AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ವರ್ಷದ ಬೆಂಗಳೂರು ಕಂಬಳಕ್ಕೆ ಡೇಟ್ ಫಿಕ್ಸ್, ಈ ಬಾರಿ ಏನೆಲ್ಲಾ ವಿಶೇಷತೆ ಗೊತ್ತಾ?

ಕಳೆದ ವರ್ಷ ಬೆಂಗಳೂರಿನಲ್ಲಿ ಅದ್ದೂರಿಯಾಗಿ ಕಂಬಳ ನಡೆದಿತ್ತು. ಈ ವರ್ಷವು ಕಂಬಳ ನಡೆಸಲು ಸಿದ್ದತೆ ನಡೆಯುತ್ತಿದ್ದು, ಈ ವರ್ಷದ ಕಂಬಳಕ್ಕೆ ಡೇಟ್ ಸಹ ಫಿಕ್ಸ್ ಆಗಿದೆ. ಹಾಗಾದ್ರೆ ಈ ವರ್ಷದ ಕಂಬಳದ ವಿಶೇಷತೆಗಳೇನು..? ಯಾರೆಲ್ಲಾ ಬರುತ್ತಿದ್ದಾರೆ.? ಎನ್ನುವ ಸಂಪೂರ್ಣ ವಿವರ ಇಲ್ಲಿದೆ.

ಈ ವರ್ಷದ ಬೆಂಗಳೂರು ಕಂಬಳಕ್ಕೆ ಡೇಟ್ ಫಿಕ್ಸ್, ಈ ಬಾರಿ ಏನೆಲ್ಲಾ ವಿಶೇಷತೆ ಗೊತ್ತಾ?
ಬೆಂಗಳೂರು ಕಂಬಳ
Poornima Agali Nagaraj
| Edited By: |

Updated on: Aug 19, 2024 | 9:38 PM

Share

ಬೆಂಗಳೂರು, (ಆಗಸ್ಟ್​ 19): ಕಂಬಳ, ಕರಾವಳಿ ಕರ್ನಾಟಕದ ಒಂದು ಜಾನಪದ ಕ್ರೀಡೆ. ದಷ್ಟ- ಪುಷ್ಟವಾಗಿ ಬೆಳಸಿದ ಕೋಣಗಳನ್ನ ಹಸನಾಗಿ ಹದ ಮಾಡಿ ಮಣ್ಣಿನ ಗದ್ದೆಯಲ್ಲಿ ಓಡಿಸುವ ಸ್ಪರ್ಧೆಯೇ ಕಂಬಳ. ಈ ಕ್ರೀಡೆಯನ್ನ ಉಡುಪಿ , ದಕ್ಷಿಣ ಕನ್ನಡ ಹೆಚ್ಚಿನದಾಗಿ ಈ ಕಂಬಳ ನಡೆಸುತ್ತಾರೆ. ಸಾಮಾನ್ಯವಾಗಿ ಈ ಕಂಬಳವನ್ನ ರೈತಾಪಿ ಜನರು ಭತ್ತದ ಕೊಯಿಲಿನ ನಂತರದಲ್ಲಿ ಮನರಂಜನೆಗೋಸ್ಕರ ಈ ಕ್ರೀಡೆಯನ್ನ ಏರ್ಪಡಿಸಲಾಗುತ್ತಿತ್ತು. ಕಳೆದ ವರ್ಷ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಅದ್ದೂರಿಯಾಗಿ ಕಂಬಳ ನಡೆದಿತ್ತು. ಈ ವರ್ಷವು ಕಂಬಳ‌ ನಡೆಯುತ್ತಿದ್ದು, ಅದ್ದೂರಿಯಾ ಕಂಬಳಕ್ಕೆ ಡೇಟ್ ಫಿಕ್ಸ್ ಆಗಿದ್ದು, ಇದೇ ಅಕ್ಟೋಬರ್ 24, 25 ರಂದು ಕಂಬಳ‌ ನಡೆಸಲು ತೀರ್ಮಾನಿಸಲಾಗಿದೆ.

