AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಣೇಶ ಹಬ್ಬದ ಬಳಿಕ ಮತ್ತಷ್ಟು ಕಲುಷಿತಗೊಂಡ ಬೆಂಗಳೂರು ಕೆರೆಗಳು, ಪರಿಸರ ಪ್ರೇಮಿಗಳ ಆಕ್ರೋಶ

ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಮೂವತ್ತಕ್ಕೂ ಹೆಚ್ಚು ಕೆರೆಗಳ ನೀರಿನ ಪ್ರಯೋಗ ನಡೆಸಿದ್ದು, ಕೆರೆಯಲ್ಲಿ ಗಣನೀಯವಾಗಿ ಕೆಮಿಕಲ್ ಸೇರಿ ನೀರಿನಲ್ಲಿ ಅಪಾಯಕಾರಿ ಅಂಶಗಳು ಪತ್ತೆಯಾಗಿವೆ. ನಿಷೇಧ ಹೇರಿದ್ದರೂ ನಗರದ ಬಹುತೇಕ ಕಡೆಗಳಲ್ಲಿ ಪ್ಲಾಸ್ಟರ್ ಆಪ್ ಪ್ಯಾರೀಸ್ ಗಣೇಶ್ ಮೂರ್ತಿಗಳನ್ನ ಕೆರೆಗಳಲ್ಲಿ ವಿಸರ್ಜನೆ ಮಾಡಲಾಗಿದೆ. ಈ ಪರಿಣಾಮ ಕೆರೆಗಳು ಕಲುಷಿತಗೊಂಡಿದ್ದು ಪರಿಸರ ಪ್ರೇಮಿಗಳ ಆಕ್ರೋಶಕ್ಕೆ ಕಾರಣವಾಗಿದೆ.

ಗಣೇಶ ಹಬ್ಬದ ಬಳಿಕ ಮತ್ತಷ್ಟು ಕಲುಷಿತಗೊಂಡ ಬೆಂಗಳೂರು ಕೆರೆಗಳು, ಪರಿಸರ ಪ್ರೇಮಿಗಳ ಆಕ್ರೋಶ
ಗಣೇಶ ಹಬ್ಬದ ಬಳಿಕ ಮತ್ತಷ್ಟು ಕಲುಷಿತಗೊಂಡ ಬೆಂಗಳೂರು ಕೆರೆಗಳು
Vinayak Hanamant Gurav
| Edited By: |

Updated on: Nov 24, 2023 | 2:32 PM

Share

ಬೆಂಗಳೂರು, ನ.24: ಸುಪ್ರೀಂ ಕೋರ್ಟ್ ಆದೇಶದಂತೆ ಗಣೇಶ ಹಬ್ಬಕ್ಕೆ (Ganesha Festival)  ಪರಿಸರ ಸ್ನೇಹಿಯಾಗಿ ಹಬ್ಬ ಆಚರಣೆ ಮಾಡಲು ಬಿಬಿಎಂಪಿ (BBMP) ಸಾರ್ವಜನಿಕರಿಗೆ ಸಲಹೆ ನೀಡಿ ಪಾಲಿಕೆ ವ್ಯಾಪ್ತಿಯಲ್ಲಿ ರಾಸಾಯನಿಕ ಬಣ್ಣಗಳು, ಥರ್ಮಕೊಲ್ ಹಾಗೂ ಪ್ಲಾಸ್ಟರ್ ಆಫ್ ಪ್ಯಾರೀಸ್ ಗಣೇಶ ಮೂರ್ತಿ ತಯಾರಿಕೆಗೆ ನಿಷೇಧ ಹೇರಿತ್ತು. ಆದರೆ ನಗರದ ಬಹುತೇಕ ಕಡೆಗಳಲ್ಲಿ ಪ್ಲಾಸ್ಟರ್ ಆಪ್ ಪ್ಯಾರೀಸ್ ಗಣೇಶ್ ಮೂರ್ತಿಗಳನ್ನ ಆಡಳಿತ ಮಂಡಳಿಯವರು ಕೂಡಿಸಿ ಗಣೇಶ ವಿಸರ್ಜನೆಗೆ ಪಾಲಿಕೆ ಗುರುತಿಸಿದ ಕೆರೆಗಳಲ್ಲಿ (Bengaluru Lakes) ಕೆಮಿಕಲ್‌ಯುಕ್ತ ಪ್ಲಾಸ್ಟರ್ ಗಣೇಶ ವಿಸರ್ಜನೆ ಮಾಡಿದ ಪರಿಣಾಮ ಕೆರೆಗಳು ಕಲುಷಿತಗೊಂಡಿರುವುದು ಪರಿಸರ ಪ್ರೇಮಿಗಳ ಆಕ್ರೋಶಕ್ಕೆ ಕಾರಣವಾಗಿದೆ.

