AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನ ಪ್ರಮುಖ ಕೆರೆಗೆ ಕಲುಷಿತ ನೀರು! ಪೈಪ್ ಮೂಲಕ ಕೊಳಚೆ ನೀರು ಹರಿಯಬಿಟ್ಟ ಅಪಾರ್ಟ್​ಮೆಂಟ್

ಬೆಂಗಳೂರಿನ ಇಬ್ಬಲೂರು ಬಳಿಯ ಲೋವರ್ ಅಂಬಲಿಪುರ ಕೆರೆಗೆ ಟ್ರಿನಿಟಿ ಏಕರ್ಸ್ ಅಂಡ್ ವುಡ್ ಅಪಾರ್ಟ್‌ಮೆಂಟ್‌ನಿಂದ ನೇರವಾಗಿ ಕೊಳಚೆ ನೀರು ಹರಿಯಬಿಡಲಾಗುತ್ತಿದೆ ಎಂಬ ಆರೋಪ ಅಪಾರ್ಟ್​​ಮೆಂಟ್ ನಿವಾಸಿಗಳಿಂದಲೇ ಕೇಳಿಬಂದಿದೆ. 300 ಕುಟುಂಬಗಳಿರುವ ಈ ಅಪಾರ್ಟ್‌ಮೆಂಟ್‌ನಿಂದ ಪೈಪ್ ಮೂಲಕ ಕಲುಷಿತ ನೀರು ಹರಿಸುತ್ತಿರುವುದು ಕೆರೆಯ ಪುನರುಜ್ಜೀವನದ ಆಶಯಕ್ಕೆ ಧಕ್ಕೆ ತಂದಿದೆ. ಅಧಿಕಾರಿಗಳು ಕ್ರಮ ಕೈಗೊಳ್ಳಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

ಬೆಂಗಳೂರಿನ ಪ್ರಮುಖ ಕೆರೆಗೆ ಕಲುಷಿತ ನೀರು! ಪೈಪ್ ಮೂಲಕ ಕೊಳಚೆ ನೀರು ಹರಿಯಬಿಟ್ಟ ಅಪಾರ್ಟ್​ಮೆಂಟ್
ಲೋವರ್ ಅಂಬಲಿಪುರ ಕೆರೆImage Credit source: tv9
ಗಣಪತಿ ಶರ್ಮಾ
|

Updated on: Apr 20, 2026 | 4:00 PM

Share

ಬೆಂಗಳೂರು, ಏಪ್ರಿಲ್ 20: ಸಿಲಿಕಾನ್ ಸಿಟಿ ಬೆಂಗಳೂರಿನ (Bengaluru) ಕೆರೆಗಳ ಉಳಿವಿಗಾಗಿ ಹೋರಾಟ ನಡೆಯುತ್ತಿರುವ ಬೆನ್ನಲ್ಲೇ, ನಗರದ ಪ್ರಮುಖ ಕೆರೆಗಳಲ್ಲಿ ಒಂದಾದ ಲೋವರ್ ಅಂಬಲಿಪುರ ಕೆರೆಗೆ (Lower Ambalipura Lake) ದೊಡ್ಡ ಕಂಟಕ ಎದುರಾಗಿದೆ. ಕೆರೆಗೆ ಹೊಂದಿಕೊಂಡೇ ಇರುವ ಪ್ರತಿಷ್ಠಿತ ಅಪಾರ್ಟ್‌ಮೆಂಟ್ ಸಮುಚ್ಚಯವೊಂದು ಪೈಪ್‌ಗಳ ಮೂಲಕ ನೇರವಾಗಿ ಕೊಳಚೆ ನೀರನ್ನು ಕೆರೆಯ ಒಡಲಿಗೆ ಹರಿಸುತ್ತಿರುವ ಗಂಭೀರ ಆರೋಪ ಕೇಳಿಬಂದಿದೆ.