ಕಳೆದ ವರ್ಷ ಮೊಟ್ಟಮೊದಲು ಬಾರಿಗೆ ರಾಜಾಧಾನಿಯಲ್ಲಿ ಕಂಬಳ ನಡೆದಿತ್ತು. ಈ ವರ್ಷವು ಕಂಬಳ ಮುಂದುವರಿದಿದ್ದು, ಅಕ್ಟೋಬರ್ 24, 25 ರಂದು ಕಂಬಳ‌ ನಡೆಸಲು ಡೇಟ್ ಫಿಕ್ಸ್ ಆಗಿದೆ. ಇನ್ನು ಕಂಬಳ ಪ್ಯಾಲೇಸ್ ಗ್ರೌಂಡ್ ನಾ ಕಂಬಳದ ಟ್ರಾಕ್ ನಲ್ಲಿ ನಡೆಯಲಿದ್ದು, ಈಗಾಗಲೇ ಮೈಸೂರ್ ಮಹಾರಾಣಿಯವರಿಂದಲೂ ಒಪ್ಪಿಗೆ ಪಡೆದುಕೊಳ್ಳಲಾಗಿದೆ. ಇನ್ನು ಕಂಬಳಕ್ಕೆ ಈ ವರ್ಷ 180 ಜೋಡಿಯ ಕೋಣಗಳು ಭಾಗವಹಿಸಲಿದ್ದು, ಒಟ್ಟು ಎರಡು ದಿನಗಳ ಕಾಲ ಕಂಬಳ ನಡೆಯಲಿದೆ.

ಇದನ್ನೂ ಓದಿ: ಬೆಂಗಳೂರಲ್ಲಿ ಮತ್ತೆ ಮಹಾ ಮಳೆ, ಕೆರೆಯಂತಾದ ರಸ್ತೆಗಳು: ಇಲ್ಲಿವೆ ನೋಡಿ ಫೋಟೋಸ್

ಕಳೆದ ವರ್ಷ ಕಂಬಳಕ್ಕೆ 12 ಲಕ್ಷ ಜನರು ಬಂದಿದ್ರು. ಈ ವರ್ಷ 15 ಲಕ್ಷದಷ್ಟು ಜನರು ಬರುವ ಸಾಧ್ಯತೆ ಇದೆ. ಇನ್ನು ಈ ವರ್ಷದ ಕಂಬಳಕ್ಕೆ ಬಾಲಿವುಡ್ ನಟಿ ಐಶ್ವರ್ಯ ರೈ, ಶಿಲ್ಪಾ ಶೆಟ್ಟಿ, ಅನುಷ್ಕಾ ಶೆಟ್ಟಿ ಚೀಫ್ ಗೆಸ್ಟ್ ಆಗಿ ಬರುವ ಸಾಧ್ಯತೆ ಇದ್ದು, ಸಿಎಂ ಸಹ ಬರಲಿದ್ದಾರಂತೆ. ಇನ್ನು ಕಂಬಳಕ್ಕೆ ಬರುವ ಕೋಣಗಳನ್ನ ರೈಲಿನಲ್ಲಿ ತರಿಸಲು ಸಿದ್ದತೆಗಳು ನಡೆಯುತ್ತಿವೆ. ಈ ವರ್ಷದ ಕಂಬಳದಲ್ಲಿ ಕಂಬಳದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಿದ್ದು, ಬೆಂಗಳೂರಿಗರಿಗೆ ಕಂಬಳವನ್ನ ಪರಿಚಯಿಸುವ ಕೆಲಸವನ್ನ ತುಳುಕೂಟ ಮಾಡುತ್ತಿದೆ.

ಒಟ್ಟಿನಲ್ಲಿ ಇಷ್ಟು ದಿನ ಕರಾವಳಿ ಭಾಗದಲ್ಲಿ ಕಂಬಳ ನಡೆಯುವುದನ್ನ ನೋಡುತ್ತಿದ್ವಿ.‌ ಇದೀಗ ನಮ್ಮ ಬೆಂಗಳೂರಿನಲ್ಲಿ ಕಂಬಳ ನಡೆಯುತ್ತಿರುವುದು ಬಹಳ ವಿಶೇಷವಾಗಿದ್ದು, ಆ ದಿನವನ್ನ ಕಣ್ತುಂಬಿಕೊಳ್ಳಲು ಜನರು ಕಾತುರದಿಂದ ಕಾಯುತ್ತಿರುವುದು ಮಾತ್ರ ಸುಳ್ಳಲ್ಲ.‌

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್