AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುರುಹಿನ‌ಶೆಟ್ಟಿ ಕೋ ಆಪರೇಟಿವ್ ಬ್ಯಾಂಕ್​​ನಿಂದ ಬಹುಕೋಟಿ ವಂಚನೆ ಪ್ರಕರಣ: ಅಧ್ಯಕ್ಷ ಸೇರಿ ಐವರ ಬಂಧನ

ಠೇವಣಿದಾರರಿಗೆ ಕೋಟ್ಯಾಂತರ ರೂಪಾಯಿ ವಂಚನೆ ಮಾಡಿದ್ದ ಕುರುಹಿನ‌ಶೆಟ್ಟಿ ಕೋ ಆಪರೇಟಿವ್ ಬ್ಯಾಂಕ್​ನ ಅಧ್ಯಕ್ಷನನ್ನು ಪೊಲೀಸರು ಬಂಧಿಸಿದ್ದಾರೆ.

ಕುರುಹಿನ‌ಶೆಟ್ಟಿ ಕೋ ಆಪರೇಟಿವ್ ಬ್ಯಾಂಕ್​​ನಿಂದ ಬಹುಕೋಟಿ ವಂಚನೆ ಪ್ರಕರಣ: ಅಧ್ಯಕ್ಷ ಸೇರಿ ಐವರ ಬಂಧನ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Nov 08, 2022 | 2:56 PM

Share

ಬೆಂಗಳೂರು: ಠೇವಣಿದಾರರಿಗೆ ಕೋಟ್ಯಾಂತರ ರೂಪಾಯಿ ವಂಚನೆ ಮಾಡಿದ್ದ ಕುರುಹಿನ‌ಶೆಟ್ಟಿ ಕೋ ಆಪರೇಟಿವ್ ಬ್ಯಾಂಕ್​ನ (Kuruhinashetty Cooperative Bank) ಅಧ್ಯಕ್ಷನನ್ನು ಪೊಲೀಸರು ಬಂಧಿಸಿದ್ದಾರೆ. ಕೆಂಪೇಗೌಡ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 2011ರಲ್ಲಿ ಕುರುಹಿನ ಶೆಟ್ಟಿ ಬ್ಯಾಂಕ್ ಸ್ಥಾಪನೆಯಾಗಿತ್ತು. ಈ ಬ್ಯಾಂಕ್​​ನಲ್ಲಿ ಅನೇಕ ಜನರು ಠೇವಣಿ ಇಟ್ಟಿದ್ದಾರೆ. ಆದರೆ ಬ್ಯಾಂಕ್​ ಮಾತ್ರ ಠೇವಣಿದಾರರಿಗೆ ವಂಚನೆ ಮಾಡಿತ್ತು. ಬ್ಯಾಂಕ್​ ಚಿಟ್ಸ್ ಕಂಪನಿ, ಜೆರಾಕ್ಸ್ ಪ್ರತಿಗಳಿಗೆ ಹೆಚ್ಚು ಸಾಲ ಮಂಜೂರು ಮಾಡುತ್ತಿತ್ತು. ಬ್ಯಾಂಕ್​ ಒಂದೇ ಸ್ವತ್ತಿನ ಮೇಲೆ ಅನೇಕ ಬಾರಿ ಲೋನ್ ನೀಡುತ್ತಿತ್ತು. ಇದೇ ರೀತಿಯಾಗಿ ಅಧ್ಯಕ್ಷರು ಸೇರಿ ಐವರು ಆರೋಪಿಗಳು ಸುರಭಿ ಚಿಟ್ ಫಂಡ್ಸ್ ಚೇರ್ಮನ್ ಬಿ ಟಿ ಮೋಹನ್​ಗೆ ಸುಮಾರು 75 ಕೋಟಿಗೂ ಅಧಿಕ ಸಾಲ‌ ನೀಡಿದ್ದರು. ಹೀಗೆ ಜನರ ಹಣ ಪಡೆದು ವಂಚನೆ ಮಾಡುತ್ತಿದ್ದ ಅಧ್ಯಕ್ಷ ಬಿ ಎಲ್ ಶ್ರೀನಿವಾಸ್, ಈಶ್ವರಪ್ಪ, ದಯಾನಂದ ಹೆಗ್ಡೆ, ಚಂದ್ರಶೇಖರ್, ಬಿ ಟಿ ಮೋಹನ್​ನನ್ನು ಕೆಂಪೇಗೌಡ ನಗರ ಪೊಲೀಸರು ಬಂಧಿಸಿದ್ದಾರೆ. ಕೆಂಪೇಗೌಡ ನಗರ ಪೊಲೀಸ್​​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