AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru: KPTCL ಕಾಮಗಾರಿಯಿಂದಾಗಿ ಆಗಸ್ಟ್‌ ಪೂರ್ತಿ ಎದುರಾಗಲಿದೆ ವಿದ್ಯುತ್ ಸಮಸ್ಯೆ, ನಿಮ್ಮ ಏರಿಯಾ ಇದಿಯಾ ನೋಡಿಕೊಳ್ಳಿ

ಈ ತಿಂಗಳು ಪೂರ್ತಿ ಅಂದರೆ ಆಗಸ್ಟ್ 1 ರಿಂದ ಆಗಸ್ಟ್ 28 ರವರೆಗೆ ತಿಂಗಳ ಎಲ್ಲಾ ದಿನಗಳಲ್ಲಿ ಕಾಮಗಾರಿ ಕಾರ್ಯ ನಡೆಯುತ್ತಿದ್ದು ಆಗಸ್ಟ್ ನಲ್ಲಿ ವಿದ್ಯುತ್ ಸೇವೆಯಲ್ಲಿ ವ್ಯತ್ಯಾಸ ಕಂಡು ಬರಲಿದೆ.

Bengaluru: KPTCL ಕಾಮಗಾರಿಯಿಂದಾಗಿ ಆಗಸ್ಟ್‌ ಪೂರ್ತಿ ಎದುರಾಗಲಿದೆ ವಿದ್ಯುತ್ ಸಮಸ್ಯೆ, ನಿಮ್ಮ ಏರಿಯಾ ಇದಿಯಾ ನೋಡಿಕೊಳ್ಳಿ
ಪವರ್ ಕಟ್
TV9 Web
| Updated By: ಆಯೇಷಾ ಬಾನು|

Updated on:Aug 01, 2022 | 6:06 PM

Share

ಬೆಂಗಳೂರು: ಸಿಲಿಕಾನ್ ಸಿಟಿ ಮಂದಿಗೆ ಆಗಸ್ಟ್ ತಿಂಗಳಲ್ಲಿ ವಿದ್ಯುತ್ ಕಡಿತ ಸಮಸ್ಯೆ ಎದುರಾಗಲಿದೆ. ಕೆಪಿಟಿಸಿಎಲ್(Karnataka Power Transmission Corporation Limited) ಕಾಮಗಾರಿಯಿಂದಾಗಿ ಆಗಸ್ಟ್‌ನಲ್ಲಿ ವಿದ್ಯುತ್ ಕಡಿತಗೊಳ್ಳುವ ಸಾಧ್ಯತೆ ಇದೆ. ಹಾಗಾದ್ರೆ ಆಗಸ್ಟ್ನಲ್ಲಿ ಯಾವ ಯಾವ ಏರಿಯಾಗಳಲ್ಲಿ ಕರೆಂಟ್ ಇರಲ್ಲ ಎಂಬ ಡಿಟೈಲ್ಸ್ ಇಲ್ಲಿದೆ.

ಕರ್ನಾಟಕ ಪವರ್ ಟ್ರಾನ್ಸ್‌ಮಿಷನ್ ಕಾರ್ಪೊರೇಷನ್ ಲಿಮಿಟೆಡ್ (ಕೆಪಿಟಿಸಿಎಲ್) ಆಗಸ್ಟ್‌ನಲ್ಲಿ ಕೆಲವು ಕಾಮಗಾರಿಗಳನ್ನು ಕೈಗೊಳ್ಳಲಿದೆ. ಕೆಪಿಟಿಸಿಎಲ್, ಈ ಕಾಮಗಾರಿಯನ್ನು ಬೆಳಗ್ಗೆ 9 ರಿಂದ ಸಂಜೆ 6 ಗಂಟೆಯವರೆಗೆ ಕೈಗೊಳ್ಳುರಿದ್ದಾರೆ. ಹೀಗಾಗಿ ಬೆಸ್ಕಾಂ ವೆಬ್‌ಸೈಟ್‌ನಲ್ಲಿ ಅಪ್‌ಲೋಡ್ ಮಾಡಲಾದ ಮಾಹಿತಿಯ ಪ್ರಕಾರ, ಈ ತಿಂಗಳು ಪೂರ್ತಿ ಅಂದರೆ ಆಗಸ್ಟ್ 1 ರಿಂದ ಆಗಸ್ಟ್ 28 ರವರೆಗೆ ತಿಂಗಳ ಎಲ್ಲಾ ದಿನಗಳಲ್ಲಿ ಕಾಮಗಾರಿ ಕಾರ್ಯ ನಡೆಯುತ್ತಿದ್ದು ಆಗಸ್ಟ್ ನಲ್ಲಿ ವಿದ್ಯುತ್ ಸೇವೆಯಲ್ಲಿ ವ್ಯತ್ಯಾಸ ಕಂಡು ಬರಲಿದೆ.

