AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು, ಕರ್ನಾಟಕ ಬಂದ್​: ಮುನ್ನೆಚ್ಚರಿಕೆ ಕ್ರಮ ಕೋರಿ ಹೈಕೋರ್ಟ್​ಗೆ ಅರ್ಜಿ

Cauvery Water Dispute: ಒಂದೇ ವಾರದಲ್ಲಿ ಎರಡು ಬಾರಿ ಬಂದ್​ ಮಾಡುವುದರಿಂದ ಜನರಿಗೆ ಸಾಕಷ್ಟು ತೊಂದರೆಯಾಗಲಿದೆ. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮ ಕೋರಿ ಹೈಕೋರ್ಟ್​ಗೆ ಸಾಮಾಜಿಕ ಕಾರ್ಯಕರ್ತ ರವಿಕುಮಾರ್ ಕಂಚನಹಳ್ಳಿ ಮಧ್ಯಂತರ ಅರ್ಜಿ ಸಲ್ಲಿಸಿದ್ದಾರೆ.

ಬೆಂಗಳೂರು, ಕರ್ನಾಟಕ ಬಂದ್​: ಮುನ್ನೆಚ್ಚರಿಕೆ ಕ್ರಮ ಕೋರಿ ಹೈಕೋರ್ಟ್​ಗೆ ಅರ್ಜಿ
ಹೈಕೋರ್ಟ್​
TV9 Web
| Edited By: |

Updated on: Sep 25, 2023 | 2:05 PM

Share

ಬೆಂಗಳೂರು ಸೆ.25: ತಮಿಳುನಾಡಿಗೆ ಕಾವೇರಿ ನೀರು (Cauvery Water Dispute) ಹಿರಿಸುತ್ತಿರುವುದನ್ನು ವಿರೋಧಿಸಿ ವಿವಿಧ ಸಂಘಟನೆಗಳು ಸೆ.26 ರಂದು ಬೆಂಗಳೂರು ಬಂದ್​​ಗೆ (Bengaluru Bandh) ಕರೆ ನೀಡಿವೆ. ಅಲ್ಲದೇ ಹೋರಾಟಗಾರ ವಾಟಾಳ್​​ ನಾಗರಾಜ (Vatal Nagaraj) ಅವರು ಕೂಡ ಸೆ.29 ರಂದು ಅಖಂಡ ಕರ್ನಾಟಕ ಬಂದ್​​ಗೆ (Karnataka Bandh) ಕರೆ ನೀಡಿದ್ದಾರೆ. ಯಾವ ಬಂದ್​ಗೆ ಬೆಂಬಲಿಸಬೇಕು ಎಂಬ ಗೊಂದಲ ವಿವಿಧ ಸಂಘಟನೆಗಳಲ್ಲಿ ಮೂಡಿದೆ. ಅಲ್ಲದೇ ಒಂದೇ ವಾರದಲ್ಲಿ ಎರಡು ಬಾರಿ ಬಂದ್​ ಮಾಡುವುದರಿಂದ ಜನರಿಗೆ ಸಾಕಷ್ಟು ತೊಂದರೆಯಾಗಲಿದೆ. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮ ಕೋರಿ ಹೈಕೋರ್ಟ್​ಗೆ ಸಾಮಾಜಿಕ ಕಾರ್ಯಕರ್ತ ರವಿಕುಮಾರ್ ಕಂಚನಹಳ್ಳಿ ಮಧ್ಯಂತರ ಅರ್ಜಿ ಸಲ್ಲಿಸಿದ್ದಾರೆ.

ಸೆ.26 ಬೆಂಗಳೂರು ಬಂದ್, ಸೆ.29ರಂದು ರಾಜ್ಯ ಬಂದ್​ಗೆ ಕರೆ ನೀಡಲಾಗಿದೆ. ಇದರಿಂದ ಸಾರ್ವಜನಿಕರಿಗೆ ತೊಂದರೆಯಾಗದಂತೆ, ಸಾರ್ವಜನಿಕ ಆಸ್ತಿಪಾಸ್ತಿಗೆ ಧಕ್ಕೆಯಾಗದಂತೆ ಮುನ್ನೆಚ್ಚರಿಕೆ ಕ್ರಮ ಕೋರಿ ಹೈಕೋರ್ಟ್​​ಗೆ ಅರ್ಜಿ ಸಲ್ಲಿಸಿದ್ದಾರೆ.

ಬೆಂಗಳೂರು ಬಂದ್​ಗೆ ಓಲಾ ಉಬರ್​ ಬೆಂಬಲವಿಲ್ಲ

ಇನ್ನು ಬೆಂಗಳೂರು ಬಂದ್​ಗೆ ಓಲಾ ಉಬರ್​ ಬೆಂಬಲ ನೀಡಿಲ್ಲ. ಆಟೋ ಸಂಘಟನೆಗಳು ಹಾಗೂ ಓಲಾ, ಉಬರ್ ಸಂಘ ಬೆಂಗಳೂರು ಬಂದ್​ಗೆ ಬೆಂಬಲ ವಾಪಸ್ ಪಡೆದಿವೆ. ಸೆ.29ರ ಕರ್ನಾಟಕ ಬಂದ್​ಗೆ ಸಂಪೂರ್ಣ ಬೆಂಬಲ ನೀಡಲು ನಿರ್ಧಾರಿಸಲಾಗಿದೆ ಎಂದು ಬೆಂಗಳೂರಿನಲ್ಲಿ ಓಲಾ ಉಬರ್ ಸಂಘಟನೆ ಅಧ್ಯಕ್ಷ ತನ್ವೀರ್​ ಪಾಷಾ ತಿಳಿಸಿದ್ದಾರೆ

ಇದನ್ನೂ ಓದಿ: ಕಾವೇರಿ ನೀರು ವಿವಾದ: ಮಧ್ಯಸ್ಥಿಕೆ ವಹಿಸುವಂತೆ ನರೇಂದ್ರ ಮೋದಿಗೆ ದೇವೇಗೌಡ ಪತ್ರ

ಬಂದ್​​ಗೆ KSRTC ಸಿಬ್ಬಂದಿ ಮತ್ತು ಕಾರ್ಮಿಕ ಒಕ್ಕೂಟ ಬೆಂಬಲ

ಬೆಂಗಳೂರು ಬಂದ್​​ಗೆ ವಿವಿಧ ಸಂಘಟನೆಗಳು ಬೆಂಬಲ ಸೂಚಿಸಿವೆ. ಬಂದ್​ಗೆ ಬೆಂಗಳೂರು ಹೋಟೆಲ್​ ಮಾಲೀಕರ ಸಂಘ, KSRTC ಸಿಬ್ಬಂದಿ ಮತ್ತು ಕಾರ್ಮಿಕ ಒಕ್ಕೂಟ, ಕರ್ನಾಟಕ ಚಾಲಕರ ಒಕ್ಕೂಟ, ಸಾರಿಗೆ ನಿಗಮಗಳ ನೌಕರರ ಸಮಾನ ಮನಸ್ಕರ ವೇದಿಕೆ, ಕರ್ನಾಟಕ ಜ್ಯುವೆಲರಿ ಅಸೋಸಿಯೇಷನ್​ ಬಂದ್​ಗೆ ಬೆಂಬಲಿಸಿವೆ.

ರಾಜ್ಯದ ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!