AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಣೇಶ ಹಬ್ಬದ ಬಳಿಕ ಮತ್ತಷ್ಟು ಕಲುಷಿತಗೊಂಡ ಬೆಂಗಳೂರು ಕೆರೆಗಳು, ಪರಿಸರ ಪ್ರೇಮಿಗಳ ಆಕ್ರೋಶ

ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಮೂವತ್ತಕ್ಕೂ ಹೆಚ್ಚು ಕೆರೆಗಳ ನೀರಿನ ಪ್ರಯೋಗ ನಡೆಸಿದ್ದು, ಕೆರೆಯಲ್ಲಿ ಗಣನೀಯವಾಗಿ ಕೆಮಿಕಲ್ ಸೇರಿ ನೀರಿನಲ್ಲಿ ಅಪಾಯಕಾರಿ ಅಂಶಗಳು ಪತ್ತೆಯಾಗಿವೆ. ನಿಷೇಧ ಹೇರಿದ್ದರೂ ನಗರದ ಬಹುತೇಕ ಕಡೆಗಳಲ್ಲಿ ಪ್ಲಾಸ್ಟರ್ ಆಪ್ ಪ್ಯಾರೀಸ್ ಗಣೇಶ್ ಮೂರ್ತಿಗಳನ್ನ ಕೆರೆಗಳಲ್ಲಿ ವಿಸರ್ಜನೆ ಮಾಡಲಾಗಿದೆ. ಈ ಪರಿಣಾಮ ಕೆರೆಗಳು ಕಲುಷಿತಗೊಂಡಿದ್ದು ಪರಿಸರ ಪ್ರೇಮಿಗಳ ಆಕ್ರೋಶಕ್ಕೆ ಕಾರಣವಾಗಿದೆ.

ಗಣೇಶ ಹಬ್ಬದ ಬಳಿಕ ಮತ್ತಷ್ಟು ಕಲುಷಿತಗೊಂಡ ಬೆಂಗಳೂರು ಕೆರೆಗಳು, ಪರಿಸರ ಪ್ರೇಮಿಗಳ ಆಕ್ರೋಶ
ಗಣೇಶ ಹಬ್ಬದ ಬಳಿಕ ಮತ್ತಷ್ಟು ಕಲುಷಿತಗೊಂಡ ಬೆಂಗಳೂರು ಕೆರೆಗಳು
Vinayak Hanamant Gurav
| Edited By: |

Updated on: Nov 24, 2023 | 2:32 PM

Share

ಬೆಂಗಳೂರು, ನ.24: ಸುಪ್ರೀಂ ಕೋರ್ಟ್ ಆದೇಶದಂತೆ ಗಣೇಶ ಹಬ್ಬಕ್ಕೆ (Ganesha Festival)  ಪರಿಸರ ಸ್ನೇಹಿಯಾಗಿ ಹಬ್ಬ ಆಚರಣೆ ಮಾಡಲು ಬಿಬಿಎಂಪಿ (BBMP) ಸಾರ್ವಜನಿಕರಿಗೆ ಸಲಹೆ ನೀಡಿ ಪಾಲಿಕೆ ವ್ಯಾಪ್ತಿಯಲ್ಲಿ ರಾಸಾಯನಿಕ ಬಣ್ಣಗಳು, ಥರ್ಮಕೊಲ್ ಹಾಗೂ ಪ್ಲಾಸ್ಟರ್ ಆಫ್ ಪ್ಯಾರೀಸ್ ಗಣೇಶ ಮೂರ್ತಿ ತಯಾರಿಕೆಗೆ ನಿಷೇಧ ಹೇರಿತ್ತು. ಆದರೆ ನಗರದ ಬಹುತೇಕ ಕಡೆಗಳಲ್ಲಿ ಪ್ಲಾಸ್ಟರ್ ಆಪ್ ಪ್ಯಾರೀಸ್ ಗಣೇಶ್ ಮೂರ್ತಿಗಳನ್ನ ಆಡಳಿತ ಮಂಡಳಿಯವರು ಕೂಡಿಸಿ ಗಣೇಶ ವಿಸರ್ಜನೆಗೆ ಪಾಲಿಕೆ ಗುರುತಿಸಿದ ಕೆರೆಗಳಲ್ಲಿ (Bengaluru Lakes) ಕೆಮಿಕಲ್‌ಯುಕ್ತ ಪ್ಲಾಸ್ಟರ್ ಗಣೇಶ ವಿಸರ್ಜನೆ ಮಾಡಿದ ಪರಿಣಾಮ ಕೆರೆಗಳು ಕಲುಷಿತಗೊಂಡಿರುವುದು ಪರಿಸರ ಪ್ರೇಮಿಗಳ ಆಕ್ರೋಶಕ್ಕೆ ಕಾರಣವಾಗಿದೆ.

