AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ​ಲಾಲ್​ ಬಾಗ್​ ಆಯ್ತು, ಬಾಲ ಭವನ ಪ್ರವೇಶ ಶುಲ್ಕ ಏರಿಸಲು ಚಿಂತನೆ

ಬೆಂಗಳೂರಿನ ಬಾಲ ಭವನದ ಪ್ರವೇಶ ಶುಲ್ಕ ಏರಿಕೆಯಾಗುವ ಸಾಧ್ಯತೆ ಇದೆ. ಈಗಾಗಲೇ ಲಾಲ್‌ ಬಾಗ್‌ನ ಪ್ರವೇಶ ಶುಲ್ಕ ಏರಿಕೆಯಾಗಿರುವುದರಿಂದ, ಬಾಲ ಭವನದ ಶುಲ್ಕ ಏರಿಕೆ ಸರಿಯಲ್ಲ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸುದ್ದಾರೆ . ವಯಸ್ಕರ ಟಿಕೆಟ್ ದರ 10-20 ರೂಪಾಯಿಗಳಷ್ಟು ಏರಿಸಲು ಯೋಜಿಸಲಾಗಿದೆ.

ಬೆಂಗಳೂರು: ​ಲಾಲ್​ ಬಾಗ್​ ಆಯ್ತು, ಬಾಲ ಭವನ ಪ್ರವೇಶ ಶುಲ್ಕ ಏರಿಸಲು ಚಿಂತನೆ
ಬಾಲ ಭವನ
Poornima Agali Nagaraj
| Updated By: ವಿವೇಕ ಬಿರಾದಾರ|

Updated on:Nov 13, 2024 | 11:05 AM

Share

ಬೆಂಗಳೂರು, ನವೆಂಬರ್​ 13: ಕಬ್ಬನ್​ ಪಾರ್ಕ್​​ಗೆ (Lal Bagh) ನಿತ್ಯ ನೂರಾರು ಜನರು ಭೇಟಿ ನೀಡುತ್ತಾರೆ. ಅದರಲ್ಲಂತೂ ವಾರಾಂತ್ಯದಲ್ಲಿ ಸಾವಿರಾರು ಜನರು ಭೇಟಿ ನೀಡಿ, ಪ್ರಕೃತಿಯ ಅಂದವನ್ನು ಆನಂದಿಸುತ್ತಾರೆ. ಕಬ್ಬನ್​ ಪಾರ್ಕ್​ನಲ್ಲಿರುವ ಇದೀಗ ಬಾಲ ಭವನ ಪ್ರವೇಶ ಶುಲ್ಕ ಹೆಚ್ಚಳಕ್ಕೆ ತೆರೆಮರೆಯಲ್ಲಿ ಸಿದ್ದತೆ ನಡೆಯುತ್ತಿದೆ.

​ಕಳೆದ ಹಲವು ವರ್ಷಗಳಿಂದ ಟಿಕೆಟ್ ದರ ಏರಿಕೆ ಮಾಡಿಲ್ಲ. ಹೀಗಾಗಿ, ಈ ವರ್ಷ ಟಿಕೆಟ್ ದರ ಏರಿಸಲು ಬಾಲ ಭವನ ಅಧಿಕಾರಿಗಳು ಚಿಂತನೆ ನಡೆಸಿದ್ದಾರೆ. ಬಾಲ ಭವನ ಪ್ರವೇಶಕ್ಕೆ ಮಕ್ಕಳಿಗೆ 20 ರೂ. ವಯಸ್ಕರಿಗೆ 30 ರೂ. ಟಿಕೆಟ್ ದರ ನಿಗದಿ ಮಾಡಲಾಗಿದೆ. ಇದೀಗ, ವಯಸ್ಕರಿಗೆ 10 ರಿಂದ 20 ರುಪಾಯಿ ಏರಿಕೆ ಮಾಡಲು ಚಿಂತನೆ‌ ನಡೆದಿದೆ.

ಬಾಲ ಭವನದಲ್ಲಿ ಮಕ್ಕಳಿಗೆಂದೇ ವಿಶೇಷ ಆಟಿಕೆ ವಸ್ತುಗಳಿವೆ. ಈ ಆಟಿಕೆಯ ವಸ್ತುಗಳ ನಿರ್ಹವಣೆಯ ಸಲುವಾಗಿ ಟಿಕಟ್​ ದರ ಏರಿಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸದ್ಯದರಲ್ಲೇ ರಾಜ್ಯದ ಎಲ್ಲ ಬಾಲ ಭವನಗಳ ಪ್ರವೇಶ ಶುಲ್ಕ ಏರಿಕೆಯಾಗುವ ಸಾಧ್ಯತೆ ಇದೆ.

ಈಗಾಗಲೇ ಲಾಲ್ ಬಾಗ್​ ಒಳಗೆ ಪ್ರವೇಶ ಶುಲ್ಕ ಜಾಸ್ತಿ ಮಾಡಲಾಗಿದೆ. ಇದೀಗ ಬಾಲ ಭವನ ಪ್ರವೇಶ ಶುಲ್ಕ ಏರಿಸಲು ಮುಂದಾಗುತ್ತಿರುವುದು ಸರಿಯಲ್ಲ. ಸರ್ಕಾರ ಈಗಾಗಲೇ ಎಲ್ಲ ಬೆಲೆ ಏರಿಕೆ ಮಾಡಿ ಹಣ ಹೊಡೆಯುತ್ತಿದೆ. ಪ್ರವೇಶ ಶುಲ್ಕ ಕಡಿಮೆ ಮಾಡಿದರೆ ಪರವಾಗಿಲ್ಲ. ಆದರೆ, ಜಾಸ್ತಿ ಮಾಡಿದರೆ ಪ್ರತಿಭಟನೆ ಮಾಡುತ್ತೇವೆ ಎಂದು ಕಬ್ಬನ್​ ಪಾರ್ಕ್​ ವಾಕರ್ ಅಸೋಸಿಯೇಷನ್ ಎಚ್ಚರಿಕೆ ನೀಡಿದೆ.

ಇನ್ನು, ನವೆಂಬರ್​ 14 ಮಕ್ಕಳ ದಿನಾಚರಣೆ ಹಿನ್ನೆಲೆಯಲ್ಲಿ ಸರ್ಕಾರ ಮೂರು ದಿನ ವಿಶೇಷ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಈ ಹೊತ್ತಿನಲ್ಲೇ ಪ್ರವೇಶ ಶುಲ್ಕ ಏರಿಕೆ ಮಾಡಲು ಮುಂದಾಗಿದ್ದು, ಸರಿಯಲ್ಲ ಎಂದು ಸಾರ್ವಜನಿಕರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಕರ್ನಾಟಕದ  ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 10:52 am, Wed, 13 November 24

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