AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ​ಲಾಲ್​ ಬಾಗ್​ ಆಯ್ತು, ಬಾಲ ಭವನ ಪ್ರವೇಶ ಶುಲ್ಕ ಏರಿಸಲು ಚಿಂತನೆ

ಬೆಂಗಳೂರಿನ ಬಾಲ ಭವನದ ಪ್ರವೇಶ ಶುಲ್ಕ ಏರಿಕೆಯಾಗುವ ಸಾಧ್ಯತೆ ಇದೆ. ಈಗಾಗಲೇ ಲಾಲ್‌ ಬಾಗ್‌ನ ಪ್ರವೇಶ ಶುಲ್ಕ ಏರಿಕೆಯಾಗಿರುವುದರಿಂದ, ಬಾಲ ಭವನದ ಶುಲ್ಕ ಏರಿಕೆ ಸರಿಯಲ್ಲ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸುದ್ದಾರೆ . ವಯಸ್ಕರ ಟಿಕೆಟ್ ದರ 10-20 ರೂಪಾಯಿಗಳಷ್ಟು ಏರಿಸಲು ಯೋಜಿಸಲಾಗಿದೆ.

ಬೆಂಗಳೂರು: ​ಲಾಲ್​ ಬಾಗ್​ ಆಯ್ತು, ಬಾಲ ಭವನ ಪ್ರವೇಶ ಶುಲ್ಕ ಏರಿಸಲು ಚಿಂತನೆ
ಬಾಲ ಭವನ
Poornima Agali Nagaraj
| Edited By: |

Updated on:Nov 13, 2024 | 11:05 AM

Share

ಬೆಂಗಳೂರು, ನವೆಂಬರ್​ 13: ಕಬ್ಬನ್​ ಪಾರ್ಕ್​​ಗೆ (Lal Bagh) ನಿತ್ಯ ನೂರಾರು ಜನರು ಭೇಟಿ ನೀಡುತ್ತಾರೆ. ಅದರಲ್ಲಂತೂ ವಾರಾಂತ್ಯದಲ್ಲಿ ಸಾವಿರಾರು ಜನರು ಭೇಟಿ ನೀಡಿ, ಪ್ರಕೃತಿಯ ಅಂದವನ್ನು ಆನಂದಿಸುತ್ತಾರೆ. ಕಬ್ಬನ್​ ಪಾರ್ಕ್​ನಲ್ಲಿರುವ ಇದೀಗ ಬಾಲ ಭವನ ಪ್ರವೇಶ ಶುಲ್ಕ ಹೆಚ್ಚಳಕ್ಕೆ ತೆರೆಮರೆಯಲ್ಲಿ ಸಿದ್ದತೆ ನಡೆಯುತ್ತಿದೆ.

​ಕಳೆದ ಹಲವು ವರ್ಷಗಳಿಂದ ಟಿಕೆಟ್ ದರ ಏರಿಕೆ ಮಾಡಿಲ್ಲ. ಹೀಗಾಗಿ, ಈ ವರ್ಷ ಟಿಕೆಟ್ ದರ ಏರಿಸಲು ಬಾಲ ಭವನ ಅಧಿಕಾರಿಗಳು ಚಿಂತನೆ ನಡೆಸಿದ್ದಾರೆ. ಬಾಲ ಭವನ ಪ್ರವೇಶಕ್ಕೆ ಮಕ್ಕಳಿಗೆ 20 ರೂ. ವಯಸ್ಕರಿಗೆ 30 ರೂ. ಟಿಕೆಟ್ ದರ ನಿಗದಿ ಮಾಡಲಾಗಿದೆ. ಇದೀಗ, ವಯಸ್ಕರಿಗೆ 10 ರಿಂದ 20 ರುಪಾಯಿ ಏರಿಕೆ ಮಾಡಲು ಚಿಂತನೆ‌ ನಡೆದಿದೆ.

ಬಾಲ ಭವನದಲ್ಲಿ ಮಕ್ಕಳಿಗೆಂದೇ ವಿಶೇಷ ಆಟಿಕೆ ವಸ್ತುಗಳಿವೆ. ಈ ಆಟಿಕೆಯ ವಸ್ತುಗಳ ನಿರ್ಹವಣೆಯ ಸಲುವಾಗಿ ಟಿಕಟ್​ ದರ ಏರಿಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸದ್ಯದರಲ್ಲೇ ರಾಜ್ಯದ ಎಲ್ಲ ಬಾಲ ಭವನಗಳ ಪ್ರವೇಶ ಶುಲ್ಕ ಏರಿಕೆಯಾಗುವ ಸಾಧ್ಯತೆ ಇದೆ.

ಈಗಾಗಲೇ ಲಾಲ್ ಬಾಗ್​ ಒಳಗೆ ಪ್ರವೇಶ ಶುಲ್ಕ ಜಾಸ್ತಿ ಮಾಡಲಾಗಿದೆ. ಇದೀಗ ಬಾಲ ಭವನ ಪ್ರವೇಶ ಶುಲ್ಕ ಏರಿಸಲು ಮುಂದಾಗುತ್ತಿರುವುದು ಸರಿಯಲ್ಲ. ಸರ್ಕಾರ ಈಗಾಗಲೇ ಎಲ್ಲ ಬೆಲೆ ಏರಿಕೆ ಮಾಡಿ ಹಣ ಹೊಡೆಯುತ್ತಿದೆ. ಪ್ರವೇಶ ಶುಲ್ಕ ಕಡಿಮೆ ಮಾಡಿದರೆ ಪರವಾಗಿಲ್ಲ. ಆದರೆ, ಜಾಸ್ತಿ ಮಾಡಿದರೆ ಪ್ರತಿಭಟನೆ ಮಾಡುತ್ತೇವೆ ಎಂದು ಕಬ್ಬನ್​ ಪಾರ್ಕ್​ ವಾಕರ್ ಅಸೋಸಿಯೇಷನ್ ಎಚ್ಚರಿಕೆ ನೀಡಿದೆ.

ಇನ್ನು, ನವೆಂಬರ್​ 14 ಮಕ್ಕಳ ದಿನಾಚರಣೆ ಹಿನ್ನೆಲೆಯಲ್ಲಿ ಸರ್ಕಾರ ಮೂರು ದಿನ ವಿಶೇಷ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಈ ಹೊತ್ತಿನಲ್ಲೇ ಪ್ರವೇಶ ಶುಲ್ಕ ಏರಿಕೆ ಮಾಡಲು ಮುಂದಾಗಿದ್ದು, ಸರಿಯಲ್ಲ ಎಂದು ಸಾರ್ವಜನಿಕರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಕರ್ನಾಟಕದ  ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 10:52 am, Wed, 13 November 24

ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