AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ​ಲಾಲ್​ ಬಾಗ್​ ಆಯ್ತು, ಬಾಲ ಭವನ ಪ್ರವೇಶ ಶುಲ್ಕ ಏರಿಸಲು ಚಿಂತನೆ

ಬೆಂಗಳೂರಿನ ಬಾಲ ಭವನದ ಪ್ರವೇಶ ಶುಲ್ಕ ಏರಿಕೆಯಾಗುವ ಸಾಧ್ಯತೆ ಇದೆ. ಈಗಾಗಲೇ ಲಾಲ್‌ ಬಾಗ್‌ನ ಪ್ರವೇಶ ಶುಲ್ಕ ಏರಿಕೆಯಾಗಿರುವುದರಿಂದ, ಬಾಲ ಭವನದ ಶುಲ್ಕ ಏರಿಕೆ ಸರಿಯಲ್ಲ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸುದ್ದಾರೆ . ವಯಸ್ಕರ ಟಿಕೆಟ್ ದರ 10-20 ರೂಪಾಯಿಗಳಷ್ಟು ಏರಿಸಲು ಯೋಜಿಸಲಾಗಿದೆ.

ಬೆಂಗಳೂರು: ​ಲಾಲ್​ ಬಾಗ್​ ಆಯ್ತು, ಬಾಲ ಭವನ ಪ್ರವೇಶ ಶುಲ್ಕ ಏರಿಸಲು ಚಿಂತನೆ
ಬಾಲ ಭವನ
Follow us
Poornima Agali Nagaraj
| Updated By: ವಿವೇಕ ಬಿರಾದಾರ

Updated on:Nov 13, 2024 | 11:05 AM

ಬೆಂಗಳೂರು, ನವೆಂಬರ್​ 13: ಕಬ್ಬನ್​ ಪಾರ್ಕ್​​ಗೆ (Lal Bagh) ನಿತ್ಯ ನೂರಾರು ಜನರು ಭೇಟಿ ನೀಡುತ್ತಾರೆ. ಅದರಲ್ಲಂತೂ ವಾರಾಂತ್ಯದಲ್ಲಿ ಸಾವಿರಾರು ಜನರು ಭೇಟಿ ನೀಡಿ, ಪ್ರಕೃತಿಯ ಅಂದವನ್ನು ಆನಂದಿಸುತ್ತಾರೆ. ಕಬ್ಬನ್​ ಪಾರ್ಕ್​ನಲ್ಲಿರುವ ಇದೀಗ ಬಾಲ ಭವನ ಪ್ರವೇಶ ಶುಲ್ಕ ಹೆಚ್ಚಳಕ್ಕೆ ತೆರೆಮರೆಯಲ್ಲಿ ಸಿದ್ದತೆ ನಡೆಯುತ್ತಿದೆ.

​ಕಳೆದ ಹಲವು ವರ್ಷಗಳಿಂದ ಟಿಕೆಟ್ ದರ ಏರಿಕೆ ಮಾಡಿಲ್ಲ. ಹೀಗಾಗಿ, ಈ ವರ್ಷ ಟಿಕೆಟ್ ದರ ಏರಿಸಲು ಬಾಲ ಭವನ ಅಧಿಕಾರಿಗಳು ಚಿಂತನೆ ನಡೆಸಿದ್ದಾರೆ. ಬಾಲ ಭವನ ಪ್ರವೇಶಕ್ಕೆ ಮಕ್ಕಳಿಗೆ 20 ರೂ. ವಯಸ್ಕರಿಗೆ 30 ರೂ. ಟಿಕೆಟ್ ದರ ನಿಗದಿ ಮಾಡಲಾಗಿದೆ. ಇದೀಗ, ವಯಸ್ಕರಿಗೆ 10 ರಿಂದ 20 ರುಪಾಯಿ ಏರಿಕೆ ಮಾಡಲು ಚಿಂತನೆ‌ ನಡೆದಿದೆ.

ಬಾಲ ಭವನದಲ್ಲಿ ಮಕ್ಕಳಿಗೆಂದೇ ವಿಶೇಷ ಆಟಿಕೆ ವಸ್ತುಗಳಿವೆ. ಈ ಆಟಿಕೆಯ ವಸ್ತುಗಳ ನಿರ್ಹವಣೆಯ ಸಲುವಾಗಿ ಟಿಕಟ್​ ದರ ಏರಿಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸದ್ಯದರಲ್ಲೇ ರಾಜ್ಯದ ಎಲ್ಲ ಬಾಲ ಭವನಗಳ ಪ್ರವೇಶ ಶುಲ್ಕ ಏರಿಕೆಯಾಗುವ ಸಾಧ್ಯತೆ ಇದೆ.

ಈಗಾಗಲೇ ಲಾಲ್ ಬಾಗ್​ ಒಳಗೆ ಪ್ರವೇಶ ಶುಲ್ಕ ಜಾಸ್ತಿ ಮಾಡಲಾಗಿದೆ. ಇದೀಗ ಬಾಲ ಭವನ ಪ್ರವೇಶ ಶುಲ್ಕ ಏರಿಸಲು ಮುಂದಾಗುತ್ತಿರುವುದು ಸರಿಯಲ್ಲ. ಸರ್ಕಾರ ಈಗಾಗಲೇ ಎಲ್ಲ ಬೆಲೆ ಏರಿಕೆ ಮಾಡಿ ಹಣ ಹೊಡೆಯುತ್ತಿದೆ. ಪ್ರವೇಶ ಶುಲ್ಕ ಕಡಿಮೆ ಮಾಡಿದರೆ ಪರವಾಗಿಲ್ಲ. ಆದರೆ, ಜಾಸ್ತಿ ಮಾಡಿದರೆ ಪ್ರತಿಭಟನೆ ಮಾಡುತ್ತೇವೆ ಎಂದು ಕಬ್ಬನ್​ ಪಾರ್ಕ್​ ವಾಕರ್ ಅಸೋಸಿಯೇಷನ್ ಎಚ್ಚರಿಕೆ ನೀಡಿದೆ.

ಇನ್ನು, ನವೆಂಬರ್​ 14 ಮಕ್ಕಳ ದಿನಾಚರಣೆ ಹಿನ್ನೆಲೆಯಲ್ಲಿ ಸರ್ಕಾರ ಮೂರು ದಿನ ವಿಶೇಷ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಈ ಹೊತ್ತಿನಲ್ಲೇ ಪ್ರವೇಶ ಶುಲ್ಕ ಏರಿಕೆ ಮಾಡಲು ಮುಂದಾಗಿದ್ದು, ಸರಿಯಲ್ಲ ಎಂದು ಸಾರ್ವಜನಿಕರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಕರ್ನಾಟಕದ  ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 10:52 am, Wed, 13 November 24

