AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ಸೇರಿ ಈ ಜಿಲ್ಲೆಗಳ ಪ್ರಯಾಣಿಕರಿಗೆ ಸಿಹಿ ಸುದ್ದಿ; KSRTCಯ ಮೊದಲ ಇಲೆಕ್ಟ್ರಿಕ್ ಬಸ್​​ಗೆ ಚಾಲನೆ

ಸಾರಿಗೆ ಸಚಿವ ಶ್ರೀರಾಮುಲು ಅವರು KSRTCಯ ಮೊದಲ ಇಲೆಕ್ಟ್ರಿಕ್ ಬಸ್​ ಸೇವೆಗೆ ಚಾಲನೆ ನೀಡಿದರು. ಬೆಂಗಳೂರು ಸೇರಿದಂತೆ ಕೆಲವೊಂದು ಜಿಲ್ಲೆಗಳ ಪ್ರಯಾಣಿಕರಿಗೆ ಇದು ಅನುಕೂಲಕರವಾಗಲಿದೆ.

ಬೆಂಗಳೂರು ಸೇರಿ ಈ ಜಿಲ್ಲೆಗಳ ಪ್ರಯಾಣಿಕರಿಗೆ ಸಿಹಿ ಸುದ್ದಿ; KSRTCಯ ಮೊದಲ ಇಲೆಕ್ಟ್ರಿಕ್ ಬಸ್​​ಗೆ ಚಾಲನೆ
KSRTCಯ ಮೊದಲ ಇಲೆಕ್ಟ್ರಿಕ್ ಬಸ್​​ಗೆ ಚಾಲನೆ
TV9 Web
| Edited By: |

Updated on: Dec 31, 2022 | 5:19 PM

Share

ಬೆಂಗಳೂರು: ಕರ್ನಾಟಕದಲ್ಲಿ ಇಂದಿನಿಂದ ಕೆಎಸ್​​ಆರ್​ಟಿಸಿ (KSRTC)ಯ ಮೊದಲ ಎಲೆಕ್ಟ್ರಿಕ್ ಬಸ್ (Electric Bus)​​ಗೆ ಚಾಲನೆ ನೀಡಲಾಯಿತು. MEIL ಹಾಗೂ KSRTC ಜಂಟಿಯಾಗಿ ಇಂದಿನಿಂದ ರಸ್ತೆಗಿಳಿದಿರುವ ಪರಿಸರ ಸ್ನೇಹಿ ಬಸ್​​ಗೆ ಸಾರಿಗೆ ಇಲಾಖೆ ಸಚಿವ ಬಿ.ಶ್ರೀರಾಮುಲು (B.Sriramulu) ಅವರು ಚಾಲನೆ ನೀಡಿದರು. ಇದು ಬೆಂಗಳೂರು ಮತ್ತು ಮೈಸೂರು, ಶಿವಮೊಗ್ಗ, ದಾವಣಗೆರೆ, ಚಿಕ್ಕಮಗಳೂರು, ವಿರಾಜಪೇಟೆ ಮತ್ತು ಮಡಿಕೇರಿ ನಡುವೆ ಪ್ರಯಾಣಿಸುವ ಕರ್ನಾಟಕದ ಜನರಿಗೆ ಒಂದು ಸಿಹಿ ಸುದ್ದಿಯಾಗಿದೆ. ಈ ಹೊಸ ಬಸ್‌ಗೆ EV ಪವರ್ ಪ್ಲಸ್ ಎಂದು ಹೆಸರಿಡಲಾಗಿದ್ದು, KSRTC EV ಪವರ್ ಪ್ಲಸ್ (KSRTC EV Power Pluse) ಹಲವು ವಿಶೇಷತೆಗಳನ್ನು ಹೊಂದಿದೆ. ಅವುಗಳು ಈ ಕೆಳಗಿನಂತಿವೆ.

ಎರಡೂವರೆ ತಾಸು ಚಾರ್ಜ್ ಮಾಡಿದರೆ 300 km ಕ್ರಮಿಸುವಷ್ಟು ಸಾಮರ್ಥ್ಯ ಈ ಬಸ್ ಹೊಂದಿದೆ. ಬಸ್ ಸಂಪೂರ್ಣ ಹವಾನಿಯಂತ್ರಿತ ವ್ಯವಸ್ಥೆಯಾಗಿದ್ದು, ನೂತನ ತಂತ್ರಜ್ಞಾನವಾದ ರಿ ಜನರೇಷನ್ ಸಿಸ್ಟಮ್ ಅಳವಡಿಕೆ ಮಾಡಲಾಗಿದೆ. ಸಂಚರಿಸುವ ಹೊತ್ತಲ್ಲೇ ಅರ್ಧದಷ್ಟು ಬ್ಯಾಟರಿ ರಿ ಚಾರ್ಜ್ ಆಗುವ ರಿ ಜನರೇಷನ್ ಆಗುವ ಸಿಸ್ಟಮ್ ಈ ಬಸ್​​ನಲ್ಲಿ ಇರುವ ವಿಶೇಷಗಳಲ್ಲಿ ಒಂದಾಗಿದೆ.

ಇದನ್ನೂ ಓದಿ: ಸಿನಿಮಾಗಳಲ್ಲಿ ಅನವಶ್ಯಕವಾಗಿ ಕೇಸರಿ ಬಟ್ಟೆ ಬಳಕೆ ಯಾಕೆ? ಇದು ನೆಹರೂ ಲೆಗಸಿ ಸೃಷ್ಟಿ ಮಾಡಿದ ನರೇಟಿವ್ ಎಂದ ಬಿ ಎಲ್​ ಸಂತೋಷ್

ಪ್ರಯಾಣದ ವೇಳೆ ಮೊಬೈಲ್ ಚಾರ್ಜ್ ಖಾಲಿಯಾದರೆ ತಲೆಬಿಸಿ ಮಾಡುವ ಪ್ರಮೇಯವೇ ಇಲ್ಲ. ಏಕೆಂದರೆ, ಬಸ್ ಒಳಗೆ ಪ್ರಯಾಣಿಕರ ಅನುಕೂಲಕ್ಕೆ ಮೊಬೈಲ್ ಚಾರ್ಜಿಂಗ್ ಸ್ಪಾಟ್ಸ್ ಇದೆ. ಅಷ್ಟೇ ಅಲ್ಲದೆ ಮನರಂಜನೆಗಾಗಿ ಎರಡು ಟಿವಿ ಅಳವಡಿಕೆ ಮಾಡಲಾಗಿದೆ. ಇದಲ್ಲದೆ, ಈ ಪರಿಸರ ಸ್ನೇಹಿ ಬಸ್ ಸಂಪೂರ್ಣವಾಗಿ ಸೆನ್ಸಾರ್ ಹಿಡಿತದಲ್ಲಿ ಇರಲಿದೆ. ಒಟ್ಟಾರೆ ಬಸ್​​ನಲ್ಲಿ 43 + 2 ಸೀಟ್​​ಗಳು ಇರಲಿದೆ. ಫ್ರಂಟ್ ಲಾಗ್ ಮತ್ತು ಬ್ಯಾಕ್ ಲಾಗ್ ಕ್ಯಾಮೆರಾ ವ್ಯವಸ್ಥೆ ಇರಲಿದೆ. ಡ್ರೈವರ್ ಎಂಡ್ ಸಂಪೂರ್ಣವಾಗಿ ಡಿಜಿಟಲೈಸ್ಡ್ ಸಿಸ್ಟಮ್ ಹೊಂದಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು