AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ಸೇರಿ ಈ ಜಿಲ್ಲೆಗಳ ಪ್ರಯಾಣಿಕರಿಗೆ ಸಿಹಿ ಸುದ್ದಿ; KSRTCಯ ಮೊದಲ ಇಲೆಕ್ಟ್ರಿಕ್ ಬಸ್​​ಗೆ ಚಾಲನೆ

ಸಾರಿಗೆ ಸಚಿವ ಶ್ರೀರಾಮುಲು ಅವರು KSRTCಯ ಮೊದಲ ಇಲೆಕ್ಟ್ರಿಕ್ ಬಸ್​ ಸೇವೆಗೆ ಚಾಲನೆ ನೀಡಿದರು. ಬೆಂಗಳೂರು ಸೇರಿದಂತೆ ಕೆಲವೊಂದು ಜಿಲ್ಲೆಗಳ ಪ್ರಯಾಣಿಕರಿಗೆ ಇದು ಅನುಕೂಲಕರವಾಗಲಿದೆ.

ಬೆಂಗಳೂರು ಸೇರಿ ಈ ಜಿಲ್ಲೆಗಳ ಪ್ರಯಾಣಿಕರಿಗೆ ಸಿಹಿ ಸುದ್ದಿ; KSRTCಯ ಮೊದಲ ಇಲೆಕ್ಟ್ರಿಕ್ ಬಸ್​​ಗೆ ಚಾಲನೆ
KSRTCಯ ಮೊದಲ ಇಲೆಕ್ಟ್ರಿಕ್ ಬಸ್​​ಗೆ ಚಾಲನೆ
TV9 Web
| Edited By: |

Updated on: Dec 31, 2022 | 5:19 PM

Share

ಬೆಂಗಳೂರು: ಕರ್ನಾಟಕದಲ್ಲಿ ಇಂದಿನಿಂದ ಕೆಎಸ್​​ಆರ್​ಟಿಸಿ (KSRTC)ಯ ಮೊದಲ ಎಲೆಕ್ಟ್ರಿಕ್ ಬಸ್ (Electric Bus)​​ಗೆ ಚಾಲನೆ ನೀಡಲಾಯಿತು. MEIL ಹಾಗೂ KSRTC ಜಂಟಿಯಾಗಿ ಇಂದಿನಿಂದ ರಸ್ತೆಗಿಳಿದಿರುವ ಪರಿಸರ ಸ್ನೇಹಿ ಬಸ್​​ಗೆ ಸಾರಿಗೆ ಇಲಾಖೆ ಸಚಿವ ಬಿ.ಶ್ರೀರಾಮುಲು (B.Sriramulu) ಅವರು ಚಾಲನೆ ನೀಡಿದರು. ಇದು ಬೆಂಗಳೂರು ಮತ್ತು ಮೈಸೂರು, ಶಿವಮೊಗ್ಗ, ದಾವಣಗೆರೆ, ಚಿಕ್ಕಮಗಳೂರು, ವಿರಾಜಪೇಟೆ ಮತ್ತು ಮಡಿಕೇರಿ ನಡುವೆ ಪ್ರಯಾಣಿಸುವ ಕರ್ನಾಟಕದ ಜನರಿಗೆ ಒಂದು ಸಿಹಿ ಸುದ್ದಿಯಾಗಿದೆ. ಈ ಹೊಸ ಬಸ್‌ಗೆ EV ಪವರ್ ಪ್ಲಸ್ ಎಂದು ಹೆಸರಿಡಲಾಗಿದ್ದು, KSRTC EV ಪವರ್ ಪ್ಲಸ್ (KSRTC EV Power Pluse) ಹಲವು ವಿಶೇಷತೆಗಳನ್ನು ಹೊಂದಿದೆ. ಅವುಗಳು ಈ ಕೆಳಗಿನಂತಿವೆ.

