Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ವರ್ಷದ ಬೆಂಗಳೂರು ಕಂಬಳಕ್ಕೆ ಡೇಟ್ ಫಿಕ್ಸ್, ಈ ಬಾರಿ ಏನೆಲ್ಲಾ ವಿಶೇಷತೆ ಗೊತ್ತಾ?

ಕಳೆದ ವರ್ಷ ಬೆಂಗಳೂರಿನಲ್ಲಿ ಅದ್ದೂರಿಯಾಗಿ ಕಂಬಳ ನಡೆದಿತ್ತು. ಈ ವರ್ಷವು ಕಂಬಳ ನಡೆಸಲು ಸಿದ್ದತೆ ನಡೆಯುತ್ತಿದ್ದು, ಈ ವರ್ಷದ ಕಂಬಳಕ್ಕೆ ಡೇಟ್ ಸಹ ಫಿಕ್ಸ್ ಆಗಿದೆ. ಹಾಗಾದ್ರೆ ಈ ವರ್ಷದ ಕಂಬಳದ ವಿಶೇಷತೆಗಳೇನು..? ಯಾರೆಲ್ಲಾ ಬರುತ್ತಿದ್ದಾರೆ.? ಎನ್ನುವ ಸಂಪೂರ್ಣ ವಿವರ ಇಲ್ಲಿದೆ.

ಈ ವರ್ಷದ ಬೆಂಗಳೂರು ಕಂಬಳಕ್ಕೆ ಡೇಟ್ ಫಿಕ್ಸ್, ಈ ಬಾರಿ ಏನೆಲ್ಲಾ ವಿಶೇಷತೆ ಗೊತ್ತಾ?
ಬೆಂಗಳೂರು ಕಂಬಳ
Follow us
Poornima Agali Nagaraj
| Updated By: ರಮೇಶ್ ಬಿ. ಜವಳಗೇರಾ

Updated on: Aug 19, 2024 | 9:38 PM

ಬೆಂಗಳೂರು, (ಆಗಸ್ಟ್​ 19): ಕಂಬಳ, ಕರಾವಳಿ ಕರ್ನಾಟಕದ ಒಂದು ಜಾನಪದ ಕ್ರೀಡೆ. ದಷ್ಟ- ಪುಷ್ಟವಾಗಿ ಬೆಳಸಿದ ಕೋಣಗಳನ್ನ ಹಸನಾಗಿ ಹದ ಮಾಡಿ ಮಣ್ಣಿನ ಗದ್ದೆಯಲ್ಲಿ ಓಡಿಸುವ ಸ್ಪರ್ಧೆಯೇ ಕಂಬಳ. ಈ ಕ್ರೀಡೆಯನ್ನ ಉಡುಪಿ , ದಕ್ಷಿಣ ಕನ್ನಡ ಹೆಚ್ಚಿನದಾಗಿ ಈ ಕಂಬಳ ನಡೆಸುತ್ತಾರೆ. ಸಾಮಾನ್ಯವಾಗಿ ಈ ಕಂಬಳವನ್ನ ರೈತಾಪಿ ಜನರು ಭತ್ತದ ಕೊಯಿಲಿನ ನಂತರದಲ್ಲಿ ಮನರಂಜನೆಗೋಸ್ಕರ ಈ ಕ್ರೀಡೆಯನ್ನ ಏರ್ಪಡಿಸಲಾಗುತ್ತಿತ್ತು. ಕಳೆದ ವರ್ಷ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಅದ್ದೂರಿಯಾಗಿ ಕಂಬಳ ನಡೆದಿತ್ತು. ಈ ವರ್ಷವು ಕಂಬಳ‌ ನಡೆಯುತ್ತಿದ್ದು, ಅದ್ದೂರಿಯಾ ಕಂಬಳಕ್ಕೆ ಡೇಟ್ ಫಿಕ್ಸ್ ಆಗಿದ್ದು, ಇದೇ ಅಕ್ಟೋಬರ್ 24, 25 ರಂದು ಕಂಬಳ‌ ನಡೆಸಲು ತೀರ್ಮಾನಿಸಲಾಗಿದೆ.