ಪ್ರತಿ ವರ್ಷದಂತೆ ಈ ವರ್ಷ ಗಣೇಶೋತ್ಸವ ಸಂಭ್ರಮ ಸಡಗರದಿಂದ ಆಚರಣೆ ಮಾಡಿದ್ದಾರೆ. ಗಣೇಶ ಮೂರ್ತಿ ವಿಸರ್ಜನೆಗೆ ಬೆಂಗಳೂರು ನಗರದ ಕೆರೆಯಲ್ಲಿ ಬಿಬಿಎಂಪಿ ವತಿಯಿಂದ ಗಣೇಶ ಮೂರ್ತಿ ವಿಸರ್ಜನೆಗೆ ಅವಕಾಶ ಮಾಡಿಕೊಡಲಾಗಿತ್ತು. ಅಲ್ಲದೇ ಸುಪ್ರೀಂ ಕೋರ್ಟ್ ಕೆಮಿಕಲ್ ಯುಕ್ತ ಗಣೇಶ ಮೂರ್ತಿ ಮಾರಾಟ ಹಾಗೂ ಕೆರೆಯಲ್ಲಿ ವಿಸರ್ಜನೆಗೊಳಿಸದಂತೆ ಆದೇಶ ನೀಡಿತ್ತು. ಆದರೆ ಈ ಬಗ್ಗೆ ಬಿಬಿಎಂಪಿ ನಿರ್ಲಕ್ಷದಿಂದ ಕೆಮಿಕಲ್ ಯುಕ್ತ ಪ್ಲಾಸ್ಟರ್ ಆಫ್ ಪ್ಯಾರಿಸ್ ಗಣೇಶಗಳು ವಿಸರ್ಜನೆ ಮಾಡಲಾಗಿದೆ. ಹೀಗಾಗಿ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಮೂವತ್ತಕ್ಕೂ ಹೆಚ್ಚು ಕೆರೆಗಳ ನೀರಿನ ಪ್ರಯೋಗ ನಡೆಸಿದ್ದು, ಕೆರೆಯಲ್ಲಿ ಗಣನೀಯವಾಗಿ ಕೆಮಿಕಲ್ ಸೇರಿ ನೀರಿನಲ್ಲಿ ಅಪಾಯಕಾರಿ ಅಂಶಗಳು ಪತ್ತೆಯಾಗಿವೆ.

ಇದನ್ನೂ ಓದಿ: ದೇಶದಲ್ಲಿ ಮೊದಲ ಬಾರಿಗೆ ಬೆಂಗಳೂರಿನಲ್ಲಿ ಕಮಾಂಡ್ ಸೆಂಟರ್ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ, ಇದರ ವಿಶೇಷತೆಗಳೇನು?

