AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುಮಾರಸ್ವಾಮಿ ಲೇಔಟ್ ಠಾಣೆ ಪೊಲೀಸರ ವಿರುದ್ಧ ಲಂಚ ಆರೋಪ! ಆರ್​​ಟಿಐ ಕಾರ್ಯಕರ್ತನಿಂದ ಡಿಸಿಪಿಗೆ ದೂರು

ನಾಗರಾಜ್ ಬನಶಂಕರಿ ಬಳಿ ಅನ್ನಪೂರ್ಣ ಟೂಲ್ಸ್ ಅಂಗಡಿ ಹೊಂದಿದ್ದಾರೆ. ಅಲ್ಲಿ ರಂಜಿತ್ ಕುಮಾರ್ ಕೆಲಸ ಮಾಡುತ್ತಿದ್ದಾನೆ. ಪೊಲೀಸ್ ಠಾಣೆಯಲ್ಲಿ ನಡೆದ ಘಟನೆಯ ಸಂಪೂರ್ಣ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಕುಮಾರಸ್ವಾಮಿ ಲೇಔಟ್ ಠಾಣೆ ಪೊಲೀಸರ ವಿರುದ್ಧ ಲಂಚ ಆರೋಪ! ಆರ್​​ಟಿಐ ಕಾರ್ಯಕರ್ತನಿಂದ ಡಿಸಿಪಿಗೆ ದೂರು
ಸಾಂದರ್ಭಿಕ ಚಿತ್ರ
TV9 Web
| Edited By: sandhya thejappa|

Updated on:May 31, 2022 | 4:31 PM

Share

ಬೆಂಗಳೂರು: ಕುಮಾರಸ್ವಾಮಿ ಲೇಔಟ್ (Kumaraswamy Layout ) ಠಾಣೆ ಪೊಲೀಸರ ವಿರುದ್ಧ ಲಂಚ (Bribery) ಆರೋಪ ಕೇಳಿಬಂದಿದ್ದು, ಬೆಂಗಳೂರು ದಕ್ಷಿಣ ವಿಭಾಗದ ಡಿಸಿಪಿಗೆ ಆರ್ಟಿಐ ಕಾರ್ಯಕರ್ತ ದೂರು ನೀಡಿದ್ದಾರೆ. ಬಾರ್ ಗಲಾಟೆಗೆ ಸಂಬಂಧಿಸಿ ವಿಚಾರಣೆ ನೆಪದಲ್ಲಿ ಕರೆದು ಹಲ್ಲೆ ಮಾಡಿರುವ ಆರೋಪ ಕೇಳಿಬಂದಿದೆ. ನಾಗರಾಜ್ ಎಂಬುವರ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಯುವಕ ರಂಜಿತ್ ಕುಮಾರ್ನನ್ನು ವಿಚಾರಣೆಗೆಂದು ಠಾಣೆಗೆ ಕರೆದು ಪೊಲೀಸರು ಹಲ್ಲೆ ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ.

ಪೊಲೀಸರು ಗಲಾಟೆ ಮಾಡಿದ ಆರೋಪಿಗಳನ್ನು ತೋರಿಸುವಂತೆ ಹೇಳಿದ್ದರು. ಈ ವೇಳೆ ಅದಕ್ಕೂ ನನಗೂ ಸಂಬಂಧವಿಲ್ಲ ಅಂತ ರಂಜಿತ್ ಕುಮಾರ್ ಹೇಳಿದ್ದಾನಂತೆ. ಅದಕ್ಕೆ ವಿನಾಕಾರಣ ಹಲ್ಲೆ ಮಾಡಿ ಪೊಲೀಸರು 15,000 ರೂ. ಲಂಚ ಪಡೆದಿದ್ದಾರೆ. ಇನ್ನು ಪೊಲೀಸರು ಗಲಾಟೆಯಲ್ಲಿ ರಂಜಿತ್ ಭಾಗಿಯಾಗಿದ್ದ ಅಂತ ಹೇಳುತ್ತಿದ್ದಾರೆ. ಇದನ್ನು ಪ್ರಶ್ನಿಸಿದ ಆರ್ಟಿಐ ಕಾರ್ಯಕರ್ತ ನಾಗರಾಜ್ಗೆ ನಿಂದನೆ ಮಾಡಿದ್ದಾರಂತೆ.

