AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಆರ್​ ಮಾರುಕಟ್ಟೆಯಿಂದ ಹೆಬ್ಬಾಳಕ್ಕೆ ಹೂವಿನ ಮಂಡಿ ಸ್ಥಳಾಂತರ? ಎಪಿಎಂಸಿ ನಡೆ ವಿರುದ್ಧ ವ್ಯಾಪಾರಸ್ಥರ ಕಿಡಿ

ಗ್ರಾಹಕರು, ವ್ಯಾಪಾರಿಗಳಿಂದ ನಿತ್ಯವೂ ಕೆಆರ್‌ ಮಾರುಕಟ್ಟೆ ಗಿಜುಗಿಡುತ್ತಿರುತ್ತದೆ. ಹೂವಿನ ಮಳಿಗೆಗಳ ಸುತ್ತ ಕಾಲಿಡುವುದಕ್ಕೂ ಜಾಗ ಇರುವುದಿಲ್ಲ. ಆ ಜನದಟ್ಟಣೆ ತಪ್ಪಿಸುವ ಮೂಲಕ ಸಮಸ್ಯೆ ಬಗೆಹರಿಸಲು ಎಪಿಎಂಸಿ ಒಂದು ಯೋಜನೆ ಹಾಕಿಕೊಂಡಿದೆ. ಅದುವೇ, ಹೂವಿನ ಮಂಡಿಯನ್ನು ಹೆಬ್ಬಾಳಕ್ಕೆ ಸ್ಥಳಾಂತರ ಮಾಡುವುದು. ಇದಕ್ಕೆ ಈಗ ವ್ಯಾಪಾರಸ್ಥರಿಂದ ವಿರೋಧ ವ್ಯಕ್ತವಾಗಿದೆ.

ಕೆಆರ್​ ಮಾರುಕಟ್ಟೆಯಿಂದ ಹೆಬ್ಬಾಳಕ್ಕೆ ಹೂವಿನ ಮಂಡಿ ಸ್ಥಳಾಂತರ? ಎಪಿಎಂಸಿ ನಡೆ ವಿರುದ್ಧ ವ್ಯಾಪಾರಸ್ಥರ ಕಿಡಿ
ಕೆಆರ್​ ಮಾರುಕಟ್ಟೆ ಹೂವಿನ ಮಂಡಿ
ಗಣಪತಿ ಶರ್ಮಾ
|

Updated on: Sep 03, 2025 | 8:07 AM

Share

ಬೆಂಗಳೂರು, ಸೆಪ್ಟೆಂಬರ್ 3: ಹೂ ಕೊಳ್ಳುವವರು, ಹೂಗಳನ್ನು ಮಾರುವವರಿಂದ ಕೆಆರ್‌ ಮಾರುಕಟ್ಟೆ (KR Market) ಸದಾ ಲವಲವಿಕೆಯಿಂದಿರುತ್ತದೆ. ಬೆಳಗಿನ ಜಾವದಿಂದ ಸಂಜೆಯವರೆಗೂ ವ್ಯಾಪಾರ ಜೋರಾಗಿರುತ್ತದೆ. ಇಲ್ಲಿನ ದಟ್ಟಣೆ ಕಡಿಮೆ ಮಾಡಲು, ಹೂವಿನ ಮಂಡಿಯನ್ನೇ ಸ್ಥಳಾಂತರ ಮಾಡಲು ಈಗ ಎಪಿಎಂಸಿ (APMC) ತಯಾರಿ ನಡೆಸುತ್ತಿದೆ. ಹೆಬ್ಬಾಳದ (Hebbal ಸಹಕಾರನಗರ ಬಳಿಯ ಜಿಕೆವಿಕೆಯಲ್ಲಿನ (GKVK) ತೋಟಗಾರಿಕಾ ವಿಜ್ಞಾನ ವಿಶ್ವವಿದ್ಯಾಲಯದ ಆವರಣದ 5 ಎಕರೆ ಜಾಗದಲ್ಲಿ ಅಂತಾರಾಷ್ಟ್ರೀಯ ಪುಷ್ಪ ಹರಾಜು ಮಾರುಕಟ್ಟೆ ನಿರ್ಮಿಸಲು ಎಪಿಎಂಸಿ ಮುಂದಾಗಿದೆ.

