AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ವರ್ಷದ ಬೆಂಗಳೂರು ಕಂಬಳಕ್ಕೆ ಡೇಟ್ ಫಿಕ್ಸ್, ಈ ಬಾರಿ ಏನೆಲ್ಲಾ ವಿಶೇಷತೆ ಗೊತ್ತಾ?

ಕಳೆದ ವರ್ಷ ಬೆಂಗಳೂರಿನಲ್ಲಿ ಅದ್ದೂರಿಯಾಗಿ ಕಂಬಳ ನಡೆದಿತ್ತು. ಈ ವರ್ಷವು ಕಂಬಳ ನಡೆಸಲು ಸಿದ್ದತೆ ನಡೆಯುತ್ತಿದ್ದು, ಈ ವರ್ಷದ ಕಂಬಳಕ್ಕೆ ಡೇಟ್ ಸಹ ಫಿಕ್ಸ್ ಆಗಿದೆ. ಹಾಗಾದ್ರೆ ಈ ವರ್ಷದ ಕಂಬಳದ ವಿಶೇಷತೆಗಳೇನು..? ಯಾರೆಲ್ಲಾ ಬರುತ್ತಿದ್ದಾರೆ.? ಎನ್ನುವ ಸಂಪೂರ್ಣ ವಿವರ ಇಲ್ಲಿದೆ.

ಈ ವರ್ಷದ ಬೆಂಗಳೂರು ಕಂಬಳಕ್ಕೆ ಡೇಟ್ ಫಿಕ್ಸ್, ಈ ಬಾರಿ ಏನೆಲ್ಲಾ ವಿಶೇಷತೆ ಗೊತ್ತಾ?
ಬೆಂಗಳೂರು ಕಂಬಳ
Poornima Agali Nagaraj
| Edited By: |

Updated on: Aug 19, 2024 | 9:38 PM

Share

ಬೆಂಗಳೂರು, (ಆಗಸ್ಟ್​ 19): ಕಂಬಳ, ಕರಾವಳಿ ಕರ್ನಾಟಕದ ಒಂದು ಜಾನಪದ ಕ್ರೀಡೆ. ದಷ್ಟ- ಪುಷ್ಟವಾಗಿ ಬೆಳಸಿದ ಕೋಣಗಳನ್ನ ಹಸನಾಗಿ ಹದ ಮಾಡಿ ಮಣ್ಣಿನ ಗದ್ದೆಯಲ್ಲಿ ಓಡಿಸುವ ಸ್ಪರ್ಧೆಯೇ ಕಂಬಳ. ಈ ಕ್ರೀಡೆಯನ್ನ ಉಡುಪಿ , ದಕ್ಷಿಣ ಕನ್ನಡ ಹೆಚ್ಚಿನದಾಗಿ ಈ ಕಂಬಳ ನಡೆಸುತ್ತಾರೆ. ಸಾಮಾನ್ಯವಾಗಿ ಈ ಕಂಬಳವನ್ನ ರೈತಾಪಿ ಜನರು ಭತ್ತದ ಕೊಯಿಲಿನ ನಂತರದಲ್ಲಿ ಮನರಂಜನೆಗೋಸ್ಕರ ಈ ಕ್ರೀಡೆಯನ್ನ ಏರ್ಪಡಿಸಲಾಗುತ್ತಿತ್ತು. ಕಳೆದ ವರ್ಷ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಅದ್ದೂರಿಯಾಗಿ ಕಂಬಳ ನಡೆದಿತ್ತು. ಈ ವರ್ಷವು ಕಂಬಳ‌ ನಡೆಯುತ್ತಿದ್ದು, ಅದ್ದೂರಿಯಾ ಕಂಬಳಕ್ಕೆ ಡೇಟ್ ಫಿಕ್ಸ್ ಆಗಿದ್ದು, ಇದೇ ಅಕ್ಟೋಬರ್ 24, 25 ರಂದು ಕಂಬಳ‌ ನಡೆಸಲು ತೀರ್ಮಾನಿಸಲಾಗಿದೆ.

