AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿ ಸರ್ಕಾರದ ಅವಧಿಯಲ್ಲಿನ 3 ಕೋಟಿ ರೂ ಕಾಮಗಾರಿ ನೀರಿನಲ್ಲಿ ಹೋಮ

ಬೆಂಗಳೂರಿನ ಕೆಆರ್​ ಸರ್ಕಲ್‌ನಲ್ಲಿ ಬಿಜೆಪಿ ಸರ್ಕಾರದ ಅವಧಿಯಲ್ಲಿ 3 ಕೋಟಿ ರೂ ವೆಚ್ಚದಲ್ಲಿ ನಿರ್ಮಿಸಲಾಗಿದ್ದ 'ಐ ಲವ್ ಬೆಂಗಳೂರು' ಕಾರಂಜಿ ಇದೀಗ ಹಾಳಾಗಿದೆ. ಕಳಪೆ ಕಾಮಗಾರಿ ಮತ್ತು ನಿರ್ವಹಣೆ ಮಾಡದಿರುವುದೇ ಇದಕ್ಕೆ ಕಾರಣವೆನ್ನಲಾಗುತ್ತಿದೆ. ಈ ಬಗ್ಗೆ ಪಾದಚಾರಿಗಳು ಕೂಡ ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ‌.

ಬಿಜೆಪಿ ಸರ್ಕಾರದ ಅವಧಿಯಲ್ಲಿನ 3 ಕೋಟಿ ರೂ ಕಾಮಗಾರಿ ನೀರಿನಲ್ಲಿ ಹೋಮ
Water Fountain
ಕಿರಣ್​ ಸೂರ್ಯ
| Edited By: |

Updated on: Nov 23, 2025 | 9:14 PM

Share

ಬೆಂಗಳೂರು, ನವೆಂಬರ್​ 23: ನಗರದ ಹೃದಯಭಾಗದಲ್ಲೇ ಮತ್ತೊಂದು ಕಳಪೆ ಕಾಮಗಾರಿ ನಡೆದಿರುವುದು ಬೆಳಕಿಗೆ ಬಂದಿದೆ. ಹಿಂದಿನ ಬಿಜೆಪಿ (BJP) ಸರ್ಕಾರದ ಅವಧಿಯಲ್ಲಿ ನಿರ್ಮಿಸಿದ್ದ ಐ ಲವ್ ಬೆಂಗಳೂರು‌ ಎನ್ನುವ ವಾಟರ್ ಫೌಂಟೆನ್ (Water fountain) ಹಾಳಾಗಿದೆ. ಆ ಮೂಲಕ ಮೂರು ಕೋಟಿ ರೂ. ವೆಚ್ಚದಲ್ಲಿ ನಡೆದಿದ್ದ ಕಾಮಗಾರಿ ಇದೀಗ ನೀರಿನಲ್ಲಿ ಹೋಮ ಮಾಡಿದಂತಾಗಿದೆ.

ಹಾಳಾದ ವಾಟರ್ ಫೌಂಟೆನ್ 

ಕೆಆರ್ ಸರ್ಕಲ್ ಜಂಕ್ಷನ್​​ ಬೆಂಗಳೂರು ನಗರದ ಹೃದಯಭಾಗ. ಈ‌ ಜಂಕ್ಷನ್​​ನಲ್ಲಿ ನಿರ್ಮಾಣ ಮಾಡಿದ್ದ ಐ ಲವ್ ಬೆಂಗಳೂರು‌ ಅನ್ನೋ ವಾಟರ್ ಫೌಂಟೆನ್ ಹತ್ತಿರ ಜನರು ಸೆಲ್ಫಿ ಕ್ಲಿಕ್ಕಿಸಿಕೊಳ್ಳುತ್ತಿದ್ದರು. ಆದರೆ ಇದೀಗ ಅದು ಹಾಳಾಗಿದೆ.

ಇದನ್ನೂ ಓದಿ: ಜನರ ರಕ್ಷಣೆ ಮಾಡುವ ಪೊಲೀಸರಿಗೇ ಇಲ್ಲಾ ರಕ್ಷಣೆ: ಇದೆಂಥಾ ಸ್ಟೇಷನ್‌?