ಆದರೆ, ಎಪಿಎಂಸಿಯ ಈ ಯೋಜನೆಗೆ ಸಾಕಷ್ಟು ವಿರೋಧ ವ್ಯಕ್ತವಾಗಿದೆ. 130ಕ್ಕೂ ಹೆಚ್ಚು ವರ್ತಕರು ಹಲವು ದಶಕಗಳಿಂದ ಇಲ್ಲಿ ವ್ಯಾಪಾರ ಮಾಡುತ್ತಿದ್ದಾರೆ. ಮಾರ್ಕೆಟ್‌ನಲ್ಲಿ ಕುಡಿಯುವ ನೀರು, ಶೌಚಾಲಯದಂತಹ ಮೂಲಸೌಕರ್ಯಗಳಿಲ್ಲ. ಮಾರ್ಕೆಟ್‌ನ ಮೊದಲನೇ ಮಹಡಿಯಲ್ಲೇ ಸಾಕಷ್ಟು ಸ್ಥಳಾವಕಾಶವಿದೆ. ಅದನ್ನು ಸರಿಯಾಗಿ ಬಳಸಿದರೆ ಸಾಕು, ಸ್ಥಳಾಂತರ ಬೇಕಾಗಿಲ್ಲ. ಮಾರ್ಕೆಟ್‌ಗಿರುವ ಕನೆಕ್ಟಿವಿಟಿ ಜಿಕೆವಿಕೆಗೆ ಇಲ್ಲ ಎಂದು ಫ್ಲವರ್ ಮರ್ಚೆಂಟ್ ಅಸೋಸಿಯೇಷನ್ ಅಧ್ಯಕ್ಷ ಜಿಎಂ ದಿವಾಕರ್ ಅಭಿಪ್ರಾಯ ಪಟ್ಟಿದ್ದಾರೆ.

ಇದನ್ನೂ ಓದಿ: ಬಿಬಿಎಂಪಿ ಇನ್ನು ನೆನಪು ಮಾತ್ರ, ಕಚೇರಿಗೆ ಬಿತ್ತು ಗ್ರೇಟರ್ ಬೆಂಗಳೂರು ಬೋರ್ಡ್

ಇದನ್ನೂ ಓದಿ
Image
ಬಿಬಿಎಂಪಿ ನೆನಪು ಮಾತ್ರ, ಕಚೇರಿಗೆ ಬಿತ್ತು ಗ್ರೇಟರ್ ಬೆಂಗಳೂರು ಬೋರ್ಡ್​​​
Image
BBMP ಯುಗಾಂತ್ಯ, ಗ್ರೇಟರ್ ಬೆಂಗಳೂರು ಅಥಾರಿಟಿ ಜಾರಿಗೆ:ಕ್ಷೇತ್ರ ವಿಂಗಡಣೆ
Image
ಇಂದಿನಿಂದ ಜಿಬಿಎ: ದಶಕಗಳ ಇತಿಹಾಸ ಹೊಂದಿದ್ದ ಬಿಬಿಎಂಪಿ ಇನ್ಮುಂದೆ ನೆನಪು
Image
ಹೆಬ್ಬಾಳದಲ್ಲಿ ತಪ್ಪುತ್ತಿಲ್ಲ ಟ್ರಾಫಿಕ್ ಗೋಳು! ಡ್ರೋನ್ ವಿಡಿಯೋ ವೈರಲ್

ಜಿಕೆವಿಕೆ ಹೂವಿನ ಮಂಡಿ ಸ್ಥಳಾಂತರವಾಗಬೇಕಾದರೆ, 5 ಎಕರೆಯಲ್ಲಿರುವ 900ಕ್ಕೂ ಹೆಚ್ಚು ಮರಗಳನ್ನು ಕತ್ತರಿಸಬೇಕಿದೆ. ಅಷ್ಟೊಂದು ಮರಗಳನ್ನು ಕಡಿಯುವುದಕ್ಕೆ ಪರಿಸರವಾದಿಗಳಿಂದಲೂ ವಿರೋಧ ವ್ಯಕ್ತವಾಗಿದೆ. ಹೀಗೆ ಹಲವು ವಿರೋಧಗಳ ನಡುವೆ ಹೂವಿನ ಮಂಡಿ ಸ್ಥಳಾಂತರ ಆಗುತ್ತದೆಯೇ ಎಂಬುದನ್ನು ಕಾದು ನೋಡಬೇಕಿದೆ.

