AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಕೋಗಿಲು ಲೇಔಟ್ ನಿರಾಶ್ರಿತರಿಗೆ ವಸತಿ ಭಾಗ್ಯ; ಮನೆ ಹಸ್ತಾಂತರಕ್ಕೆ ದಿನಾಂಕ ನಿಗದಿ

ಕೋಗಿಲು ಲೇಔಟ್​ನಲ್ಲಿ ಅಕ್ರಮವಾಗಿ ಮನೆ ಕಟ್ಟಿಕೊಂಡಿದ್ದವರಿಗೆ ರಾಜ್ಯ ಸರ್ಕಾರ ಬಂಪರ್ ಗಿಫ್ಟ್ ಕೊಡುತ್ತಿದೆ. ಜಿಬಿಎ, ಕಂದಾಯ, ರಾಜೀವ್ ಗಾಂಧಿ ವಸತಿ ನಿಗಮದ ಅಧಿಕಾರಿಗಳು ಕೋಗಿಲಿನಲ್ಲಿ ಸರ್ವೆ ಮಾಡಿ ಮುಗಿಸಿದ್ದಾರೆ. ನಿರಾಶ್ರಿತರಿಗೆ ಮನೆ ಹಂಚಲು ಸರ್ಕಾರ ನಿರ್ಧರಿಸಿದ್ದು, ಇದೀಗ ದಿನಾಂಕ ನಿಗದಿ ಮಾಡಿದೆ.

ಬೆಂಗಳೂರು: ಕೋಗಿಲು ಲೇಔಟ್ ನಿರಾಶ್ರಿತರಿಗೆ ವಸತಿ ಭಾಗ್ಯ; ಮನೆ ಹಸ್ತಾಂತರಕ್ಕೆ ದಿನಾಂಕ ನಿಗದಿ
ಕೋಗಿಲು ಲೇಔಟ್
ಪ್ರಸನ್ನ ಗಾಂವ್ಕರ್​
| Edited By: |

Updated on: Dec 31, 2025 | 6:07 PM

Share

ಬೆಂಗಳೂರು, ಡಿಸೆಂಬರ್​ 31: ಕೋಗಿಲು (Kogilu) ಸುತ್ತ ರಾಜಕೀಯ ಜಟಾಪಟಿ ಜೋರಾಗಿ ನಡೆಯುತ್ತಿದೆ. ಇದೇ ವಿಚಾರ ಮುಂದಿಟ್ಟುಕೊಂಡು ವಿಪಕ್ಷ ಬಿಜೆಪಿ ಸರ್ಕಾರ ವಿರುದ್ಧ ಹಿಗ್ಗಾಮುಗ್ಗಾ ವಾಗ್ದಾಳಿ ನಡೆಸಿದೆ. ಕೋಗಿಲು ಲೇಔಟ್​ನಲ್ಲಿ ಅಕ್ರಮವಾಗಿ ಮನೆ ಕಟ್ಟಿಕೊಂಡಿದ್ದವರಿಗೆ ರಾಜ್ಯ ಸರ್ಕಾರ ಬಂಪರ್ ಗಿಫ್ಟ್ ಕೊಡುತ್ತಿದೆ. ಇದೀಗ ಜನವರಿ 2ರಂದು ಕೋಗಿಲು ನಿರಾಶ್ರಿತರಿಗೆ ಮನೆ (home) ಹಸ್ತಾಂತರಕ್ಕೆ ಸರ್ಕಾರ ದಿನಾಂಕ ನಿಗದಿ ಮಾಡಿದೆ.

ನಿರಾಶ್ರಿತರಿಗೆ ವಸತಿ ಭಾಗ್ಯ

ಯಲಹಂಕ ಕೋಗಿಲು ಬಡಾವಣೆಯಲ್ಲಿ ಅಕ್ರಮ ಮನೆಗಳ ತೆರವು ಹಿನ್ನೆಲೆ ಅರ್ಹ ಸಂತ್ರಸ್ತರಿಗೆ ಜಿಬಿಎ ಹಾಗೂ ರಾಜೀವ್ ಗಾಂಧಿ ವಸತಿ ನಿಗಮ ವತಿಯಿಂದ ಪರ್ಯಾಯವಾಗಿ ಶಾಶ್ವತ ವಸತಿ ವ್ಯವಸ್ಥೆ ಮಾಡಲಾಗುತ್ತಿದೆ. ಈಗಾಗಲೇ ಜಿಬಿಎ, ಕಂದಾಯ, ರಾಜೀವ್ ಗಾಂಧಿ ವಸತಿ ನಿಗಮದ ಅಧಿಕಾರಿಗಳು ಕೋಗಿಲಿನಲ್ಲಿ ಸರ್ವೆ ಮುಗಿಸಿದ್ದಾರೆ.

ಇದನ್ನೂ ಓದಿ: ಕೋಗಿಲು ನಿರಾಶ್ರಿತರ ಪ್ರಕರಣಕ್ಕೂ ಪಾಕಿಸ್ತಾನಕ್ಕೂ ಇದೆಯಾ ಲಿಂಕ್? ಎನ್​ಐಎ ತನಿಖೆಗೆ ಆಗ್ರಹಿಸಿದ ಅಶೋಕ್

ನಿರಾಶ್ರಿತರ ಬಗ್ಗೆ ಸಮಗ್ರವಾಗಿ ದಾಖಲೆ ಪರಿಶೀಲನೆ ಮಾಡುವಂತೆ ಸಿಎಂ ಸಿದ್ದರಾಮಯ್ಯ ಸೂಚಿಸಿದ್ದಾರೆ. ಹೀಗಾಗಿ ಕಂದಾಯ ಇಲಾಖೆ ಹಾಗೂ ಬಿಬಿಎಂಪಿ ಅಧಿಕಾರಿಗಳಿಂದ ದಾಖಲೆ ಪರಿಶೀಲನೆ ಕಾರ್ಯ ನಡೆದಿದ್ದು, 2026 ಜನವರಿ 2ರಂದು ಮನೆಗಳ ಹಸ್ತಾಂತರಕ್ಕೆ ನಿರ್ಧರಿಸಲಾಗಿದೆ.

ಬಂಡೆ ಹೊಸೂರಿನ ಬೈಯಪ್ಪನಹಳ್ಳಿಯಲ್ಲಿರೋ ಅಪಾರ್ಟ್​ಮೆಂಟ್​ನಲ್ಲಿ ಸುಮಾರು 1ಸಾವಿರಕ್ಕೂ ಹೆಚ್ಚು 1 BHK ಫ್ಲ್ಯಾಟ್​ಗಳಿವೆ. ಸದ್ಯ ಬಹುತೇಕ ಕಾಮಗಾರಿ ಪೂರ್ಣಗೊಂಡಿದ್ದು, ಸಣ್ಣಪುಟ್ಟ ಕೆಲಸಗಳಷ್ಟೇ ಬಾಕಿ ಉಳಿದಿವೆ. ಇದೇ ಅಪಾರ್ಟ್​​ಮೆಂಟ್​ನಲ್ಲಿ ನಿರಾಶ್ರಿತರಿಗೆ ಮನೆ ಕೊಡುವ ಸಾಧ್ಯತೆ ಇದೆ.

ಇದನ್ನೂ ಓದಿ: ಕೋಗಿಲು ಲೇಔಟ್​​ ನಿರಾಶ್ರಿತರ ಬಗ್ಗೆ ಅಶೋಕ್​​ ಸ್ಫೋಟಕ ಮಾಹಿತಿ: ಸಂತ್ರಸ್ತರ ಸತ್ಯ ಬಿಚ್ಚಿಟ್ಟ ವಿಪಕ್ಷ ನಾಯಕ

ಹೀಗೆ ಸರ್ಕಾರ ಕೋಗಿಲಿನ ನಿವಾಸಿಗಳಿಗೆ ಸೂರು ಕಲ್ಪಿಸಿಕೊಡುತ್ತಿದೆ. ಆದರೆ ಮನೆ ಕಳೆದುಕೊಂಡು ದಶಕಗಳೇ ಉರುಳಿದರೂ ರಾಜ್ಯ ಅನೇಕ ಕಡೆಯ ಜನರ ನೆರವಿಗೆ ಸರ್ಕಾರಗಳು ಹೋಗಿಲ್ಲ. ಲಿಂಗನಮಕ್ಕಿ ಜಲಾಶಯಕ್ಕಾಗಿ ಭೂಮಿ ಕಳೆದುಕೊಂಡವರು ಕಳೆದ 65 ವರ್ಷದಿಂದ ಹಕ್ಕುಪತ್ರಕ್ಕಾಗಿ ಹೋರಾಡುತ್ತಿದ್ದಾರೆ. ಆದರೆ ಸರ್ಕಾರಗಳು ಇವರನ್ನ ಕಣ್ಣೆತ್ತಿಯೂ ನೋಡಿಲ್ಲ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

