AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭದ್ರತಾ ತಪಾಸಣೆಗಾಗಿ ನೂತನ ತಂತ್ರಜ್ಞಾನ ಅಳವಡಿಸಿಕೊಳ್ಳಲು ಮುಂದಾದ ಬೆಂಗಳೂರು ವಿಮಾನ ನಿಲ್ದಾಣ

ಕೆಂಪೇಗೌಡ ವಿಮಾನ ನಿಲ್ದಾಣ ಸಂಸ್ಥೆ ಭದ್ರತಾ ತಪಾಸಣೆಗಾಗಿ ಸುಧಾರಿತ ತಂತ್ರಜ್ಞಾನವನ್ನು ಅಳವಡಿಸಿಕೊಳ್ಳಲು ಮುಂದಾಗಿದೆ.ಭದ್ರತಾ ತಪಾಸಣೆಗಾಗಿ ಕಂಪ್ಯೂಟರ್​ ಟೊಮೊಗ್ರಫಿ ಎಕ್ಸ್-ರೇ (CTX) ಸುಧಾರಿತ ಯಂತ್ರಗಳನ್ನು ಅಳವಡಿಸಲು ವಿಮಾನ ನಿಲ್ದಾಣ ಸಿಬ್ಬಂದಿ ತಯಾರಿ ನಡೆಸಿದ್ದಾರೆ.

ಭದ್ರತಾ ತಪಾಸಣೆಗಾಗಿ ನೂತನ ತಂತ್ರಜ್ಞಾನ ಅಳವಡಿಸಿಕೊಳ್ಳಲು ಮುಂದಾದ ಬೆಂಗಳೂರು ವಿಮಾನ ನಿಲ್ದಾಣ
ಸಾಂದರ್ಭಿಕ ಚಿತ್ರ
ವಿವೇಕ ಬಿರಾದಾರ
ವಿವೇಕ ಬಿರಾದಾರ|

Updated on: Nov 27, 2023 | 4:03 PM

Share

ಬೆಂಗಳೂರು ನ.27: ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ (KIA) ಟರ್ಮಿನಲ್ 2 ರಿಂದ ಪ್ರಯಾಣಿಸುವ ಪ್ರಯಾಣಿಕರು ಭದ್ರತಾ ತಪಾಸಣೆ (Security check) ಸಂಬಂಧ ಹೆಚ್ಚು ಹೊತ್ತು ಕಾಯಬೇಕಾಗುತ್ತದೆ. ಅಲ್ಲದೆ ಪ್ರಯಾಣಿಕರು ಬ್ಯಾಗ್​​ನಿಂದ ಎಲೆಕ್ಟ್ರಾನಿಕ್ ಸಾಧನಗಳಾದ ಫೋನ್ ಮತ್ತು ಲ್ಯಾಪ್‌ಟಾಪ್‌ಗಳಂತಹ ವಸ್ತುಗಳನ್ನು ಹೊರೆ ತೆಗೆದು ಪರಿಶೀಲನೆಗಾಗಿ ನೀಡಬೇಕು. ಇದರಿಂದ ಪ್ರಯಾಣಿಕರಿಗೆ ಸಾಕಷ್ಟು ಅನಾನುಕೂಲವಾಗುತ್ತಿತ್ತು. ಇದನ್ನು ತಪ್ಪಿಸಲು ಕೆಂಪೇಗೌಡ ವಿಮಾನ ನಿಲ್ದಾಣ ಸಂಸ್ಥೆ ಭದ್ರತಾ ತಪಾಸಣೆಗಾಗಿ ಸುಧಾರಿತ ತಂತ್ರಜ್ಞಾನವನ್ನು ಅಳವಡಿಸಿಕೊಳ್ಳಲು ಮುಂದಾಗಿದೆ.

ಹೌದು ಭದ್ರತಾ ತಪಾಸಣೆಗಾಗಿ ಕಂಪ್ಯೂಟರ್​ ಟೊಮೊಗ್ರಫಿ ಎಕ್ಸ್-ರೇ (CTX) ಸುಧಾರಿತ ಯಂತ್ರಗಳನ್ನು ಅಳವಡಿಸಲು ವಿಮಾನ ನಿಲ್ದಾಣ ಸಿಬ್ಬಂದಿ ತಯಾರಿ ನಡೆಸಿದ್ದಾರೆ. ಇದರಿಂದ ಪ್ರಯಾಣಿಕರು ಭದ್ರತಾ ತಪಾಸಣೆಗಾಗಿ ಹೆಚ್ಚು ಸಮಯ ವ್ಯಯಿಸುವ ಸಮಸ್ಯೆ ತಪ್ಪುತ್ತದೆ. ಅಲ್ಲದೆ ಭದ್ರತಾ ಕಣ್ಗಾವಲು ಇನ್ನೂ ತೀಕ್ಷಣಗೊಳ್ಳುತ್ತದೆ. ವಿಮಾನ ನಿಲ್ದಾಣವು 2023ರ ಡಿಸೆಂಬರ್​ನಿಂದ ಹೊಸ ತಂತ್ರಜ್ಞಾನವನ್ನು ಜಾರಿಗೆ ತರಲು ಯೋಜಿಸುತ್ತಿದೆ.

