AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru: ಪ್ರಚಾರಕ್ಕಾಗಿ ಅರುಣ್ ಕೆ.ಆರ್.ಮಾರ್ಕೆಟ್ ಫ್ಲೈಓವರ್​ನಿಂದ 10ಸಾವಿರ ರೂಪಾಯಿ ಎಸೆದಿದ್ದಾನಂತೆ ಮಾರಾಯ್ರೆ!

ಬೆಂಗಳೂರಿನ ಮಾರ್ಕೆಟ್ ಫ್ಲೈಓವರ್​ನಲ್ಲಿ ಹಣ ಎಸೆದ ಪ್ರಕರಣ ಸಂಬಂಧ ಚಾಮರಾಜಪೇಟೆ ಠಾಣೆಯಲ್ಲಿ ನಡೆಯುತ್ತಿದ್ದ ಅರುಣ್‌ ವಿಚಾರಣೆ ಮುಕ್ತಾಯಗೊಂಡಿದ್ದು, ಸಾಮಾಜಿ ಜಾಲತಾಣದಲ್ಲಿ ಹೆಚ್ಚು ಪ್ರಚಾರ ಪಡೆಯಲು ಹಣ ಎಸೆದಿರುವುದಾಗಿ ತಿಳಿದುಬಂದಿದೆ.

Bengaluru: ಪ್ರಚಾರಕ್ಕಾಗಿ ಅರುಣ್ ಕೆ.ಆರ್.ಮಾರ್ಕೆಟ್ ಫ್ಲೈಓವರ್​ನಿಂದ 10ಸಾವಿರ ರೂಪಾಯಿ ಎಸೆದಿದ್ದಾನಂತೆ ಮಾರಾಯ್ರೆ!
ಕೆ.ಆರ್​.ಮಾರ್ಕೆಟ್ ಫ್ಲೈಓವರ್​ ಮೇಲಿಂದ ಹಣ ಎಸೆಯುತ್ತಿರುವ ಅರುಣ್ (ಎಡ ಚಿತ್ರ) ಮತ್ತು ಹಣ ಎಸೆದ ಅರುಣ್ (ಬಲ ಚಿತ್ರ)
TV9 Web
| Edited By: |

Updated on:Jan 24, 2023 | 6:13 PM

Share

ಬೆಂಗಳೂರು: ನಗರದ ಕೆ.ಆರ್.ಮಾರ್ಕೆಟ್ ಫ್ಲೈಓವರ್​ನಲ್ಲಿ (K.R.Market Flyover) ಹಣ ಎಸೆದ ಪ್ರಕರಣ ಸಂಬಂಧ ಚಾಮರಾಜಪೇಟೆ ಠಾಣೆಯಲ್ಲಿ ನಡೆಯುತ್ತಿದ್ದ ಅರುಣ್‌ ವಿಚಾರಣೆ ಮುಕ್ತಾಯಗೊಂಡಿದ್ದು, ಸಾಮಾಜಿಕ ಜಾಲತಾಣದಲ್ಲಿ ಪ್ರಚಾರದ ಹುಚ್ಚಿಗಾಗಿ ಹಣ ಎಸೆದಿರುವುದು ತಿಳಿದುಬಂದಿದೆ. ರೀಲ್ಸ್​ಗಾಗಿ ಮಾಡಿದ್ದಲ್ಲ, ನನಗೆ ಸ್ವಲ್ಪ ಸಮಯ ಕೊಡಿ ಎಲ್ಲವೂ ಹೇಳುತ್ತೇನೆ ಎಂದು ಮಾಧ್ಯಮದ ಮುಂದೆ ಹೇಳಿದ್ದ ಅರುಣ್, ಪೊಲೀಸರ ಮುಂದೆ, “ತಾನು ಸಾಮಾಜಿಕ ಜಾಲತಾಣಗಳಲ್ಲಿ ಪ್ರಚಾರ ಪಡೆಯಲು ಹಣ ಎಸೆದಿದ್ದೆ, ಹೆಚ್ಚು ಲೈಕ್ಸ್‌ ಹಾಗೂ ಪ್ರಚಾರ ಸಿಗಬೇಕು ಎಂದು ಈ ರೀತಿ ಮಾಡಿದ್ದೇನೆ” ಎಂದು ಬಾಯಿಬಿಟ್ಟಿದ್ದಾನೆ.