New Year 2026: ಹೊಸ ವರ್ಷ ಸ್ವಾಗತಿಸಿದ ಮೊದಲ ದೇಶ ನ್ಯೂಜಿಲೆಂಡ್‌
New Year 2026: ಹೊಸ ವರ್ಷ ಸ್ವಾಗತಿಸಿದ ಮೊದಲ ದೇಶ ನ್ಯೂಜಿಲೆಂಡ್‌
ಒಂದುವರೆ ಗಂಟೆಯಲ್ಲಿ 21 ಜನರಿಗೆ ಕಚ್ಚಿ ಗಾಯ ಮಾಡಿದ ಬೀದಿ ನಾಯಿ
ಒಂದುವರೆ ಗಂಟೆಯಲ್ಲಿ 21 ಜನರಿಗೆ ಕಚ್ಚಿ ಗಾಯ ಮಾಡಿದ ಬೀದಿ ನಾಯಿ
ಎಲೆಕ್ಟ್ರಾನಿಕ್ ಸಿಟಿ ಜನರೇ ಇಲ್ಲಿ ಗಮನಿಸಿ, ಈ ರಸ್ತೆ ಬಂದ್ ಆಗಲಿದೆ
ಎಲೆಕ್ಟ್ರಾನಿಕ್ ಸಿಟಿ ಜನರೇ ಇಲ್ಲಿ ಗಮನಿಸಿ, ಈ ರಸ್ತೆ ಬಂದ್ ಆಗಲಿದೆ
ಪೊಲೀಸರ ಮೇಲೆ ವಿಜಯಲಕ್ಷ್ಮಿ ದರ್ಶನ್ ಆರೋಪ: ಅಸಲಿ ವಿಷಯ ತಿಳಿಸಿದ ಕಮಿಷನರ್
ಪೊಲೀಸರ ಮೇಲೆ ವಿಜಯಲಕ್ಷ್ಮಿ ದರ್ಶನ್ ಆರೋಪ: ಅಸಲಿ ವಿಷಯ ತಿಳಿಸಿದ ಕಮಿಷನರ್
ಕೋಗಿಲು ನಿರಾಶ್ರಿತರ ಪ್ರಕರಣಕ್ಕೂ ಪಾಕಿಸ್ತಾನಕ್ಕೂ ಇದೆಯಾ ಲಿಂಕ್?
ಕೋಗಿಲು ನಿರಾಶ್ರಿತರ ಪ್ರಕರಣಕ್ಕೂ ಪಾಕಿಸ್ತಾನಕ್ಕೂ ಇದೆಯಾ ಲಿಂಕ್?
ಕೋಗಿಲು ಲೇಔಟ್​​ ಸಂತ್ರಸ್ತರ ಸತ್ಯ ಬಿಚ್ಚಿಟ್ಟ ವಿಪಕ್ಷ ನಾಯಕ ಅಶೋಕ್​​
ಕೋಗಿಲು ಲೇಔಟ್​​ ಸಂತ್ರಸ್ತರ ಸತ್ಯ ಬಿಚ್ಚಿಟ್ಟ ವಿಪಕ್ಷ ನಾಯಕ ಅಶೋಕ್​​
ನ್ಯೂ ಇಯರ್​​ ಆಚರಣೆ ವೇಳೆ ಯುವತಿಯರ ತಂಟೆಗೆ ಹೋದ್ರೆ ಜೋಕೆ: ಖಾಕಿ ಎಚ್ಚರಿಕೆ
ನ್ಯೂ ಇಯರ್​​ ಆಚರಣೆ ವೇಳೆ ಯುವತಿಯರ ತಂಟೆಗೆ ಹೋದ್ರೆ ಜೋಕೆ: ಖಾಕಿ ಎಚ್ಚರಿಕೆ
ಕೋಗಿಲು ಲೇಔಟ್​ನಲ್ಲಿದ್ದಿದ್ದು ಬಾಂಗ್ಲಾ ಅಕ್ರಮ ವಲಸಿಗರೇ?
ಕೋಗಿಲು ಲೇಔಟ್​ನಲ್ಲಿದ್ದಿದ್ದು ಬಾಂಗ್ಲಾ ಅಕ್ರಮ ವಲಸಿಗರೇ?
ಪೊಲೀಸ್ ಆಯುಕ್ತರ ಕಚೇರಿಗೆ ದಿಢೀರ್ ಭೇಟಿ ನೀಡಿದ ವಿಜಯಲಕ್ಷ್ಮಿ ದರ್ಶನ್
ಪೊಲೀಸ್ ಆಯುಕ್ತರ ಕಚೇರಿಗೆ ದಿಢೀರ್ ಭೇಟಿ ನೀಡಿದ ವಿಜಯಲಕ್ಷ್ಮಿ ದರ್ಶನ್
ಮಾಜಿ ಸಚಿವ ಬಿ. ನಾಗೇಂದ್ರ ಆಪ್ತನ ಮನೆ ಮೇಲೆ ಸಿಬಿಐ ದಾಳಿ
ಮಾಜಿ ಸಚಿವ ಬಿ. ನಾಗೇಂದ್ರ ಆಪ್ತನ ಮನೆ ಮೇಲೆ ಸಿಬಿಐ ದಾಳಿ