ಪ್ರತಿ ವರ್ಷದಂತೆ ಈ ವರ್ಷ ಗಣೇಶೋತ್ಸವ ಸಂಭ್ರಮ ಸಡಗರದಿಂದ ಆಚರಣೆ ಮಾಡಿದ್ದಾರೆ. ಗಣೇಶ ಮೂರ್ತಿ ವಿಸರ್ಜನೆಗೆ ಬೆಂಗಳೂರು ನಗರದ ಕೆರೆಯಲ್ಲಿ ಬಿಬಿಎಂಪಿ ವತಿಯಿಂದ ಗಣೇಶ ಮೂರ್ತಿ ವಿಸರ್ಜನೆಗೆ ಅವಕಾಶ ಮಾಡಿಕೊಡಲಾಗಿತ್ತು. ಅಲ್ಲದೇ ಸುಪ್ರೀಂ ಕೋರ್ಟ್ ಕೆಮಿಕಲ್ ಯುಕ್ತ ಗಣೇಶ ಮೂರ್ತಿ ಮಾರಾಟ ಹಾಗೂ ಕೆರೆಯಲ್ಲಿ ವಿಸರ್ಜನೆಗೊಳಿಸದಂತೆ ಆದೇಶ ನೀಡಿತ್ತು. ಆದರೆ ಈ ಬಗ್ಗೆ ಬಿಬಿಎಂಪಿ ನಿರ್ಲಕ್ಷದಿಂದ ಕೆಮಿಕಲ್ ಯುಕ್ತ ಪ್ಲಾಸ್ಟರ್ ಆಫ್ ಪ್ಯಾರಿಸ್ ಗಣೇಶಗಳು ವಿಸರ್ಜನೆ ಮಾಡಲಾಗಿದೆ. ಹೀಗಾಗಿ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಮೂವತ್ತಕ್ಕೂ ಹೆಚ್ಚು ಕೆರೆಗಳ ನೀರಿನ ಪ್ರಯೋಗ ನಡೆಸಿದ್ದು, ಕೆರೆಯಲ್ಲಿ ಗಣನೀಯವಾಗಿ ಕೆಮಿಕಲ್ ಸೇರಿ ನೀರಿನಲ್ಲಿ ಅಪಾಯಕಾರಿ ಅಂಶಗಳು ಪತ್ತೆಯಾಗಿವೆ.

ಇದನ್ನೂ ಓದಿ: ದೇಶದಲ್ಲಿ ಮೊದಲ ಬಾರಿಗೆ ಬೆಂಗಳೂರಿನಲ್ಲಿ ಕಮಾಂಡ್ ಸೆಂಟರ್ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ, ಇದರ ವಿಶೇಷತೆಗಳೇನು?

