AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru: KPTCL ಕಾಮಗಾರಿಯಿಂದಾಗಿ ಆಗಸ್ಟ್‌ ಪೂರ್ತಿ ಎದುರಾಗಲಿದೆ ವಿದ್ಯುತ್ ಸಮಸ್ಯೆ, ನಿಮ್ಮ ಏರಿಯಾ ಇದಿಯಾ ನೋಡಿಕೊಳ್ಳಿ

ಈ ತಿಂಗಳು ಪೂರ್ತಿ ಅಂದರೆ ಆಗಸ್ಟ್ 1 ರಿಂದ ಆಗಸ್ಟ್ 28 ರವರೆಗೆ ತಿಂಗಳ ಎಲ್ಲಾ ದಿನಗಳಲ್ಲಿ ಕಾಮಗಾರಿ ಕಾರ್ಯ ನಡೆಯುತ್ತಿದ್ದು ಆಗಸ್ಟ್ ನಲ್ಲಿ ವಿದ್ಯುತ್ ಸೇವೆಯಲ್ಲಿ ವ್ಯತ್ಯಾಸ ಕಂಡು ಬರಲಿದೆ.

Bengaluru: KPTCL ಕಾಮಗಾರಿಯಿಂದಾಗಿ ಆಗಸ್ಟ್‌ ಪೂರ್ತಿ ಎದುರಾಗಲಿದೆ ವಿದ್ಯುತ್ ಸಮಸ್ಯೆ, ನಿಮ್ಮ ಏರಿಯಾ ಇದಿಯಾ ನೋಡಿಕೊಳ್ಳಿ
ಪವರ್ ಕಟ್
Follow us
TV9 Web
| Updated By: ಆಯೇಷಾ ಬಾನು

Updated on:Aug 01, 2022 | 6:06 PM

ಬೆಂಗಳೂರು: ಸಿಲಿಕಾನ್ ಸಿಟಿ ಮಂದಿಗೆ ಆಗಸ್ಟ್ ತಿಂಗಳಲ್ಲಿ ವಿದ್ಯುತ್ ಕಡಿತ ಸಮಸ್ಯೆ ಎದುರಾಗಲಿದೆ. ಕೆಪಿಟಿಸಿಎಲ್(Karnataka Power Transmission Corporation Limited) ಕಾಮಗಾರಿಯಿಂದಾಗಿ ಆಗಸ್ಟ್‌ನಲ್ಲಿ ವಿದ್ಯುತ್ ಕಡಿತಗೊಳ್ಳುವ ಸಾಧ್ಯತೆ ಇದೆ. ಹಾಗಾದ್ರೆ ಆಗಸ್ಟ್ನಲ್ಲಿ ಯಾವ ಯಾವ ಏರಿಯಾಗಳಲ್ಲಿ ಕರೆಂಟ್ ಇರಲ್ಲ ಎಂಬ ಡಿಟೈಲ್ಸ್ ಇಲ್ಲಿದೆ.

ಕರ್ನಾಟಕ ಪವರ್ ಟ್ರಾನ್ಸ್‌ಮಿಷನ್ ಕಾರ್ಪೊರೇಷನ್ ಲಿಮಿಟೆಡ್ (ಕೆಪಿಟಿಸಿಎಲ್) ಆಗಸ್ಟ್‌ನಲ್ಲಿ ಕೆಲವು ಕಾಮಗಾರಿಗಳನ್ನು ಕೈಗೊಳ್ಳಲಿದೆ. ಕೆಪಿಟಿಸಿಎಲ್, ಈ ಕಾಮಗಾರಿಯನ್ನು ಬೆಳಗ್ಗೆ 9 ರಿಂದ ಸಂಜೆ 6 ಗಂಟೆಯವರೆಗೆ ಕೈಗೊಳ್ಳುರಿದ್ದಾರೆ. ಹೀಗಾಗಿ ಬೆಸ್ಕಾಂ ವೆಬ್‌ಸೈಟ್‌ನಲ್ಲಿ ಅಪ್‌ಲೋಡ್ ಮಾಡಲಾದ ಮಾಹಿತಿಯ ಪ್ರಕಾರ, ಈ ತಿಂಗಳು ಪೂರ್ತಿ ಅಂದರೆ ಆಗಸ್ಟ್ 1 ರಿಂದ ಆಗಸ್ಟ್ 28 ರವರೆಗೆ ತಿಂಗಳ ಎಲ್ಲಾ ದಿನಗಳಲ್ಲಿ ಕಾಮಗಾರಿ ಕಾರ್ಯ ನಡೆಯುತ್ತಿದ್ದು ಆಗಸ್ಟ್ ನಲ್ಲಿ ವಿದ್ಯುತ್ ಸೇವೆಯಲ್ಲಿ ವ್ಯತ್ಯಾಸ ಕಂಡು ಬರಲಿದೆ.

