AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾರಿನ ಬಾನೆಟ್ ಮೇಲೆ ಬಿದ್ದ ವ್ಯಕ್ತಿಯನ್ನು ಎಳೆದೊಯ್ದ ಪ್ರಕರಣ: ಐವರಿಗೆ ನ್ಯಾಯಾಂಗ ಬಂಧನ

ನೆಟ್​​​ ಮೇಲೆ ವ್ಯಕ್ತಿ ಬಿದ್ದರೂ ಕಾರು ಚಾಲಕಿ ಆತನನ್ನು ಸುಮಾರು 2 ಕಿ.ಮೀ ದೂರದವರೆಗೆ ಎಳೆದುಕೊಂಡು ಹೋಗಿದ್ದರು. ಪ್ರಕರಣ ಸಂಬಂಧ ದೂರು ಪ್ರತಿದೂರು ದಾಖಲಾಗಿ ಪೊಲೀಸರು ಐವರನ್ನು ಬಂಧಿಸಿದ್ದರು. ಇದೀಗ ಆರೋಪಿಗಳನ್ನು ಕೋರ್ಟ್ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

ಕಾರಿನ ಬಾನೆಟ್ ಮೇಲೆ ಬಿದ್ದ ವ್ಯಕ್ತಿಯನ್ನು ಎಳೆದೊಯ್ದ ಪ್ರಕರಣ: ಐವರಿಗೆ ನ್ಯಾಯಾಂಗ ಬಂಧನ
ಬಾನೆಟ್ ಮೇಲೆ ಬಿದ್ದ ವ್ಯಕ್ತಿಯನ್ನು ಎಳೆದೊಯ್ಯುತ್ತಿರುವ ಕಾರು
Follow us
TV9 Web
| Updated By: Rakesh Nayak Manchi

Updated on: Jan 21, 2023 | 5:03 PM

ಬೆಂಗಳೂರು: ಕಾರಿನ ಬಾನೆಟ್ ಮೇಲೆ ಬಿದ್ದ ವ್ಯಕ್ತಿಯನ್ನು ಎಳೆದೊಯ್ದ ಪ್ರಕರಣ (Hit And Run Case) ಸಂಬಂಧ ಬಂಧನಕ್ಕೊಳಗಾದ ಐವರು ಆರೋಪಿಗಳನ್ನು ಫೆಬ್ರವರಿ 3ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ 9ನೇ ಎಸಿಎಂಎಂ ನ್ಯಾಯಾಲಯ (9th ACMM Court) ಆದೇಶ ಹೊರಡಿಸಿದೆ. ಜೈಲುಪಾಲಾದ ದರ್ಶನ್, ಸೃಜನ್, ವಿನಯ್, ಯಶವಂತ್ ಮತ್ತು ಕಾರು ಚಾಲಕಿ ಪ್ರಿಯಾಂಕಾ ಎಂಬ ಆರೋಪಿಗಳನ್ನು ಜ್ಞಾನಭಾರತಿ ಠಾಣಾ ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ದರ್ಶನ್, ಸೃಜನ್, ವಿನಯ್, ಯಶವಂತ್ ವಿರುದ್ಧ IPC ಸೆಕ್ಷನ್ 354ರಡಿ ಪ್ರಕರಣ ದಾಖಲಾಗಿದ್ದರೆ, ಪ್ರಿಯಾಂಕಾ ವಿರುದ್ಧ ಐಪಿಸಿ ಸೆಕ್ಷನ್ 307ರಡಿ ಪ್ರಕರಣ​ ದಾಖಲಾಗಿದೆ.