ಟ್ರಿನಿಟಿ ಏಕರ್ಸ್ ಅಪಾರ್ಟ್‌ಮೆಂಟ್ ವಿರುದ್ಧ ಆರೋಪ

ಇಬ್ಬಲೂರು ಬಳಿಯ ಅಂಬಲಿಪುರ ಕೆರೆಗೆ ಪಕ್ಕದಲ್ಲೇ ಇರುವ ‘ಟ್ರಿನಿಟಿ ಏಕರ್ಸ್ ಅಂಡ್ ವುಡ್’ ಅಪಾರ್ಟ್‌ಮೆಂಟ್‌ನಿಂದ ಕಲುಷಿತ ನೀರು ಹರಿಯುತ್ತಿದೆ. ಸುಮಾರು 300 ಕುಟುಂಬಗಳು ವಾಸವಾಗಿರುವ ಈ ಸಮುಚ್ಚಯದಲ್ಲಿ ಉತ್ಪತ್ತಿಯಾಗುವ ಕೊಳಚೆ ನೀರನ್ನು ಶುದ್ಧೀಕರಿಸದೆ (STP ಬಳಸದೆ), ಎರಡು ಪೈಪ್‌ಗಳ ಮೂಲಕ ನೇರವಾಗಿ ಕೆರೆಗೆ ಬಿಡಲಾಗುತ್ತಿದೆ. ಇದು ಕೆರೆಯ ಜೀವವೈವಿಧ್ಯಕ್ಕೆ ಮಾರಕವಾಗಿ ಪರಿಣಮಿಸಿದೆ.

Lotus In Lower Ambalipura Lake

ನಿವಾಸಿಗಳಿಂದಲೇ ದೂರು

ವಿಶೇಷವೆಂದರೆ, ಇದೇ ಅಪಾರ್ಟ್‌ಮೆಂಟ್‌ನಲ್ಲಿ ವಾಸವಿರುವ ಕೆಲವು ಮಂದಿ ನಿವಾಸಿಗಳೇ ಅಸೋಸಿಯೇಷನ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ‘ಹಲವು ವರ್ಷಗಳ ಹಿಂದೆ ಲಕ್ಷಾಂತರ ರೂಪಾಯಿ ವೆಚ್ಚದಲ್ಲಿ ಈ ಕೆರೆಯನ್ನು ಪುನರುಜ್ಜೀವನಗೊಳಿಸಲಾಗಿತ್ತು. ಆದರೆ ಈಗ ಕಲುಷಿತ ನೀರು ಸೇರುತ್ತಿರುವುದರಿಂದ ಕೆರೆ ಮತ್ತೆ ಹಾಳಾಗುತ್ತಿದೆ. ಈ ಬಗ್ಗೆ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗಿಲ್ಲ’ ಎಂದು ಸ್ಥಳೀಯ ನಿವಾಸಿ ಅಕ್ಷತಾ ದೂರಿದ್ದಾರೆ.

ಇದನ್ನೂ ಓದಿ: ಬಾಗಲಕೋಟೆಯಲ್ಲಿ ನದಿಗಳು ಖಾಲಿ ಖಾಲಿ, ಕುಸಿಯುತ್ತಿರುವ ಅಂತರ್ಜಲ: 114 ಗ್ರಾಮಗಳಲ್ಲಿ ಜಲಕ್ಷಾಮದ ಭೀತಿ

ಪ್ರಸ್ತುತ ಅಂಬಲಿಪುರ ಕೆರೆಗೆ ಈ ಅಪಾರ್ಟ್‌ಮೆಂಟ್‌ನ ಪೈಪ್‌ಗಳ ಹೊರತಾಗಿ ಬೇರೆ ಯಾವುದೇ ಕಲುಷಿತ ನೀರಿನ ಸಂಪರ್ಕವಿಲ್ಲ. ಕೆರೆಗೆ ಪೈಪ್ ಸಂಪರ್ಕ ಕಲ್ಪಿಸಿರುವುದೇ ಕಾನೂನುಬಾಹಿರವಾಗಿದ್ದು, ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ (KSPCB) ಮತ್ತು ಬಿಬಿಎಂಪಿ ಅಧಿಕಾರಿಗಳು ಕೂಡಲೇ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಬೇಕು. ಕೆರೆಗೆ ವಿಷಕಾರಕ ನೀರು ಹರಿಸುತ್ತಿರುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.

ವರದಿ: ಲಕ್ಷ್ಮಿ ನರಸಿಂಹ, ಟಿವಿ9 ಬೆಂಗಳೂರು

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Ganapathi Sharma
Ganapathi Sharma

ಕೇರಳದ ಕಾಸರಗೋಡು ಜಿಲ್ಲೆಯ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 13 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು.

Read More
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?