AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜುವೆಲ್ಲರಿ ಶಾಪ್ ಮಾಲೀಕನ ಕಳ್ಳಾಟ ಬಯಲು, ಚಿನ್ನ ಕಳ್ಳತನವಾಗಿದೆ ಎಂದು ದೂರು ನೀಡಿದ್ದವನನ್ನೇ ಬಂಧಿಸಿದ ಪೊಲೀಸ್ರು

ಇನ್ಸ್ಯೂರೆನ್ಸ್ ಕ್ಲೈಂಗಾಗಿ ತನ್ನ ಅಂಗಡಿಯ ಚಿನ್ನ ಕಳುವಾಗಿದೆ ಎಂದು ನಾಟಕವಾಡಿ ಪೊಲೀಸರಿಗೆ ದೂರು ನೀಡಿದ್ದ ಜುವೆಲ್ಲರಿ ಅಂಗಡಿ ಮಾಲೀಕನ ಕಳ್ಳಾಟ ಬಟಾಬಯಲಾಗಿದ್ದು, ಇದೀಗ ದೂರು ನೀಡಿದ್ದವನೇ ಪೊಲೀಸರ ಅತಿಥಿಯಾಗಿದ್ದಾನೆ.

ಜುವೆಲ್ಲರಿ ಶಾಪ್ ಮಾಲೀಕನ ಕಳ್ಳಾಟ ಬಯಲು, ಚಿನ್ನ ಕಳ್ಳತನವಾಗಿದೆ ಎಂದು ದೂರು ನೀಡಿದ್ದವನನ್ನೇ ಬಂಧಿಸಿದ ಪೊಲೀಸ್ರು
ಮಾಲೀಕ ರಾಜ್ ಜೈನ್ ,ಬಂಧಿತ ವ್ಯಕ್ತಿ
Jagadisha B
| Edited By: |

Updated on:Jul 31, 2023 | 3:17 PM

Share

ಬೆಂಗಳೂರು, (ಜುಲೈ 31): ಇನ್ಸ್ಯೂರೆನ್ಸ್ ಕ್ಲೈಂಗಾಗಿ ಜುವೆಲ್ಲರಿ ಶಾಪ್ (Jewellery Shop) ಮಾಲೀಕನ ಕಳ್ಳಾಟ ಬಟಾಯಲಾಗಿದೆ. ಹೌದು..2.7 ಕೆಜಿ ಚಿನ್ನ (Gold) ಕಳ್ಳತನವಾಗಿದೆ ಎಂದು ನಾಟಕವಾಡಿ ದೂರು ನೀಡಿದ್ದ ಬೆಂಗಳೂರಿನ (bengaluru) ನಗರತ್ ಪೇಟೆಯಲ್ಲಿ ವ್ಯಕ್ತಿಯನ್ನೇ ಪೊಲೀಸರು ಬಂಧಿಸಿದ್ದಾರೆ. ನಗರತ್ ಪೇಟೆಯಲ್ಲಿರುವ ಕೈಲಾಶ್ ಜುವೆಲ್ಲರಿ ಅಂಗಡಿ ಮಾಲೀಕ ರಾಜ್ ಜೈನ್ ಎನ್ನುವಾತನನ್ನು ಬಂಧಿಸಿ 2.7 ಕೆಜಿ ಚಿನ್ನ ಕಳ್ಳತನ ಬಗ್ಗೆ ವಿಚಾರಣೆ ನಡೆಸಿದಾಗ ಕಳ್ಳಾಟ ಬಯಲಿಗೆ ಬಂದಿದೆ.

ಇದನ್ನೂ ಓದಿ: 25 ಲಕ್ಷ ರೂ. ಪಡೆದು ಬೆಂಗಳೂರು ವ್ಯಕ್ತಿಗೆ ವಂಚಿಸಿದ ಖದೀಮರು, ತಿರುಪತಿಗೆ ಕರೆಸಿಕೊಂಡು ನಾಮ ಹಾಕಿದವರು ಯಾರು?

ಬೆಂಗಳೂರಿನ ನಗರತ್ ಪೇಟೆಯಲ್ಲಿ ಜುವೆಲ್ಲರಿ ಶಾಪ್ ಹೊಂದಿರುವ ಮಾಲೀಕ ರಾಜ್ ಜೈನ್, ತನ್ನ ಅಂಗಡಿ ಹುಡುಗರು ಹೈದರಾಬಾದ್​ಗೆ ಚಿನ್ನ ಸಾಗಿಸುತಿದ್ದ ವೇಳೆ ದುಷ್ಕರ್ಮಿಗಳು ಸುಲಿಗೆ ಮಾಡಿದ್ದಾರೆ. ಹೊಂಡಾ ಆ್ಯಕ್ಟೀವ್ ನಲ್ಲಿ ಮಾರ್ಕೆಟ್ ಫ್ಲೈ ಓವರ್ ಮೇಲೆ ತೆರಳುತಿದ್ದ ಹುಡುಗರನ್ನ ದುಷ್ಕರ್ಮಿಗಳು ಅಡ್ಡಗಟ್ಟಿ ಸುಲಿಗೆ ಮಾಡಿದ್ದಾರೆ ಎಂದು ಜ್ಯುವಲರಿ ಮಾಲೀಕ ರಾಜ್ ಜೈನ್ ಕಾಟನ್ ಪೇಟೆ ಪೊಲೀಸ್​ ಠಾಣೆಗೆ ದೂರು ನೀಡಿದ್ದ.

ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿದ್ದ ಕಾಟನ್ ಪೇಟೆ ಪೊಲೀಸರು, ತನಿಖೆ ವೇಳೆ ಇಬ್ಬರು ಸಿಬ್ಬಂದಿಯನ್ನು ಬಳಸಿಕೊಂಡು ಜ್ಯುವೆಲೆರಿ ಅಂಗಡಿ ಮಾಲೀಕನೇ ಈ ಕೃತ್ಯ ಎಸಗಿರುವುದು ಬೆಳಕಿಗೆ ಬಂದಿದೆ. ಬಳಿಕ ಅಂಗಡಿ ಮಾಲೀಕನನ್ನು ಬಂಧಿಸಿ ವಿಚಾರಣೆ ನಡೆಸಿದ ಅಸಲಿ ಸಂಗತಿ ಬಯಲಾಗಿದೆ. ಇನ್ಸ್ಯೂರೆನ್ಸ್ ಕ್ಲೈಂಗಾಗಿ ಈ ರೀತಿ ಮಾಡಿರುವುದಾಗಿ ಕೈಲಾಶ್ ಜ್ಯುವಲರಿ ಮಾಲೀಕ ರಾಜ್ ಜೈನ್ ಒಪ್ಪಿಕೊಂಡಿದ್ದಾನೆ. ಸದ್ಯ ಅಂಗಡಿ ಮಾಲೀಕ ರಾಜ್ ಜೈನ್ ಹಾಗೂ ಇಬ್ಬರು ಬಾಲಾಪರಾಧಿಗಳನ್ನ ಬಂಧಿಸಿಧಿಸಿದ್ದು, ಬಂಧಿತರಿಂದ 2.7ಕೆಜಿ ಚಿನ್ನಾಭರಣ ವಶಕ್ಕೆ ಪಡೆದುಕೊಂಡಿದ್ದಾರೆ.

ಇನ್ನಷ್ಟು ಬೆಂಗಗಳೂರು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 3:13 pm, Mon, 31 July 23

Follow Us
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