ಇನ್ನೂ ನಗರದಲ್ಲಿ ಆಡಳಿತ ಮಂಡಳಿಯವರು ಹಾಗೂ ಮನೆಯಲ್ಲಿ ಕೂಡಿಸಿದ ಗಣೇಶ ಮೂರ್ತಿ ವಿಸರ್ಜನೆಗೆ ಸ್ಯಾಂಕಿ ಕೆರೆ, ಹಲಸೂರು ಕೆರೆ, ಯಡಿಯೂರು ಕೆರೆ, ಹೆಬ್ಬಾಳ ಕೆರೆ ಹಾಗೂ ಇತರೆ ಪ್ರಮುಖ ಕೆರೆ,ಕಲ್ಯಾಣಿಗಳಲ್ಲಿ ಗಣೇಶ ಮೂರ್ತಿಗಳ ವಿಸರ್ಜನೆ ಮಾಡಿದ್ದಾರೆ. ಈ ಪರಿಣಾಮ ಸತು, ಸೀಸ ಮತ್ತು ತಾಮ್ರದಂತಹ ಭಾರೀ ಲೋಹಗಳಿಂದಾಗಿ‌ ನೀರಿನಲ್ಲಿ ಗಡಸುತನ ಹೆಚ್ಚಾಗಿದೆ. ಈ ಮೊದಲೆ ಸುಪ್ರೀಂ ಕೋರ್ಟ್ ಮಾರ್ಗಸೂಚಿ ಇದ್ರು ಕೆಮಿಕಲ್ ಯುಕ್ತ ಗಣೇಶ ವಿಸರ್ಜನೆಗೆ ಅವಕಾಶ ನೀಡಿದೆ. ಇದಕ್ಕೆ ಬಿಬಿಎಂಪಿಯೇ ನೇರ ಹೊಣೆ ಅಂತ ಬಿಬಿಎಂಪಿ ವಿರುದ್ಧ ಪರಿಸರ ಪ್ರೇಮಿಗಳು ಆಕ್ರೋಶ ಹೊರಹಾಕುತ್ತಿದ್ದಾರೆ.

ಒಟ್ಟಿನಲ್ಲಿ ಕೆಮಿಕಲ್‌ಯುಕ್ತ ಗಣೇಶ ಮೂರ್ತಿಗಳು ಕೆರೆ ಸೇರಿದ್ದರಿಂದಾಗಿ ಪರಿಸರದ ಮೇಲೆ‌ ಅಡ್ಡ ಪರಿಣಾಮವಾಗಿದೆ. ಮುಂದಿನ ದಿನಗಳಲ್ಲಿ ಈ ರೀತಿ ಕೆಮಿಕಲ್ ಯುಕ್ತ ಬಣ್ಣ ಬಳಕೆಯ ಗಣೇಶ ಮೂರ್ತಿ ವಿಸರ್ಜನೆಯಾಗದಂತೆ ಕೇವಲ ಪರಿಸರ ಸ್ನೇಹಿಯಾದ ಗಣೇಶ ವಿಸರ್ಜನೆಗೆ ಅವಕಾಶ ಮಾಡಿಕೊಟ್ಟರೆ ಮಾತ್ರ ಕೆರೆ ಹಾಗೂ ಪರಿಸರವನ್ನ ಉಳಿಸಿಕೊಳ್ಳಬಹುದು ಎನ್ನುವುದು ಪರಿಸರ ಪ್ರೇಮಿಗಳ ಅಭಿಪ್ರಾಯವಾಗಿದೆ. ಈ ಬಗ್ಗೆ ಅಧಿಕಾರಿಗಳನ್ನ ಸಂಪರ್ಕಿಸಿದರೆ ಯಾರೊಬ್ಬರು ಕರೆ ಕೂಡ ಸ್ವೀಕರಿಸುತ್ತಿಲ್ಲ. ಮುಂದಿನ ಬಾರಿ ಗಣೇಶ ಹಬ್ಬಕ್ಕಾದರು ಸಂಬಂಧಪಟ್ಟ ಬಿಬಿಎಂಪಿ, ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳು ಎಚ್ಚೆತ್ತುಕೊಂಡು ಕೆರೆ ಕಲುಷಿತ ಆಗದಂತೆ ಬ್ರೇಕ್ ಹಾಕಲು ಮುಂದಾಗುತ್ತಾರಾ ಇಲ್ವಾ ಕಾದು ನೋಡಬೇಕಿದೆ.

ಬೆಂಗಳೂರಿಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