AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ಕಂಬಳ: 70 ಎಕರೆ ಜಾಗದಲ್ಲಿ ಕಂಬಳಕ್ಕೆ ತಯಾರಿ, ಸ್ಥಳಕ್ಕೆ ಯುಟಿ ಖಾದರ್​ ಭೇಟಿ

ಪ್ರಪ್ರಥಮ ಭಾರಿಗೆ ಬೆಂಗಳೂರಿನಲ್ಲಿ ನವೆಂಬರ್​ 25, 26 ರಂದು ಬೆಂಗಳೂರು ಕಂಬಳ ನಡೆಯಲಿದೆ. ನಗರದ ಅರಮನೆ ಮೈದಾನದ 70 ಎಕರೆ ಜಾಗದಲ್ಲಿ ಕಂಬಳ ನಡೆಸಲು 151ಮೀಟರ್​​ ಉದ್ದದ ಟ್ರ್ಯಾಕ್​​ ನಿರ್ಮಾಣದ ತಯಾರಿ ಮಾಡಲಾಗುತ್ತಿದೆ. ಕಂಬಳದ ಸ್ಥಳಕ್ಕೆ ಸ್ಪೀಕರ್ ಯು.ಟಿ.ಖಾದರ್ ಭೇಟಿ ನೀಡಿ ಪರಿಶೀಲಿಸಿದ್ದಾರೆ.

ಬೆಂಗಳೂರು ಕಂಬಳ: 70 ಎಕರೆ ಜಾಗದಲ್ಲಿ ಕಂಬಳಕ್ಕೆ ತಯಾರಿ, ಸ್ಥಳಕ್ಕೆ ಯುಟಿ ಖಾದರ್​ ಭೇಟಿ
ಪ್ರಾತಿನಿಧಿಕ ಚಿತ್ರ
Vinayak Hanamant Gurav
| Edited By: |

Updated on: Nov 15, 2023 | 7:36 PM

Share

ಬೆಂಗಳೂರು, ನವೆಂಬರ್​​​​ 15: ಪ್ರಪ್ರಥಮ ಭಾರಿಗೆ ಬೆಂಗಳೂರಿನಲ್ಲಿ ನವೆಂಬರ್​ 25, 26 ರಂದು ಬೆಂಗಳೂರು ಕಂಬಳ (Kambala) ನಡೆಯಲಿದೆ. ನಗರದ ಅರಮನೆ ಮೈದಾನದ 70 ಎಕರೆ ಜಾಗದಲ್ಲಿ ಕಂಬಳ ನಡೆಸಲು 151ಮೀಟರ್​​ ಉದ್ದದ ಟ್ರ್ಯಾಕ್​​ ನಿರ್ಮಾಣದ ತಯಾರಿ ಮಾಡಲಾಗುತ್ತಿದೆ. ಕಂಬಳದ ಸ್ಥಳಕ್ಕೆ ಸ್ಪೀಕರ್ ಯು.ಟಿ.ಖಾದರ್ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಸ್ಪೀಕರ್​ಗೆ ಪುತ್ತೂರು ಶಾಸಕ ಅಶೋಕ್ ರೈ, ಗುಣರಂಜನ್ ಶೆಟ್ಟಿ, ಗುರು ಕಿರಣ್​, ಬೆಂಗಳೂರು ತುಳುಕೂಟದ ಅಧ್ಯಕ್ಷ ಸುಂದರ್ ರೈ ಸಾಥ್ ನೀಡಿದ್ದಾರೆ.

ದಕ್ಷಿಣ ಕನ್ನಡ, ಉಡುಪಿಯ ಜನರಿಗೆ ಕಂಬಳ ಅಂದ್ರೆ ಜೀವ, ಭಾವ, ಒಂದು ರೀತಿ ಆಚರಣೆ. ಇಂಥಾ ದೇಸಿ ಕ್ರೀಡೆ ಇದೀಗ ರಾಜಧಾನಿ ಬೆಂಗಳೂರಿನ್ನೂ ರಂಜಿಸೋಕೆ ರೆಡಿ ಆಗ್ತಿದೆ.. ಕೋಣಗಳನ್ನ ಹಿಡಿದು ಗದ್ದೆಯಲ್ಲಿ ಸವಾರಿ ಮಾಡೋಕೆ ಸಾರಥಿಗಳು ಸಜ್ಜಾಗಿದ್ದಾರೆ. ತುಳುಕೂಟಕ್ಕೆ 50 ವರ್ಷ ತುಂಬಿದ ಹಿನ್ನೆಲೆ ಇದೇ ಮೊಟ್ಟ ಮೊದಲು ಬಾರಿಗೆ ಬೆಂಗಳೂರಿನಲ್ಲಿ ಕಂಬಳ ಮಾಡಲು ತುಳು ಕೂಟ ನಿರ್ಧರಿಸಿದೆ. ಅರಮನೆ ಮೈದಾನದಲ್ಲಿ ಜಾಗ ಗುರುತಿಸಿದ್ದು, ನವೆಂಬರ್ 25, 26 ಮೂರು ದಿನಗಳ ಕಾಲ ಕಂಬಳ ನಡೆಯಲಿದೆ.

ಇದನ್ನೂ ಓದಿ: ತುಳುಕೂಟಕ್ಕೆ 50 ವರ್ಷದ ಸಂಭ್ರಮ: ಇದೇ ಮೊದಲ ಬಾರಿಗೆ ಬೆಂಗಳೂರಿನಲ್ಲಿ ಕಂಬಳ ಕಂಪು, ನೆರವೇರಿದ ಪೂಜೆ

ಕಂಬಳಕ್ಕೆ 150 ಜೋಡಿ ಕೋಣಗಳು ಬರಲಿವೆಯಂತೆ. ಕಂಬಳಕ್ಕೆ ಬರುವ ಕೋಣಗಳನ್ನ ವಾಹನಗಳಲ್ಲಿ ತರಿಸಲಿದ್ದು, ಸಕಲೇಶಪುರ, ಹಾಸನ, ನೆಲಮಂಗಲ ಮೂರು ಕಡೆ ವಿಶ್ರಾಂತಿಗೆ ಅವಕಾಶ ವ್ಯವಸ್ಥೆ ಮಾಡಲಾಗ್ತಿದೆ. ಬೆಂಗಳೂರಿಗೆ ಒಂದು ದಿನ ಮುಂಚೆಯೇ ಕೋಣಗಳು ಎಂಟ್ರಿ ಕೊಡಲಿವೆ. ಕಂಬಳಕ್ಕೆ ಬೇಕಾದ ಕೆಸರು ಗದ್ದೆ ರೆಡಿ ಮಾಡಲು ಮಣ್ಣು, ನೀರಿನ ಟೆಸ್ಟಿಂಗ್ ಈಗಾಗಲೇ ಕಂಪ್ಲೀಟ್ ಆಗಿದೆ. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್​ ಹಾಗೂ ನಟಿ ಅನುಷ್ಕಾ ಶೆಟ್ಟಿ ಸೇರಿ ಹಲವರು ಕಂಬಳಕ್ಕೆ ಬರಲಿದ್ದಾರಂತೆ.

ಇದನ್ನೂ ಓದಿ: Kambala in Palace Grounds: ಕಂಬಳ ಸಂಭ್ರಮಕ್ಕೆ ಸಜ್ಜಾದ ರಾಜಧಾನಿ ಬೆಂಗಳೂರು, 125 ಜೋಡಿ ಕೋಣಗಳು-ಜಾಕಿಗಳು ಸ್ಪರ್ಧಿಸುವ ನಿರೀಕ್ಷೆ

ಇಷ್ಟು ದಿನ ಕರಾವಳಿ ಭಾಗದಲ್ಲಿ ಕಂಬಳ ನಡೆಯೋದನ್ನ ನೋಡುತ್ತಿದ್ದೆವು. ಈಗ ನಮ್ಮ ಬೆಂಗಳೂರಿನಲ್ಲಿ ಕಂಬಳ ನಡೆಯುತ್ತಿರುವುದು ಬಹಳ ವಿಶೇಷವಾಗಿದೆ. ಆ ದಿನಕ್ಕಾಗಿ ಜನರು ಕಾತುರದಿಂದ ಕಾಯುತ್ತಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ
SSLC ಬೋರ್ಡ್ ಎಡವಟ್ಟಿಗೆ ಪ್ರತಿಭಾವಂತ ಅಂಧ ವಿದ್ಯಾರ್ಥಿನಿ ಫೇಲ್
SSLC ಬೋರ್ಡ್ ಎಡವಟ್ಟಿಗೆ ಪ್ರತಿಭಾವಂತ ಅಂಧ ವಿದ್ಯಾರ್ಥಿನಿ ಫೇಲ್