Bengaluru Karaga: ಕರಗ ಆರಂಭವಾಗುವ ಧರ್ಮರಾಯಸ್ವಾಮಿ ದೇಗುಲ ಬಳಿ ವಿದ್ಯುತ್ ಅವಘಡ

ಐತಿಹಾಸಿನ ಕರಗ ಮಹೋತ್ಸವ ಆರಂಭಕ್ಕೂ ಮನ್ನ ತಿಗಳರಪೇಟೆಯ ಧರ್ಮರಾಯ ‌ಸ್ವಾಮಿ ದೇವಾಲಯದ ಬಳಿಯ ಒಟಿಸಿ ಮುಖ್ಯ ರಸ್ತೆಯಲ್ಲಿ ಗುರುವಾರ ರಾತ್ರಿ ವಿದ್ಯುತ್ ಅವಘಡ ಸಂಭವಿಸಿದೆ.

Bengaluru Karaga: ಕರಗ ಆರಂಭವಾಗುವ ಧರ್ಮರಾಯಸ್ವಾಮಿ ದೇಗುಲ ಬಳಿ ವಿದ್ಯುತ್ ಅವಘಡ
ಬೆಂಗಳೂರು ಕರಗ
Follow us
|

Updated on: Apr 06, 2023 | 10:49 PM

ಬೆಂಗಳೂರು: ಐತಿಹಾಸಿನ ಕರಗ ಮಹೋತ್ಸವ ಆರಂಭಕ್ಕೂ ಮನ್ನ ತಿಗಳರಪೇಟೆಯ ಧರ್ಮರಾಯ ‌ಸ್ವಾಮಿ ದೇವಾಲಯದ (Thigalarapet Dharmaraya Swamy Temple) ಬಳಿಯ ಒಟಿಸಿ ಮುಖ್ಯ ರಸ್ತೆಯಲ್ಲಿ ಗುರುವಾರ ರಾತ್ರಿ ವಿದ್ಯುತ್ ಅವಘಡ ಸಂಭವಿಸಿದೆ. ಶಾರ್ಟ್‌ ಸರ್ಕ್ಯೂಟ್‌ನಿಂದ ವಿದ್ಯುತ್ ಕಂಬದಲ್ಲಿ ಬೆಂಕಿ ಕಾಣಿಸಿಕೊಂಡು ಕೆಲ ಹೊತ್ತು ಆತಂಕದ ಪರಿಸ್ಥಿತಿ ನಿರ್ಮಾಣವಾಗಿತ್ತು. ಎಸ್‌ಪಿ ರಸ್ತೆಯಿಂದ ಎನ್​ಆರ್ ಜಂಕ್ಷನ್‌ಗೆ ಸಂಪರ್ಕಿಸುವ ರಸ್ತೆಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ತಕ್ಷಣವೇ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಪರಿಣಾಮವಾಗಿ ಸಂಭಾವ್ಯ ದುರಂತ ತಪ್ಪಿದೆ.

ಗುರುವಾರ ಮಧ್ಯಾಹ್ನದ ವೇಳೆಗೆ ಧರ್ಮರಾಯ ‌ಸ್ವಾಮಿ ದೇವಾಲಯದ ಬಳಿ ಅಗ್ನಿ ಅವಘಡ ಸಂಭವಿಸಿ 10ಕ್ಕೂ ಹೆಚ್ಚು ದ್ವಿಚಕ್ರ ವಾಹನಗಳು ಭಸ್ಮವಾಗಿದ್ದವು. ಕರ್ಪೂರ ಹಚ್ಚಲಿರುವ ಹಿನ್ನೆಲೆಯಲ್ಲಿ ಬೈಕ್​ಗಳನ್ನು ತೆರವುಗೊಳಿಸುವಂತೆ ಮೈಕ್​ನಲ್ಲಿ ಹೇಳಿದರೂ ಮಾಲೀಕರು ತೆರವು ಮಾಡಿರಲಿಲ್ಲ. ಅದಾಗ್ಯೂ, ಬೈಕ್ ನಿಲ್ಲಿಸಿದ್ದ ಸ್ಥಳ ಬಳಿ ದೊಡ್ಡ ಕರ್ಪೂರ ಹಚ್ಚಿದ ಕಾರಣ ಅದರಿಂದ ಹಾರಿದ ಬೆಂಕಿಯ ಕಿಡಿ ದ್ವಿಚಕ್ರ ವಾಹನಗಳಿಗೆ ತಗುಲಿತ್ತು. ಪರಿಣಾಮವಾಗಿ ಪಾರ್ಕ್ ಮಾಡಿದ್ದ ಬೈಕ್​ಗಳು ಹೊತ್ತಿ ಉರಿದಿದ್ದವು.