‘ಕಿತ್ಗೊಂಡು ತಿನ್ನುವವರಿಗೆ ಹೊಟ್ಟೆ ತುಂಬಲ್ಲ’; ಹಾಡು ಹೇಳಿದ ಸಾಧು ಕೋಕಿಲ
‘ಕಿತ್ಗೊಂಡು ತಿನ್ನುವವರಿಗೆ ಹೊಟ್ಟೆ ತುಂಬಲ್ಲ’; ಹಾಡು ಹೇಳಿದ ಸಾಧು ಕೋಕಿಲ
ಕಾರ್ಯಕ್ರಮದಲ್ಲಿ ಸಚಿವ ವೆಂಕಟೇಶ್​ರನ್ನು ವಿಶೇಷವಾಗಿ ಹೊಗಳಿದ ಸಿದ್ದರಾಮಯ್ಯ
ಕಾರ್ಯಕ್ರಮದಲ್ಲಿ ಸಚಿವ ವೆಂಕಟೇಶ್​ರನ್ನು ವಿಶೇಷವಾಗಿ ಹೊಗಳಿದ ಸಿದ್ದರಾಮಯ್ಯ
ಅಮಿತ್ ಶಾ ಆದೇಶ ಕೇಳಿ ಪಾಕಿಸ್ತಾನಿ ಮಹಿಳೆಯ ಅತ್ತೆಗೆ ಹೃದಯಾಘಾತ
ಅಮಿತ್ ಶಾ ಆದೇಶ ಕೇಳಿ ಪಾಕಿಸ್ತಾನಿ ಮಹಿಳೆಯ ಅತ್ತೆಗೆ ಹೃದಯಾಘಾತ
‘ಅವರು ಹೇಡಿಗಳು, ಗಂಡಸ್ತನ ಇದ್ರೆ ಸೈನಿಕರ ವಿರುದ್ಧ ಹೋರಾಡಲಿ’; ಚಂದನ್ ಶೆಟ್ಟ
‘ಅವರು ಹೇಡಿಗಳು, ಗಂಡಸ್ತನ ಇದ್ರೆ ಸೈನಿಕರ ವಿರುದ್ಧ ಹೋರಾಡಲಿ’; ಚಂದನ್ ಶೆಟ್ಟ
ಬರವಣಿಗೆ ನನ್ನ ಶಕ್ತಿಯಾಗಿತ್ತು ಎನ್ನುತ್ತಾರೆ 425 ನೇ ರ‍್ಯಾಂಕ್ ಪಡೆದ ಮೇಘನಾ
ಬರವಣಿಗೆ ನನ್ನ ಶಕ್ತಿಯಾಗಿತ್ತು ಎನ್ನುತ್ತಾರೆ 425 ನೇ ರ‍್ಯಾಂಕ್ ಪಡೆದ ಮೇಘನಾ
ಇಂದಿನಿಂದ ಹುಬ್ಬಳ್ಳಿಯಲ್ಲಿ ಆರಂಭವಾಗಿರುವ 2-ದಿನದ ಎಜುಕೇಶನ್ ಎಕ್ಸ್​ಪೋ
ಇಂದಿನಿಂದ ಹುಬ್ಬಳ್ಳಿಯಲ್ಲಿ ಆರಂಭವಾಗಿರುವ 2-ದಿನದ ಎಜುಕೇಶನ್ ಎಕ್ಸ್​ಪೋ
ಯುದ್ಧದ ಬಗ್ಗೆ ಸಿಎಂ ಸಿದ್ದರಾಮಯ್ಯ ಏನು ಹೇಳಿದ್ದಾರೆ ಗೊತ್ತಿಲ್ಲ: ಲಕ್ಷ್ಮಿ
ಯುದ್ಧದ ಬಗ್ಗೆ ಸಿಎಂ ಸಿದ್ದರಾಮಯ್ಯ ಏನು ಹೇಳಿದ್ದಾರೆ ಗೊತ್ತಿಲ್ಲ: ಲಕ್ಷ್ಮಿ
ಕೋಲಾರದಲ್ಲಿ ಜನಪದ ಗಾಯಕನಿಂದ ನಿರ್ಮಾಣವಾದ ಹೈಟೆಕ್ ​ಬಸ್ ನಿಲ್ದಾಣ
ಕೋಲಾರದಲ್ಲಿ ಜನಪದ ಗಾಯಕನಿಂದ ನಿರ್ಮಾಣವಾದ ಹೈಟೆಕ್ ​ಬಸ್ ನಿಲ್ದಾಣ
ಪಾಕಿಸ್ತಾನಕ್ಕೆ ಅದರದ್ದೇ ಭಾಷೆಯಲ್ಲಿ ಉತ್ತರ ಕೊಡಬೇಕು: ಧ್ರುವ ಸರ್ಜಾ
ಪಾಕಿಸ್ತಾನಕ್ಕೆ ಅದರದ್ದೇ ಭಾಷೆಯಲ್ಲಿ ಉತ್ತರ ಕೊಡಬೇಕು: ಧ್ರುವ ಸರ್ಜಾ
ಪಾಕಿಸ್ತಾನಕ್ಕೆ ಉತ್ತರ ನೀಡುವ ಕೆಲಸ ವರಿಷ್ಠರು ಮಾಡುತ್ತಿದ್ದಾರೆ: ಯದುವೀರ್
ಪಾಕಿಸ್ತಾನಕ್ಕೆ ಉತ್ತರ ನೀಡುವ ಕೆಲಸ ವರಿಷ್ಠರು ಮಾಡುತ್ತಿದ್ದಾರೆ: ಯದುವೀರ್