2021ರ ವೇಳೆ ಸಿಎಂ ಆಗಿದ್ದ ಬಸವರಾಜ್ ಬೊಮ್ಮಾಯಿ ಅವಧಿಯಲ್ಲಿ ಕೆಆರ್ ಸರ್ಕಲ್‌ ಜಂಕ್ಷನ್ ಅಭಿವೃದ್ಧಿ ಮಾಡಲಾಗಿತ್ತು. ಖಾಸಗಿ ಕಂಪನಿಯೊಂದಕ್ಕೆ ಗುತ್ತಿಗೆ ಕೊಟ್ಟು ಕೆಲಸ ಮಾಡಿಸಿದ್ದ ಅಂದಿನ ಬಿಬಿಎಂಪಿ ನಂತರ ಆ ಕಂಪನಿ ನಿರ್ವಹಣೆ ಮಾಡುತ್ತಿದೆಯಾ ಇಲ್ಲವಾ ಎನ್ನುವುದನ್ನು ನೋಡುವುದನ್ನೇ ಮರೆತಂತಿದೆ. ಕಾಬೂಲ್ ಶಿಲೆ, ಸರ್ಕಲ್ ವಿನ್ಯಾಸ, ಡಿಸ್ಕೋ ಲೈಟಿಂಗ್ ಹಾಗೂ ಕಾರಂಜಿ ಈಗ ಹಾಳಾಗಿದೆ. ಈ ಬಗ್ಗೆ ಪಾದಚಾರಿಗಳು ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ‌.

ಇನ್ನು ಕಾರಂಜಿ, ಲೈಟಿಂಗ್​​ಗೆ ಹಾಕಿದ್ದ ವಿದ್ಯುತ್ ಡಿಪಿ ಬಾಕ್ಸ್ ಸಹ ಹಾಳಾಗಿದೆ.‌ ವೈರ್​ಗಳು ಆತಂಕ ಮೂಡಿಸುವ ಸ್ಥಿತಿಯಲ್ಲಿವೆ. ಜೊತೆಗೆ ಬೆಸ್ಕಾಂ ಕೇಂದ್ರ ಕಚೇರಿ ಎದುರೇ ಈ ರೀತಿ ಭಯಾನಕ ಪರಿಸ್ಥಿತಿ ನಿರ್ಮಾಣವಾಗಿದ್ದರೂ ಯಾರೂ ಗಮನಹರಿಸಿಲ್ಲ. ಒಂದು ವೇಳೆ ಮಳೆ‌ ಬಂದು ವಿದ್ಯುತ್ ತಂತಿ ಯಾರಿಗಾದರೂ ತಾಕಿದರೆ ಯಾರು ಹೊಣೆ. ಇನ್ನಾದರೂ ಬೆಸ್ಕಾಂ ಹಾಗೂ ಜಿಬಿಎ ಎಚ್ಚೆತ್ತುಕೊಳ್ಳಬೇಕಿದೆ ಎಂದು ಗೋಪಾಲಕೃಷ್ಣ ಎನ್ನುವವರು ಹೇಳಿದ್ದಾರೆ.

ಇದನ್ನೂ ಓದಿ: ಇಂದಿಗೂ ಈ ಗ್ರಾಮಸ್ಥರ ನೆಮ್ಮದಿ ಆಳು ಮಾಡಿದೆ 30 ವರ್ಷದ ಹಿಂದಿನ ಅದೊಂದು ವ್ಯವಹಾರ

ನಮ್ಮ ಜಿಬಿಎ ಅಧಿಕಾರಿಗಳಿಗೆ ಕಾಮಗಾರಿ ನಡೆಸಿ, ಉದ್ಘಾಟನೆ ಮಾಡುವಾಗ ಇರುವ ಉತ್ಸಾಹ ಅದನ್ನು ನಿರ್ವಹಣೆ ಮಾಡುವುದರಲ್ಲಿ ಇರುವುದಿಲ್ಲ ಎನ್ನುವುದಕ್ಕೆ ಈ ಕಾಮಗಾರಿ ಉತ್ತಮ ಉದಾಹರಣೆ ಎನ್ನಬಹುದು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಕಿರಣ್​ ಸೂರ್ಯ
ಕಿರಣ್​ ಸೂರ್ಯ

ಕಿರಣ್ ಸೂರ್ಯ (Kiran Surya) ಅವರು ಟಿವಿ9 ಕನ್ನಡ (TV9 Kannada) ವಾಹಿನಿಯಲ್ಲಿ ಹಿರಿಯ ವರದಿಗಾರರಾಗಿ (Senior Reporter) ಕಾರ್ಯನಿರ್ವಹಿಸುತ್ತಿದ್ದಾರೆ