ಕಳೆದ ವರ್ಷ ಮೊಟ್ಟಮೊದಲು ಬಾರಿಗೆ ರಾಜಾಧಾನಿಯಲ್ಲಿ ಕಂಬಳ ನಡೆದಿತ್ತು. ಈ ವರ್ಷವು ಕಂಬಳ ಮುಂದುವರಿದಿದ್ದು, ಅಕ್ಟೋಬರ್ 24, 25 ರಂದು ಕಂಬಳ‌ ನಡೆಸಲು ಡೇಟ್ ಫಿಕ್ಸ್ ಆಗಿದೆ. ಇನ್ನು ಕಂಬಳ ಪ್ಯಾಲೇಸ್ ಗ್ರೌಂಡ್ ನಾ ಕಂಬಳದ ಟ್ರಾಕ್ ನಲ್ಲಿ ನಡೆಯಲಿದ್ದು, ಈಗಾಗಲೇ ಮೈಸೂರ್ ಮಹಾರಾಣಿಯವರಿಂದಲೂ ಒಪ್ಪಿಗೆ ಪಡೆದುಕೊಳ್ಳಲಾಗಿದೆ. ಇನ್ನು ಕಂಬಳಕ್ಕೆ ಈ ವರ್ಷ 180 ಜೋಡಿಯ ಕೋಣಗಳು ಭಾಗವಹಿಸಲಿದ್ದು, ಒಟ್ಟು ಎರಡು ದಿನಗಳ ಕಾಲ ಕಂಬಳ ನಡೆಯಲಿದೆ.

ಇದನ್ನೂ ಓದಿ: ಬೆಂಗಳೂರಲ್ಲಿ ಮತ್ತೆ ಮಹಾ ಮಳೆ, ಕೆರೆಯಂತಾದ ರಸ್ತೆಗಳು: ಇಲ್ಲಿವೆ ನೋಡಿ ಫೋಟೋಸ್

ಕಳೆದ ವರ್ಷ ಕಂಬಳಕ್ಕೆ 12 ಲಕ್ಷ ಜನರು ಬಂದಿದ್ರು. ಈ ವರ್ಷ 15 ಲಕ್ಷದಷ್ಟು ಜನರು ಬರುವ ಸಾಧ್ಯತೆ ಇದೆ. ಇನ್ನು ಈ ವರ್ಷದ ಕಂಬಳಕ್ಕೆ ಬಾಲಿವುಡ್ ನಟಿ ಐಶ್ವರ್ಯ ರೈ, ಶಿಲ್ಪಾ ಶೆಟ್ಟಿ, ಅನುಷ್ಕಾ ಶೆಟ್ಟಿ ಚೀಫ್ ಗೆಸ್ಟ್ ಆಗಿ ಬರುವ ಸಾಧ್ಯತೆ ಇದ್ದು, ಸಿಎಂ ಸಹ ಬರಲಿದ್ದಾರಂತೆ. ಇನ್ನು ಕಂಬಳಕ್ಕೆ ಬರುವ ಕೋಣಗಳನ್ನ ರೈಲಿನಲ್ಲಿ ತರಿಸಲು ಸಿದ್ದತೆಗಳು ನಡೆಯುತ್ತಿವೆ. ಈ ವರ್ಷದ ಕಂಬಳದಲ್ಲಿ ಕಂಬಳದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಿದ್ದು, ಬೆಂಗಳೂರಿಗರಿಗೆ ಕಂಬಳವನ್ನ ಪರಿಚಯಿಸುವ ಕೆಲಸವನ್ನ ತುಳುಕೂಟ ಮಾಡುತ್ತಿದೆ.

ಒಟ್ಟಿನಲ್ಲಿ ಇಷ್ಟು ದಿನ ಕರಾವಳಿ ಭಾಗದಲ್ಲಿ ಕಂಬಳ ನಡೆಯುವುದನ್ನ ನೋಡುತ್ತಿದ್ವಿ.‌ ಇದೀಗ ನಮ್ಮ ಬೆಂಗಳೂರಿನಲ್ಲಿ ಕಂಬಳ ನಡೆಯುತ್ತಿರುವುದು ಬಹಳ ವಿಶೇಷವಾಗಿದ್ದು, ಆ ದಿನವನ್ನ ಕಣ್ತುಂಬಿಕೊಳ್ಳಲು ಜನರು ಕಾತುರದಿಂದ ಕಾಯುತ್ತಿರುವುದು ಮಾತ್ರ ಸುಳ್ಳಲ್ಲ.‌

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