ವರದಿ: ಲಕ್ಷ್ಮಿನರಸಿಂಹ, ಟಿವಿ9, ಬೆಂಗಳೂರು

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಈ ಸರ್ಕಾರದ ಲೂಟಿ ನೋಡಿಯೇ ಕೆಂಪಣ್ಣ ಸತ್ಹೋಗ್ಬಿಟ್ಟ: ಪ್ರತಾಪಸಿಂಹ
ಈ ಸರ್ಕಾರದ ಲೂಟಿ ನೋಡಿಯೇ ಕೆಂಪಣ್ಣ ಸತ್ಹೋಗ್ಬಿಟ್ಟ: ಪ್ರತಾಪಸಿಂಹ
ಕೋಲಾರ: ಸೆಷನ್ಸ್ ಕೋರ್ಟ್ ಒಳ ಸೇರಿಕೊಂಡಿದ್ದ ಹಾವು! ಆಮೇಲೇನಾಯ್ತು ನೋಡಿ
ಕೋಲಾರ: ಸೆಷನ್ಸ್ ಕೋರ್ಟ್ ಒಳ ಸೇರಿಕೊಂಡಿದ್ದ ಹಾವು! ಆಮೇಲೇನಾಯ್ತು ನೋಡಿ
ಮೈಮೇಲೆ ಹರಿದು ಕಾರು, ಕೆಲವೇ ಕ್ಷಣಗಳಲ್ಲಿ ಪವಾಡವೆಂಬಂತೆ ಎದ್ದು ನಿಂತ ಬಾಲಕ
ಮೈಮೇಲೆ ಹರಿದು ಕಾರು, ಕೆಲವೇ ಕ್ಷಣಗಳಲ್ಲಿ ಪವಾಡವೆಂಬಂತೆ ಎದ್ದು ನಿಂತ ಬಾಲಕ
‘ರಾಶಿಕಾಗಿಂತ ನನಗೆ ಅವರೇ ಹೆಚ್ಚು ಇಷ್ಟ’; ಓಪನ್ ಆಗಿ ಹೇಳಿದ ಸೂರಜ್ 
‘ರಾಶಿಕಾಗಿಂತ ನನಗೆ ಅವರೇ ಹೆಚ್ಚು ಇಷ್ಟ’; ಓಪನ್ ಆಗಿ ಹೇಳಿದ ಸೂರಜ್ 
ಮೈ ರೋಮಾಂಚನಗೊಳಿಸುವ ಕುಮಾರ - ಸಿರಿ ಭೇಟಿ
ಮೈ ರೋಮಾಂಚನಗೊಳಿಸುವ ಕುಮಾರ - ಸಿರಿ ಭೇಟಿ
ಅಯೋಧ್ಯೆಯಲ್ಲಿ ಬಂದೂಕು ತೋರಿಸಿ ಆಭರಣದಂಗಡಿ ದೋಚಿದ ಬುರ್ಖಾಧಾರಿ ಮಹಿಳೆ
ಅಯೋಧ್ಯೆಯಲ್ಲಿ ಬಂದೂಕು ತೋರಿಸಿ ಆಭರಣದಂಗಡಿ ದೋಚಿದ ಬುರ್ಖಾಧಾರಿ ಮಹಿಳೆ
ಆನೇಕಲ್: ಗ್ರಾಮಕ್ಕೆ ನುಗ್ಗಿ ಕಾಡಾನೆಗಳ ನೈಟ್ ರೌಂಡ್ಸ್! ವಿಡಿಯೋ ವೈರಲ್
ಆನೇಕಲ್: ಗ್ರಾಮಕ್ಕೆ ನುಗ್ಗಿ ಕಾಡಾನೆಗಳ ನೈಟ್ ರೌಂಡ್ಸ್! ವಿಡಿಯೋ ವೈರಲ್
ನಾನು ಸಿಎಂ ಆದ್ರೆ ಮಹಿಳೆಯರಿಗೆ 3,000 ರೂ. ಪುರುಷರಿಗೆ 2,000 ರೂ.: ಯತ್ನಾಳ್
ನಾನು ಸಿಎಂ ಆದ್ರೆ ಮಹಿಳೆಯರಿಗೆ 3,000 ರೂ. ಪುರುಷರಿಗೆ 2,000 ರೂ.: ಯತ್ನಾಳ್
ಬೆಂಕಿ ಹಚ್ಚುವ ಮುಲ್ಲಾಗಳಿಗೆ 6 ಸಾವಿರ ಕೊಡತ್ತೆ ಕಾಂಗ್ರೆಸ್ ಸರ್ಕಾರ: ಯತ್ನಾಳ
ಬೆಂಕಿ ಹಚ್ಚುವ ಮುಲ್ಲಾಗಳಿಗೆ 6 ಸಾವಿರ ಕೊಡತ್ತೆ ಕಾಂಗ್ರೆಸ್ ಸರ್ಕಾರ: ಯತ್ನಾಳ
ತರಕಾರಿ ಮಾರುವ ಹುಡುಗನಿಗೆ ಹಾಡಲು ಅವಕಾಶ; ಟ್ರೋಲರ್​​ಗಳಿಗೆ ಸರಿಗಮಪ ಉತ್ತರ
ತರಕಾರಿ ಮಾರುವ ಹುಡುಗನಿಗೆ ಹಾಡಲು ಅವಕಾಶ; ಟ್ರೋಲರ್​​ಗಳಿಗೆ ಸರಿಗಮಪ ಉತ್ತರ