Read More
ನನ್ನ ಮಗ ಕ್ಯಾಪ್ಟನ್: ಶ್ರೇಯಸ್ ಅಯ್ಯರ್ ತಂದೆಯ ಡ್ಯಾನ್ಸ್ ವಿಡಿಯೋ ವೈರಲ್
ನನ್ನ ಮಗ ಕ್ಯಾಪ್ಟನ್: ಶ್ರೇಯಸ್ ಅಯ್ಯರ್ ತಂದೆಯ ಡ್ಯಾನ್ಸ್ ವಿಡಿಯೋ ವೈರಲ್
ಕೊಟ್ಟಿಯೂರು ದೇವಾಲಯದಲ್ಲಿ ಕನ್ನಡಿಗರ ಮೇಲೆ ದೌರ್ಜನ್ಯ: ಭಕ್ತರ ಅಸಮಾಧಾನ
ಕೊಟ್ಟಿಯೂರು ದೇವಾಲಯದಲ್ಲಿ ಕನ್ನಡಿಗರ ಮೇಲೆ ದೌರ್ಜನ್ಯ: ಭಕ್ತರ ಅಸಮಾಧಾನ
ಬೈಲಹೊಂಗಲದಲ್ಲಿ ವರುಣಾರ್ಭಟ: ಅಂಗಡಿಗಳಿಗೆ ಮಳೆನೀರು ನುಗ್ಗಿ ಅಪಾರ ನಷ್ಟ
ಬೈಲಹೊಂಗಲದಲ್ಲಿ ವರುಣಾರ್ಭಟ: ಅಂಗಡಿಗಳಿಗೆ ಮಳೆನೀರು ನುಗ್ಗಿ ಅಪಾರ ನಷ್ಟ
ಡಿಕೆಶಿ ಸಂಪುಟದಲ್ಲಿ ನನಗೇನೂ ಬೇಡ: ರಾಜಣ್ಣ ಖಡಕ್ ಮಾತು
ಡಿಕೆಶಿ ಸಂಪುಟದಲ್ಲಿ ನನಗೇನೂ ಬೇಡ: ರಾಜಣ್ಣ ಖಡಕ್ ಮಾತು
ಸೂರಜ್ ಹೆಗ್ಡೆ ಅಂತಿಮ ದರ್ಶನ ಪಡೆದ ರಾಹುಲ್​​ ಗಾಂಧಿ
ಸೂರಜ್ ಹೆಗ್ಡೆ ಅಂತಿಮ ದರ್ಶನ ಪಡೆದ ರಾಹುಲ್​​ ಗಾಂಧಿ
ಮುಗಿಯದ ಖಾತೆ ಕ್ಯಾತೆ: ದೆಹಲಿಗೆ ತೆರಳಿದ ಸಚಿವ ಕೃಷ್ಣ ಭೈರೇಗೌಡ
ಮುಗಿಯದ ಖಾತೆ ಕ್ಯಾತೆ: ದೆಹಲಿಗೆ ತೆರಳಿದ ಸಚಿವ ಕೃಷ್ಣ ಭೈರೇಗೌಡ
ಲ್ಯಾಡಲ್ ಸ್ಫೋಟ: 25 ಲಕ್ಷ ರೂ. ಪರಿಹಾರ ಘೋಷಿಸಿದ ಹೆಚ್​ಡಿ ಕುಮಾರಸ್ವಾಮಿ
ಲ್ಯಾಡಲ್ ಸ್ಫೋಟ: 25 ಲಕ್ಷ ರೂ. ಪರಿಹಾರ ಘೋಷಿಸಿದ ಹೆಚ್​ಡಿ ಕುಮಾರಸ್ವಾಮಿ
ಕರಗಿದ ಉಕ್ಕನ್ನು ಹೊತ್ತೊಯ್ಯುತ್ತಿದ್ದ ಲ್ಯಾಡಲ್ ಸ್ಫೋಟ, 8 ಮಂದಿ ಸಾವು
ಕರಗಿದ ಉಕ್ಕನ್ನು ಹೊತ್ತೊಯ್ಯುತ್ತಿದ್ದ ಲ್ಯಾಡಲ್ ಸ್ಫೋಟ, 8 ಮಂದಿ ಸಾವು
‘ಕ್ಷೇತ್ರಪಾಲ’ ಸಿನಿಮಾದಲ್ಲಿ ದೈವದ ಕಥೆ? ವಿವರಿಸಿದ ತಂಡ
‘ಕ್ಷೇತ್ರಪಾಲ’ ಸಿನಿಮಾದಲ್ಲಿ ದೈವದ ಕಥೆ? ವಿವರಿಸಿದ ತಂಡ
ಗೋಕರ್ಣದ ಮಹಾಬಲೇಶ್ವರ ದೇಗುಲದಲ್ಲಿ ಆತ್ಮಲಿಂಗವನ್ನೇ ಆವರಿಸಿದ ಕೊಳಚೆ ನೀರು
ಗೋಕರ್ಣದ ಮಹಾಬಲೇಶ್ವರ ದೇಗುಲದಲ್ಲಿ ಆತ್ಮಲಿಂಗವನ್ನೇ ಆವರಿಸಿದ ಕೊಳಚೆ ನೀರು