ಚಿಕ್ಕಪೇಟೆ ಎಸಿಪಿ ನೇತೃತ್ವದಲ್ಲಿ ಚಾಮರಾಜಪೇಟೆ ಪೊಲೀಸ್ ಠಾಣೆಯಲ್ಲಿ ಅರುಣ್ ವಿಚಾರಣೆ ನಡೆದಿದೆ. ಚೀಲದಲ್ಲಿ ನೋಟುಗಳನ್ನು ತುಂಬಿಸಿಕೊಂಡು ಬಂದ ಅರುಣ್ ಮಾರ್ಕೆಟ್ ಫ್ಲೈಓವರ್ ಮೇಲೆ ನಿಂತು ಹಣವನ್ನು ಕೆಳಭಾಗದಲ್ಲಿ ಜನರು ಓಡಾಡುವ ಸ್ಥಳಗಳಿಗೆ ಎಸೆದಿದ್ದಾನೆ. ಸುಮಾರು 4,500 ರೂ. ಹಣವನ್ನು ತೆಗೆದುಕೊಂಡು ಬಂದು ಎಸೆದಿದ್ದ ಅರುಣ್, ಪೊಲೀಸರ ಮುಂದೆ 10 ಸಾವಿರ ತಂದಿದ್ದಾಗಿ ಹೇಳಿಕೆ ನೀಡಿದ್ದಾನೆ.

ಇದನ್ನೂ ಓದಿ: ಬೆಂಗಳೂರಿನ ಮಾರ್ಕೆಟ್ ಫ್ಲೈಓವರ್​ನಿಂದ ಹಣ ಎಸೆದ ವ್ಯಕ್ತಿ ಖಾಕಿ ವಶಕ್ಕೆ

ಸಾಮಾಜಿಕ ಜಾಲತಾಣಗಳಾದ ಇನ್​ಸ್ಟಾಗ್ರಾಮ್ ಮತ್ತು ಫೇಸ್​ಬುಕ್​ನಲ್ಲಿ ಹೆಚ್ಚು ಲೈಕ್ಸ್ ಹಾಗೂ ಪ್ರಚಾರ ಪಡೆಯಲು ಫ್ಲೈಓವರ್​ನಿಂದ ಹಣ ಎಸೆದಿದ್ದೇನೆ. ಹಲವು ಜನರು ಬೇರೆ ಬೇರೆ ರೀತಿ ಮಾರ್ಕೆಟಿಂಗ್‌ ಮಾಡಿಕೊಳ್ಳುತ್ತಾರೆ. ಅದೇ ರೀತಿ ನನ್ನ ಮಾಲೀಕತ್ವದ ಈವೆಂಟ್‌ ಮ್ಯಾನೇಜ್‌ಮೆಂಟ್‌ಗೆ ಪ್ರಚಾರ ಬೇಕಿತ್ತು. ಹೀಗಾಗಿ ನಾನು ಹಣ ಎಸೆದು ಮಾರ್ಕೆಟಿಂಗ್‌ ಮಾಡಿಕೊಂಡೆ ಅಷ್ಟೇ. ಬೇರೆ ಯಾವುದೇ ಉದ್ದೇಶ ಇರಲಿಲ್ಲವೆಂದು ಹೇಳಿಕೆ ನೀಡಿದ್ದಾನೆ.

ಪಶ್ಚಿಮ ವಿಭಾಗ ಡಿಸಿಪಿ ಲಕ್ಷ್ಮಣ ನಿಂಬರಗಿ ಹೇಳಿದ್ದೇನು?