ವೈಟ್‌ಫೀಲ್ಡ್ ವಿಭಾಗದಲ್ಲಿ ಸುಮಾರು 57 ಗಂಟೆಗಳ ಕಾಲ ಕಾಮಗಾರಿ ನಡೆಯಲಿದ್ದು ಇದಕ್ಕೆ ಮೂರು ದಿನಗಳಿಂದ ಏಳು ದಿನಗಳಾಗಬಹುದು. ಹೀಗಾಗಿ ಬೆಸ್ಕಾಂ ಅಧಿಕಾರಿಗಳು ಇದಕ್ಕೆ ಪರ್ಯಾಯ ವಿದ್ಯುತ್ ವ್ಯವಸ್ಥೆಗಳನ್ನು ಮಾಡಿಕೊಂಡಿದ್ದಾರೆ. ಆದರೂ ವಿದ್ಯುತ್ ವ್ಯತ್ಯಯವಾಗಲಿದೆ. ಬೆಂಗಳೂರಿನಲ್ಲಿ ಹಲವು ಯೋಜನೆಗಳನ್ನು ಕೈಗೊಳ್ಳಲು ಅಧಿಕಾರಿಗಳಿಗೆ ನಿಗಮ ಒಪ್ಪಿಗೆ ನೀಡಿದೆ. ಯೋಜನೆಗಳು ತಡೆಗಟ್ಟುವ, ತ್ರೈಮಾಸಿಕ, ಅರ್ಧ-ವಾರ್ಷಿಕ ಮತ್ತು ವಾರ್ಷಿಕ ನಿರ್ವಹಣಾ ಕಾರ್ಯಗಳನ್ನು ಒಳಗೊಂಡಿವೆ.

ಆಗಸ್ಟ್ ತಿಂಗಳಲ್ಲಿ ವಿದ್ಯುತ್ ಸಮಸ್ಯೆ ಎದುರಿಸಬಹುದಾದ ಏರಿಯಾಗಳು

ಕನಕಪುರ, ರಾಮನಗರ, ಮದ್ದೂರು, ಎಚ್‌ಎಸ್‌ಆರ್, ಚಂದಾಪುರದ ಹಲವು ಭಾಗಗಳು, ಮಾಗಡಿ, ನೆಲಮಂಗಲ, ಕೆಂಗೇರಿ, ಹೊಸಕೋಟೆ, ನಂದಗುಡಿ, ದೇವನಹಳ್ಳಿ, ಆವಲಹಳ್ಳಿ, ಚಿಂತಾಮಣಿ, ಚಿಕ್ಕಬಳ್ಳಾಪುರ, ಕೆಜಿಎಫ್, ಕೋಲಾರ, ವಿಧಾನಸೌಧದ ಡಬ್ಲ್ಯು 5, ಡಬ್ಲ್ಯು 3 ಮತ್ತು ಡಬ್ಲ್ಯು 4, ಆರ್.ಆರ್.ಆರ್. ನಗರ ವಿಭಾಗ W2, ಜಯನಗರ, ರಾಜಾಜಿನಗರ, ಎಚ್‌ಎಸ್‌ಆರ್ ಲೇಔಟ್, ಕೋರಮಂಗಲ, ಇಂದಿರಾನಗರ, ವೈಟ್‌ಫೀಲ್ಡ್ ವಿಭಾಗ, ಶಿವಾಜಿನಗರ ವಿಭಾಗ, ಹೆಬ್ಬಾಳ ವಿಭಾಗ, ಹೆಚ್ಚುವರಿ ಕೇಂದ್ರ ವಿಭಾಗ, ಯಲಹಂಕ ಹೊಸ ಪಟ್ಟಣ, ಮಲ್ಲೇಶ್ವರಂ, ಜಾಲಹಳ್ಳಿ, ಹೆಬ್ಬಾಳ ಹೆಚ್ಚುವರಿ ಕೇಂದ್ರ ಉಪವಿಭಾಗಗಳಲ್ಲಿ ಹಲವಾರು ವಿಭಾಗಗಳು ಮತ್ತು ಉಪ-ವಿಭಾಗಗಳು, ಎನ್ಆರ್ಎಸ್ ವಿಭಾಗ, ಇತ್ಯಾದಿ.

Published On - 5:51 pm, Mon, 1 August 22

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