ಎರಡೂವರೆ ತಾಸು ಚಾರ್ಜ್ ಮಾಡಿದರೆ 300 km ಕ್ರಮಿಸುವಷ್ಟು ಸಾಮರ್ಥ್ಯ ಈ ಬಸ್ ಹೊಂದಿದೆ. ಬಸ್ ಸಂಪೂರ್ಣ ಹವಾನಿಯಂತ್ರಿತ ವ್ಯವಸ್ಥೆಯಾಗಿದ್ದು, ನೂತನ ತಂತ್ರಜ್ಞಾನವಾದ ರಿ ಜನರೇಷನ್ ಸಿಸ್ಟಮ್ ಅಳವಡಿಕೆ ಮಾಡಲಾಗಿದೆ. ಸಂಚರಿಸುವ ಹೊತ್ತಲ್ಲೇ ಅರ್ಧದಷ್ಟು ಬ್ಯಾಟರಿ ರಿ ಚಾರ್ಜ್ ಆಗುವ ರಿ ಜನರೇಷನ್ ಆಗುವ ಸಿಸ್ಟಮ್ ಈ ಬಸ್​​ನಲ್ಲಿ ಇರುವ ವಿಶೇಷಗಳಲ್ಲಿ ಒಂದಾಗಿದೆ.

ಇದನ್ನೂ ಓದಿ: ಸಿನಿಮಾಗಳಲ್ಲಿ ಅನವಶ್ಯಕವಾಗಿ ಕೇಸರಿ ಬಟ್ಟೆ ಬಳಕೆ ಯಾಕೆ? ಇದು ನೆಹರೂ ಲೆಗಸಿ ಸೃಷ್ಟಿ ಮಾಡಿದ ನರೇಟಿವ್ ಎಂದ ಬಿ ಎಲ್​ ಸಂತೋಷ್