ಇದನ್ನೂ ಓದಿ: Bengaluru Karaga Mahotsava: ಬೆಂಗಳೂರಿನ ಐತಿಹಾತಿಕ ಕರಗ ಮಹೋತ್ಸವದ ವೇಳೆ ಅಗ್ನಿ ಅವಘಡ, ಬೈಕ್​ಗಳು ಭಸ್ಮ

ಈ ಮಧ್ಯೆ ಕರಗ ಮೆರವಣಿಗೆಗೆ ಕ್ಷಣಗಣನೆ ಆರಂಭವಾಗಿದೆ. ಗುರುವಾರ ಬೆಳಗ್ಗೆ 10.30ಕ್ಕೆ ಕಬ್ಬನ್ ಪಾರ್ಕ್‌ನ ಕರಗದ ಕುಂಟೆಯಲ್ಲಿ ದ್ರೌಪದಿ ದೇವಿಗೆ ಅರಿಶಿನ ಬಣ್ಣದ ಸೀರೆ ಉಟ್ಟು ಬಳೆಗಳನ್ನು ತೊಟ್ಟ ಕರಗ ಹೊತ್ತ ಅರ್ಚಕರು ಗಂಗಾಪೂಜೆ ಸಲ್ಲಿಸಿದ್ದರು. ಅಲ್ಲಿಂದ ಹಸಿಕರಗವನ್ನು ಮಂಟಪಕ್ಕೆ ತಂದು ವಿಶೇಷ ಪೂಜೆ ಸಲ್ಲಿಸಲಾಗಿದೆ. ಮಧ್ಯರಾತ್ರಿ 12.30ಕ್ಕೆ ಕರಗ ಮೆರವಣಿಗೆ ದೇವಸ್ಥಾನದಿಂದ ಹೊರ ಬರಲಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಸ್ಯಾಮ್​ಸಂಗ್ ಎಲೆಕ್ಟ್ರಾನಿಕ್ಸ್ ಹಬ್ಬದ ವಿಶೇಷ ಮಾರಾಟ ಕೊಡುಗೆ ಆರಂಭ
ಸ್ಯಾಮ್​ಸಂಗ್ ಎಲೆಕ್ಟ್ರಾನಿಕ್ಸ್ ಹಬ್ಬದ ವಿಶೇಷ ಮಾರಾಟ ಕೊಡುಗೆ ಆರಂಭ
ಶಿವಣ್ಣ-ಉಪ್ಪಿ ನಟನೆಯ ‘45’ ಚಿತ್ರದ ಸುದ್ದಿಗೋಷ್ಠಿ ಲೈವ್ ನೋಡಿ
ಶಿವಣ್ಣ-ಉಪ್ಪಿ ನಟನೆಯ ‘45’ ಚಿತ್ರದ ಸುದ್ದಿಗೋಷ್ಠಿ ಲೈವ್ ನೋಡಿ
VIDEO: ಮೈದಾನದಲ್ಲೇ ಹೊಡೆದಾಡಿಕೊಂಡ ಬ್ಯಾಟರ್-ಬೌಲರ್..!
VIDEO: ಮೈದಾನದಲ್ಲೇ ಹೊಡೆದಾಡಿಕೊಂಡ ಬ್ಯಾಟರ್-ಬೌಲರ್..!
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ ಲೈವ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ ಲೈವ್​
ಕೊಪ್ಪಳ: ಕೆಸರುಮಯವಾದ ರಸ್ತೆ, ಭತ್ತ ನಾಟಿ ಮಾಡಿ ಗ್ರಾಮಸ್ಥರ ಆಕ್ರೋಶ
ಕೊಪ್ಪಳ: ಕೆಸರುಮಯವಾದ ರಸ್ತೆ, ಭತ್ತ ನಾಟಿ ಮಾಡಿ ಗ್ರಾಮಸ್ಥರ ಆಕ್ರೋಶ