

ಬೆಂಗಳೂರು, ನ.09: ಜಯನಗರದಲ್ಲಿ ಬೀದಿ ಬದಿ ಅಂಗಡಿಗಳ ತೆರವು ಕಾರ್ಯಾಚರಣೆ ವೇಳೆ ಓರ್ವ ವ್ಯಾಪಾರಿ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ನಡೆದಿದೆ. ಕೃಷ್ಣ(49) ಮೃತ ವ್ಯಕ್ತಿ. ಜಯನಗರ (Jayanagara) ದಲ್ಲಿ ಕಳೆದ 25 ವರ್ಷಗಳಿಂದ ತಾಯಿ ರತ್ನಮ್ಮ ಜೊತೆ ಮೃತ ಕೃಷ್ಣ ವ್ಯಾಪಾರಕ್ಕೆ ಸಹಾಯ ಮಾಡುತ್ತಿದ್ದ. ಆದರೆ, ಅಧಿಕಾರಿಗಳು ಇವರ ವ್ಯಾಪಾರಕ್ಕೆ ಅವಕಾಶ ನೀಡದ ಹಿನ್ನಲೆ ಮನನೊಂದು ಈ ಘಟನೆ ಸಂಭವಿಸಿದೆ ಎನ್ನಲಾಗಿದೆ. ಇನ್ನು ಈ ಘಟನೆ ಕಳೆದ ನಾಲ್ಕು ದಿನಗಳ ಹಿಂದೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

ಘಟನೆ ವಿವರ

ಹೌದು, ನವೆಂಬರ್​​​​​ 07 ರಂದು ಬಿಬಿಎಂಪಿ ಮಾರ್ಷಲ್‌ಗಳ ತಂಡ ಸ್ಥಳಕ್ಕೆ ಆಗಮಿಸಿ, ಜೆಸಿಬಿ‌ ಮೂಲಕ ಜಯನಗರದ ಬಿಡಿಎ ಕಾಂಪ್ಲೆಕ್ಸ್ ಬಳಿ ಇದ್ದ ಬೀದಿಬದಿ ಅಂಗಡಿಗಳನ್ನು ತೆರವು ಮಾಡಲಾಗಿತ್ತು. ಫುಟ್​​ಪಾತ್​​ನಲ್ಲಿದ್ದ ಅಕ್ರಮ ಶೆಡ್​, ಬಟ್ಟೆ ಅಂಡಿಗಳನ್ನು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ತೆರವುಗೊಳಿಸಿತ್ತು. ಆ ಮೂಲಕ ಪಾದಚಾರಿಗಳ ಮಾರ್ಗ ಸುಗಮಗೊಳಿಸಲಾಗಿತ್ತು. ಈ ಹಿನ್ನಲೆ ಬೀದಿಬದಿ ವ್ಯಾಪಾರಿಗಳು ಅತಂತ್ರ ಸ್ಥಿತಿಯಲ್ಲಿದ್ದು, ಅಂಗಡಿಗಳ ತೆರವು ಕಾರ್ಯಕ್ಕೆ  ವ್ಯಾಪಾರಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ:ಜಯನಗರ: ಬೀದಿಬದಿ ಅಂಗಡಿಗಳ ತೆರವು: ಬಿಬಿಎಂಪಿ ವಿರುದ್ಧ ವ್ಯಾಪಾರಸ್ಥರ ಆಕ್ರೋಶ

ಬಳಿಕ ಈ ಕುರಿತು ಮಾತನಾಡಿದ್ದ ಉಸ್ತುವಾರಿ ಅಧಿಕಾರಿ ಸೋಮಶೇಖರ್​,  ‘ಸುಮಾರು 200 ಅನಧಿಕೃತ ಮಳಿಗೆಗಳನ್ನು ತೆಗೆದುಹಾಕಲಾಗಿದೆ. ಈ ಎಲ್ಲಾ ಬೀದಿ ಬದಿ ವ್ಯಾಪಾರಸ್ಥರು ಅಕ್ರಮವಾಗಿ ವ್ಯಾಪಾರ ನಡೆಸುತ್ತಿದ್ದಾರೆ ಎಂದು ತಿಳಿಸಿ ಫುಟ್ ಪಾತ್ ತೆರವು ಮಾಡಬೇಕು ಎಂದು 6 ತಿಂಗಳ ಹಿಂದೆ ಹೇಳಲಾಗಿತ್ತು. ಬಳಿಕ ಸುಮಾರು ಮೂರು ತಿಂಗಳ ಹಿಂದೆ ಮತ್ತೆ ಎಚ್ಚರಿಕೆ ನೀಡಿಲಾಗಿತ್ತು. ಅಷ್ಟೇ ಅಲ್ಲ, ನವೆಂಬರ್ 4 ರಂದು ನಾವು ಈ ಪ್ರದೇಶದಲ್ಲಿ ತೆರೆದ ಮೈಕ್ ಬಳಸಿ, ಅಕ್ರಮ ಮಳಿಗೆಗಳನ್ನು ತೆರವುಗೊಳಿಸುವುದಾಗಿ ಹೇಳಿದ್ದೇವು. ಆ ಹಿನ್ನೆಲೆ ನಾವು ಫುಟ್‌ಪಾತ್‌ಗಳಲ್ಲಿನ ಅಕ್ರಮ ಅಂಗಡಿಗಳನ್ನು ನೆಲಸಮಗೊಳಿಸಿದ್ದೇವೆ ಎಂದು ಹೇಳಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 3:02 pm, Thu, 9 November 23

Follow Us
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!