ಜ್ಞಾನಭಾರತಿ ಪೊಲೀಸ್ ಠಾಣಾ ವ್ಯಾಪ್ತಿಯ ಉಲ್ಲಾಳ ಮುಖ್ಯರಸ್ತೆಯ ಜಂಕ್ಷನ್ ಬಳಿ ದರ್ಶನ್ ಎಂಬಾತನ ಸ್ವಿಫ್ಟ್​ ಕಾರು ಮತ್ತು ಶ್ವೇತಾ ಎಂಬಾಕೆಯ ನೆಕ್ಸಾನ್​ ಕಾರಿನ ನಡುವೆ ಸಣ್ಣ ಅಪಘಾತ ನಡೆದಿದೆ. ಈ ವೇಳೆ ಶ್ವೇತಾ ದರ್ಶನ್​ಗೆ ಮಧ್ಯಬೆರಳು ತೋರಿಸಿ ಕೆಟ್ಟದಾಗಿ ವರ್ತಿಸಿ ಕಾರು ಚಲಾಯಿಸಿಕೊಂಡು ಹೋಗಿದ್ದಾಳೆ. ಕೋಪಗೊಂಡ ದರ್ಶನ್ ಟಾಟಾ ನೆಕ್ಸಾನ್​ ಕಾರು ಹಿಂಬಾಲಿಸಿ ಕಾರು ಅಡ್ಡಗಟ್ಟಿ ಮಹಿಳೆಯನ್ನು ಪ್ರಶ್ನಿಸಿದ್ದಾನೆ.

ಈ ವೇಳೆ ಶ್ವಾತಾ ಕಾರನ್ನು ಮುಂದೆ ಚಲಾಯಿಸಲು ಹೋಗುತ್ತಿದ್ದಂತೆ ದರ್ಶನ್ ಕಾರಿನ ಬಾನೆಟ್ ಮೇಲೆ ಹತ್ತಿ ಕುಳಿತಿದ್ದಾನೆ. ಆದರೂ ಶ್ವೇತಾ, ದರ್ಶನ್ ಬಾನೆಟ್ ಮೇಲಿದ್ದರೂ ಏಕಾಏಕಿ ಕಾರು ಚಲಾಯಿಸಿಕೊಂಡು ಸುಮಾರು 2ಕಿ.ಮೀ ದೂರದವರೆಗೆ ಎಳೆದೊಯ್ದಿದ್ದಾಳೆ. ಕೂಡಲೇ ದರ್ಶನ್ ಸ್ನೇಹಿತರು ಕಾರನ್ನು ಹಿಂಬಾಲಿಸಿ ಅಡ್ಡಗಟ್ಟಿ ದರ್ಶನ್​ನನ್ನು ರಕ್ಷಿಸಿದ್ದಾರೆ. ನಂತರ ದರ್ಶನ್ ಮತ್ತು ಸ್ನೇಹಿತರು ಕಾರಿನ ಗಾಜು ಹೊಡೆದು ಆಕೆಯ ಗಂಡನಿಗೆ ಥಳಿಸಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: ಬೆಂಗಳೂರು: ಕಾರು ಚಾಲಕನನ್ನು ದರದರನೆ 1ಕಿ.ಮೀ ಎಳೆದೊಯ್ದ ಬೈಕ್ ಸವಾರ: ಇಲ್ಲಿದೆ ಭಯಾನಕ ವಿಡಿಯೋ

ಘಟನೆ ಸಂಬಂಧ ಎರಡೂ ಕಡೆಯವರಿಂದ ಜ್ಞಾನಭಾರತಿ ಪೊಲೀಸ್​ ಠಾಣೆಯಲ್ಲಿ ದೂರು ಪ್ರತಿದೂರು ದಾಖಲಾಗಿದ್ದು, ಪೊಲೀಸರು ಎರಡು ಪ್ರತ್ಯೇಕ ಎಫ್​ಐಆರ್​ ದಾಖಲಿಸಿದ್ದಾರೆ. ದರ್ಶನ್​, ಐಪಿಸಿ ಸೆಕ್ಷನ್​ 307 ಅಡಿಯಲ್ಲಿ ಎಫ್​ಐಆರ್ ದಾಖಲಾದರೆ, ಪ್ರಿಯಾಂಕ ಐಪಿಸಿ ಸೆಕ್ಸನ್​ 354 ಅಡಿಯಲ್ಲಿ ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲಿಸಿದ್ದಾಳೆ.​ ತನ್ನನ್ನು ಕೊಲೆ ಮಾಡುವ ಉದ್ದೇಶದಿಂದ ಬಾನೆಟ್​ ಮೇಲೆ ಹತ್ತಿ ಕುಳಿತರೂ ವೇಗವಾಗಿ ಕಾರನ್ನು ಚಲಾಯಿಸಿಕೊಂಡು ಹೋಗಿದ್ದಾಗಿ ದರ್ಶನ್ ದೂರಿನಲ್ಲಿ ಆರೋಪಿಸಿದರೆ, ಇತ್ತ ಪ್ರಿಯಾಂಕ, ದರ್ಶನ್ ಹಾಗೂ ಸಹಚರರು​ ವಿರುದ್ಧ ತನ್ನ ಬಟ್ಟೆಯನ್ನು ಹರಿದು ಎಳೆದಾಡಿ ಅವಾಚ್ಯ ಶಬ್ಧದಿಂದ ನಿಂದನೆ ಮಾಡಿದ್ದಾರೆಂದು ದೂರಿನಲ್ಲಿ ಆರೋಪಿಸಿದ್ದಾರೆ.

ದೂರು ಮತ್ತು ಪ್ರತಿದೂರಿನ ಅನ್ವಯ ಜ್ಞಾನಭಾರತಿ ಪೊಲೀಸರು ಪ್ರಿಯಾಂಕ ನೀಡಿರುವ ಲೈಂಗಿಕ ದೌರ್ಜನ್ಯ ದೂರಿನ ಅಡಿಯಲ್ಲಿ ದರ್ಶನ್​, ಯಶವಂತ್​, ಸುಜನ್​ ಹಾಗೂ ವಿನಯ್​ ಎಂಬವರನ್ನು ಬಂಧಿಸಿದರೆ ಪ್ರಮೋದ್​ ಹಾಗೂ ದರ್ಶನ್​ ಎಂಬುವವರು ನೀಡಿರುವ ದೂರಿನ ಅನ್ವಯ ಪ್ರಿಯಾಂಕಳನ್ನು ಬಂಧಿಸಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಜನಪ್ರಿಯ ಗೆಟ್ಟೋ ಕಿಡ್ಸ್​ಗೆ ಪ್ರೀತಿಯ ವಿದಾಯ ಹೇಳಿದ ಅರ್ಜುನ್ ಜನ್ಯ
ಜನಪ್ರಿಯ ಗೆಟ್ಟೋ ಕಿಡ್ಸ್​ಗೆ ಪ್ರೀತಿಯ ವಿದಾಯ ಹೇಳಿದ ಅರ್ಜುನ್ ಜನ್ಯ
‘ಎಕ್ಕ’ ಸಿನಿಮಾ ಸುದ್ದಿಗೋಷ್ಠಿಯಲ್ಲಿ ಅಶ್ವಿನಿ ಪುನೀತ್​ ರಾಜ್​​ಕುಮಾರ್
‘ಎಕ್ಕ’ ಸಿನಿಮಾ ಸುದ್ದಿಗೋಷ್ಠಿಯಲ್ಲಿ ಅಶ್ವಿನಿ ಪುನೀತ್​ ರಾಜ್​​ಕುಮಾರ್
ತಾಲೂಕು ಕಚೇರಿಯ ಗ್ರೇಡ್ 2 ತಹಸೀಲ್ದಾರ್​ಗೆ ನೀರಿಳಿಸಿದ ಸಚಿವ ಭೈರೇಗೌಡ
ತಾಲೂಕು ಕಚೇರಿಯ ಗ್ರೇಡ್ 2 ತಹಸೀಲ್ದಾರ್​ಗೆ ನೀರಿಳಿಸಿದ ಸಚಿವ ಭೈರೇಗೌಡ
ಯಾವ್ಯಾವುದಕ್ಕೆ ಎಷ್ಟೆಷ್ಟು ಲಂಚ ಅಂತ ಕಚೇರಿಯಲ್ಲಿ ದರಪಟ್ಟಿ ಲಗತ್ತಿಸಿ! ಸಚಿವ
ಯಾವ್ಯಾವುದಕ್ಕೆ ಎಷ್ಟೆಷ್ಟು ಲಂಚ ಅಂತ ಕಚೇರಿಯಲ್ಲಿ ದರಪಟ್ಟಿ ಲಗತ್ತಿಸಿ! ಸಚಿವ
ಕಚೇರಿಗೆ ದಿಢೀರ್ ಭೇಟಿ: ಅಧಿಕಾರಿಗಳು, ನೌಕರರಿಗೆ ಕೃಷ್ಣಭೈರೇಗೌಡ ಕ್ಲಾಸ್
ಕಚೇರಿಗೆ ದಿಢೀರ್ ಭೇಟಿ: ಅಧಿಕಾರಿಗಳು, ನೌಕರರಿಗೆ ಕೃಷ್ಣಭೈರೇಗೌಡ ಕ್ಲಾಸ್
ಕುಮಾರಸ್ವಾಮಿ ಮತ್ತು ಜೋಶಿಯವರನ್ನು ಚರ್ಚೆಗೆ ಕರೆಯುತ್ತಿದ್ದೇನೆ: ಪ್ರದೀಪ್
ಕುಮಾರಸ್ವಾಮಿ ಮತ್ತು ಜೋಶಿಯವರನ್ನು ಚರ್ಚೆಗೆ ಕರೆಯುತ್ತಿದ್ದೇನೆ: ಪ್ರದೀಪ್
ಭಾರತ-ಯುಎಇ ಸಹಭಾಗಿತ್ವ ಮಹತ್ವದ್ದು: ಸಚಿವ ಹರ್ದೀಪ್ ಸಿಂಗ್
ಭಾರತ-ಯುಎಇ ಸಹಭಾಗಿತ್ವ ಮಹತ್ವದ್ದು: ಸಚಿವ ಹರ್ದೀಪ್ ಸಿಂಗ್
ಈ ಬಾರಿ 11 ದಿನ ಮೈಸೂರು ದಸರಾ ಆಚರಣೆ: ವಿಶೇಷತೆ ಏನು ಗೊತ್ತಾ?
ಈ ಬಾರಿ 11 ದಿನ ಮೈಸೂರು ದಸರಾ ಆಚರಣೆ: ವಿಶೇಷತೆ ಏನು ಗೊತ್ತಾ?
ಡಿಎನ್​ಎ ಮೂಲಕ 211 ಜನರ ಗುರುತು ಪತ್ತೆ, 189 ಮೃತದೇಹಗಳ ಹಸ್ತಾಂತರ:ಡಾ. ರಾಕೇ
ಡಿಎನ್​ಎ ಮೂಲಕ 211 ಜನರ ಗುರುತು ಪತ್ತೆ, 189 ಮೃತದೇಹಗಳ ಹಸ್ತಾಂತರ:ಡಾ. ರಾಕೇ
ಅಕ್ಕಿ ಸಾಗಿಸುತ್ತಿದ್ದ ಸರಕು ಸಾಗಣೆ ವಾಹನದಲ್ಲಿ 41 ಮೂಟೆಗಳು ಪತ್ತೆ
ಅಕ್ಕಿ ಸಾಗಿಸುತ್ತಿದ್ದ ಸರಕು ಸಾಗಣೆ ವಾಹನದಲ್ಲಿ 41 ಮೂಟೆಗಳು ಪತ್ತೆ