ವೈಟ್‌ಫೀಲ್ಡ್ ವಿಭಾಗದಲ್ಲಿ ಸುಮಾರು 57 ಗಂಟೆಗಳ ಕಾಲ ಕಾಮಗಾರಿ ನಡೆಯಲಿದ್ದು ಇದಕ್ಕೆ ಮೂರು ದಿನಗಳಿಂದ ಏಳು ದಿನಗಳಾಗಬಹುದು. ಹೀಗಾಗಿ ಬೆಸ್ಕಾಂ ಅಧಿಕಾರಿಗಳು ಇದಕ್ಕೆ ಪರ್ಯಾಯ ವಿದ್ಯುತ್ ವ್ಯವಸ್ಥೆಗಳನ್ನು ಮಾಡಿಕೊಂಡಿದ್ದಾರೆ. ಆದರೂ ವಿದ್ಯುತ್ ವ್ಯತ್ಯಯವಾಗಲಿದೆ. ಬೆಂಗಳೂರಿನಲ್ಲಿ ಹಲವು ಯೋಜನೆಗಳನ್ನು ಕೈಗೊಳ್ಳಲು ಅಧಿಕಾರಿಗಳಿಗೆ ನಿಗಮ ಒಪ್ಪಿಗೆ ನೀಡಿದೆ. ಯೋಜನೆಗಳು ತಡೆಗಟ್ಟುವ, ತ್ರೈಮಾಸಿಕ, ಅರ್ಧ-ವಾರ್ಷಿಕ ಮತ್ತು ವಾರ್ಷಿಕ ನಿರ್ವಹಣಾ ಕಾರ್ಯಗಳನ್ನು ಒಳಗೊಂಡಿವೆ.

ಆಗಸ್ಟ್ ತಿಂಗಳಲ್ಲಿ ವಿದ್ಯುತ್ ಸಮಸ್ಯೆ ಎದುರಿಸಬಹುದಾದ ಏರಿಯಾಗಳು

ಕನಕಪುರ, ರಾಮನಗರ, ಮದ್ದೂರು, ಎಚ್‌ಎಸ್‌ಆರ್, ಚಂದಾಪುರದ ಹಲವು ಭಾಗಗಳು, ಮಾಗಡಿ, ನೆಲಮಂಗಲ, ಕೆಂಗೇರಿ, ಹೊಸಕೋಟೆ, ನಂದಗುಡಿ, ದೇವನಹಳ್ಳಿ, ಆವಲಹಳ್ಳಿ, ಚಿಂತಾಮಣಿ, ಚಿಕ್ಕಬಳ್ಳಾಪುರ, ಕೆಜಿಎಫ್, ಕೋಲಾರ, ವಿಧಾನಸೌಧದ ಡಬ್ಲ್ಯು 5, ಡಬ್ಲ್ಯು 3 ಮತ್ತು ಡಬ್ಲ್ಯು 4, ಆರ್.ಆರ್.ಆರ್. ನಗರ ವಿಭಾಗ W2, ಜಯನಗರ, ರಾಜಾಜಿನಗರ, ಎಚ್‌ಎಸ್‌ಆರ್ ಲೇಔಟ್, ಕೋರಮಂಗಲ, ಇಂದಿರಾನಗರ, ವೈಟ್‌ಫೀಲ್ಡ್ ವಿಭಾಗ, ಶಿವಾಜಿನಗರ ವಿಭಾಗ, ಹೆಬ್ಬಾಳ ವಿಭಾಗ, ಹೆಚ್ಚುವರಿ ಕೇಂದ್ರ ವಿಭಾಗ, ಯಲಹಂಕ ಹೊಸ ಪಟ್ಟಣ, ಮಲ್ಲೇಶ್ವರಂ, ಜಾಲಹಳ್ಳಿ, ಹೆಬ್ಬಾಳ ಹೆಚ್ಚುವರಿ ಕೇಂದ್ರ ಉಪವಿಭಾಗಗಳಲ್ಲಿ ಹಲವಾರು ವಿಭಾಗಗಳು ಮತ್ತು ಉಪ-ವಿಭಾಗಗಳು, ಎನ್ಆರ್ಎಸ್ ವಿಭಾಗ, ಇತ್ಯಾದಿ.