ವಿಮಾನ ನಿಲ್ದಾಣದ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿ ಪ್ರಕಾರ, ಸಿಟಿಎಕ್ಸ್​ ಯಂತ್ರವು ಅಟೋಮೆಟಿಕ್​ ಟ್ರೆ ರಿಟ್ರೈವಲ್​ ಸಿಸ್ಟಮ್ (ATRS) ವ್ಯವಸ್ಥೆಯನ್ನು ಹೊಂದಿದೆ. ಇದು ಪೂರ್ಣ ದೇಹವನ್ನು ಸ್ಕ್ಯಾನ್​ ಮಾಡುತ್ತದೆ. ಭದ್ರತಾ ಸಿಬ್ಬಂದಿ ಹೊಸ ತಂತ್ರಜ್ಞಾನವನ್ನು ಬಳಸಿಕೊಂಡು ಬ್ಯಾಗ್‌ ಒಳಗಿನ ವಸ್ತುಗಳನ್ನು ಆರಾಮವಾಗಿ ವೀಕ್ಷಿಸಬಹುದು. ಇದು ವಿಮಾನ ನಿಲ್ದಾಣದಲ್ಲಿ ಭದ್ರತಾ ತಪಾಸಣೆಗೆ ಬೇಕಾದ ಟ್ರೇಗಳ ಸಂಖ್ಯೆಯನ್ನು ಕಡಿಮೆ ಮಾಡುತ್ತದೆ ಎಂದು ತಿಳಿಸಿದರು.

ಇದನ್ನೂ ಓದಿ: ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿನ 3.5 ಲಕ್ಷ ಮೌಲ್ಯದ ವಸ್ತುಗಳು ಕಳವು

ಸಿಟಿಆರ್​ ತಂತ್ರಜ್ಞಾನವು ಸ್ಫೋಟಕಗಳನ್ನು ಪತ್ತೆಹಚ್ಚುವ ಅಲಾರಾಮ್​ ವ್ಯವಸ್ಥೆ ಹೊಂದಿದೆ. ಹಾಗೇ ವಸ್ತುವಿನ 3D ಚಿತ್ರವನ್ನು ಭದ್ರತಾ ಸಿಬ್ಬಂದಿಗೆ ನೀಡುತ್ತದೆ. ಪ್ರಯಾಣಿಕರು ಬ್ಯಾಗ್‌ಗಳಲ್ಲಿ ಸಾಗಿಸುವ ದ್ರವ ಪದಾರ್ಥಗಳು, ಸೇಂಟ್​ನಂತಹ ಸ್ಪ್ರೇ ಮತ್ತು ಜೆಲ್‌ಗಳನ್ನು ಗುರುತಿಸುತ್ತದೆ.

ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಸಿಟಿಎಸ್​ ತಂತ್ರಜ್ಞಾನವನ್ನು ಅಳವಡಿಸಿಕೊಳ್ಳುತ್ತಿರುವ ದೇಶದ ಮೊದಲ ವಿಮಾನ ನಿಲ್ದಾಣವಾಗಿದೆ. ಬ್ಯೂರೋ ಆಫ್ ಸಿವಿಲ್ ಏವಿಯೇಷನ್ ​​​​ಸೆಕ್ಯುರಿಟಿ (BCAS) 50 ಲಕ್ಷಕ್ಕೂ ಹೆಚ್ಚು ಪ್ರಯಾಣಿಕರನ್ನು ನಿರ್ವಹಿಸುವ ವಿಮಾನ ನಿಲ್ದಾಣಗಳು ಈ ವರ್ಷದ ಅಂತ್ಯದ ವೇಳೆಗೆ ಭದ್ರತೆಗಾಗಿ ಸಿಟಿಎಸ್​ ತಂತ್ರಜ್ಞಾನವನ್ನು ಹೊಂದಿರಬೇಕು ಎಂದು ನಿರ್ದೇಶಿಸಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Vivek Biradar
Vivek Biradar

ಮೂಲತಃ ಧಾರವಾಡ ಜಿಲ್ಲೆಯ ಹುಬ್ಬಳ್ಳಿಯವ. ಪ್ರಸ್ತುತ ಬೆಂಗಳೂರಿನಲ್ಲಿ ವಾಸಿಸುತ್ತಿದ್ದೇನೆ. ಕಳೆದ ಮೂರು ವರ್ಷಗಳಿಂದ ಡಿಜಿಟಲ್​ ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಚಲಿತ ವಿದ್ಯಮಾನ, ರಾಜಕೀಯ, ಅಪರಾಧ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದೇನೆ.

ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