ಕಳೆದ ವರ್ಷ ಮೊಟ್ಟಮೊದಲು ಬಾರಿಗೆ ರಾಜಾಧಾನಿಯಲ್ಲಿ ಕಂಬಳ ನಡೆದಿತ್ತು. ಈ ವರ್ಷವು ಕಂಬಳ ಮುಂದುವರಿದಿದ್ದು, ಅಕ್ಟೋಬರ್ 24, 25 ರಂದು ಕಂಬಳ‌ ನಡೆಸಲು ಡೇಟ್ ಫಿಕ್ಸ್ ಆಗಿದೆ. ಇನ್ನು ಕಂಬಳ ಪ್ಯಾಲೇಸ್ ಗ್ರೌಂಡ್ ನಾ ಕಂಬಳದ ಟ್ರಾಕ್ ನಲ್ಲಿ ನಡೆಯಲಿದ್ದು, ಈಗಾಗಲೇ ಮೈಸೂರ್ ಮಹಾರಾಣಿಯವರಿಂದಲೂ ಒಪ್ಪಿಗೆ ಪಡೆದುಕೊಳ್ಳಲಾಗಿದೆ. ಇನ್ನು ಕಂಬಳಕ್ಕೆ ಈ ವರ್ಷ 180 ಜೋಡಿಯ ಕೋಣಗಳು ಭಾಗವಹಿಸಲಿದ್ದು, ಒಟ್ಟು ಎರಡು ದಿನಗಳ ಕಾಲ ಕಂಬಳ ನಡೆಯಲಿದೆ.

ಇದನ್ನೂ ಓದಿ: ಬೆಂಗಳೂರಲ್ಲಿ ಮತ್ತೆ ಮಹಾ ಮಳೆ, ಕೆರೆಯಂತಾದ ರಸ್ತೆಗಳು: ಇಲ್ಲಿವೆ ನೋಡಿ ಫೋಟೋಸ್

ಕಳೆದ ವರ್ಷ ಕಂಬಳಕ್ಕೆ 12 ಲಕ್ಷ ಜನರು ಬಂದಿದ್ರು. ಈ ವರ್ಷ 15 ಲಕ್ಷದಷ್ಟು ಜನರು ಬರುವ ಸಾಧ್ಯತೆ ಇದೆ. ಇನ್ನು ಈ ವರ್ಷದ ಕಂಬಳಕ್ಕೆ ಬಾಲಿವುಡ್ ನಟಿ ಐಶ್ವರ್ಯ ರೈ, ಶಿಲ್ಪಾ ಶೆಟ್ಟಿ, ಅನುಷ್ಕಾ ಶೆಟ್ಟಿ ಚೀಫ್ ಗೆಸ್ಟ್ ಆಗಿ ಬರುವ ಸಾಧ್ಯತೆ ಇದ್ದು, ಸಿಎಂ ಸಹ ಬರಲಿದ್ದಾರಂತೆ. ಇನ್ನು ಕಂಬಳಕ್ಕೆ ಬರುವ ಕೋಣಗಳನ್ನ ರೈಲಿನಲ್ಲಿ ತರಿಸಲು ಸಿದ್ದತೆಗಳು ನಡೆಯುತ್ತಿವೆ. ಈ ವರ್ಷದ ಕಂಬಳದಲ್ಲಿ ಕಂಬಳದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಿದ್ದು, ಬೆಂಗಳೂರಿಗರಿಗೆ ಕಂಬಳವನ್ನ ಪರಿಚಯಿಸುವ ಕೆಲಸವನ್ನ ತುಳುಕೂಟ ಮಾಡುತ್ತಿದೆ.

ಒಟ್ಟಿನಲ್ಲಿ ಇಷ್ಟು ದಿನ ಕರಾವಳಿ ಭಾಗದಲ್ಲಿ ಕಂಬಳ ನಡೆಯುವುದನ್ನ ನೋಡುತ್ತಿದ್ವಿ.‌ ಇದೀಗ ನಮ್ಮ ಬೆಂಗಳೂರಿನಲ್ಲಿ ಕಂಬಳ ನಡೆಯುತ್ತಿರುವುದು ಬಹಳ ವಿಶೇಷವಾಗಿದ್ದು, ಆ ದಿನವನ್ನ ಕಣ್ತುಂಬಿಕೊಳ್ಳಲು ಜನರು ಕಾತುರದಿಂದ ಕಾಯುತ್ತಿರುವುದು ಮಾತ್ರ ಸುಳ್ಳಲ್ಲ.‌