ನಾಗರಾಜ್ ಬನಶಂಕರಿ ಬಳಿ ಅನ್ನಪೂರ್ಣ ಟೂಲ್ಸ್ ಅಂಗಡಿ ಹೊಂದಿದ್ದಾರೆ. ಅಲ್ಲಿ ರಂಜಿತ್ ಕುಮಾರ್ ಕೆಲಸ ಮಾಡುತ್ತಿದ್ದಾನೆ. ಪೊಲೀಸ್ ಠಾಣೆಯಲ್ಲಿ ನಡೆದ ಘಟನೆಯ ಸಂಪೂರ್ಣ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಪ್ರಕರಣದಲ್ಲಿ ಭಾಗಿಯಾಗಿದ್ರೆ ಆರೋಪಿಯನ್ನು ಬಿಟ್ಟು ಕಳಿಸಿದ್ದು ಯಾಕೆ? ಆರೋಪಿ ಬಳಿ ಹಣ ಪಡೆದು ಬಿಟ್ಟು ಕಳುಹಿಸಿದ್ರಾ? ಎಂದು ಆರೋಪಿಸಿ ಇಬ್ಬರು ಕ್ರೈಂ ಸಿಬ್ಬಂದಿ ಮೇಲೆ ಕ್ರಮ ಕೈಗೊಳ್ಳುವಂತೆ ಡಿಸಿಪಿ ಹರೀಶ್ ಪಾಂಡೆಗೆ ದೂರು ಸಲ್ಲಿಸಿದ್ದಾರೆ.

ಇದನ್ನೂ ಓದಿ
Image
Satyendar Jain ದೆಹಲಿ ಆರೋಗ್ಯ ಸಚಿವ ಸತ್ಯೇಂದರ್ ಜೈನ್ ಜೂನ್ 9ರ ವರೆಗೆ ಇಡಿ ಕಸ್ಟಡಿಗೆ
Image
ಜಮೀನು ವಿವಾದ ಹಿನ್ನೆಲೆ ಮಹಿಳೆಯ ಹತ್ಯೆ | ಆಕಸ್ಮಿಕ ಬೆಂಕಿ ತಗುಲಿ 2  ಎಕರೆ ಅಡಿಕೆ ತೋಟ ನಾಶ
Image
ಜೋಗದಲ್ಲಿ ತಾಯಿಗೆ ಪಾರ್ಶ್ವವಾಯು ಸ್ಟ್ರೋಕ್ ಆದಾಗ ಆಸ್ಪತ್ರೆಗೆ ಸೇರಿಸಲು ಮಗ ಡೋಲಿ ಮಾಡಿಕೊಂಡು ಹೊತ್ತು ತರಬೇಕಾಯಿತು
Image
Tourist Places: ಬೇಸಿಗೆ ರಜೆಯನ್ನು ಆನಂದಿಸಲು ಮೌಂಟ್ ಅಬುವಿನಂತಹ ಸುಂದರ ಸ್ಥಳಗಳಿಗೊಮ್ಮೆ ಭೇಟಿ ನೀಡಲೇಬೇಕು..!

ಇದನ್ನೂ ಓದಿ: ಜೋಗದಲ್ಲಿ ತಾಯಿಗೆ ಪಾರ್ಶ್ವವಾಯು ಸ್ಟ್ರೋಕ್ ಆದಾಗ ಆಸ್ಪತ್ರೆಗೆ ಸೇರಿಸಲು ಮಗ ಡೋಲಿ ಮಾಡಿಕೊಂಡು ಹೊತ್ತು ತರಬೇಕಾಯಿತು

ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಪಡಿತರ ಅಕ್ಕಿ ವಶ: ಕಾರವಾರ: ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಪಡಿತರ ಅಕ್ಕಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ ತಾಲೂಕಿನ ಕಿಲ್ಲೆ ಓಣಿಯಲ್ಲಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಸಿರಾಜ್ ಮುಲ್ಲಾ ಎಂಬು ವ್ಯಕ್ತಿ ಸುಮಾರು 45 ಕ್ವಿಂಟಲ್ ಪಡಿತರ ಅಕ್ಕಿ ಸಂಗ್ರಹಿಸಿದ್ದ. ಖಚಿತ ಮಾಹಿತಿ ಮೇರೆಗೆ ತಹಶೀಲ್ದಾರ್​ ಮತ್ತು ಆಹಾರಿ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಮುಂಡಗೋಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 4:29 pm, Tue, 31 May 22

Follow Us
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