ಇನ್ನೂ ನಗರದಲ್ಲಿ ಆಡಳಿತ ಮಂಡಳಿಯವರು ಹಾಗೂ ಮನೆಯಲ್ಲಿ ಕೂಡಿಸಿದ ಗಣೇಶ ಮೂರ್ತಿ ವಿಸರ್ಜನೆಗೆ ಸ್ಯಾಂಕಿ ಕೆರೆ, ಹಲಸೂರು ಕೆರೆ, ಯಡಿಯೂರು ಕೆರೆ, ಹೆಬ್ಬಾಳ ಕೆರೆ ಹಾಗೂ ಇತರೆ ಪ್ರಮುಖ ಕೆರೆ,ಕಲ್ಯಾಣಿಗಳಲ್ಲಿ ಗಣೇಶ ಮೂರ್ತಿಗಳ ವಿಸರ್ಜನೆ ಮಾಡಿದ್ದಾರೆ. ಈ ಪರಿಣಾಮ ಸತು, ಸೀಸ ಮತ್ತು ತಾಮ್ರದಂತಹ ಭಾರೀ ಲೋಹಗಳಿಂದಾಗಿ‌ ನೀರಿನಲ್ಲಿ ಗಡಸುತನ ಹೆಚ್ಚಾಗಿದೆ. ಈ ಮೊದಲೆ ಸುಪ್ರೀಂ ಕೋರ್ಟ್ ಮಾರ್ಗಸೂಚಿ ಇದ್ರು ಕೆಮಿಕಲ್ ಯುಕ್ತ ಗಣೇಶ ವಿಸರ್ಜನೆಗೆ ಅವಕಾಶ ನೀಡಿದೆ. ಇದಕ್ಕೆ ಬಿಬಿಎಂಪಿಯೇ ನೇರ ಹೊಣೆ ಅಂತ ಬಿಬಿಎಂಪಿ ವಿರುದ್ಧ ಪರಿಸರ ಪ್ರೇಮಿಗಳು ಆಕ್ರೋಶ ಹೊರಹಾಕುತ್ತಿದ್ದಾರೆ.

ಒಟ್ಟಿನಲ್ಲಿ ಕೆಮಿಕಲ್‌ಯುಕ್ತ ಗಣೇಶ ಮೂರ್ತಿಗಳು ಕೆರೆ ಸೇರಿದ್ದರಿಂದಾಗಿ ಪರಿಸರದ ಮೇಲೆ‌ ಅಡ್ಡ ಪರಿಣಾಮವಾಗಿದೆ. ಮುಂದಿನ ದಿನಗಳಲ್ಲಿ ಈ ರೀತಿ ಕೆಮಿಕಲ್ ಯುಕ್ತ ಬಣ್ಣ ಬಳಕೆಯ ಗಣೇಶ ಮೂರ್ತಿ ವಿಸರ್ಜನೆಯಾಗದಂತೆ ಕೇವಲ ಪರಿಸರ ಸ್ನೇಹಿಯಾದ ಗಣೇಶ ವಿಸರ್ಜನೆಗೆ ಅವಕಾಶ ಮಾಡಿಕೊಟ್ಟರೆ ಮಾತ್ರ ಕೆರೆ ಹಾಗೂ ಪರಿಸರವನ್ನ ಉಳಿಸಿಕೊಳ್ಳಬಹುದು ಎನ್ನುವುದು ಪರಿಸರ ಪ್ರೇಮಿಗಳ ಅಭಿಪ್ರಾಯವಾಗಿದೆ. ಈ ಬಗ್ಗೆ ಅಧಿಕಾರಿಗಳನ್ನ ಸಂಪರ್ಕಿಸಿದರೆ ಯಾರೊಬ್ಬರು ಕರೆ ಕೂಡ ಸ್ವೀಕರಿಸುತ್ತಿಲ್ಲ. ಮುಂದಿನ ಬಾರಿ ಗಣೇಶ ಹಬ್ಬಕ್ಕಾದರು ಸಂಬಂಧಪಟ್ಟ ಬಿಬಿಎಂಪಿ, ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳು ಎಚ್ಚೆತ್ತುಕೊಂಡು ಕೆರೆ ಕಲುಷಿತ ಆಗದಂತೆ ಬ್ರೇಕ್ ಹಾಕಲು ಮುಂದಾಗುತ್ತಾರಾ ಇಲ್ವಾ ಕಾದು ನೋಡಬೇಕಿದೆ.

ಬೆಂಗಳೂರಿಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್