Published On - 5:51 pm, Mon, 1 August 22

ಆಡ್ತೀನಿ, ಆಡಲ್ಲ.. ಯಾವುದನ್ನು ಖಚಿತವಾಗಿ ಹೇಳಲಾರೆ ಎಂದ ಧೋನಿ
ಆಡ್ತೀನಿ, ಆಡಲ್ಲ.. ಯಾವುದನ್ನು ಖಚಿತವಾಗಿ ಹೇಳಲಾರೆ ಎಂದ ಧೋನಿ
ತಮ್ಮ ಅಭಿಮಾನಿ ಕುಟುಂಬಕ್ಕೆ 5 ಲಕ್ಷ ರೂ. ಸಹಾಯ ಮಾಡಿದ ಸಚಿವ ಜಮೀರ್
ತಮ್ಮ ಅಭಿಮಾನಿ ಕುಟುಂಬಕ್ಕೆ 5 ಲಕ್ಷ ರೂ. ಸಹಾಯ ಮಾಡಿದ ಸಚಿವ ಜಮೀರ್
ಸುದೀಪ್ ಕೈಗೆ ಗಾಯ, ಕಿಚ್ಚನ ಕೈಗೆ ಏನಾಯ್ತು? ಅಭಿಮಾನಿಗಳ ಪ್ರಶ್ನೆ
ಸುದೀಪ್ ಕೈಗೆ ಗಾಯ, ಕಿಚ್ಚನ ಕೈಗೆ ಏನಾಯ್ತು? ಅಭಿಮಾನಿಗಳ ಪ್ರಶ್ನೆ
ಬೆಂಗಳೂರು-ಮಂಗಳೂರು ರಸ್ತೆಯಲ್ಲಿ ಟ್ರಾಫಿಕ್ ಜಾಮ್​: ಬದಲಿ ಮಾರ್ಗ ಸೂಚನೆ
ಬೆಂಗಳೂರು-ಮಂಗಳೂರು ರಸ್ತೆಯಲ್ಲಿ ಟ್ರಾಫಿಕ್ ಜಾಮ್​: ಬದಲಿ ಮಾರ್ಗ ಸೂಚನೆ
ಅಯೋಧ್ಯೆಯಲ್ಲಿ ಶ್ರೀರಾಮನ ದರ್ಶನ ಪಡೆದ ವಿರಾಟ್ ಕೊಹ್ಲಿ-ಅನುಷ್ಕಾ ಶರ್ಮಾ
ಅಯೋಧ್ಯೆಯಲ್ಲಿ ಶ್ರೀರಾಮನ ದರ್ಶನ ಪಡೆದ ವಿರಾಟ್ ಕೊಹ್ಲಿ-ಅನುಷ್ಕಾ ಶರ್ಮಾ
ಚಿಕ್ಕಮಗಳೂರಿನಲ್ಲಿ ಮಳೆಗೆ ಸಾಲು ಸಾಲು ಅವಾಂತರ:ನದಿಗೆ ಬಿದ್ದ 2 ಕಾರುಗಳು
ಚಿಕ್ಕಮಗಳೂರಿನಲ್ಲಿ ಮಳೆಗೆ ಸಾಲು ಸಾಲು ಅವಾಂತರ:ನದಿಗೆ ಬಿದ್ದ 2 ಕಾರುಗಳು
ಕೂದಲು ಹಿಡಿದು ತಾಯಿಯನ್ನು ಮನಬಂದಂತೆ ಥಳಿಸಿದ ಸಾಕು ಮಗ
ಕೂದಲು ಹಿಡಿದು ತಾಯಿಯನ್ನು ಮನಬಂದಂತೆ ಥಳಿಸಿದ ಸಾಕು ಮಗ
ಮಡೆನೂರು ಮನು ವಿವಾದದಲ್ಲಿ ಅಪ್ಪಣ್ಣ ಹೆಸರು ಕೇಳಿಬಂದಿದ್ದಕ್ಕೆ ನಟನ ಸ್ಪಷ್ಟನೆ
ಮಡೆನೂರು ಮನು ವಿವಾದದಲ್ಲಿ ಅಪ್ಪಣ್ಣ ಹೆಸರು ಕೇಳಿಬಂದಿದ್ದಕ್ಕೆ ನಟನ ಸ್ಪಷ್ಟನೆ
ಭಾರಿ ಮಳೆಯಿಂದ ಶಿರಾಡಿ ಘಾಟ್​​ ರಸ್ತೆಯಲ್ಲಿ ಭೂ ಕುಸಿತ
ಭಾರಿ ಮಳೆಯಿಂದ ಶಿರಾಡಿ ಘಾಟ್​​ ರಸ್ತೆಯಲ್ಲಿ ಭೂ ಕುಸಿತ
ರಶ್ಮಿಕಾಗೆ ಮೈಸೂರು ಸ್ಯಾಂಡಲ್​ ಅವಕಾಶ ಕೊಡಬಹುದಿತ್ತು: ಕುಮಾರ್ ಬಂಗಾರಪ್ಪ
ರಶ್ಮಿಕಾಗೆ ಮೈಸೂರು ಸ್ಯಾಂಡಲ್​ ಅವಕಾಶ ಕೊಡಬಹುದಿತ್ತು: ಕುಮಾರ್ ಬಂಗಾರಪ್ಪ