AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆರೆ ಕಲುಷಿತ: ಜಲಚರಗಳಿಗೆ ಜೀವ ಸಂಕಷ್ಟ, ಸರ್ಕಾರದ ವಿರುದ್ಧ ಪರಿಸರವಾದಿಗಳ ಆಕ್ರೋಶ

ಬೆಂಗಳೂರಿನಲ್ಲಿರುವ ಕೆರೆಗಳು ಕಲುಷಿತ ಆಗಿ ಜಲಚರ ಜೀವಿಗಳು ವಾಸ ಮಾಡದ ಸ್ಥಿತಿಗೆ ಬಂದಿವೆ‌. ಸರ್ಕಾರ ಮತ್ತು ಬಿಬಿಎಂಪಿ, ಬಿಡಿಎ ಕಲುಷಿತ ಆಗದಂತೆ ತಡೆಗಟ್ಟಿ ಕೆರೆ ಸಂರಕ್ಷಣೆಗೆ ಮುಂದಾಗಬೇಕೆಂದು ಪರಿಸರವಾದಿಗಳು ಆಗ್ರಹಿಸಿದ್ದಾರೆ.

ಕೆರೆ ಕಲುಷಿತ: ಜಲಚರಗಳಿಗೆ ಜೀವ ಸಂಕಷ್ಟ, ಸರ್ಕಾರದ ವಿರುದ್ಧ ಪರಿಸರವಾದಿಗಳ ಆಕ್ರೋಶ
ಬೆಂಗಳೂರು ಕೆರೆ
Vinayak Hanamant Gurav
| Edited By: |

Updated on:Dec 13, 2023 | 3:11 PM

Share

ಬೆಂಗಳೂರು, ಡಿ.13: ಐಟಿಬಿಟಿ ಸಿಟಿ, ಸಿಲಿಕಾನ್ ಸಿಟಿ, ಕೆರೆಗಳ‌ ನಗರ ಅಂತಾ ಕರೆಯೋ ಬೆಂಗಳೂರಿನ ಕೆರೆಗಳು (Bengaluru Lakes) ಅಪಾಯದಲ್ಲಿವೆ. ಕೋಟ್ಯಾಂತರ ರೂಪಾಯಿ ವೆಚ್ಚ ಮಾಡಿ ಕೆರೆ ಅಭಿವೃದ್ಧಿ ಪಡಿಸಲಾಗುತ್ತಿದೆ. ಈಗಲೂ ಅಭಿವೃದ್ಧಿ ನಡೆಯುತ್ತಿದೆ ಆದರೂ ಕೂಡ ಇನ್ನೊಂದೆಡೆಗೆ ಮಲಿನ ನೀರು ಬಂದು ಕೆರೆ ಸೇರುತ್ತಿದೆ. ಇದರಿಂದ ಜಲಚರ ಜೀವಿಗಳು ವಾಸ ಮಾಡದೇ ಇರೋ ಮಟ್ಟಕ್ಕೆ ಕೆರೆಗಳ ನೀರು ಕಲುಷಿತ ಆಗಿದೆ. ಕೆರೆಗಳಲ್ಲಿ ಮೀನುಗಳು (Fishes) ಸಾವಿನ ಸಂಖ್ಯೆ ಹೆಚ್ಚಾಗುತ್ತಿದೆ. ಇಷ್ಟೆಲ್ಲ ಆದರು ಸರಿಯಾಗಿ ಕೆರೆ ಅಭಿವೃದ್ಧಿ ಮಾಡದಿರುವುದರಿಂದ ಕೆರೆಗಳು ವಿಷಯುಕ್ತವಾಗುತ್ತಿವೆ.

