AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಆರ್​ ಮಾರುಕಟ್ಟೆಯಿಂದ ಹೆಬ್ಬಾಳಕ್ಕೆ ಹೂವಿನ ಮಂಡಿ ಸ್ಥಳಾಂತರ? ಎಪಿಎಂಸಿ ನಡೆ ವಿರುದ್ಧ ವ್ಯಾಪಾರಸ್ಥರ ಕಿಡಿ

ಗ್ರಾಹಕರು, ವ್ಯಾಪಾರಿಗಳಿಂದ ನಿತ್ಯವೂ ಕೆಆರ್‌ ಮಾರುಕಟ್ಟೆ ಗಿಜುಗಿಡುತ್ತಿರುತ್ತದೆ. ಹೂವಿನ ಮಳಿಗೆಗಳ ಸುತ್ತ ಕಾಲಿಡುವುದಕ್ಕೂ ಜಾಗ ಇರುವುದಿಲ್ಲ. ಆ ಜನದಟ್ಟಣೆ ತಪ್ಪಿಸುವ ಮೂಲಕ ಸಮಸ್ಯೆ ಬಗೆಹರಿಸಲು ಎಪಿಎಂಸಿ ಒಂದು ಯೋಜನೆ ಹಾಕಿಕೊಂಡಿದೆ. ಅದುವೇ, ಹೂವಿನ ಮಂಡಿಯನ್ನು ಹೆಬ್ಬಾಳಕ್ಕೆ ಸ್ಥಳಾಂತರ ಮಾಡುವುದು. ಇದಕ್ಕೆ ಈಗ ವ್ಯಾಪಾರಸ್ಥರಿಂದ ವಿರೋಧ ವ್ಯಕ್ತವಾಗಿದೆ.

ಕೆಆರ್​ ಮಾರುಕಟ್ಟೆಯಿಂದ ಹೆಬ್ಬಾಳಕ್ಕೆ ಹೂವಿನ ಮಂಡಿ ಸ್ಥಳಾಂತರ? ಎಪಿಎಂಸಿ ನಡೆ ವಿರುದ್ಧ ವ್ಯಾಪಾರಸ್ಥರ ಕಿಡಿ
ಕೆಆರ್​ ಮಾರುಕಟ್ಟೆ ಹೂವಿನ ಮಂಡಿ
ಗಣಪತಿ ಶರ್ಮಾ
|

Updated on: Sep 03, 2025 | 8:07 AM

Share

ಬೆಂಗಳೂರು, ಸೆಪ್ಟೆಂಬರ್ 3: ಹೂ ಕೊಳ್ಳುವವರು, ಹೂಗಳನ್ನು ಮಾರುವವರಿಂದ ಕೆಆರ್‌ ಮಾರುಕಟ್ಟೆ (KR Market) ಸದಾ ಲವಲವಿಕೆಯಿಂದಿರುತ್ತದೆ. ಬೆಳಗಿನ ಜಾವದಿಂದ ಸಂಜೆಯವರೆಗೂ ವ್ಯಾಪಾರ ಜೋರಾಗಿರುತ್ತದೆ. ಇಲ್ಲಿನ ದಟ್ಟಣೆ ಕಡಿಮೆ ಮಾಡಲು, ಹೂವಿನ ಮಂಡಿಯನ್ನೇ ಸ್ಥಳಾಂತರ ಮಾಡಲು ಈಗ ಎಪಿಎಂಸಿ (APMC) ತಯಾರಿ ನಡೆಸುತ್ತಿದೆ. ಹೆಬ್ಬಾಳದ (Hebbal ಸಹಕಾರನಗರ ಬಳಿಯ ಜಿಕೆವಿಕೆಯಲ್ಲಿನ (GKVK) ತೋಟಗಾರಿಕಾ ವಿಜ್ಞಾನ ವಿಶ್ವವಿದ್ಯಾಲಯದ ಆವರಣದ 5 ಎಕರೆ ಜಾಗದಲ್ಲಿ ಅಂತಾರಾಷ್ಟ್ರೀಯ ಪುಷ್ಪ ಹರಾಜು ಮಾರುಕಟ್ಟೆ ನಿರ್ಮಿಸಲು ಎಪಿಎಂಸಿ ಮುಂದಾಗಿದೆ.

