AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುರುಹಿನ‌ಶೆಟ್ಟಿ ಕೋ ಆಪರೇಟಿವ್ ಬ್ಯಾಂಕ್​​ನಿಂದ ಬಹುಕೋಟಿ ವಂಚನೆ ಪ್ರಕರಣ: ಅಧ್ಯಕ್ಷ ಸೇರಿ ಐವರ ಬಂಧನ

ಠೇವಣಿದಾರರಿಗೆ ಕೋಟ್ಯಾಂತರ ರೂಪಾಯಿ ವಂಚನೆ ಮಾಡಿದ್ದ ಕುರುಹಿನ‌ಶೆಟ್ಟಿ ಕೋ ಆಪರೇಟಿವ್ ಬ್ಯಾಂಕ್​ನ ಅಧ್ಯಕ್ಷನನ್ನು ಪೊಲೀಸರು ಬಂಧಿಸಿದ್ದಾರೆ.

ಕುರುಹಿನ‌ಶೆಟ್ಟಿ ಕೋ ಆಪರೇಟಿವ್ ಬ್ಯಾಂಕ್​​ನಿಂದ ಬಹುಕೋಟಿ ವಂಚನೆ ಪ್ರಕರಣ: ಅಧ್ಯಕ್ಷ ಸೇರಿ ಐವರ ಬಂಧನ
ಸಾಂದರ್ಭಿಕ ಚಿತ್ರ
TV9 Web
| Edited By: ವಿವೇಕ ಬಿರಾದಾರ|

Updated on: Nov 08, 2022 | 2:56 PM

Share

ಬೆಂಗಳೂರು: ಠೇವಣಿದಾರರಿಗೆ ಕೋಟ್ಯಾಂತರ ರೂಪಾಯಿ ವಂಚನೆ ಮಾಡಿದ್ದ ಕುರುಹಿನ‌ಶೆಟ್ಟಿ ಕೋ ಆಪರೇಟಿವ್ ಬ್ಯಾಂಕ್​ನ (Kuruhinashetty Cooperative Bank) ಅಧ್ಯಕ್ಷನನ್ನು ಪೊಲೀಸರು ಬಂಧಿಸಿದ್ದಾರೆ. ಕೆಂಪೇಗೌಡ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 2011ರಲ್ಲಿ ಕುರುಹಿನ ಶೆಟ್ಟಿ ಬ್ಯಾಂಕ್ ಸ್ಥಾಪನೆಯಾಗಿತ್ತು. ಈ ಬ್ಯಾಂಕ್​​ನಲ್ಲಿ ಅನೇಕ ಜನರು ಠೇವಣಿ ಇಟ್ಟಿದ್ದಾರೆ. ಆದರೆ ಬ್ಯಾಂಕ್​ ಮಾತ್ರ ಠೇವಣಿದಾರರಿಗೆ ವಂಚನೆ ಮಾಡಿತ್ತು. ಬ್ಯಾಂಕ್​ ಚಿಟ್ಸ್ ಕಂಪನಿ, ಜೆರಾಕ್ಸ್ ಪ್ರತಿಗಳಿಗೆ ಹೆಚ್ಚು ಸಾಲ ಮಂಜೂರು ಮಾಡುತ್ತಿತ್ತು. ಬ್ಯಾಂಕ್​ ಒಂದೇ ಸ್ವತ್ತಿನ ಮೇಲೆ ಅನೇಕ ಬಾರಿ ಲೋನ್ ನೀಡುತ್ತಿತ್ತು. ಇದೇ ರೀತಿಯಾಗಿ ಅಧ್ಯಕ್ಷರು ಸೇರಿ ಐವರು ಆರೋಪಿಗಳು ಸುರಭಿ ಚಿಟ್ ಫಂಡ್ಸ್ ಚೇರ್ಮನ್ ಬಿ ಟಿ ಮೋಹನ್​ಗೆ ಸುಮಾರು 75 ಕೋಟಿಗೂ ಅಧಿಕ ಸಾಲ‌ ನೀಡಿದ್ದರು. ಹೀಗೆ ಜನರ ಹಣ ಪಡೆದು ವಂಚನೆ ಮಾಡುತ್ತಿದ್ದ ಅಧ್ಯಕ್ಷ ಬಿ ಎಲ್ ಶ್ರೀನಿವಾಸ್, ಈಶ್ವರಪ್ಪ, ದಯಾನಂದ ಹೆಗ್ಡೆ, ಚಂದ್ರಶೇಖರ್, ಬಿ ಟಿ ಮೋಹನ್​ನನ್ನು ಕೆಂಪೇಗೌಡ ನಗರ ಪೊಲೀಸರು ಬಂಧಿಸಿದ್ದಾರೆ. ಕೆಂಪೇಗೌಡ ನಗರ ಪೊಲೀಸ್​​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಇಂದು ಆಷಾಢ ಮಾಸದ ಆಡಿ ಶುಕ್ರವಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಮಾಸದ ಆಡಿ ಶುಕ್ರವಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್