AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ಮಡ್​ಪೈಪ್ ರೆಸ್ಟೋರೆಂಟ್ ಅಗ್ನಿ ಅವಘಡಕ್ಕೆ ಕಾರಣವೇನು? ಬೆಂಕಿ ಹೊತ್ತಿಕೊಂಡ 15 ನಿಮಿಷದಲ್ಲಿ ಆಗಿದ್ದೇನು? ಇಲ್ಲಿದೆ ವಿವರ

ಬೆಂಗಳೂರಿನ ಕೊರಮಂಗಲದ ಫೋರಂ ಮಾಲ್ ಮುಂಭಾಗದಲ್ಲಿರುವ ಮಡ್​ಪೈಪ್​ನ ಆರನೇ ಮಹಡಿಯಲ್ಲಿ ಬುಧವಾರ ಸಂಭವಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರನೇ ಮಹಡಿಯಿಂದ ಪ್ರೇಮ್ ಸಿಂಗ್ ಜಿಗಿಯಲು ಕಾರಣವೇನು? ಬೆಂಕಿ ಬಿದ್ದ ತಕ್ಷಣ ಅಲ್ಲಿಂದ ಪರಾರಿಯಾಗಲು ಜಾಗ ಇರಲಿಲ್ಲವೇ? ಎಂಬ ಪ್ರಶ್ನೆಗೆ ಇಲ್ಲಿದೆ ಉತ್ತರ

ಬೆಂಗಳೂರು ಮಡ್​ಪೈಪ್ ರೆಸ್ಟೋರೆಂಟ್ ಅಗ್ನಿ ಅವಘಡಕ್ಕೆ ಕಾರಣವೇನು? ಬೆಂಕಿ ಹೊತ್ತಿಕೊಂಡ 15 ನಿಮಿಷದಲ್ಲಿ ಆಗಿದ್ದೇನು? ಇಲ್ಲಿದೆ ವಿವರ
ಬೆಂಗಳೂರು ಅಗ್ನಿ ಅವಘಡ
ಜಗದೀಶ ಬಿ.
| Edited By: ವಿವೇಕ ಬಿರಾದಾರ|

Updated on: Oct 19, 2023 | 9:20 AM

Share

ಬೆಂಗಳೂರು ಅ.​​​19: ಬುಧವಾರ ಕೊರಮಂಗಲದ (Kormangala) ಫೋರಂ ಮಾಲ್ ಮುಂಭಾಗದಲ್ಲಿರುವ ಮಡ್​ಪೈಪ್ ಆರನೇ ಮಹಡಿಯಲ್ಲಿ 8 ರಿಂದ10 ಸಿಲಿಂಡರ್​ಗಳು ಸ್ಫೋಟಗೊಂಡು ಅಗ್ನಿ ಅವಘಡ (Fire Accident) ಸಂಭವಿಸಿತ್ತು. ಈ ವೇಳೆ ಪ್ರಾಣ ಉಳಿಸಿಕೊಳ್ಳಲು ಪ್ರೇಮ್​ ಸಿಂಗ್​ ಎಂಬುವರು ಆರನೇ ಮಹಡಿಯಿಂದ ಕೆಳಗೆ ಜಿಗಿದಿದ್ದು, ಬಲಗೈ ಮೂಳೆ ಮುರಿದಿದೆ. ಅಷ್ಟಕ್ಕೂ ಆರನೇ ಮಹಡಿಯಿಂದ ಪ್ರೇಮ್ ಸಿಂಗ್ ಜಿಗಿಯಲು ಕಾರಣ ಏನು? ಬೆಂಕಿ ಬಿದ್ದ ತಕ್ಷಣ ಅಲ್ಲಿಂದ ಪರಾರಿಯಾಗಲು ಜಾಗ ಇರಲಿಲ್ಲವೇ ? ಆರನೇ ಮಹಡಿಯ ರೆಸ್ಟೋರೆಂಟ್​ನಲ್ಲಿ ಸುರಕ್ಷಿತ ಕ್ರಮಗಳು ಇರಲಿಲ್ಲವೇ ? ಬೆಂಕಿ ಬಿದ್ದ ಬಳಿಕ ನಡೆದ ಆ 15 ನಿಮಿಷದಲ್ಲಿ ಆಗಿದ್ದೇನು? ಎಂಬ ಎಲ್ಲ ಪ್ರಶ್ನೆಗಳಿಗೆ ಉತ್ತರ ಇಲ್ಲಿದೆ.

ಆರನೇ ಮಹಡಿಯ ಮಡ್​ಪೈಪ್ ರೆಸ್ಟೋರೆಂಟ್​ನ ರೂಫ್ ಟಾಪ್​ನಲ್ಲಿ ರಾತ್ರಿಯ ವೀವ್​ ಅನುಭವಿಸುತ್ತಾ ಊಟ ಮಾಡುವ ರೀತಿ 12 ಟೇಬಲ್​ಗಳನ್ನು ಬುಧವಾರ ಮಧ್ಯಾಹ್ನ ತಯಾರಿಸಲಾಗುತ್ತಿತ್ತು. ಕಳೆದ ಒಂದು ವಾರದಿಂದ ರೂಫ್ ಟಾಪ್​​ನಲ್ಲೇ ಅಡುಗೆ ಮಾಡುತ್ತಾ ಇದ್ದರು. ಹೀಗಾಗಿ ಆರು ಸಿಲಿಂಡರ್​ಗಳನ್ನು ರೂಫ್​ ಟಾಪ್​ನಲ್ಲಿ ಇಡಲಾಗಿತ್ತು. ಇದೇ ರೂಫ್​ಟಾಪ್​ನ ಅಡುಗೆ ಮನೆ ಬಳಿ ಪ್ರೇಮ್ ಸಿಂಗ್ ಇದ್ದರು.

ಇದನ್ನೂ ಓದಿ: ಬೆಂಗಳೂರಿನಲ್ಲಿ ಹೆಚ್ಚಾದ ಅಗ್ನಿ ದುರಂತ: ಅಪಾರ್ಟ್ಮೆಂಟ್, ಅಂಗಡಿ, ಹೋಟೆಲ್, ರೆಸ್ಟೋರೆಂಟ್​ಗಳನ್ನು ಪರಿಶೀಲಿಸುವಂತೆ ಸೂಚನೆ

ಮಧ್ಯಾಹ್ನ 12 ಗಂಟೆ ಮಡ್​ಪೈಪ್ ರೆಸ್ಟೋರೆಂಟ್​​ನ ಅಡುಗೆ ಮನೆಯಲ್ಲಿ ನಾಲ್ಕು ಜನ ಸಿಬ್ಬಂದಿಗಳು ಅಡುಗೆ ಮನೆಯಲ್ಲಿ ಕೆಲಸ ಮಾಡುತ್ತಿದ್ದರು. ಈ ವೇಳೆ ಸಿಲಿಂಡರ್ ಸೋರಿಕೆಯಾಗಿದೆ. ಇದನ್ನು ತಿಳಿಯದ ಸಿಬ್ಬಂದಿ ಲೈಟ್ ಹಾಕಿದಾಗ ಬೆಂಕಿ ಹತ್ತಿಕೊಂಡಿದೆ. ಕೂಡಲೆ ಸಿಬ್ಬಂದಿ ಅಲ್ಲಿಂದ ಓಡುತ್ತಾ ಕೆಳಗಡೆ ಬಂದಿದ್ದಾರೆ. ಆದರೆ ರೂಫ್​ ಟಾಪ್​ನ ಕಿಚನ್ ಬಳಿ ಇದ್ದ ಪ್ರೇಮ್ ಸಿಂಗ್​ಗೆ ಕೆಳಗೆ ಬರಲು ಆಗಲಿಲ್ಲ. ಈ ವೇಳೆ ಬೆಂಕಿಯ ಜ್ವಾಲೆ ಇಡೀ ಮಹಡಿಯನ್ನು ಆವರಿಸಿಕೊಂಡಿದೆ.

ಬೆಂಕಿ ರೂಫ್​ ಟಾಪ್​​ಗೂ ಆವರಿಸಿಕೊಂಡು ಸಿಲಿಂಡರ್ ಸ್ಪೋಟಗೊಳ್ಳುತ್ತದೆ ಎಂದು ತಪ್ಪಿಸಿಕೊಳ್ಳಲು ಸುಮಾರು 15 ನಿಮಿಷಗಳ ಕಾಲ ರೂಪ್ ಟಾಪ್​ನ ಎಲ್ಲ ಕಡೆ ಓಡಾಡಿದ್ದಾನೆ. ಆದರೆ ತಪ್ಪಿಸಿಕೊಳ್ಳಲು ಜಾಗ ಸಿಗಲಿಲ್ಲ. ಕೊನೆಗೆ ಭಯದಿಂದ ಪ್ರೇಮ್ ಸಿಂಗ್ ಮೇಲಿಂದ ಜಿಗಿದಿದ್ದಾನೆ. ಸದ್ಯ ಪ್ರೇಮ್​ ಸಿಂಗ್ ನಿಮ್ಹಾನ್ಸ್​ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಸುದ್ದುಗುಂಟೆಪಾಳ್ಯ ಪೊಲೀಸ್‌ ಠಾಣೆಯಲ್ಲಿ ರೆಸ್ಟೋರೆಂಟ್ ಮಾಲೀಕ ಕರಣ್ ಜೈನ್ ವಿರುದ್ಧ ದೂರು ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
ರಾಜ್ಯಸಭೆ ಕಲಾಪದಲ್ಲಿ ಸಿಪಿಎಂ ಸಂಸದನಿಗೆ ಲುಂಗಿವಾಲಾ ಎಂದ ಬಿಜೆಪಿ ಸಂಸದೆ
ರಾಜ್ಯಸಭೆ ಕಲಾಪದಲ್ಲಿ ಸಿಪಿಎಂ ಸಂಸದನಿಗೆ ಲುಂಗಿವಾಲಾ ಎಂದ ಬಿಜೆಪಿ ಸಂಸದೆ
‘ರೈತರ ಪ್ರತಿಭಟನೆಗೆ ಬಾರದ ಸ್ಟಾರ್​ಗಳ ಸಿನಿಮಾ ನಿಷೇಧಿಸಿ’: ಸಾರಾ ಗೋವಿಂದು
‘ರೈತರ ಪ್ರತಿಭಟನೆಗೆ ಬಾರದ ಸ್ಟಾರ್​ಗಳ ಸಿನಿಮಾ ನಿಷೇಧಿಸಿ’: ಸಾರಾ ಗೋವಿಂದು
'ಅಮಿತ್ ಶಾ ಭಾಷಣ ನಮಗೆ ಬೇಕಾಗಿಲ್ಲ'; ರಾಹುಲ್ ಗಾಂಧಿ ವ್ಯಂಗ್ಯ
'ಅಮಿತ್ ಶಾ ಭಾಷಣ ನಮಗೆ ಬೇಕಾಗಿಲ್ಲ'; ರಾಹುಲ್ ಗಾಂಧಿ ವ್ಯಂಗ್ಯ
ಮುಖ್ಯ ಚುನಾವಣಾಧಿಕಾರಿ ಮಹತ್ವದ ಸುದ್ದಿಗೋಷ್ಠಿ
ಮುಖ್ಯ ಚುನಾವಣಾಧಿಕಾರಿ ಮಹತ್ವದ ಸುದ್ದಿಗೋಷ್ಠಿ
ಕರ್ನಾಟಕ ಬಂದ್​​​​​​​​ಗೆ ಬೆಂಬಲವಿಲ್ಲ: ಪ್ರವೀಣ್ ಶೆಟ್ಟಿ, ಸಾರಾ ಗೋವಿಂದ್
ಕರ್ನಾಟಕ ಬಂದ್​​​​​​​​ಗೆ ಬೆಂಬಲವಿಲ್ಲ: ಪ್ರವೀಣ್ ಶೆಟ್ಟಿ, ಸಾರಾ ಗೋವಿಂದ್
ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ
ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ
ನಿಶ್ಚಿತಾರ್ಥಕ್ಕೆ ಹತ್ತು ವರ್ಷ, ಅಪರೂಪದ ವಿಡಿಯೋ ಹಂಚಿಕೊಂಡ ರಾಧಿಕಾ ಪಂಡಿತ್
ನಿಶ್ಚಿತಾರ್ಥಕ್ಕೆ ಹತ್ತು ವರ್ಷ, ಅಪರೂಪದ ವಿಡಿಯೋ ಹಂಚಿಕೊಂಡ ರಾಧಿಕಾ ಪಂಡಿತ್
ರಾಮಮಂದಿರ ದೇಣಿಗೆ ಕಳ್ಳತನ ಖಂಡಿಸಿ ವಿಪಕ್ಷಗಳ ಪ್ರತಿಭಟನೆ
ರಾಮಮಂದಿರ ದೇಣಿಗೆ ಕಳ್ಳತನ ಖಂಡಿಸಿ ವಿಪಕ್ಷಗಳ ಪ್ರತಿಭಟನೆ
ಇನ್ಮುಂದೆ ಬೇಕಾಬಿಟ್ಟಿ ಟ್ಯಾಟೂಗೆ ಬೀಳಲಿದೆ ಸರ್ಕಾರದ ಕಡಿವಾಣ
ಇನ್ಮುಂದೆ ಬೇಕಾಬಿಟ್ಟಿ ಟ್ಯಾಟೂಗೆ ಬೀಳಲಿದೆ ಸರ್ಕಾರದ ಕಡಿವಾಣ
ಸ್ವಾತಂತ್ರೋತ್ಸವದ ಆಹ್ವಾನ ಪತ್ರಿಕೆಯಲ್ಲಿ ಭಾರತೀಯ ಕಲಾ ವೈವಿಧ್ಯದ ಅನಾವರಣ
ಸ್ವಾತಂತ್ರೋತ್ಸವದ ಆಹ್ವಾನ ಪತ್ರಿಕೆಯಲ್ಲಿ ಭಾರತೀಯ ಕಲಾ ವೈವಿಧ್ಯದ ಅನಾವರಣ