ಆದರೆ, ಎಪಿಎಂಸಿಯ ಈ ಯೋಜನೆಗೆ ಸಾಕಷ್ಟು ವಿರೋಧ ವ್ಯಕ್ತವಾಗಿದೆ. 130ಕ್ಕೂ ಹೆಚ್ಚು ವರ್ತಕರು ಹಲವು ದಶಕಗಳಿಂದ ಇಲ್ಲಿ ವ್ಯಾಪಾರ ಮಾಡುತ್ತಿದ್ದಾರೆ. ಮಾರ್ಕೆಟ್‌ನಲ್ಲಿ ಕುಡಿಯುವ ನೀರು, ಶೌಚಾಲಯದಂತಹ ಮೂಲಸೌಕರ್ಯಗಳಿಲ್ಲ. ಮಾರ್ಕೆಟ್‌ನ ಮೊದಲನೇ ಮಹಡಿಯಲ್ಲೇ ಸಾಕಷ್ಟು ಸ್ಥಳಾವಕಾಶವಿದೆ. ಅದನ್ನು ಸರಿಯಾಗಿ ಬಳಸಿದರೆ ಸಾಕು, ಸ್ಥಳಾಂತರ ಬೇಕಾಗಿಲ್ಲ. ಮಾರ್ಕೆಟ್‌ಗಿರುವ ಕನೆಕ್ಟಿವಿಟಿ ಜಿಕೆವಿಕೆಗೆ ಇಲ್ಲ ಎಂದು ಫ್ಲವರ್ ಮರ್ಚೆಂಟ್ ಅಸೋಸಿಯೇಷನ್ ಅಧ್ಯಕ್ಷ ಜಿಎಂ ದಿವಾಕರ್ ಅಭಿಪ್ರಾಯ ಪಟ್ಟಿದ್ದಾರೆ.

ಇದನ್ನೂ ಓದಿ: ಬಿಬಿಎಂಪಿ ಇನ್ನು ನೆನಪು ಮಾತ್ರ, ಕಚೇರಿಗೆ ಬಿತ್ತು ಗ್ರೇಟರ್ ಬೆಂಗಳೂರು ಬೋರ್ಡ್

ಇದನ್ನೂ ಓದಿ
Image
ಬಿಬಿಎಂಪಿ ನೆನಪು ಮಾತ್ರ, ಕಚೇರಿಗೆ ಬಿತ್ತು ಗ್ರೇಟರ್ ಬೆಂಗಳೂರು ಬೋರ್ಡ್​​​
Image
BBMP ಯುಗಾಂತ್ಯ, ಗ್ರೇಟರ್ ಬೆಂಗಳೂರು ಅಥಾರಿಟಿ ಜಾರಿಗೆ:ಕ್ಷೇತ್ರ ವಿಂಗಡಣೆ
Image
ಇಂದಿನಿಂದ ಜಿಬಿಎ: ದಶಕಗಳ ಇತಿಹಾಸ ಹೊಂದಿದ್ದ ಬಿಬಿಎಂಪಿ ಇನ್ಮುಂದೆ ನೆನಪು
Image
ಹೆಬ್ಬಾಳದಲ್ಲಿ ತಪ್ಪುತ್ತಿಲ್ಲ ಟ್ರಾಫಿಕ್ ಗೋಳು! ಡ್ರೋನ್ ವಿಡಿಯೋ ವೈರಲ್

ಜಿಕೆವಿಕೆ ಹೂವಿನ ಮಂಡಿ ಸ್ಥಳಾಂತರವಾಗಬೇಕಾದರೆ, 5 ಎಕರೆಯಲ್ಲಿರುವ 900ಕ್ಕೂ ಹೆಚ್ಚು ಮರಗಳನ್ನು ಕತ್ತರಿಸಬೇಕಿದೆ. ಅಷ್ಟೊಂದು ಮರಗಳನ್ನು ಕಡಿಯುವುದಕ್ಕೆ ಪರಿಸರವಾದಿಗಳಿಂದಲೂ ವಿರೋಧ ವ್ಯಕ್ತವಾಗಿದೆ. ಹೀಗೆ ಹಲವು ವಿರೋಧಗಳ ನಡುವೆ ಹೂವಿನ ಮಂಡಿ ಸ್ಥಳಾಂತರ ಆಗುತ್ತದೆಯೇ ಎಂಬುದನ್ನು ಕಾದು ನೋಡಬೇಕಿದೆ.

ವರದಿ: ಲಕ್ಷ್ಮಿನರಸಿಂಹ, ಟಿವಿ9, ಬೆಂಗಳೂರು

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