ಬೆಂಗಳೂರಿನಂತಹ ಮಹಾನಗರದಲ್ಲಿ 200ಕ್ಕೂ ಹೆಚ್ಚು ಕೆರೆಗಳಿವೆ. ಇರುವ ಕೆರೆಗಳನ್ನ‌ ಸಂರಕ್ಷಿಸುತ್ತೆವೆ, ಅಭಿವೃದ್ಧಿ ಪಡಿಸ್ತೆವೆ ಅಂತಾ ಸರ್ಕಾರ ಮತ್ತು ಬಿಬಿಎಂಪಿ  ಹೇಳ್ತಾನೆ ಬರ್ತಾ ಇದೆ. ಆದರೆ ಕೆರೆಗಳ ಸಂರಕ್ಷಣೆಯಲ್ಲಿ ಸರ್ಕಾರ ನಿರ್ಲಕ್ಷ್ಯ ಮಾಡುತ್ತಿದೆ. ಬೆಂಗಳೂರು ಮಹಾನಗರದಲ್ಲಿ ಇರುವ ಫ್ಯಾಕ್ಟರಿಗಳು ಹೊರ ಸೂಸುವ ತ್ಯಾಜ್ಯ ಮತ್ತು ರಾಜಕಾಲುವೆಯಿಂದ ಬರುವ ಅನ್ ಟ್ರೀಟೆಡ್ ನೀರಿನಿಂದ ಕೆರೆಗಳು ಕಲುಷಿತ ಆಗಿ ನೀರಿನ ಪಿಎಚ್ ಕಡಿಮೆಯಾಗಿ ಆಕ್ಸಿಜನ್ ಕೊರತೆಯಿಂದಾಗಿ ಜಲಚರ ಜೀವಿಗಳು ಬದುಕಲಾಗದ ಸ್ಥಿತಿಗೆ ತಲುಪುತ್ತಿವೆ. ಅದೆಷ್ಟೋ ಕೆರೆಯ ಮೀನುಗಳು ಸಾಯುತ್ತಿವೆ. ಜಲಚರ ಜೀವಿಗಳಿಗಷ್ಟೇ ಅಲ್ಲದೇ ಕೆರೆ ಪಕ್ಕದ ಮರಗಳಿಗೂ ಇದು ವಿಷವಾಗುತ್ತದೆ ಎಂದು ಪರಿಸರವಾದಿಗಳು ಆಕ್ರೋಶ ಹೊರ ಹಾಕಿದ್ದಾರೆ.

ಇದನ್ನೂ ಓದಿ: ರಾತ್ರೋರಾತ್ರಿ ವಿಶಾಲ ಕೆರೆಯಲ್ಲಿ ನೂರಾರು ಮರಗಳ ಮಾರಣಹೋಮ.. ಕಣ್ಮುಚ್ಚಿ ಕುಳಿತ ಅಧಿಕಾರಿಗಳ ಧೋರಣೆ ಏನು?

ಇನ್ನೂ ಈ ಬಗ್ಗೆ ವಿಶೇಷ ಆಯುಕ್ತರನ್ನ ಕೇಳಿದರೆ, ಕೆರೆ ನೀರು ಕಲುಷಿತಗೊಳ್ಳುತ್ತಿವೆ ಇದಕ್ಕೆ ಕಾರಣ BWSSB ಒಳಚರಂಡಿ ಕಾಮಗಾರಿ ನಡೆಯುತ್ತಿದೆ. ಹೀಗಾಗಿ ಕಂಪ್ಲೀಟ್ ಕೆಲಸ ಆಗುವವರೆಗೂ ಕೆರೆಗೆ ಮಲಿನ ನೀರು ಸೇರುತ್ತಿದೆ. ಈ ಬಗ್ಗೆ ಚರ್ಚೆ ನಡೆಯುತ್ತಿದೆ. ಆದಷ್ಟು ಬೇಗ ಸರಿ ಮಾಡುವುದಾಗಿ ಹೇಳಿದ್ದಾರೆ.

ಒಟ್ಟಿನಲ್ಲಿ ಬೆಂಗಳೂರಿನಲ್ಲಿರುವ ಕೆರೆಗಳು ಕಲುಷಿತ ಆಗಿ ಜಲಚರ ಜೀವಿಗಳು ವಾಸ ಮಾಡದ ಸ್ಥಿತಿಗೆ ಬಂದಿವೆ‌. ಸರ್ಕಾರ ಮತ್ತು ಬಿಬಿಎಂಪಿ, ಬಿಡಿಎ ಕಲುಷಿತ ಆಗದಂತೆ ತಡೆಗಟ್ಟಿ ಕೆರೆ ಸಂರಕ್ಷಣೆಗೆ ಮುಂದಾಗುತ್ತಾ ಕಾದು ನೋಡಬೇಕಿದೆ.

ಬೆಂಗಳೂರಿಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 3:10 pm, Wed, 13 December 23

ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