ಪ್ರಯಾಣದ ವೇಳೆ ಮೊಬೈಲ್ ಚಾರ್ಜ್ ಖಾಲಿಯಾದರೆ ತಲೆಬಿಸಿ ಮಾಡುವ ಪ್ರಮೇಯವೇ ಇಲ್ಲ. ಏಕೆಂದರೆ, ಬಸ್ ಒಳಗೆ ಪ್ರಯಾಣಿಕರ ಅನುಕೂಲಕ್ಕೆ ಮೊಬೈಲ್ ಚಾರ್ಜಿಂಗ್ ಸ್ಪಾಟ್ಸ್ ಇದೆ. ಅಷ್ಟೇ ಅಲ್ಲದೆ ಮನರಂಜನೆಗಾಗಿ ಎರಡು ಟಿವಿ ಅಳವಡಿಕೆ ಮಾಡಲಾಗಿದೆ. ಇದಲ್ಲದೆ, ಈ ಪರಿಸರ ಸ್ನೇಹಿ ಬಸ್ ಸಂಪೂರ್ಣವಾಗಿ ಸೆನ್ಸಾರ್ ಹಿಡಿತದಲ್ಲಿ ಇರಲಿದೆ. ಒಟ್ಟಾರೆ ಬಸ್​​ನಲ್ಲಿ 43 + 2 ಸೀಟ್​​ಗಳು ಇರಲಿದೆ. ಫ್ರಂಟ್ ಲಾಗ್ ಮತ್ತು ಬ್ಯಾಕ್ ಲಾಗ್ ಕ್ಯಾಮೆರಾ ವ್ಯವಸ್ಥೆ ಇರಲಿದೆ. ಡ್ರೈವರ್ ಎಂಡ್ ಸಂಪೂರ್ಣವಾಗಿ ಡಿಜಿಟಲೈಸ್ಡ್ ಸಿಸ್ಟಮ್ ಹೊಂದಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಎಣ್ಣೆ ಮತ್ತಲ್ಲಿ ಡಿವೈಡರ್​​ ಹಾರಿಸಿದ ಕಾರು ಚಾಲಕ: 8 ಜನ ಜಸ್ಟ್​ ಮಿಸ್!​​
ಎಣ್ಣೆ ಮತ್ತಲ್ಲಿ ಡಿವೈಡರ್​​ ಹಾರಿಸಿದ ಕಾರು ಚಾಲಕ: 8 ಜನ ಜಸ್ಟ್​ ಮಿಸ್!​​
ಪೊಲೀಸ್ ಠಾಣೆಗೆ ಭೇಟಿ ನೀಡಿದ್ದಕ್ಕೆ ಕಾರಣವೇನು? ವಿವರಿಸಿದ ಯಶ್ ತಾಯಿ ಪುಷ್ಪ
ಪೊಲೀಸ್ ಠಾಣೆಗೆ ಭೇಟಿ ನೀಡಿದ್ದಕ್ಕೆ ಕಾರಣವೇನು? ವಿವರಿಸಿದ ಯಶ್ ತಾಯಿ ಪುಷ್ಪ
ರೂರ್ಕೆಲಾ ವಾಯುನೆಲೆಯಲ್ಲಿ ವಿಮಾನ ಅಪಘಾತ; ಪೈಲಟ್ ಸೇರಿದಂತೆ 6 ಜನರಿಗೆ ಗಾಯ
ರೂರ್ಕೆಲಾ ವಾಯುನೆಲೆಯಲ್ಲಿ ವಿಮಾನ ಅಪಘಾತ; ಪೈಲಟ್ ಸೇರಿದಂತೆ 6 ಜನರಿಗೆ ಗಾಯ
ಗಂಡನ ಮನೆಯಲ್ಲಿ ನೇಣುಬಿಗಿದ ಆತ್ಮಹತ್ಯೆ ಮಾಡಿಕೊಂಡ ಎರಡು ತಿಂಗಳ ಗರ್ಭಿಣಿ
ಗಂಡನ ಮನೆಯಲ್ಲಿ ನೇಣುಬಿಗಿದ ಆತ್ಮಹತ್ಯೆ ಮಾಡಿಕೊಂಡ ಎರಡು ತಿಂಗಳ ಗರ್ಭಿಣಿ
ಸಿದ್ದರಾಮಯ್ಯ ಲೀಸ್ ಬೇಸ್ಡ್ ಸಿಎಂ: ಗುಡುಗಿದ ಹೆಚ್​​ಡಿ ಕುಮಾರಸ್ವಾಮಿ
ಸಿದ್ದರಾಮಯ್ಯ ಲೀಸ್ ಬೇಸ್ಡ್ ಸಿಎಂ: ಗುಡುಗಿದ ಹೆಚ್​​ಡಿ ಕುಮಾರಸ್ವಾಮಿ
ತೆನೆ ಹೊತ್ತ ಮಹಿಳೆ ಜತೆ ಚಕ್ರದ ಗುರುತು ಸೇರಿಸಲು ಪ್ಲ್ಯಾನ್
ತೆನೆ ಹೊತ್ತ ಮಹಿಳೆ ಜತೆ ಚಕ್ರದ ಗುರುತು ಸೇರಿಸಲು ಪ್ಲ್ಯಾನ್
ಕಾಂಪೌಂಡ್ ತೆರವು ವಿಚಾರ: ಹಾಸನ ಪೊಲೀಸ್ ಠಾಣೆಗೆ ಯಶ್ ತಾಯಿ ಭೇಟಿ
ಕಾಂಪೌಂಡ್ ತೆರವು ವಿಚಾರ: ಹಾಸನ ಪೊಲೀಸ್ ಠಾಣೆಗೆ ಯಶ್ ತಾಯಿ ಭೇಟಿ
ಕರ್ನಾಟಕ ಕರಾವಳಿ ಆಗಲಿದೆ ಟೂರಿಸಂ ಹಬ್: ಡಿಕೆಶಿ ಮಹತ್ವದ ಘೋಷಣೆ
ಕರ್ನಾಟಕ ಕರಾವಳಿ ಆಗಲಿದೆ ಟೂರಿಸಂ ಹಬ್: ಡಿಕೆಶಿ ಮಹತ್ವದ ಘೋಷಣೆ
ಬೆಂಗಳೂರು: ರಾಪಿಡೋ ಚಾಲಕನಿಂದ ಯುವತಿಗೆ ಲೈಂಗಿಕ ಕಿರುಕುಳ
ಬೆಂಗಳೂರು: ರಾಪಿಡೋ ಚಾಲಕನಿಂದ ಯುವತಿಗೆ ಲೈಂಗಿಕ ಕಿರುಕುಳ
ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!