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಉತ್ತರ ಕರ್ನಾಟಕದ ಹುಲಿಗೆ ಜೈ: ಹಂಪಿ ಉತ್ಸವದಲ್ಲಿ ಹನುಮಂತನಿಗೆ ಜೈಕಾರ
ಉತ್ತರ ಕರ್ನಾಟಕದ ಹುಲಿಗೆ ಜೈ: ಹಂಪಿ ಉತ್ಸವದಲ್ಲಿ ಹನುಮಂತನಿಗೆ ಜೈಕಾರ
ಶಿವಕುಮಾರ್ ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾದರೇನು ತಪ್ಪು? ಜಾರಕಿಹೊಳಿ
ಶಿವಕುಮಾರ್ ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾದರೇನು ತಪ್ಪು? ಜಾರಕಿಹೊಳಿ
ಜಮೀರ್ ಅಹ್ಮದ್ ಆಡುವ ಮಾತಿಗೆ ಯಾವುದೇ ಬೆಲೆ ಇಲ್ಲ: ಜಗದೀಶ್ ಶೆಟ್ಟರ್
ಜಮೀರ್ ಅಹ್ಮದ್ ಆಡುವ ಮಾತಿಗೆ ಯಾವುದೇ ಬೆಲೆ ಇಲ್ಲ: ಜಗದೀಶ್ ಶೆಟ್ಟರ್
ಪಕ್ಷದಲ್ಲಿ ವಾತಾವರಣ ತಿಳಿಯಾಗುತ್ತಿದೆ ಎಂದು ವಿಜಯೇಂದ್ರ ಹೇಳುವುದು ನಿಜವೇ?
ಪಕ್ಷದಲ್ಲಿ ವಾತಾವರಣ ತಿಳಿಯಾಗುತ್ತಿದೆ ಎಂದು ವಿಜಯೇಂದ್ರ ಹೇಳುವುದು ನಿಜವೇ?
ಚಾಮುಂಡೇಶ್ವರಿ ದೇವಾಲಯದ ಒಳಗೂ ಸುದೀಪ್ ಜತೆ ಸೆಲ್ಫಿಗೆ ಮುಗಿಬಿದ್ದ ಫ್ಯಾನ್ಸ್
ಚಾಮುಂಡೇಶ್ವರಿ ದೇವಾಲಯದ ಒಳಗೂ ಸುದೀಪ್ ಜತೆ ಸೆಲ್ಫಿಗೆ ಮುಗಿಬಿದ್ದ ಫ್ಯಾನ್ಸ್
ಸರ್ಕಾರಕ್ಕೆ ಹಿನ್ನಡೆಯಾಗಲಿ ಅಂತ ನಾವು ಯಾವತ್ತೂ ಬಯಸಲ್ಲ: ಯದುವೀರ್
ಸರ್ಕಾರಕ್ಕೆ ಹಿನ್ನಡೆಯಾಗಲಿ ಅಂತ ನಾವು ಯಾವತ್ತೂ ಬಯಸಲ್ಲ: ಯದುವೀರ್
ಕಡುಗೆಂಪಗಿರುವುದೆಲ್ಲ ತಿನ್ನಲು-ಯೋಗ್ಯ ಕಲ್ಲಂಗಡಿ ಹಣ್ಣಲ್ಲ!
ಕಡುಗೆಂಪಗಿರುವುದೆಲ್ಲ ತಿನ್ನಲು-ಯೋಗ್ಯ ಕಲ್ಲಂಗಡಿ ಹಣ್ಣಲ್ಲ!
ಮಾರ್ಚ್​ 22ರಂದು ಅಖಂಡ ಕರ್ನಾಟಕ ಬಂದ್​ಗೆ ಕರೆ: ಯಾರೆಲ್ಲಾ ಬೆಂಬಲ?
ಮಾರ್ಚ್​ 22ರಂದು ಅಖಂಡ ಕರ್ನಾಟಕ ಬಂದ್​ಗೆ ಕರೆ: ಯಾರೆಲ್ಲಾ ಬೆಂಬಲ?
ವಿಶ್ವವಿಖ್ಯಾತ ಹಂಪಿ ಉತ್ಸವ ಕಳೆದ ಸಲಕ್ಕಿಂತ ಅದ್ದೂರಿಯಾಗಿದೆ: ಜಮೀರ್ ಅಹ್ಮದ್
ವಿಶ್ವವಿಖ್ಯಾತ ಹಂಪಿ ಉತ್ಸವ ಕಳೆದ ಸಲಕ್ಕಿಂತ ಅದ್ದೂರಿಯಾಗಿದೆ: ಜಮೀರ್ ಅಹ್ಮದ್
ದೇವರ ಮೇಲಿರೋ ಹೂ ಕೊಡಿ; ತುಳುವಿನಲ್ಲಿ ಮುದ್ದಾಗಿ ಕೇಳಿದ ಶಿಲ್ಪಾ ಶೆಟ್ಟಿ
ದೇವರ ಮೇಲಿರೋ ಹೂ ಕೊಡಿ; ತುಳುವಿನಲ್ಲಿ ಮುದ್ದಾಗಿ ಕೇಳಿದ ಶಿಲ್ಪಾ ಶೆಟ್ಟಿ