AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಂಪೇಗೌಡ ಏರ್ಪೋಟ್​ಗೆ ಸಿಗಲಿದೆ ಮತ್ತೊಂದು ಗರಿ, ಕೆಐಎಬಿಯಲ್ಲಿ ಉದ್ಘಾಟನೆಗೆ ಸಿದ್ದವಾಗ್ತಿದೆ ದೇಶದ ಮಾದರಿ ಟರ್ಮಿನಲ್

ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ಥಾಣದಲ್ಲಿ ಅತ್ಯಾಧುನಿಕ ಸೌಲಭ್ಯಗಳುಳ್ಳ ಹೊಸ ಟರ್ಮಿನಲ್​ನ್ನು ನವೆಂಬರ್ 11 ಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಉದ್ಘಾಟಿಸಲಿದ್ದಾರೆ.

ಕೆಂಪೇಗೌಡ ಏರ್ಪೋಟ್​ಗೆ ಸಿಗಲಿದೆ ಮತ್ತೊಂದು ಗರಿ, ಕೆಐಎಬಿಯಲ್ಲಿ ಉದ್ಘಾಟನೆಗೆ ಸಿದ್ದವಾಗ್ತಿದೆ ದೇಶದ ಮಾದರಿ ಟರ್ಮಿನಲ್
ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ಥಾಣ
TV9 Web
| Updated By: ವಿವೇಕ ಬಿರಾದಾರ|

Updated on:Oct 24, 2022 | 10:11 PM

Share

ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ಥಾಣ (Kempegowda International Airport) ಅಂದ್ರೆ ಹಚ್ಚ ಹಸಿರಿನ ಗ್ರೀನ ರಿ ಜೊತೆಗೆ ವಿಶಾಲವಾಗಿರೂ ಸುಂದರ ಏರ್ಪೋಟ್ ನೆನಪಾಗ್ತಿತ್ತು. ಆದರೆ ಇನ್ನೂ ಕೆಲವೆ ದಿನಗಳಲ್ಲಿ ಏರ್ಪೋಟ್ ಅಂದ್ರೆ ಹೀಗೂ ಇರುತ್ತಾ ಅನ್ನೂ ರೀತಿ ನೋಡುಗರೆ ನಿಬ್ಬೆರಗಾಗುವಂತೆ ಅತ್ಯಾಧುನಿಕ ಟೆಕ್ನಾಲಜಿಯ ಹೊಸ ಟರ್ಮಿನಲ್ ಉದ್ಘಾಟನೆಯಾಗಲಿದೆ.

ಇಷ್ಟುದಿನ ಹಚ್ಚ ಹಸಿರಿನ ಗಾರ್ಡನ್ ಮತ್ತು ಹೈ ಪೈ ಟೆಕ್ನಾಲಜಿಯೊಂದಿಗೆ ಹಲವು ಪ್ರಶಸ್ತಿಗಳನ್ನ ತನ್ನ ಮುಡಿಗೇರಿಸಿಕೊಂಡಿದ್ದ ದೇವನಹಳ್ಳಿ ಬಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ಥಾಣ ಇನ್ನು ಕೆಲವೆ ದಿನಗಳಲ್ಲಿ ಕಣ್ಮನ ಸೆಳೆಯುವಂತಹ ಅತ್ಯಾಧುನಿಕ ಸೌಲಭ್ಯಗಳುಳ್ಳ ಹೊಸ ಟರ್ಮಿನಲ್ ಅನ್ನ ಪ್ರಯಾಣಿಕರ ಸೇವೆಗೆ ಮುಕ್ತಗೊಳಿಸುತ್ತಿದೆ. 13 ಸಾವಿರ ಕೋಟಿ ವೆಚ್ಚದಲ್ಲಿ ಹೊಸ 2 ನೇ ಟರ್ಮಿನಲ್ ಮತ್ತು ಹೊಸ ರನ್ ವೇ ಇದೀಗ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ಥಾಣದಲ್ಲಿ ಉದ್ಘಾಟನೆಗೆ ಸಿದ್ದವಾಗಿದೆ. ಮುಂದಿನ ತಿಂಗಳು ನವಂಬರ್ 11 ಕ್ಕೆ ಪ್ರಧಾನಿ ನರೇಂದ್ರ ಮೋದಿ ಹೊಸ 2ನೇ ಟರ್ಮಿನಲನ್ನು ಉದ್ಘಾಟನೆ ಮಾಡಲಿದ್ದಾರೆ. ಪ್ರಸ್ತುತವಿರುವ ಮೊದಲನೆ ಟರ್ಮಿನಲ್​ನ ಎಡ ಭಾಗದಲ್ಲಿ ಇದೀಗ ಹೊಸ ಟರ್ಮಿನಲ್ ನಿರ್ಮಾಣವಾಗಿದ್ದು ಹೊರ ಭಾಗದ ಅಂತಿಮ ಘಟ್ಟದ ಕಾಮಗಾರಿ ಕೆಲಸ ತ್ವರಿತ ಗತಿಯಲ್ಲಿ ನಡೆಯುತ್ತಿದೆ.

ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ಥಾಣದ ಒಂದನೆ ಟರ್ಮಿನಲ್​ನಲ್ಲಿ ವಾರ್ಷಿಕ 16 ಮಿಲಿಯನ್ ಪ್ರಯಾಣಿಕರು ಸಂಚಾರ ಮಾಡುತ್ತಿದ್ದು, ಇದೀಗ ಎರಡನೆ ಟರ್ಮಿನಲ್​​ನಲ್ಲಿ ವಾರ್ಷಿಕ 25 ಮಿಲಿಯನ್ ಪ್ರಯಾಣಿಕರು ಸಂಚಾರ ಮಾಡಲಿದ್ದಾರೆ. ಹೊಸ ಗಾರ್ಡನ್ ಟರ್ಮಿನಲ್ ಇದಾಗಿದ್ದು ಒಳ ಭಾಗದಲ್ಲಿ ನೇತಾಡುವ ಹಚ್ಚ ಹಸಿರಿನ ಗಿಡಗಳ ಜೊತೆಗೆ ನಿರ್ಮಾಣಮಾಡಿದರೂ, ಕೃತಕ ವಾಟರ್ ಪಾಲ್ಸ್ ಪ್ರಯಾಣಿಕರನ್ನು ಆಕರ್ಷಿಸಲಿದೆ. ಅಲ್ಲದೆ ನೂತನ ಟರ್ಮಿನಲ್ ನಲ್ಲಿ 66 ವಿಮಾನಗಳನ್ನ ಏಕಕಾಲದಲ್ಲಿ ನಿಲ್ಲಿಸಬಹುದಾದಂತ ವ್ಯವಸ್ಥೆಯನ್ನು ಮಾಡಲಾಗಿದ್ದು ಮಳೆ ಬಿಸಿಲಿನ ನಡುವೆಯು 27 ವಿಮಾನಗಳಿಗೆ ಏರೋ ಬ್ರಿಡ್ಸ್ ಮೂಲಕ ಟರ್ಮಿನಲ್ ನಿಂದ ವಿಮಾನದ ಒಳಕ್ಕೆ ಪ್ರಯಾಣಿಕರು ಹೋಗಬಹುದಾಗಿದೆ. ಹೊಸ ಟರ್ಮಿನಲನ್ನು ಎರಡು ಅಂತಸ್ತುಗಳಲ್ಲಿ ನಿರ್ಮಾಣ ಮಾಡಿದ್ದು ಮೊದಲನೆ ಮಹಡಿಯಲ್ಲಿ ಡಿಪಾರ್ಚರ್ (ನಿರ್ಗಮನ) ಮತ್ತು ಕೆಳ ಮಹಡಿಯಲ್ಲಿ ಅರೈವಲ್ (ಆಗಮನ) ಗೆ ಮೀಸಲಿಡಲಾಗಿದೆ. ಏರ್ಪೋಟ್ ಒಳಗಡೆಗೆ ಎಂಟ್ರಿಯಾಗಲು 13 ಗೇಟ್ ಮತ್ತು 90 ಚೆಕ್ ಇನ್ ಗೇಟ್ಸ್​​ಗಳನ್ನು ಮಾಡಲಾಗಿದ್ದು ಪ್ರಯಾಣಿಕರು ಯಾವುದೆ ಹರಸಾಹಸ ಪಡದೆ ಸುಲಭವಾಗಿ ಏರ್ಪೋಟ್ ನಿಂದ ಬೇರೆಡೆಗೆ ಸಂಚರಿಸುವಂತಹ ವ್ಯವಸ್ಥೆಯನ್ನು ಮಾಡಲಾಗಿದ್ದು ಹೊಸ ಟರ್ಮಿನಲ್ ಹಲವು ವಿಶೇಷತೆಗಳಿಂದಾಗಿ ಸಾಕಷ್ಟು ಕುತೂಹಲ ಕೆರಳಿಸಿದೆ.

ಒಟ್ಟಾರೆ ಹಲವು ಪ್ರಶಸ್ತಿಗಳನ್ನು ತನ್ನ ಮುಡಿಗೇರಿಸಿಕೊಂಡು ಇರೋದರಲ್ಲೇ ಬೆಸ್ಟ್ ಸರ್ವಿಸ್ ನೀಡುತ್ತಿರುವ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ಥಾಣ ಶೀಘ್ರದಲ್ಲಿ ಮತ್ತೊಂದು ಗರಿಯನ್ನು ತನ್ನ ತಕ್ಕೆಗೆ ಹಾಕಿಕೊಳ್ಳಲಿದೆ. ಇನ್ನೂ ಹೊಸ ಟರ್ಮಿನಲ್​ನ ವಿಡಿಯೋಗಳನ್ನು ನೋಡಿದ ಜನರಿಗೆ ಹೊಸ ಟರ್ಮಿನಲ್ ನೋಡುವ ಕಾತುರವನ್ನ ಮತ್ತಷ್ಟು ಹೆಚ್ಚಿಸಿದ್ದು ನವೆಂಬರ್ 11 ರ ನಂತರ ಹೊಸ ಟರ್ಮಿನಲ್ ನಲ್ಲಿ ಓಡಾಡುವ ಅವಕಾಶ ಸಿಲಿಕಾನ್ ಸಿಟಿ ಜನರಿಗೆ ಸಿಗಲಿದೆ.

ವರದಿ- ನವೀನ್ ಟಿವಿನೈನ್ ದೇವನಹಳ್ಳಿ

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:06 pm, Mon, 24 October 22

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!