ಪ್ರಚಾರದ ಹುಚ್ಚಿಗಾಗಿ ಅರುಣ್ ಈ ರೀತಿ ಮಾಡಿದ್ದಾನೆ. ಜನರ ಓಡಾಟ ಜಾಸ್ತಿ ಇರುತ್ತೆಂದು ಮಾರ್ಕೆಂಟ್​ನಲ್ಲಿ ಹಣ ಎಸೆದಿದ್ದಾನೆ ಎಂದು ಪಶ್ಚಿಮ ವಿಭಾಗ ಡಿಸಿಪಿ ಲಕ್ಷ್ಮಣ ನಿಂಬರಗಿ ಮಾಹಿತಿ ನೀಡಿದ್ದಾರೆ. ಬೆಳಗ್ಗೆ 11ರ ಸುಮಾರಿಗೆ ಹಣ ಎಸೆದ ವಿಡಿಯೋ ವೈರಲ್ ಆಗಿತ್ತು. ಹಣ ಎಸೆದಿದ್ದರಿಂದ ಟ್ರಾಫಿಕ್ ಜಾಮ್​, ಇತರೆ ಸಮಸ್ಯೆ ಆಗಿತ್ತು. ಪರಿಶೀಲನೆ ಮಾಡಿದಾಗ ಆತ ಅರುಣ್​ ಎಂದು ತಿಳಿದು ಬಂದಿದೆ. ಗೆಳೆಯ ಸತೀಶ್​ ಜೊತೆಗೆ ಸೇರಿ ಅರುಣ್ ಈ ರೀತಿ ಮಾಡಿದ್ದಾನೆ. ಈ ಸಂಬಂಧ ಆರಂಭದಲ್ಲಿ ಸುಮೋಟೋ ಪ್ರಕರಣ ದಾಖಲಿಸಿದ್ದೆವು. ನಂತರ ಕೋರ್ಟ್​ ಅನುಮತಿ ಪಡೆದು ಎಫ್​ಐಆರ್ ದಾಖಲಿಸಿದ್ದೇವೆ. ಹಣ ಎರಚುವ ವಿಡಿಯೋ ಮಾಡಿ ಜಾಲತಾಣದಲ್ಲಿ ಹಾಕಿದ್ದಾನೆ. ಆಂಕರಿಂಗ್ ಮಾಡುವಾಗ ಬಂದ ಹಣವನ್ನು ಈ ರೀತಿ ಮಾಡಿದ್ದಾನೆ, ಎಷ್ಟು ಹಣ ಎಸೆದಿದ್ದಾನೆ ಎಂದು ತಿಳಿದಿಲ್ಲ ಎಂದರು.

ಏನಿದು ಪ್ರಕರಣ?

ನಗರದ ಕೆ.ಆರ್.ಮಾರ್ಕೆಟ್ ಫ್ಲೈಓವರ್​ ಮೇಲೆ ಬಂದ ಅರುಣ್ ಹಣ ಎಸೆದು ಸ್ಥಳದಿಂದ ತೆರಳಿದ್ದನು. ಈ ಪ್ರಕರಣ ಸಂಬಂಧ ತನಿಖೆಗೆ ಇಳಿದ ಪೊಲೀಸರು, ನಾಗಬಾವಿಯ ಅರುಣ್ ನಿವಾಸಕ್ಕೆ ನೋಟಿಸ್ ಜಾರಿ ಮಾಡಿದ್ದರು. ಇದೇ ವೇಳೆ ಯೂಟ್ಯೂಬ್​ ಚಾನಲ್ ಕಚೇರಿಯಲ್ಲಿ ಅರುಣ್ ಇರುವುದನ್ನು ಖಚಿತಪಡಿಸಿದ ಪೊಲೀಸರು ಕಚೇರಿಗೆ ಎಂಟ್ರಿ ಕೊಟ್ಟು ವಶಕ್ಕೆ ಪಡೆದು ಠಾಣೆಗೆ ಕರೆದೊಯ್ದಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:26 pm, Tue, 24 January 23

ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು